AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam

NEET Exam

ನೀಟ್ (NEET – National Eligibility cum Entrance Test) ಎಂಬುದು ಭಾರತದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ಏಕೈಕ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಎಂಬಿಬಿಎಸ್ (MBBS), ಬಿಡಿಎಸ್ (BDS) ಮತ್ತು ಆಯುಷ್ (AYUSH) ನಂತಹ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಆಯೋಜಿಸುತ್ತದೆ. ಈ ಪರೀಕ್ಷೆಯು ಮುಖ್ಯವಾಗಿ ಭೌತಶಾಸ್ತ್ರ (Physics), ರಸಾಯನಶಾಸ್ತ್ರ (Chemistry) ಮತ್ತು ಜೀವಶಾಸ್ತ್ರ (Biology – Botany & Zoology) ವಿಷಯಗಳನ್ನೊಳಗೊಂಡಿದ್ದು, ಒಟ್ಟು 720 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳ (MCQs) ಮಾದರಿಯಲ್ಲಿರುತ್ತದೆ. ಭಾರತದಲ್ಲಿನ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ.

ಇನ್ನೂ ಹೆಚ್ಚು ಓದಿ

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು (Siddaramaiah) ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್​ ಪರೀಕ್ಷೆ ಅಕ್ರಮ (NEET Exam Scam) ಖಂಡಿಸಿ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ

ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇತ್ತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಸ್​​ನಲ್ಲಿ ಕರೆದೊಯ್ಯುತ್ತಿದ್ದರೆ, ಇನ್ನೊಂದೆಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್​​ನ ಹಿರಿಯ ನಾಯಕರು ಹೋಟೆಲ್​ಗೆ ತೆರಳಿದರು. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಫ್ರೀಡಂಪಾರ್ಕ್​ನಿಂದ ಶಾಂಗ್ರಿಲಾ ಹೋಟೆಲ್​ಗೆ ತೆರಳಿದರು.

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಮೇ 21 ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಹೀಗಾಗಿ ಮುಂಜಾತ್ರಾ ಕ್ರಮವಾಗಿ ಟ್ರಾಫಿಕ್ ಪೊಲೀಸರು, ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ? ಪರ್ಯಾಯ ಮಾರ್ಗಗಳಾವುವು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನೀಟ್ ಮರುಪರೀಕ್ಷೆ: ಭದ್ರತೆ, ಗುಪ್ತಚರ ಮತ್ತು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ

Dharmendra Pradhan chairs high level meeting with Security and Intelligence agencies: ಕೇಂದ್ರ ಶಿಕ್ಷಣ ಸಚಿವರು NEET-UG ಪರೀಕ್ಷೆಯ ಭದ್ರತೆ ಹಾಗೂ ಪಾರದರ್ಶಕತೆಗಾಗಿ ಉನ್ನತ ಮಟ್ಟದ ಸಭೆ ನಡೆಸಿದರು. ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿ ಹರಡುವ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸ ಉಳಿಸಲು, ವಿದ್ಯಾರ್ಥಿಗಳನ್ನು ರಕ್ಷಿಸಲು ಹಾಗೂ ನಕಲಿ ಜಾಲಗಳನ್ನು ಮಟ್ಟಹಾಕಲು ಎಲ್ಲ ಸಂಸ್ಥೆಗಳ ಸಹಕಾರ ಕೋರಲಾಗಿದೆ.

NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ

ಮುಂಬರುವ ನೀಟ್ ಯುಜಿ ಮರು-ಪರೀಕ್ಷೆಗೆ ಸಿದ್ಧತೆಗಳ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ಕಠಿಣ ಭದ್ರತಾ ಪ್ರೋಟೋಕಾಲ್‌ಗಳ ಅಡಿಯಲ್ಲಿ ನೀಟ್ ಮರು ಪರೀಕ್ಷೆಯನ್ನು ಸುರಕ್ಷಿತ, ತಡೆರಹಿತ ಮತ್ತು ದೋಷರಹಿತ ರೀತಿಯಲ್ಲಿ ನಡೆಸಬೇಕು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಿ ಹೇಳಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳಿಗೆ ಸರಿಯಾದ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ನಿಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ 22 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣ ವಜಾಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 3ರಂದು ನಡೆದಿದ್ದ NEET-UG 2026 ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿತ್ತು.

ವೃತ್ತಿಯಲ್ಲಿ ಬ್ಯೂಟಿಷಿಯನ್, ಗಂಡ ದಂತವೈದ್ಯ; ನೀಟ್ ಹಗರಣದಲ್ಲಿ ಸಿಕ್ಕಿಬಿದ್ದ ಮನಿಷಾ ಬಗ್ಗೆ ನಿಮಗೆಷ್ಟು ಗೊತ್ತು?

ನೀಟ್ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಏಜೆಂಟ್ ಎಂದು ಹೇಳಲಾದ ಪುಣೆ ಬ್ಯೂಟಿಷಿಯನ್ ಮನಿಷಾ ವಾಘ್ಮರೆ ಬಗ್ಗೆ ಹೊಸ ಹೊಸ ಸಂಗತಿಗಳು ಬಯಲಾಗುತ್ತಿವೆ. ನೀಟ್-ಯುಜಿ 2026 ರ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ಪುಣೆ ಮೂಲದ ಬ್ಯೂಟಿಷಿಯನ್ ಆಗಿರುವ 46 ವರ್ಷದ ಮನೀಷಾ ಸಂಜಯ್ ವಾಘ್ಮೇರ್ ಅವರನ್ನು ಬಂಧಿಸಿದೆ. ಮನಿಷಾ ಪೇಪರ್ ಸೋರಿಕೆ ಮಾಡಿದ್ದಕ್ಕೆ ಆಕೆಗೆ ಕಮಿಷನ್ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಕೆಯ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ನೀಟ್ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್: ರಾಜ್ಯಕ್ಕೆ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ; ಡಾ ಶರಣಪ್ರಕಾಶ ಪಾಟೀಲ್

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ರಾಜ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವೊಂದು ಲಭಿಸಿದೆ. ರಾಜ್ಯಕ್ಕೆ ಈ ಬಾರಿ ದಾಖಲೆಯ 1,122 ಹೆಚ್ಚುವರಿ ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ನೀಟ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!

NEET-UG 2026 ಜೀವಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪುಣೆಯ ಹಿರಿಯ ಶಿಕ್ಷಕಿ ಮನೀಷಾ ಮಂಢಾರೆ ಅವರನ್ನು ಸಿಬಿಐ ಬಂಧಿಸಿದೆ. NTA ತಜ್ಞೆಯಾಗಿದ್ದ ಮನೀಷಾ, ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಮೊದಲೇ ಬಹಿರಂಗಪಡಿಸಿದ್ದರು. ಸಿಬಿಐ ತನಿಖೆಯಲ್ಲಿ ಇದು ದೃಢಪಟ್ಟಿದ್ದು, ದೇಶದಾದ್ಯಂತ 6 ಸ್ಥಳಗಳಲ್ಲಿ ದಾಳಿ ನಡೆಸಿ, ಇದುವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದೆ.

ನೀಟ್ ಹಗರಣಕ್ಕೆ ಮತ್ತೊಂದು ಬಲಿ; ಪತ್ರಿಕೆ ಸೋರಿಕೆಯಿಂದ ಪರೀಕ್ಷೆ ರದ್ದಾಗಿದ್ದಕ್ಕೆ 22 ವರ್ಷದ ವಿದ್ಯಾರ್ಥಿ ಸಾವು

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಆ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು. ಇದು ಸಾಕಷ್ಟು ನೀಟ್ ಆಕಾಂಕ್ಷಿಗಳ ಮೇಲೆ ಪರಿಣಾಮ ಬೀರಿದೆ. ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆಗೆ ಒಳಗಾದ 22 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ ಈ ಬಾರಿಯ ಪರೀಕ್ಷೆಯಲ್ಲಿ 650 ಅಂಕಗಳ ನಿರೀಕ್ಷೆಯಲ್ಲಿದ್ದ. ಆದರೆ, ಪರೀಕ್ಷೆ ರದ್ದಾಗಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಮೃತರ ತಂದೆ ಹೇಳಿದ್ದಾರೆ.

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ

ಇಡೀ ದೇಶಾದ್ಯಂತ ನೀಟ್ ಹಗರಣ ಭಾರೀ ಚರ್ಚೆಗೆ ಒಳಗಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಈ ತಿಂಗಳ ಆರಂಭದಲ್ಲಿ ನಡೆದಿದ್ದ ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಎಲ್ಲಿಂದ ಎಂದು ಸಿಬಿಐ ತನಿಖೆ ನಡೆಸಿತ್ತು. ಕೊನೆಗೂ ಈ ಹಗರಣದ ಕಿಂಗ್​ಪಿನ್ ಸಿಕ್ಕಿಬಿದ್ದಿದ್ದಾರೆ. ಪುಣೆಯಲ್ಲಿ ಕೋಚಿಂಗ್ ತರಗತಿಯನ್ನು ನಡೆಸುತ್ತಿದ್ದ ಸಮಯದಲ್ಲಿ NEET ಯುಜಿ ಪತ್ರಿಕೆ ಹಂಚಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ.

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್!

ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆಗಳನ್ನು ಸರ್ಕಾರ ಘೋಷಿಸಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಯಲಿದೆ. ರದ್ದಾಗಿದ್ದ ನೀಟ್-ಯುಜಿ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದ್ದು, ಪತ್ರಿಕೆ ಸೋರಿಕೆ ತಡೆಗೆ "ಶೂನ್ಯ ಸಹನೆ" ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ.