AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

News9 Global Summit

News9 Global Summit

ಮಾಧ್ಯಮ ಕ್ಷೇತ್ರದಲ್ಲಿ ಹೊಸ ಪ್ರಯೋಗ ಮಾಡಿ ಯಶಸ್ಸಿನ ಗಾಥೆ ಬರೆಯುತ್ತ ಮುನ್ನಡೆಯುವ ಕೆಲವೇ ಕೆಲವು ಸಂಸ್ಥಗಳಲ್ಲಿ ಟಿವಿ9 ಕೂಡ ಒಂದು. ಭಾರತದ ಯಾವ ಮಾಧ್ಯಮ ಸಂಸ್ಥೆ ಕೂಡ ಮಾಡಿರದ ಒಂದು ಪ್ರಯೋಗವನ್ನು ಟಿವಿ9 ಮಾಡುತ್ತಿದೆ. ಅದುವೇ –ನ್ಯೂಸ್​9 ಗ್ಲೋಬಲ್​ ಸಮಿಟ್​ (News9 Global Summit). ಭಾರತದ ಹೊರಗೆ ಈ ಸಮ್ಮೇಳನ ನಡೆಯು್ತಿರುವುದು ಬಹಳ ವಿಶೇಷ.. ವಿಶ್ವದ ಚಿಂತಕರು ಮತ್ತು ರಾಜಕೀಯ ನಾಯಕರು ಭಾಗವಹಿಸಿ, ವಿಶ್ವದ ಭವಿಷ್ಯದ ಬಗ್ಗೆ ಮಂಥನ ನಡೆಸಲಿದ್ದಾರೆ

ಇನ್ನೂ ಹೆಚ್ಚು ಓದಿ

IMEC: ಗ್ಲೋಬಲ್ ಸಮಿಟ್​​ನಲ್ಲಿ IMEC ಬಗ್ಗೆ ಚರ್ಚೆ; ಭಾರತಕ್ಕೆ ಈ ಕಾರಿಡಾರ್ ವರದಾನ ಹೇಗೆ?

India Middle-east Europe Economic Corridor: ಮಧ್ಯಪ್ರಾಚ್ಯದ ಕೆಲ ದೇಶಗಳು, ಯೂರೋಪ್, ಅಮೆರಿಕ ಮತ್ತು ಭಾರತ ಭಾಗಿಯಾಗಿರುವ ಐಎಂಇಸಿ ಕಾರಿಡಾರ್ ಭಾರತಕ್ಕೆ ಗೇಮ್ ಚೇಂಜರ್ ಆಗಬಹುದು. ಈ ಕಾರಿಡಾರ್ ಬಗ್ಗೆ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ತಜ್ಞರು ಮಾತನಾಡಿದ್ದಾರೆ. ಈ ಯೋಜನೆ ಭಾರತಕ್ಕೆ ಹಾಗೂ ವಿಶ್ವದ ಆರ್ಥಿಕತೆಗೆ ಎಷ್ಟು ಸಹಕಾರಿಯಾಗಬಲ್ಲುದು ಎಂದು ಚರ್ಚಿಸಿದ್ದಾರೆ.

News9 global summit: ಭಾರತ-ಯುಎಇ ಸಂಬಂಧಕ್ಕೆ ವಿಶ್ವಾಸದ ತಳಹದಿ: ನ್ಯೂಸ್9 ಸಮಿಟ್​​ನಲ್ಲಿ ರಾಯಭಾರಿ ಸಂಜಯ್ ಸುಧೀರ್ ಹೇಳಿಕೆ

Indian envoy to UAE Sunjay Sudhir at News9 Global Summit: ಭಾರತ ಮತ್ತು ಯುಎಇ ನಡುವಿನ ಸಂಬಂಧವು ಕಾಲದ ಪರೀಕ್ಷೆಯನ್ನು ಗೆದ್ದು ಮಾಗಿದೆ ಎಂದು ಯುಎಇಗೆ ಭಾರತದ ರಾಜಭಾರಿಯಾಗಿರುವ ಸಂಜಯ್ ಸುಧೀರ್ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ದೇಶಗಳ ಸಂಬಂಧ ಗಾಢವಾಗಿದ್ದು, ವಿಶ್ವಾಸದ ತಳಹದಿಯಲ್ಲಿ ಗಟ್ಟಿಗೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

News9 Global Summit: ಭಾರತ-ಯುಎಇ ಸಂಬಂಧವು ಯಾವುದೇ ಒಪ್ಪಂದಗಳಿಗಿಂತಲೂ ಮಿಗಿಲು: ಸಚಿವ ಹರ್ದೀಪ್ ಸಿಂಗ್ ಪುರಿ

Union Petroleum Minister Hardeep Singh Puri at News9 Global Summit: ಭಾರತ ಮತ್ತು ಯುಎಇ ನಡುವಿನ ಸಹಭಾಗಿತ್ವವು ಯಾವುದೇ ಅಂಕಿ ಅಂಶಗಳು, ಒಪ್ಪಂದಗಳಿಗಿಂತ ಮಿತಿಲಾಗಿದೆ. ಅದು ಜನರಿಗೆ ಸಂಬಂಧ ಪಟ್ಟಿದ್ದಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಯುಎಇಯಲ್ಲಿ ನಡೆದ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದ ಸಚಿವರು, ಎರಡೂ ದೇಶಗಳ ನಡುವಿನ ತಾಳಮೇಳದ ಬಗ್ಗೆ ಮಾತನಾಡಿದರು.

News9 Summit: ಭಾರತಕ್ಕೆ ಜಾಗತಿಕ ಧ್ವನಿಯಾಗಿದೆ ಟಿವಿ9: ನ್ಯೂಸ್9 ಗ್ಲೋಬಲ್ ಸಮಿಟ್​​ಗೆ ಚಾಲನೆ ಕೊಟ್ಟ ಟಿವಿ9 ನೆಟ್ವರ್ಕ್ ಎಂಡಿ ಬರುಣ್ ದಾಸ್

TV9 Network MD & CEO Barun Das at News9 Global Summit: ಎರಡನೇ ಆವೃತ್ತಿಯ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮ ಜೂನ್ 19ರಂದು ಯುಎಇಯಲ್ಲಿ ಚಾಲನೆಗೊಂಡಿದೆ. ಮೊದಲ ಆವೃತ್ತಿಯು 2024ರಲ್ಲಿ ಜರ್ಮನಿಯಲ್ಲಿ ನಡೆದಿತ್ತು. ಯುಎಇಯಲ್ಲಿನ ಗ್ಲೋಬಲ್ ಸಮಿಟ್ ಕಾರ್ಯಕ್ರಮಕ್ಕೆ ಟಿವಿ9 ನೆಟ್ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದರು. ಸ್ವಾಗತ ಭಾಷಣ ಮಾಡಿದ ಅವರು ಭಾರತ ಮತ್ತು ಯುಎಇ ನಡುವಿನ ವ್ಯಾಪಾರ ಸಂಬಂಧ ಮತ್ತು ನಾಯಕತ್ವವನ್ನು ಶ್ಲಾಘಿಸಿದರು.

ಯುಎಇಯಲ್ಲಿ ನ್ಯೂಸ್9 ಗ್ಲೋಬಲ್ ಸಮಿಟ್; ಇಲ್ಲಿದೆ ಕಾರ್ಯಕ್ರಮದ ವಿವರ

News9 Global Summit 2025 UAE: ನ್ಯೂಸ್9 ಗ್ಲೋಬಲ್ ಸಮಿಟ್ 2025 ಕಾರ್ಯಕ್ರಮ ಯುಎಇಯ ತಾಜ್ ದುಬೈನಲ್ಲಿ ಇವತ್ತು ಜೂನ್ 19ರಂದು ನಡೆಯುತ್ತಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ವಿವೇಕ್ ಒಬೇರಾಯ್, ಏಕ್ತಾ ಕಪೂರ್, ಸುನೀಲ್ ಶೆಟ್ಟಿ ಹಾಗೂ ಹಲವು ಗಣ್ಯ ಉದ್ಯಮಿಗಳು, ರಾಜತಾಂತ್ರಿಕರು ಪಾಲ್ಗೊಳ್ಳಲಿದ್ದಾರೆ. ಭಾರತ ಮತ್ತು ಯುಎಇ ನಡುವಿನ ವ್ಯಾಪಾರ ಸಂಬಂಧದ ಕುರಿತ ಚರ್ಚೆಗಳು ನಡೆಯಲಿವೆ.

ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಲಾಗುತ್ತಿದೆ. ಟಿವಿ 9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಅವರು ಇಂದು (ಮೇ 1) ಅಲ್ಲು ಅರ್ಜುನ್ ಜೊತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್​ನಲ್ಲಿ ನಡೆಯುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ.

ಪದ್ಮಭೂಷಣ ಶೇಖರ್ ಕಪೂರ್ ಜೊತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ..

ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಲಾಗುತ್ತಿದೆ. ಟಿವಿ 9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಅವರು ಇಂದು (ಮೇ 1) ನಿರ್ದೇಶಕ ಶೇಖರ್ ಕಪೂರ್ ಜತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್​ನಲ್ಲಿ ಜರುಗುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ.

ಇಂದು ನ್ಯೂಸ್​9 ಜಾಗತಿಕ ಶೃಂಗಸಭೆಯ ಅಂತಿಮ ದಿನ, ಫುಟ್ಬಾಲ್ ಪಂದ್ಯ

ದೇಶದ ನಂಬರ್​1 ನ್ಯೂಸ್​ ನೆಟ್​ವರ್ಕ್​ ಟಿವಿ9 ಹಮ್ಮಿಕೊಂಡಿರುವ ನ್ಯೂಸ್​9 ಜಾಗತಿಕ ಶೃಂಗಸಭೆ ಅಂತಿಮ ಘಟ್ಟಕ್ಕೆ ಬಂದಿದೆ. ಜರ್ಮನಿಯ ಸ್ಟಟ್​ಗಾರ್ಟ್​ನಲ್ಲಿ ನಡೆಯುತ್ತಿದೆ. ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ: ಜಾಗತಿಕ ಪ್ರಕಾಶಮಾನ ತಾಣದ ಒಳಗೆ ವಿಷಯದ ಕುರಿತು ಮಾತನಾಡಿದರು.

ಜರ್ಮನ್, ಸಂಸ್ಕೃತದ ನಡುವೆ ಆಳವಾದ ಸಂಬಂಧವಿದೆ: ಟಿವಿ9 ನೆಟ್​ವರ್ಕ್​ ಎಡಿಟೋರಿಯಲ್ ಡೈರೆಕ್ಟರ್ ಹೇಮಂತ್ ಶರ್ಮಾ

ಟಿವಿ9 ನೆಟ್‌ವರ್ಕ್‌ನ ನ್ಯೂಸ್9 ಗ್ಲೋಬಲ್ ಶೃಂಗಸಭೆ ಜರ್ಮನಿಯ ಸ್ಟಟ್‌ಗಾರ್ಟ್ ನಗರದಲ್ಲಿ ನಡೆಯುತ್ತಿದೆ. ಐತಿಹಾಸಿಕ ಫುಟ್ಬಾಲ್ ಮೈದಾನ MHP ಅರೆನಾದಲ್ಲಿ ನಡೆಯುತ್ತಿರುವ ಮೂರು ದಿನಗಳ ಶೃಂಗಸಭೆಯ ಎರಡನೇ ದಿನ, ಟಿವಿ-9 ನೆಟ್‌ವರ್ಕ್‌ನ ಎಡಿಟೋರಿಯಲ್ ಡೈರೆಕ್ಟರ್ ಹೇಮಂತ್ ಶರ್ಮಾ ಅವರು ಮಾತನಾಡಿ, ‘ಭಾರತ-ಜರ್ಮನಿ: ಸಂಸ್ಕೃತ ಸಂಪರ್ಕ' ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

10 ವರ್ಷಗಳಲ್ಲಿ ಭಾರತ ಬೃಹತ್ ಪರಿವರ್ತನೆಗೆ ಸಾಕ್ಷಿಯಾಗಿದೆ; ನ್ಯೂಸ್ 9 ಜಾಗತಿಕ ಶೃಂಗಸಭೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ

ನ್ಯೂಸ್ 9 ಗ್ಲೋಬಲ್ ಶೃಂಗಸಭೆಯ 2ನೇ ದಿನವಾದ ಇಂದು ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದಿ ಬಿಗ್ಗೆಸ್ಟ್ ಟರ್ನ್​ ರೌಂಡ್ ಸ್ಟೋರಿ ಎಂಬ ವಿಷಯದ ಕುರಿತು ಮಾತನಾಡಿದ್ದಾರೆ. ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬೃಹತ್ ಪರಿವರ್ತನೆಯನ್ನು ಕಂಡಿದೆ ಎಂದು ಹೇಳಿದ್ದಾರೆ.