Nirmala Sitharaman

Nirmala Sitharaman

ನಿರ್ಮಲಾ ಸೀತಾರಾಮನ್ ತಮಿಳುನಾಡು ಮೂಲದವರು. ಹುಟ್ಟೂರು ತಮಿಳುನಾಡಿನ ಮದುರೈ. ಅಯ್ಯಂಗಾರಿ ಕುಟುಂಬಕ್ಕೆ ಸೆರಿದವರು. ವಿಲಿಪ್ಪುರಂ, ತಿರುಚ್ಚಿಯಲ್ಲಿ ಇವರು ಬಿಎವರೆಗೆ ಓದಿ ಬಳಿಕ ದೆಹಲಿಯ ಜೆಎನ್​ಯುನಲ್ಲಿ ಎಂಎ ಮಾಡಿದರು. ಬಳಿಕ ಲಂಡನ್​ನಲ್ಲಿ ಉನ್ನತ ವ್ಯಾಸಂಗ ಮಾಡಿದರು. ರಾಜಕೀಯಕ್ಕೆ ಬಹಳ ತಡವಾಗಿ ಬಂದವರಾದರೂ ಉನ್ನತ ಹುದ್ದೆಗಳನ್ನು ಬಹಳ ಬೇಗ ಗಳಿಸಿ ತಮ್ಮ ಕ್ಷಮತೆಯನ್ನೂ ನಿರೂಪಿಸಿದವರು. ರಕ್ಷಣಾ ಖಾತೆ, ಹಣಕಾಸು ಖಾತೆ, ಕಾರ್ಪೊರೇಟ್ ವ್ಯವಹಾರಗಳ ಖಾತೆ, ವಾಣಿಜ್ಯ ಮತ್ತು ಉದ್ಯಮ ಖಾತೆಗಳನ್ನು ಅವರು ನಿಭಾಯಿಸಿದ್ದಾರೆ. ಇಂದಿರಾ ಗಾಂಧಿ ನಂತರ ರಕ್ಷಣಾ ಖಾತೆ ನಿಭಾಯಿಸಿದ ಮೊದಲ ಮಹಿಳೆ ನಿರ್ಮಲಾ ಸೀತಾರಾಮನ್. 2008ರಲ್ಲಿ ಬಿಜೆಪಿ ಸೇರಿದ ಅವರು 2014ರವರೆಗೂ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ಇವರು ಕಿರಿಯ ಸಚಿವೆಯಾದರು. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಖಾತೆ ಪಡೆದು ಸತತ ಆರು ಬಾರಿ ಬಜೆಟ್ ಮಂಡನೆ ಮಾಡಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ್ದಾರೆ.

ಇನ್ನೂ ಹೆಚ್ಚು ಓದಿ

Union Budget 2024: ಸೆಕ್ಷನ್ 80ಸಿ ಅಡಿಯಲ್ಲಿ ಡಿಡಕ್ಷನ್ ಮಿತಿ ಹೆಚ್ಚಿಸಲಿ: ಬಜೆಟ್​ನಿಂದ ಆದಾಯ ತೆರಿಗೆ ಪಾವತಿದಾರರಿಂದ ಅಪೇಕ್ಷೆ

Expection of rise in tax deduction: ಜುಲೈ ಕೊನೆಯ ವಾರದಲ್ಲಿ ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಿಂದ ಜನಸಾಮಾನ್ಯರ ನಿರೀಕ್ಷೆ ಮತ್ತು ಅಪೇಕ್ಷೆಗಳು ಹಲವಿವೆ. ಆದಾಯ ತೆರಿಗೆ ಪಾವತಿದಾರರು ಬಜೆಟ್​ನಲ್ಲಿ ಒಂದೂವರೆ ಲಕ್ಷ ರೂ ಇರುವ ಟ್ಯಾಕ್ಸ್ ಡಿಡಕ್ಷನ್ ಮಿತಿ ಹೆಚ್ಚಬೇಕೆಂದು ಬಯಸಿದ್ದಾರೆ. ತೆರಿಗೆಗೆ ಅರ್ಹವಾದ ಆದಾಯದ ಮೊತ್ತವನ್ನು ಕಡಿಮೆ ಮಾಡುತ್ತದೆ ಈ ಟ್ಯಾಕ್ಸ್ ಡಿಡಕ್ಷನ್.

GST Council Meet: ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ಉತ್ತರ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಲಿದ್ದಾರೆ. 2024-25ರ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈ ತಿಂಗಳ ದ್ವಿತೀಯಾರ್ಧದಲ್ಲಿ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗಾಗಿ ಸಂಸತ್ತಿನ ಎರಡೂ ಸದನಗಳು ಜುಲೈ ಮೂರನೇ ವಾರದಲ್ಲಿ ಮತ್ತೆ ಸಭೆ ನಡೆಸುವ ನಿರೀಕ್ಷೆಯಿದೆ.

GST Council Meeting: ಹಾಲಿನ ಕ್ಯಾನ್‌ಗಳ ಮೇಲೆ 12% ಜಿಎಸ್‌ಟಿ, ಪ್ಲಾಟ್‌ಫಾರ್ಮ್ ಟಿಕೆಟ್‌ಗೆ ವಿನಾಯಿತಿ; ನಿರ್ಮಲಾ ಸೀತಾರಾಮನ್ ಘೋಷಣೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಜೂನ್ 22) 53ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು ಬಜೆಟ್‌ಗೆ ಮುಂಚಿತವಾಗಿ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣವನ್ನು ಅಖಿಲ ಭಾರತ ಆಧಾರದ ಮೇಲೆ ಹೊರತರಲಿದೆ. ಪ್ರಮುಖ ಜಿಎಸ್​ಟಿ ಕೌನ್ಸಿಲ್ ಸಭೆಯ ಮುಕ್ತಾಯದ ನಂತರದ ಪ್ರಕಟಣೆಗಳ ಪಟ್ಟಿ ಇಲ್ಲಿದೆ.

ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ವಿಡಿಯೋ ಮತ್ತೆ ವೈರಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮತ್ತೆ ಭಾರೀ ವೈರಲ್ ಆಗಿದೆ. 7ನೇ ಬಾರಿ ಬಜೆಟ್​ ಮಂಡನೆಗೆ ನಿರ್ಮಲಾ ಸೀತಾರಾಮನ್ ಸಿದ್ಧವಾಗುತ್ತಿರುವ ಬೆನ್ನಲ್ಲೇ ಅವರ ಮೆಟ್ರೋ ಸವಾರಿಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮೆಟ್ರೋದಲ್ಲಿ ನಿಂತುಕೊಂಡೇ ಪ್ರಯಾಣಿಸಿದ್ದಾರೆ.

Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಕೌನ್ಸಿಲ್ ಸಭೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಇಂದು (ಜೂನ್ 22) ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಕೌನ್ಸಿಲ್ ಸಭೆ ನಡೆಸಲಾಗಿದೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಭೆಯು ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸಿಂಗ್‌ಗಳ ಮೇಲೆ 28% ಜಿಎಸ್‌ಟಿಯನ್ನು ವಿಧಿಸುವುದು ಸೇರಿದಂತೆ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿತು.

ಕೇಂದ್ರ ಬಜೆಟ್ 2024: ಏಕೀಕೃತ ಸಬ್ಸಿಡಿ, ಜೈವಿಕ ರಸಗೊಬ್ಬರಗಳಿಗೆ ಸಬ್ಸಿಡಿ ಸೇರಿದಂತೆ ಕೃಷಿ ವಲಯದ ವಿವಿಧ ಬೇಡಿಕೆಗಳಿವು…

Agricultural sector expectations from Union Budget 2024: ಕೃಷಿ ಕ್ಷೇತ್ರದ ಸಂಘ ಸಂಸ್ಥೆಗಳು, ತಜ್ಞರು ಮೊದಲಾದವರು ಇಂದು (ಜೂನ್ 21) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ಸಿಗಲು ಯಾವೆಲ್ಲಾ ಅಂಶಗಳು ಬೇಕಾಗಬಹುದು ಎಂದು ಇವರು ಸಲಹೆ ನೀಡಿರುವುದು ತಿಳಿದುಬಂದಿದೆ. ಜೈವಿಕ ರಸಗೊಬ್ಬರಗಳಿಗೆ ಸಬ್ಸಿಡಿ ಕೊಡಬೇಕು, ಯೂರಿಯಾ ದರ ಏರಿಸಬೇಕು ಎಂಬಿತ್ಯಾದಿ ಬೇಡಿಕೆಗಳು ಈ ಸಂದರ್ಭದಲ್ಲಿ ವ್ಯಕ್ತವಾಗಿವೆ.

ಬಜೆಟ್​ಗೆ ಮುಂಚೆ ಪ್ರಮುಖ ಆರ್ಥಿಕ ತಜ್ಞರ ಜೊತೆ ನಿರ್ಮಲಾ ಸೀತಾರಾಮನ್ ಸಭೆ

Union budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬುಧವಾರ ವಿವಿಧ ಆರ್ಥಿಕ ತಜ್ಞರ ಜೊತೆ ಸಭೆ ನಡೆಸಿದ್ದಾರೆ. ಬಜೆಟ್​​ಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲಿ ಬಜೆಟ್​ಗೆ ಬೇಕಾದ ಕೆಲ ಸಲಹೆ ಸೂಚನೆಗಳನ್ನು ಹಣಕಾಸು ಸಚಿವೆ ಪಡೆದಿದ್ದಾರೆ. ಸಚಿವಾಲಯದ ಕೆಲ ಉನ್ನತ ಅಧಿಕಾರಿಗಳೂ ಈ ಸಭೆಯಲ್ಲಿ ಪಾಲ್ಗೊಂಡಿದ್ದರೆನ್ನಲಾಗಿದೆ.

Budget Glossary: ಎಕ್ಸೆಸ್ ಗ್ರಾಂಟ್, ಇನ್​ಫ್ಲೇಶನ್, ಡೆಫಿಸಿಟ್ ಇತ್ಯಾದಿ ಬಜೆಟ್ ಪದಗಳ ಅರ್ಥ ತಿಳಿಯಿರಿ

Union Budget 2024: ಜುಲೈ ಕೊನೆಯ ವಾರದಲ್ಲಿ ಯೂನಿಯನ್ ಬಜೆಟ್ ಅಥವಾ ಕೇಂದ್ರ ಮುಂಗಡಪತ್ರವನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಮೂರ್ನಾಲ್ಕು ಗಂಟೆ ಕಾಲ ವಿತ್ತ ಸಚಿವೆ ಭಾಷಣ ಮಾಡಲಿದ್ದಾರೆ. ಈ ವೇಳೆ ಸಾಕಷ್ಟು ಆರ್ಥಿಕ ಪದಗಳು ನಮ್ಮ ಕಿವಿಗೆ ಬೀಳುತ್ತವೆ. ಕೆಲವೊಮ್ಮೆ ಅವು ಏನೆಂದು ಅರ್ಥ ಆಗಿರುವುದಿಲ್ಲ. ಇಂಥ ಕೆಲ ಪದಗಳ ವಿವರಣೆ ಇಲ್ಲಿದೆ.

ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ

ಸಿಎಂ ಸಿದ್ದರಾಮಯ್ಯಗೆಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದು ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣಭೈರೇಗೌಡ ಭಾಗಿ ಆಗ್ತಾರೆ ಎಂದಿದ್ದಾರೆ.

ಬಜೆಟ್ 2024: ಎಂಎಸ್​ಎಂಇ, ಮ್ಯೂಚುವಲ್ ಫಂಡ್, ಆರೋಗ್ಯ, ರಿಯಲ್ ಎಸ್ಟೇಟ್ ವಲಯಗಳ ನಿರೀಕ್ಷೆಗಳಿವು

ನವದೆಹಲಿ, ಜೂನ್ 17: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಏಳನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಇರುವ ಬಜೆಟ್​ಗಾಗಿ ನಿರ್ಮಲಾ ಸೀತಾರಾಮನ್ ಮತ್ತು ಟೀಮ್ ಈಗಾಗಲೇ ತುರುಸಿನ ತಯಾರಿ ನಡೆಸುತ್ತಿದೆ. ಎಂಎಸ್​ಎಂಇ, ಆರೋಗ್ಯ, ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ವಲಯಗಳು ಬಜೆಟ್​ನಿಂದ ಬಹಳಷ್ಟು ನಿರೀಕ್ಷಿಸುತ್ತಿವೆ. ಈ ಬಗ್ಗೆ ಒಂದು ಪುಟ್ಟ ವರದಿ...

ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ