Nirmala Sitharaman
ನಿರ್ಮಲಾ ಸೀತಾರಾಮನ್ ತಮಿಳುನಾಡು ಮೂಲದವರು. ಹುಟ್ಟೂರು ತಮಿಳುನಾಡಿನ ಮದುರೈ. ಅಯ್ಯಂಗಾರಿ ಕುಟುಂಬಕ್ಕೆ ಸೆರಿದವರು. ವಿಲಿಪ್ಪುರಂ, ತಿರುಚ್ಚಿಯಲ್ಲಿ ಇವರು ಬಿಎವರೆಗೆ ಓದಿ ಬಳಿಕ ದೆಹಲಿಯ ಜೆಎನ್ಯುನಲ್ಲಿ ಎಂಎ ಮಾಡಿದರು. ಬಳಿಕ ಲಂಡನ್ನಲ್ಲಿ ಉನ್ನತ ವ್ಯಾಸಂಗ ಮಾಡಿದರು. ರಾಜಕೀಯಕ್ಕೆ ಬಹಳ ತಡವಾಗಿ ಬಂದವರಾದರೂ ಉನ್ನತ ಹುದ್ದೆಗಳನ್ನು ಬಹಳ ಬೇಗ ಗಳಿಸಿ ತಮ್ಮ ಕ್ಷಮತೆಯನ್ನೂ ನಿರೂಪಿಸಿದವರು. ರಕ್ಷಣಾ ಖಾತೆ, ಹಣಕಾಸು ಖಾತೆ, ಕಾರ್ಪೊರೇಟ್ ವ್ಯವಹಾರಗಳ ಖಾತೆ, ವಾಣಿಜ್ಯ ಮತ್ತು ಉದ್ಯಮ ಖಾತೆಗಳನ್ನು ಅವರು ನಿಭಾಯಿಸಿದ್ದಾರೆ. ಇಂದಿರಾ ಗಾಂಧಿ ನಂತರ ರಕ್ಷಣಾ ಖಾತೆ ನಿಭಾಯಿಸಿದ ಮೊದಲ ಮಹಿಳೆ ನಿರ್ಮಲಾ ಸೀತಾರಾಮನ್. 2008ರಲ್ಲಿ ಬಿಜೆಪಿ ಸೇರಿದ ಅವರು 2014ರವರೆಗೂ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ಇವರು ಕಿರಿಯ ಸಚಿವೆಯಾದರು. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಖಾತೆ ಪಡೆದು ಸತತ ಆರು ಬಾರಿ ಬಜೆಟ್ ಮಂಡನೆ ಮಾಡಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ್ದಾರೆ.
ತತ್ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026
Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವಿಶ್ವದ ಅತಿವೇಗದ ಆರ್ಥಿಕತೆಯಾಗಿ ಉಳಿಸಿದೆ. ಮೂಲಸೌಕರ್ಯ, MSME ಹಾಗೂ ಹೊಸ ತಂತ್ರಜ್ಞಾನಕ್ಕೆ ಬಲ ನೀಡುವ ಜೊತೆಗೆ, ಕುಟುಂಬಗಳಿಗೆ ತೆರಿಗೆ ವಿನಾಯಿತಿ, ಆರೋಗ್ಯ ಸುಧಾರಣೆ ಮೂಲಕ ಸರ್ವತೋಮುಖ ಪ್ರಗತಿಗೆ ಅನುವು ಮಾಡಿಕೊಡುತ್ತದೆ.
- Vijaya Sarathy SN
- Updated on: Feb 2, 2026
- 6:24 pm
ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು
Nirmala Sitharaman, Kiren Rijiju lashes out against Opposition for criticizing Indian economy: ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುವ ಟ್ವೀಟ್ವೋಂದನ್ನು ಇಲಾನ್ ಮಸ್ಕ್ ಹಂಚಿಕೊಂಡಿದ್ದು, ವಿಶ್ವದ ಪವರ್ ಬ್ಯಾಲನ್ಸ್ ಬದಲಾಗುತ್ತಿದೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಶ್ರೀಮಂತನ ಈ ಟ್ವೀಟ್ ಈಗ ಭಾರತ ಸರ್ಕಾರಕ್ಕೆ ಅಸ್ತ್ರವಾಗಿದೆ. ಭಾರತದ ಆರ್ಥಿಕ ಪರಿಸ್ಥಿತಿ ಬಗ್ಗೆ ಲೇವಡಿ ಮಾಡುವ ವಿಪಕ್ಷಗಳಿಗೆ ಮಸ್ಕ್ ಟ್ವೀಟ್ ಉಲ್ಲೇಖಿಸಿ ಕೇಂದ್ರ ಸಚಿವರು ತಿರುಗೇಟು ನೀಡುತ್ತಿದ್ದಾರೆ.
- Vijaya Sarathy SN
- Updated on: Feb 2, 2026
- 3:44 pm
ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ
ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿದ್ದಾರೆ. ಆದಾಯ ತೆರಿಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಈ ದುರಂತ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ನಿಷ್ಪಕ್ಷಪಾತ ತನಿಖೆ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.
- Prasanna Hegde
- Updated on: Feb 2, 2026
- 3:03 pm
16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. ಇದು ಎಲ್ಲ ರಾಜ್ಯಗಳಿಗಿಂತಲೂ ಅತಿ ಹೆಚ್ಚಾಗಿದೆ. ಮಧ್ಯಪ್ರದೇಶಕ್ಕೆ ಅತಿ ಕಡಿಮೆ ತೆರಿಗೆ ಹಂಚಿಕೆ ಸಿಕ್ಕಿದೆ.
- Sushma Chakre
- Updated on: Feb 1, 2026
- 11:06 pm
ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು?
What is Orange Economy, highlighted in the Budget by Nirmala Sitharaman: ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಆರೆಂಜ್ ಎಕನಾಮಿಗೆ ಪುಷ್ಟಿ ಕೊಡುವ ಮಾತುಗಳನ್ನಾಡಿದ್ದಾರೆ. ಬಜೆಟ್ಗೂ ಮುನ್ನ ಬಂದ ಆರ್ಥಿಕ ಸಮೀಕ್ಷೆಯಲ್ಲೂ ಆರೆಂಜ್ ಎಕನಾಮಿಯ ಮಹತ್ವ ತಿಳಿಸಲಾಗಿತ್ತು. ಕಳೆದ ವರ್ಷ ಪ್ರಧಾನಿ ಮೋದಿ ಕೂಡ ಇದನ್ನು ಪ್ರಸ್ತಾಪಿಸಿದ್ದರು. ಹಾಗಿದ್ದರೆ ಆರೆಂಜ್ ಎಕನಾಮಿ ಎಂದರೇನು?
- Vijaya Sarathy SN
- Updated on: Feb 1, 2026
- 8:10 pm
ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ?
ಭಾರತೀಯ ಮಹಿಳೆಯರಿಗೆ ಸೀರೆಯ ಮೇಲೆ ವ್ಯಾಮೋಹ ಜಾಸ್ತಿ. ಅವರು ತಾವು ಧರಿಸುವ ಬಟ್ಟೆಯ ಬಗ್ಗೆ ವಿಶೇಷ ಆಸಕ್ತಿ ತೋರುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿ ಬಾರಿ ಬಜೆಟ್ ಮಂಡಿಸುವಾಗಲೂ ಒಂದೊಂದು ರಾಜ್ಯದ ಕೈಮಗ್ಗದ ಸೀರೆಗಳನ್ನು ಉಡುತ್ತಾರೆ. ಈ ಬಾರಿ ಅವರು ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟು ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮಂಡಿಸುವಾಗ ತಾವು ಉಡುವ ಸೀರೆಯನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವ ನಿರ್ಮಲಾ ಸೀತಾರಾಮನ್ ತಮ್ಮ ಸೀರೆಯ ಮೂಲಕ ಒಂದು ಸಂದೇಶವನ್ನು ಕೂಡ ನೀಡುತ್ತಾರೆ. ಇಂದು ಅವರು ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ? ಎಂಬ ಕುರಿತು ವಿವರ ಇಲ್ಲಿದೆ.
- Sushma Chakre
- Updated on: Feb 1, 2026
- 6:56 pm
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
- Ramesh B Jawalagera
- Updated on: Feb 1, 2026
- 6:45 pm
ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ
PM Modi on Budget 2026: ಈ ಬಾರಿಯ ಬಜೆಟ್ ಯುವ ಭಾರತದ ಕನಸುಗಳು, ದೃಢನಿಶ್ಚಯ, ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಈ ಬಜೆಟ್ ಐತಿಹಾಸಿಕವಾಗಿದೆ, ದೇಶದ ಸ್ತ್ರೀ ಶಕ್ತಿಯ ಸಬಲೀಕರಣದ ಉಪಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
- Sushma Chakre
- Updated on: Feb 1, 2026
- 5:23 pm
ಸಿ.ಜೆ.ರಾಯ್ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್ಗೆ ಮೋಹನ್ ದಾಸ್ ಪೈ ವಿಶೇಷ ಮನವಿ
ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಪ್ರತಿಕ್ರಿಯಿಸಿದ್ದು, ರಾಯ್ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿದ್ದಾರೆ.
- Ramesh B Jawalagera
- Updated on: Feb 1, 2026
- 5:06 pm
Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026-27ರ ಬಜೆಟ್ 53.47 ಲಕ್ಷ ಕೋಟಿ ರೂ. ಗಾತ್ರದ್ದಾಗಿದ್ದು, ಇದರಲ್ಲಿ ಸಾರಿಗೆ, ರಕ್ಷಣೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಗರಿಷ್ಠ ಅನುದಾನ ಹಂಚಿಕೆ ಮಾಡಲಾಗಿದೆ. ದೇಶಾದ್ಯಂತ ಏಳು ಹೊಸ ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳ ಘೋಷಣೆಯೂ ಈ ಬಜೆಟ್ನ ಪ್ರಮುಖ ಆಕರ್ಷಣೆಯಾಗಿದೆ.
- Prasanna Hegde
- Updated on: Feb 1, 2026
- 4:35 pm
Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್ನಲ್ಲಿ ಘೋಷಣೆ
2026ರ ಕೇಂದ್ರ ಬಜೆಟ್ ಆರೋಗ್ಯ ಮತ್ತು ಆರೈಕೆ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿದೆ. 2030ರ ವೇಳೆಗೆ 2.5 ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿಯ ನಿರೀಕ್ಷೆಯಿದೆ. ಆರೋಗ್ಯ ವೃತ್ತಿಪರರು (AHP), ಆರೈಕೆದಾರರಿಗೆ ತರಬೇತಿ ಹಾಗೂ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಯೋಜನೆಗಳಿವೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸುಧಾರಣೆಯಿಂದ ಭಾರತದಲ್ಲಿ ಆರೋಗ್ಯ ಸೇವೆಗಳು ಉತ್ತಮಗೊಳ್ಳುವುದರ ಜೊತೆಗೆ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಲಿವೆ.
- Akshatha Vorkady
- Updated on: Feb 1, 2026
- 4:17 pm
Budget 2026: ಸೆಮಿಕಂಡಕ್ಟರ್ ಮಿಷನ್ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ದಾಖಲೆಯ 9ನೇ ಬಜೆಟ್ ಮಂಡಿಸಿದರು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಭಾನುವಾರ ಬಜೆಟ್ ಮಂಡಿಸಿದ್ದು ಇದೇ ಮೊದಲು. ಇಂದಿನ ಬಜೆಟ್ನಲ್ಲಿ 3 ಹೊಸ ಆಯುಷ್ ಸಂಸ್ಥೆಗಳನ್ನು ಸ್ಥಾಪಿಸುವ ಘೋಷಣೆ, ಕ್ಯಾನ್ಸರ್ ಔಷಧಿಗಳಿಗೆ ಕಸ್ಟಮ್ಸ್ ಸುಂಕವಿಲ್ಲ, ಸೆಮಿಕಂಡಕ್ಟರ್ ಮಿಷನ್ 2.0ಗೆ 40 ಸಾವಿರ ಕೋಟಿ ರೂ. ಹೆಚ್ಚಳ, 7 ಹೈ-ಸ್ಪೀಡ್ ರೈಲು ಕಾರಿಡಾರ್ಗಳ ನಿರ್ಮಾಣ ಸೇರಿದಂತೆ ಹಲವಾರು ಮುಖ್ಯ ಘೋಷಣೆಗಳನ್ನು ಮಾಡಲಾಯಿತು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಿದ ಸುದ್ದಿಗೋಷ್ಠಿಯ ಹೈಲೈಟ್ಸ್ ಇಲ್ಲಿದೆ.
- Sushma Chakre
- Updated on: Feb 1, 2026
- 4:16 pm