AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman

Nirmala Sitharaman

ನಿರ್ಮಲಾ ಸೀತಾರಾಮನ್ ತಮಿಳುನಾಡು ಮೂಲದವರು. ಹುಟ್ಟೂರು ತಮಿಳುನಾಡಿನ ಮದುರೈ. ಅಯ್ಯಂಗಾರಿ ಕುಟುಂಬಕ್ಕೆ ಸೆರಿದವರು. ವಿಲಿಪ್ಪುರಂ, ತಿರುಚ್ಚಿಯಲ್ಲಿ ಇವರು ಬಿಎವರೆಗೆ ಓದಿ ಬಳಿಕ ದೆಹಲಿಯ ಜೆಎನ್​ಯುನಲ್ಲಿ ಎಂಎ ಮಾಡಿದರು. ಬಳಿಕ ಲಂಡನ್​ನಲ್ಲಿ ಉನ್ನತ ವ್ಯಾಸಂಗ ಮಾಡಿದರು. ರಾಜಕೀಯಕ್ಕೆ ಬಹಳ ತಡವಾಗಿ ಬಂದವರಾದರೂ ಉನ್ನತ ಹುದ್ದೆಗಳನ್ನು ಬಹಳ ಬೇಗ ಗಳಿಸಿ ತಮ್ಮ ಕ್ಷಮತೆಯನ್ನೂ ನಿರೂಪಿಸಿದವರು. ರಕ್ಷಣಾ ಖಾತೆ, ಹಣಕಾಸು ಖಾತೆ, ಕಾರ್ಪೊರೇಟ್ ವ್ಯವಹಾರಗಳ ಖಾತೆ, ವಾಣಿಜ್ಯ ಮತ್ತು ಉದ್ಯಮ ಖಾತೆಗಳನ್ನು ಅವರು ನಿಭಾಯಿಸಿದ್ದಾರೆ. ಇಂದಿರಾ ಗಾಂಧಿ ನಂತರ ರಕ್ಷಣಾ ಖಾತೆ ನಿಭಾಯಿಸಿದ ಮೊದಲ ಮಹಿಳೆ ನಿರ್ಮಲಾ ಸೀತಾರಾಮನ್. 2008ರಲ್ಲಿ ಬಿಜೆಪಿ ಸೇರಿದ ಅವರು 2014ರವರೆಗೂ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ಇವರು ಕಿರಿಯ ಸಚಿವೆಯಾದರು. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಖಾತೆ ಪಡೆದು ಸತತ ಆರು ಬಾರಿ ಬಜೆಟ್ ಮಂಡನೆ ಮಾಡಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ್ದಾರೆ.

ಇನ್ನೂ ಹೆಚ್ಚು ಓದಿ

ಜಾಗತಿಕ ರಂಗದಲ್ಲಿ ಭಾರತದ ಹೊಳಪು: ಶೇ. 7.8 ಜಿಡಿಪಿ ವೃದ್ಧಿಯನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್

Nirmala Sitharaman happy with 7.8pc GDP growth: ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಶೇ 7.8ರಷ್ಟು ಹೆಚ್ಚಿದ್ದು, ನಿರೀಕ್ಷೆಮೀರಿದ ಬೆಳವಣಿಗೆ ಹೊಂದಿದೆ. ಜಾಗತಿಕವಾಗಿ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತ ಮುಂಚೂಣಿಯಲ್ಲಿ ಮುಂದುವರಿದಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಾಗತಿಕ ರಂಗದಲ್ಲಿ ಭಾರತದ ಹೊಳಪು ಹೆಚ್ಚಿದೆ ಎಂದು ಬಣ್ಣಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ! ನಕಲಿ ಹೂಡಿಕೆ ಜಾಹೀರಾತುಗಳ ಬಗ್ಗೆ ಎಚ್ಚರ

Bangalore News: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೊವನ್ನು ನಂಬಿದ ಬೆಂಗಳೂರಿನ 66 ವರ್ಷದ ನಿವೃತ್ತ ವ್ಯಕ್ತಿಯೊಬ್ಬರು ನಕಲಿ ಸರ್ಕಾರಿ ಹೂಡಿಕೆ ಯೋಜನೆಯಲ್ಲಿ 6.88 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಸರ್ಕಾರಿ ಯೋಜನೆ ಹೆಸರಿನಲ್ಲಿ ಜನರನ್ನು ಮೋಸಗೊಳಿಸುವ ಹೊಸ ಹಾದಿಕಂಡುಕೊಂಡಿದ್ದು, ಜನರು ಎಚ್ಚರ ವಹಿಸಬೇಕಿದೆ.

ಕೇಂದ್ರದಿಂದ ಗ್ರಾ.ಪಂಗಳ 2,186 ಕೋಟಿ ಬಾಕಿ ಹಣ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಕಸರತ್ತು

15ನೇ ಹಣಕಾಸು ಆಯೋಗದಡಿ ಕರ್ನಾಟಕದ ಗ್ರಾಮ ಪಂಚಾಯತ್​ಗಳಿಗೆ ಹಂಚಿಕೆಯಾಗಿದ್ದ 2186.20 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ತಂತ್ರಾಂಶ ದೋಷದ ನೆಪವೊಡ್ಡಿ ತಡೆಹಿಡಿದಿದೆ. ಇದರಿಂದ ರಾಜ್ಯದ ಗ್ರಾಮೀಣಾಭಿವೃದ್ಧಿಗೆ ಭಾರಿ ಹಿನ್ನಡೆಯಾಗಿದೆ. ಹೀಗಾಗಿ ಈ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ರಾಜ್ಯದ ಎಲ್ಲ ಸಂಸದರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕಕ್ಕೆ ಕೊಟ್ಟ ಅನುದಾನ: ಯೋಜನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಇಂದು ಬೆಂಗಳೂರಿನ ಜಯನಗರದಲ್ಲಿ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವಿವಿಧ ಯೋಜನೆಗಳ ಅಡಿಯಲ್ಲಿ ಆಗಿರುವ ಪ್ರಗತಿಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಕೂಡ ಮಾಡಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಚಿವರಿಗೆ ಗೌರವಾರ್ಪಣೆ ಮಾಡಿ ಆಶೀರ್ವದಿಸಿದರು.

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್

India's Economic Challenges External, says Nirmala Sitharaman: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾರತದ ಆರ್ಥಿಕ ಸವಾಲುಗಳು ಜಾಗತಿಕ ವಿದ್ಯಮಾನಗಳಿಂದ ಉದ್ಭವಿಸಿವೆ ಎಂದು ಸ್ಪಷ್ಟಪಡಿಸಿದ್ದಾರೆ. ದೇಶದ ಆರ್ಥಿಕತೆ ಸದೃಢವಾಗಿದ್ದು, ಬಾಹ್ಯ ಬಿಕ್ಕಟ್ಟುಗಳ ನಡುವೆಯೂ ಪುಟಿದೇಳುವ ಗುಣ ಹೊಂದಿದೆ. ಪೆಟ್ರೋಲ್-ಡೀಸೆಲ್ ಸುಂಕ ಕಡಿತ ಮತ್ತು ಎಂಎಸ್‌ಎಂಇಗಳಿಗೆ (MSME) 2.55 ಲಕ್ಷ ಕೋಟಿ ರೂ. ಬೆಂಬಲದ ಮೂಲಕ ಸರ್ಕಾರ ಜನಸಾಮಾನ್ಯರು ಹಾಗೂ ಉದ್ಯಮಗಳನ್ನು ರಕ್ಷಿಸುತ್ತಿದೆ ಎಂದು ಮುಂಬೈನಲ್ಲಿ ತಿಳಿಸಿದರು.

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್

Claude Mythos AI: ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಲೋಡ್ ಮಿಥೋಸ್ (Claude Mythos) ಎಐ ನಿಂದ ಭಾರತೀಯ ಬ್ಯಾಂಕಿಂಗ್ ಕ್ಷೇತ್ರಕ್ಕೆ ಎದುರಾಗಬಹುದಾದ ಸೈಬರ್ ಭದ್ರತಾ ಅಪಾಯಗಳ ಕುರಿತು ಚರ್ಚಿಸಲಾಯಿತು. ಈ ಶಕ್ತಿಶಾಲಿ ಎಐ ಮಾದರಿಯು ಸೈಬರ್ ದಾಳಿಗಳಿಗೆ ದಾರಿಯಾಗಬಹುದು ಎಂಬ ಆತಂಕವಿದೆ. ಬ್ಯಾಂಕುಗಳು ಜಾಗರೂಕತೆ ವಹಿಸಿ, ಸೈಬರ್ ಭದ್ರತಾ ಬಜೆಟ್ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳಿಗೆ ಸಮಿತಿ ರಚಿಸಲಾಗಿದೆ.

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಭಾರತದಲ್ಲಿ ಲಾಕ್​​ಡೌನ್ ಪರಿಸ್ಥಿತಿ ಉದ್ಭವವಾಗಲಿದೆ ಎಂದು ಕೆಲವು ಕಡೆಗಳಲ್ಲಿ ಎದ್ದಿರುವ ಕಳವಳಗಳನ್ನು ತಳ್ಳಿಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾರತದಲ್ಲಿ ಲಾಕ್‌ಡೌನ್ ಇರುವುದಿಲ್ಲ ಎಂದು ಭರವಸೆ ನೀಡಿದ್ದಾರೆ. "ಭಾರತದಲ್ಲಿ ಲಾಕ್‌ಡೌನ್ ಆಗುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡಲು ಬಯಸುತ್ತೇನೆ" ಎಂದು ಅವರು ಹೇಳಿದ್ದಾರೆ. "ಲಾಕ್‌ಡೌನ್ ಮತ್ತು ಇಂಧನದ ಕೊರತೆ ಇರುತ್ತದೆ ಎಂದು ಕೆಲವರು ಹೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಈ ಹೇಳಿಕೆಗಳು ಆಧಾರರಹಿತ ಮತ್ತು ದಾರಿತಪ್ಪಿಸುವಂತಿವೆ" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತತ್​ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026

Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವಿಶ್ವದ ಅತಿವೇಗದ ಆರ್ಥಿಕತೆಯಾಗಿ ಉಳಿಸಿದೆ. ಮೂಲಸೌಕರ್ಯ, MSME ಹಾಗೂ ಹೊಸ ತಂತ್ರಜ್ಞಾನಕ್ಕೆ ಬಲ ನೀಡುವ ಜೊತೆಗೆ, ಕುಟುಂಬಗಳಿಗೆ ತೆರಿಗೆ ವಿನಾಯಿತಿ, ಆರೋಗ್ಯ ಸುಧಾರಣೆ ಮೂಲಕ ಸರ್ವತೋಮುಖ ಪ್ರಗತಿಗೆ ಅನುವು ಮಾಡಿಕೊಡುತ್ತದೆ.

ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು

Nirmala Sitharaman, Kiren Rijiju lashes out against Opposition for criticizing Indian economy: ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುವ ಟ್ವೀಟ್​ವೋಂದನ್ನು ಇಲಾನ್ ಮಸ್ಕ್ ಹಂಚಿಕೊಂಡಿದ್ದು, ವಿಶ್ವದ ಪವರ್ ಬ್ಯಾಲನ್ಸ್ ಬದಲಾಗುತ್ತಿದೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಶ್ರೀಮಂತನ ಈ ಟ್ವೀಟ್ ಈಗ ಭಾರತ ಸರ್ಕಾರಕ್ಕೆ ಅಸ್ತ್ರವಾಗಿದೆ. ಭಾರತದ ಆರ್ಥಿಕ ಪರಿಸ್ಥಿತಿ ಬಗ್ಗೆ ಲೇವಡಿ ಮಾಡುವ ವಿಪಕ್ಷಗಳಿಗೆ ಮಸ್ಕ್ ಟ್ವೀಟ್ ಉಲ್ಲೇಖಿಸಿ ಕೇಂದ್ರ ಸಚಿವರು ತಿರುಗೇಟು ನೀಡುತ್ತಿದ್ದಾರೆ.

ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ

ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿದ್ದಾರೆ. ಆದಾಯ ತೆರಿಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಈ ದುರಂತ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ನಿಷ್ಪಕ್ಷಪಾತ ತನಿಖೆ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು

ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್​​ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. ಇದು ಎಲ್ಲ ರಾಜ್ಯಗಳಿಗಿಂತಲೂ ಅತಿ ಹೆಚ್ಚಾಗಿದೆ. ಮಧ್ಯಪ್ರದೇಶಕ್ಕೆ ಅತಿ ಕಡಿಮೆ ತೆರಿಗೆ ಹಂಚಿಕೆ ಸಿಕ್ಕಿದೆ.