AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman

Nirmala Sitharaman

ನಿರ್ಮಲಾ ಸೀತಾರಾಮನ್ ತಮಿಳುನಾಡು ಮೂಲದವರು. ಹುಟ್ಟೂರು ತಮಿಳುನಾಡಿನ ಮದುರೈ. ಅಯ್ಯಂಗಾರಿ ಕುಟುಂಬಕ್ಕೆ ಸೆರಿದವರು. ವಿಲಿಪ್ಪುರಂ, ತಿರುಚ್ಚಿಯಲ್ಲಿ ಇವರು ಬಿಎವರೆಗೆ ಓದಿ ಬಳಿಕ ದೆಹಲಿಯ ಜೆಎನ್​ಯುನಲ್ಲಿ ಎಂಎ ಮಾಡಿದರು. ಬಳಿಕ ಲಂಡನ್​ನಲ್ಲಿ ಉನ್ನತ ವ್ಯಾಸಂಗ ಮಾಡಿದರು. ರಾಜಕೀಯಕ್ಕೆ ಬಹಳ ತಡವಾಗಿ ಬಂದವರಾದರೂ ಉನ್ನತ ಹುದ್ದೆಗಳನ್ನು ಬಹಳ ಬೇಗ ಗಳಿಸಿ ತಮ್ಮ ಕ್ಷಮತೆಯನ್ನೂ ನಿರೂಪಿಸಿದವರು. ರಕ್ಷಣಾ ಖಾತೆ, ಹಣಕಾಸು ಖಾತೆ, ಕಾರ್ಪೊರೇಟ್ ವ್ಯವಹಾರಗಳ ಖಾತೆ, ವಾಣಿಜ್ಯ ಮತ್ತು ಉದ್ಯಮ ಖಾತೆಗಳನ್ನು ಅವರು ನಿಭಾಯಿಸಿದ್ದಾರೆ. ಇಂದಿರಾ ಗಾಂಧಿ ನಂತರ ರಕ್ಷಣಾ ಖಾತೆ ನಿಭಾಯಿಸಿದ ಮೊದಲ ಮಹಿಳೆ ನಿರ್ಮಲಾ ಸೀತಾರಾಮನ್. 2008ರಲ್ಲಿ ಬಿಜೆಪಿ ಸೇರಿದ ಅವರು 2014ರವರೆಗೂ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ಇವರು ಕಿರಿಯ ಸಚಿವೆಯಾದರು. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಖಾತೆ ಪಡೆದು ಸತತ ಆರು ಬಾರಿ ಬಜೆಟ್ ಮಂಡನೆ ಮಾಡಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ್ದಾರೆ.

ಇನ್ನೂ ಹೆಚ್ಚು ಓದಿ

ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷರ ಆಯ್ಕೆ ಸಾಧ್ಯತೆ; ಸಂಭಾವ್ಯ ಪಟ್ಟಿಯಲ್ಲಿದೆ ಈ 3 ಹೆಸರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಇನ್ನೂ ಸಸ್ಪೆನ್ಸ್ ಆಗಿಯೇ ಉಳಿದಿದ್ದರೂ, ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷೆ ಆಯ್ಕೆಯಾಗಬಹುದು ಎಂದು ವಿವಿಧ ವರದಿಗಳು ಹೇಳಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಬಿಜೆಪಿ ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷೆಯಾಗಿ ಮಹಿಳೆಯನ್ನು ನೇಮಿಸುವ ಸಾಧ್ಯತೆಯಿದೆ. ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಡಿ. ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಅವರಂತಹ ನಾಯಕರು ಈ ರೇಸ್​​ನಲ್ಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಯಲ್ಲಿ ಆರ್‌ಎಸ್‌ಎಸ್ ಪಾತ್ರವೂ ಇರುತ್ತದೆ.

ತೆರಿಗೆ ಹಂಚಿಕೆ ಅಸಮತೋಲನ ಪರಿಶೀಲಿಸುವ ಭರವಸೆ ದೊರೆತಿದೆ: ನಿರ್ಮಲಾ ಸೀತಾರಾಮನ್ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಮರ್ಪಕ ತೆರಿಗೆ ಹಂಚಿಕೆ ಮತ್ತು 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕಕ್ಕೆ 16ನೇ ಹಣಕಾಸು ಆಯೋಗದಿಂದ ಸುಮಾರು ₹80,000 ಕೋಟಿ ಅನುದಾನ  ಸಿಗಬೇಕಿದೆ: ಸಿದ್ದರಾಮಯ್ಯ

ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಕರ್ನಾಟಕದ 7 ಪೆಂಡಿಂಗ್ ಬಿಲ್​ಗಳ ಬಗ್ಗೆ ನೆನಪಿಸಲಾಯಿತು. ಮಸೂದೆಗಳು ಸಂಬಂಧಪಟ್ಟ ಇಲಾಖೆಗಳಲ್ಲಿ ಉಳಿದುಕೊಂಡಿವೆ ಎಂದು ರಾಷ್ಟ್ರಪತಿ ಹೇಳಿದಾಗ, ಅವುಗಳನ್ನು ಬೇಗ ತರಿಸಿಕೊಂಡು ಅನುಮೋದನೆ ನೀಡಬೇಕೆಂದು ವಿನಂತಿಸಿಕೊಂಡೆವು. ಬಿಲ್ ಗಳು ಯಾವ್ಯಾವು ಅನ್ನೋದನ್ನು ಸಹ ರಾಷ್ಟ್ರಪತಿಯವರಿಗೆ ವಿವರಿಸಿದೆವು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಚಾರದ ಹುಚ್ಚು ನಂಗಿಲ್ಲ, ಏನಾದರೂ ವಿಷಯವಿದ್ದರೆ ನಾನೇ ಮಾಧ್ಯಮಗಳೊಂದಿಗೆ ಮಾತಾಡುತ್ತೇನೆ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಒಂದಿಬ್ಬರು ಮಂತ್ರಿಗಳು ಸರ್ಕಾರದ ಕಾರ್ಯವೈಖರಿ ಮತ್ತು ಅಧಿಕಾರಗಳ ದರ್ಪದ ಬಗ್ಗೆ ಅಸಮಾಧಾನ ಮತ್ತು ಅಸಹನೆ ವ್ಯಕ್ತಪಡಿಡುತ್ತಿರುವ ಜೊತೆಗೆ ವಿರೋಧ ಪಕ್ಷಗಳು ಎಡೆಬಿಡದೆ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಟೀಕೆಗಳನ್ನು ಮಾಡುತ್ತ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರೋದು ನಿಸ್ಸಂದೇಹವಾಗಿ ಸಿದ್ದರಾಮಯ್ಯರನ್ನು ದೃತಿಗೆಡಿಸಿದೆ.

ಲಡಾಖ್ ಪ್ರವಾಸದ ವೇಳೆ ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 4 ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರದ ಲಡಾಖ್‌ಗೆ ಆಗಮಿಸಿದ್ದಾರೆ. ಈ ವೇಳೆ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ಅವರು ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು. ಇದು ಲಡಾಖ್​​ನ ಪ್ರವಾಸೋದ್ಯಮದ ಒಂದು ಭಾಗವಾಗಲಿದೆ.

ಸಣ್ಣ ಮೀನಿಗೆ ತೃಪ್ತರಾಗಬೇಡಿ, ಸ್ಮಗ್ಲಿಂಗ್ ಸಿಂಡಿಕೇಟ್​​ಗಳ ಮಾಸ್ಟರ್​​ಮೈಂಡ್​​ಗಳನ್ನು ಹಿಡಿದುಹಾಕಿ: ನಿರ್ಮಲಾ ಸೀತಾರಾಮನ್ ಕರೆ

Nirmala Sitharaman speaks to DRI officers: ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಗುವ ಸಣ್ಣ ಮೀನಿಗೆ ತೃಪ್ತರಾಗಬಾರದು. ಸೆರೆಗೆ ಬೀಳದೇ ತಪ್ಪಿಸಿಕೊಂಡಿರುವ ತಿಮಿಂಗಲಗಳನ್ನು ಹಿಡಿಯುವುದು ಗುರಿಯಾಗಿರಬೇಕು ಎಂದು ಡಿಆರ್​​ಐ ಅಧಿಕಾರಿಗಳಿಗೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದಾರೆ. ಸ್ಮಗ್ಲಿಂಗ್ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕೆಂದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎನ್ನುವುದು ಅವರ ಅನಿಸಿಕೆ.

ADB support: ನಗರ ಮೂಲಸೌಕರ್ಯ ಬಲಪಡಿಸಲು ಭಾರತಕ್ಕೆ 10 ಬಿಲಿಯನ್ ಡಾಲರ್ ನೆರವಿಗೆ ಎಡಿಬಿ ಸಿದ್ಧ

ADB to provide 10 billion USD for help developing India's urban infrastructure: ಭಾರತಕ್ಕೆ ಸಾಲದ ನೆರವು ಕೊಡಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಬದ್ಧವಾಗಿದೆ. ನಗರ ಪ್ರದೇಶಗಲ್ಲಿ ಇನ್​​​ಫ್ರಾಸ್ಟ್ರಕ್ಚರ್ ಬಲಪಡಿಸಲು ವಿವಿಧ ಮೂಲಗಳಿಂದ ಐದು ವರ್ಷದ ಅವಧಿಯಲ್ಲಿ 10 ಬಿಲಿಯನ್ ಡಾಲರ್ ಬಂಡವಾಳ ಕ್ರೋಢೀಕರಿಸುವ ಪ್ಲಾನ್ ಅನ್ನು ಎಬಿಡಿ ಘೋಷಿಸಿದೆ. ನಗರಗಳು ಆರ್ಥಿಕತೆಯ ಪ್ರಗತಿಯ ಎಂಜಿನ್ ಎಂದು ಪರಿಗಣಿಸಲಾಗಿರುವುದರಿಂದ ಅವುಗಳನ್ನು ಬಲಪಡಿಸುವುದು ಎಡಿಬಿ ಇರಾದೆಯಾಗಿದೆ.

ಗೂಗಲ್ ಟ್ಯಾಕ್ಸ್ ರದ್ದು ಮಾಡಲಿರುವ ಭಾರತ; ತಣ್ಣಗಾಗುವುದೇ ಟ್ರಂಪ್ ತಾಪ?

India removes 6% Google tax: ವಿದೇಶೀ ಟೆಕ್ ಕಂಪನಿಗಳ ಆನ್​ಲೈನ್ ಜಾಹೀರಾತು ಸೇವೆಗಳಿಗೆ ವಿಧಿಸಲಾಗುವ ಶೇ. 6ರ ಈಕ್ವಲೈಸೇಶನ್ ಟ್ಯಾಕ್ಸ್ ಅನ್ನು ಭಾರತ ರದ್ದು ಮಾಡುತ್ತಿದೆ. ಹಣಕಾಸು ತಿದ್ದುಪಡಿ ಕಾಯ್ದೆಯಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಏಪ್ರಿಲ್ 1ರಿಂದ ಈಕ್ವಲೈಸೇಶನ್ ಟ್ಯಾಕ್ಸ್ ಇರುವುದಿಲ್ಲ. ಪ್ರತಿಸುಂಕದ ಭರಾಟೆಯಲ್ಲಿರುವ ಅಮೆರಿಕ ಭಾರತದ ಬಗ್ಗೆ ಮೃದುಧೋರಣೆ ತಾಳುತ್ತಾ ನೋಡಬೇಕು.

ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 'ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಅನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ದೂರದೃಷ್ಟಿಯ ವಿಧಾನವನ್ನು ಶ್ಲಾಘಿಸಿದ್ದಾರೆ. 'ಪಿಎಂ ಇಂಟರ್ನ್‌ಶಿಪ್ ಸ್ಕೀಮ್ ಆ್ಯಪ್' ಬಿಡುಗಡೆ ಸಂದರ್ಭದಲ್ಲಿ ಉದ್ಯೋಗದ ದಾಖಲಾತಿಗಳನ್ನು ಹೆಚ್ಚಿಸಲು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲ ನೀಡಲು ಐದು ವಿಭಿನ್ನ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ವಿದೇಶೀ ಹೂಡಿಕೆಗಳು ಭಾರತದಿಂದ ಹೊರಹೋಗುತ್ತಿರುವುದು ಯಾಕೆ? ನಿರ್ಮಲಾ ಸೀತಾರಾಮನ್ ಅನಿಸಿಕೆ ಇದು

Nirmala Sitharaman on FII selling spree in Stock Market: ಭಾರತದ ಷೇರು ಮಾರುಕಟ್ಟೆ ಕಳೆದ ಐದಾರು ತಿಂಗಳಿಂದ ಹಿನ್ನಡೆಯಲ್ಲಿದೆ. ವಿದೇಶೀ ಹೂಡಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಹೊರಹೋಗಿವೆ. ನಿರ್ಮಲಾ ಸೀತಾರಾಮನ್ ಪ್ರಕಾರ ಭಾರತದ ಈಕ್ವಿಟಿ ಮಾರುಕಟ್ಟೆಯಿಂದ ಎಫ್​ಐಐಗಳು ಲಾಭ ಮಾಡಿವೆ. 2024ರ ಅಕ್ಟೋಬರ್ ತಿಂಗಳಿಂದ ಎಫ್​ಪಿಐಗಳು ಭಾರತದ ಈಕ್ವಿಟಿಯಲ್ಲಿ 2 ಲಕ್ಷ ಕೋಟಿ ರೂನಷ್ಟು ಹೂಡಿಕೆಗಳನ್ನು ಹಿಂಪಡೆದಿವೆ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ