
Operation Sindoor
ಆಪರೇಷನ್ ಸಿಂಧೂರ್
ಭಾರತದ ಸೇನೆಯು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದ್ದು ಈ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ನಿನ್ನ ಧರ್ಮ ಯಾವುದು ಎಂದು ಕೇಳಿ ಹಿಂದೂಗಳ ಮೇಲೆ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿದೆ
ಆಪರೇಷನ್ ಸಿಂಧೂರ್: ಭಾರತದಿಂದ ತಮ್ಮನ್ನು ಕಾಪಾಡುವಂತೆ ಸೌದಿ ರಾಜಕುಮಾರನಿಗೆ ಕರೆ ಮಾಡಿತ್ತು ಪಾಕ್ ಸರ್ಕಾರ
ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತದಿಂದ ತಮ್ಮನ್ನು ಕಾಪಾಡುವಂತೆ ಕೇಳಿ ಪಾಕಿಸ್ತಾನವು ಸೌದಿ ರಾಜಕುಮಾರನಿಗೆ ಕರೆ ಮಾಡಿತ್ತು ಎನ್ನುವ ವಿಚಾರ ಬಹಿರಂಗಗೊಂಡಿದೆ. ಈ ವಿಚಾರವನ್ನು ಸಂದರ್ಶನವೊಂದರಲ್ಲಿ ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಖುದ್ದಾಗಿ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಾಗ, ಸೌದಿ ಅರೇಬಿಯಾ ಪಾಕಿಸ್ತಾನದ ಮನವಿ ಮೇರೆಗೆ ಭಾರತದ ಮನವೊಲಿಸಲು ಬಹಳ ಪ್ರಯತ್ನಿಸಿತ್ತು.
- Nayana Rajeev
- Updated on: Jun 20, 2025
- 11:54 am
ಭಾರತದ ಕಡೆಯಿಂದ ಮೋದಿ ಯುದ್ಧ ನಿಲ್ಲಿಸಿದರು; ವರಸೆ ಬದಲಿಸಿದ ಟ್ರಂಪ್
ಭಾರತ-ಪಾಕಿಸ್ತಾನದ ಸಂಘರ್ಷವನ್ನು ನಿಲ್ಲಿಸುವ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಛರಿಸಿದ್ದಾರೆ. ಪ್ರಧಾನಿ ಮೋದಿ ನಮಗೆ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ ಎಂಬ ಸ್ಪಷ್ಟನೆ ನೀಡಿದ್ದರೂ ಡೊನಾಲ್ಡ್ ಟ್ರಂಪ್ 'ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ, ಮೋದಿ ಅದ್ಭುತ ವ್ಯಕ್ತಿ. ನಾನೇ ಎರಡು ಪ್ರಮುಖ ರಾಷ್ಟ್ರಗಳ ನಡುವಿನ ಪರಮಾಣು ಯುದ್ಧವನ್ನು ನಿಲ್ಲಿಸಿದ್ದು' ಎಂಬ ಹೇಳಿಕೆ ನೀಡಿದ್ದಾರೆ. ಆದರೆ, ಈ ಬಾರಿ, ಭಾರತದೊಳಗೆ ಪ್ರಧಾನಿ ಮೋದಿ ಯುದ್ಧ ನಿಲ್ಲಿಸಲು ಕ್ರಮ ವಹಿಸಿದರು ಎಂದು ಟ್ರಂಪ್ ವರಸೆ ಬದಲಿಸಿದ್ದಾರೆ.
- Sushma Chakre
- Updated on: Jun 18, 2025
- 10:48 pm
ಪಾಕಿಸ್ತಾನ 3 ರಫೇಲ್ ಹೊಡೆದಿಲ್ಲ; ವಾಸ್ತವ ಗೊತ್ತಾದರೆ ಅಚ್ಚರಿ ಆಗಬಹುದು: ಡಸ್ಸೋ ಏವಿಯೇಶನ್ ಸಿಇಒ
Dassault Aviation CEO Eric Trappier speaks on Rafale Jets: ಆಪರೇಷನ್ ಸಿಂದೂರ್ ವೇಳೆ ಭಾರತದ 3 ರಫೇಲ್ ಸೇರಿದಂತೆ ಐದು ಜೆಟ್ಗಳನ್ನು ಹೊಡೆದಿದ್ದೇವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, 3 ರಫೇಲ್ಗಳನ್ನು ಹೊಡೆದಿರುವುದೆಲ್ಲಾ ಸುಳ್ಳು ಎಂದು ರಫೇಲ್ ತಯಾರಕ ಡಸ್ಸೋ ಏವಿಯೇಶನ್ ಸಂಸ್ಥೆ ಸಿಇಒ ಹೇಳಿದ್ದಾರೆ.. ವಾಸ್ತವ ಸಂಗತಿ ಹೊರಬಂದರೆ ಹಲವರಿಗೆ ಅಚ್ಚರಿ ಎನಿಸುತ್ತದೆ ಎಂದು ಎರಿಕ್ ಟ್ರ್ಯಾಪಿಯರ್ ತಿಳಿಸಿದ್ದಾರೆ.
- Vijaya Sarathy SN
- Updated on: Jun 15, 2025
- 3:23 pm
ಭಾರತದ ಪ್ರತಿನಿಧಿಯಾಗಿ ವಿದೇಶಕ್ಕೆ ತೆರಳಿದ್ದ ವಿವಿಧ ಪಕ್ಷಗಳ ನಾಯಕರ ಜೊತೆ ಪ್ರಧಾನಿ ಮೋದಿ ಔತಣಕೂಟ
ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ತಿಳಿಸಲು ವಿವಿಧ ದೇಶಗಳಿಗೆ ಭೇಟಿ ನೀಡಿದ್ದ ಎಲ್ಲ ಪಕ್ಷಗಳ ಸಂಸದರ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ಮಾಡಿದ್ದಾರೆ. ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಿದ್ದರು. ಇದರಲ್ಲಿ ಭಾಗವಹಿಸಿದ್ದ ನಿಯೋಗದ ಸದಸ್ಯರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಸಭೆಗಳ ಕುರಿತು ಮಾತನಾಡಿದರು. ಕಾಂಗ್ರೆಸ್, ಶಿವಸೇನೆ, ಟಿಎಂಸಿ, ಆರ್ಜೆಡಿ ಸೇರಿದಂತೆ ಎಲ್ಲ ವಿಪಕ್ಷಗಳ ಸಂಸದರು ಈ ನಿಯೋಗದ ಭಾಗವಾಗಿದ್ದರು. ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಕ್ಷಣಗಳ ಫೋಟೋಗಳು ಇಲ್ಲಿವೆ.
- Sushma Chakre
- Updated on: Jun 10, 2025
- 9:41 pm
ಭಾರತದ ಸ್ನೇಹಿತರಿಂದ ಕೆಲವು ಮಾಹಿತಿ ಪಡೆದಿದ್ದು ಹೌದೆಂದು ಒಪ್ಪಿಕೊಂಡ ಪಾಕ್ ಐಎಸ್ಐ ಏಜೆಂಟ್ ನಾಸಿರ್
ಪಾಕಿಸ್ತಾನಿ ಯೂಟ್ಯೂಬರ್ ಮತ್ತು ಐಎಸ್ಐ ಏಜೆಂಟ್ ನಾಸಿರ್ ಧಿಲ್ಲೋನ್ ಅವರ ಹಳೆಯ ವೀಡಿಯೊವೊಂದು ವೈರಲ್ ಆಗಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದಲ್ಲಿ ಕೆಲವು ಸ್ನೇಹಿತರೊಂದಿಗೆ ಮಾತನಾಡುತ್ತಿದ್ದೆ ಎಂದು ಆತ ಒಪ್ಪಿಕೊಂಡಿದ್ದಾನೆ. ಭಾರತದಲ್ಲಿ ಬೇಹುಗಾರಿಕೆ ಜಾಲವನ್ನು ಸ್ಥಾಪಿಸಿ ಈಗ ಯೂಟ್ಯೂಬರ್ ಆಗಿ ಮಾರ್ಪಟ್ಟಿರುವ ಪಾಕಿಸ್ತಾನದ ಮಾಜಿ ಸಬ್ ಇನ್ಸ್ಪೆಕ್ಟರ್ ನಾಸಿರ್ ಧಿಲ್ಲೋನ್, ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಪಂಜಾಬ್ ಯೂಟ್ಯೂಬರ್ ಜಸ್ಬೀರ್ ಸಿಂಗ್ನನ್ನು ನಿರಪರಾಧಿ ಎಂದು ಕರೆದಿದ್ದಾನೆ.
- Nayana Rajeev
- Updated on: Jun 9, 2025
- 2:49 pm
ಭಾರತದ ಡ್ರೋನ್ ನಾಶಕ ಡಿ4 ಸಿಸ್ಟಂ ಖರೀದಿಗೆ ತೈವಾನ್ ಆಸಕ್ತಿ; ಚೀನಾದ ಆ ಕಡೆ ಮಗ್ಗುಲಿನಲ್ಲಿ ಭಾರತದ ಬಲ?
Taiwan wants India's indigenous D4 drone destroyer: ಆಪರೇಷನ್ ಸಿಂದೂರ್ ವೇಳೆ ಟರ್ಕಿ ಮೂಲದ ನೂರಾರು ಡ್ರೋನ್ಗಳನ್ನು ನಾಶ ಮಾಡಿದ್ದ ಭಾರತದ ಡಿ4 ಆ್ಯಂಟಿ-ಡ್ರೋನ್ ಸಿಸ್ಟಂ ಖರೀದಿಸಲು ತೈವಾನ್ ಆಸಕ್ತಿ ತೋರಿದೆ. ಡಿಆರ್ಡಿಒ ಅಭಿವೃದ್ಧಿಪಡಿಸಿ, ಬಿಇಎಲ್ ಮತ್ತು ಝೆನ್ ತಯಾರಿಸುವ ಡಿ4 ಸಿಸ್ಟಂಗಳು ಡ್ರೋನ್ಗಳನ್ನು ಗುರುತಿಸಿ ನಾಶ ಮಾಡಬಲ್ಲುವು. ಪಾಕಿಸ್ತಾನಕ್ಕೆ ಸಹಾಯ ಮಾಡುವ ಚೀನಾಗೆ ಎದುರಾಗಿ ತೈವಾನ್ಗೆ ಸಹಾಯ ಮಾಡಲು ಭಾರತಕ್ಕೆ ಇದು ಸರಿಯಾದ ಸಮಯ ಎನ್ನಲಾಗಿದೆ.
- Vijaya Sarathy SN
- Updated on: Jun 8, 2025
- 5:58 pm
ಪಹಲ್ಗಾಮ್ ದಾಳಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ, ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಬ್ರಿಡ್ಜ್ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ಐಫೆಲ್ ಟವರ್ಗಿಂತ ಎತ್ತರವಾಗಿದ್ದು, ಭಾರತದ ಎಂಜಿನಿಯರಿಂಗ್ ಕೌಶಲ್ಯದ ಸಂಕೇತವೆಂದು ಪರಿಗಣಿಸಲಾಗಿದೆ. ಇದನ್ನು ನಿರ್ಮಿಸಲು ಸುಮಾರು 1500 ಕೋಟಿ ರೂ. ವೆಚ್ಚವಾಗಿದೆ. ಇದರ ನಂತರ, ಅವರು ದೇಶದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯಾದ ಅಂಜಿ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ, ಪ್ರಧಾನಿ ಮೋದಿ ಅವರು ಕತ್ರಾದಿಂದ ಶ್ರೀನಗರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ಐಫೆಲ್ ಟವರ್ಗಿಂತ ಎತ್ತರವಾಗಿದ್ದು, ಭಾರತದ ಎಂಜಿನಿಯರಿಂಗ್ ಕೌಶಲ್ಯದ ಸಂಕೇತವೆಂದು ಪರಿಗಣಿಸಲಾಗಿದೆ. ಇದನ್ನು ನಿರ್ಮಿಸಲು ಸುಮಾರು 1500 ಕೋಟಿ ರೂ. ವೆಚ್ಚವಾಗಿದೆ. ಇದರ ನಂತರ, ಅವರು ದೇಶದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯಾದ ಅಂಜಿ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ, ಪ್ರಧಾನಿ ಮೋದಿ ಅವರು ಕತ್ರಾದಿಂದ ಶ್ರೀನಗರಕ್ಕೆ ಎರಡು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
- Nayana Rajeev
- Updated on: Jun 6, 2025
- 8:50 am
ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು ಎಂದು ಟ್ರಂಪ್ಗೆ ಮನವಿ ಮಾಡಿದ ಪಾಕ್ ಪ್ರಧಾನಿ ಷರೀಫ್
‘‘ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು’’ ಎಂದು ಪಾಕಿಸ್ತಾನ(Pakistan)ಪ್ರಧಾನಿ ಶೆಹಬಾಜ್ ಷರೀಫ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಮನವಿ ಮಾಡಿದ್ದಾರೆ. ಈಗಾಗಲೇ ಭಾರತವು ಪಾಕಿಸ್ತಾನ ಭಯೋತ್ಪಾದನೆಗೆ ಸಹಕಾರ ನೀಡುವುದನ್ನು ಬಿಡುವವರೆಗೂ ಅವರೊಂದಿಗೆ ಬೇರೆ ಯಾವ ರೀತಿ ಮಾತುಕತೆಯೂ ಇಲ್ಲ ಇನ್ನೇನಿದ್ದರೂ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಮಾತನಾಡುತ್ತೇವೆ ಎಂದು ಹೇಳಿತ್ತು.
- Nayana Rajeev
- Updated on: Jun 5, 2025
- 11:43 am
48 ಗಂಟೆಯಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುವುದಾಗಿ ಹೇಳಿ 8 ಗಂಟೆಯಲ್ಲೇ ಮಣ್ಣು ಮುಕ್ಕಿದ್ದ ಪಾಕಿಸ್ತಾನ
ಪಾಕಿಸ್ತಾನ(Pakistan)ವು 48 ಗಂಟೆಗಳಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುತ್ತೇವೆ ಎಂದು ಹೇಳಿ 8 ಗಂಟೆಗಳಲ್ಲೇ ಮಣ್ಣು ಮುಕ್ಕಿದೆ. ಈ ಕುರಿತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ( ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದ ಐದು ನಿಮಿಷಗಳ ನಂತರ ಭಾರತ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂದು ಅವರು ಹೇಳಿದ್ದಾರೆ. ಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನಕ್ಕೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಸರ್ಕಾರ ಅಪರಾಧ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
- Nayana Rajeev
- Updated on: Jun 5, 2025
- 9:21 am
ಸಿಂಧೂ ಜಲ ಒಪ್ಪಂದ, ಭಾರತದ ಎದುರು ಎಂದೂ ತಲೆ ಬಾಗುವುದಿಲ್ಲ: ಆಸಿಮ್ ಮುನೀರ್
ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ದಿನಗಳ ಮಿಲಿಟರಿ ಸಂಘರ್ಷದ ನಂತರ ಕದನ ವಿರಾಮ ಒಪ್ಪಂದಕ್ಕೆ ಬಂದ ವಾರಗಳ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಇಸ್ಲಾಮಾಬಾದ್ ಭಾರತದ ಪ್ರಾಬಲ್ಯವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಆಪರೇಷನ್ ಸಿಂಧೂರ್ ನಡೆಸಿತ್ತು.
- Nayana Rajeev
- Updated on: Jun 4, 2025
- 10:36 am