AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor

Operation Sindoor

ಆಪರೇಷನ್ ಸಿಂಧೂರ್
ಭಾರತದ ಸೇನೆಯು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದ್ದು ಈ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ನಿನ್ನ ಧರ್ಮ ಯಾವುದು ಎಂದು ಕೇಳಿ ಹಿಂದೂಗಳ ಮೇಲೆ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್​ ಸಿಂಧೂರ್​ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿದೆ

ಇನ್ನೂ ಹೆಚ್ಚು ಓದಿ

ಆಪರೇಷನ್ ಸಿಂಧೂರ್ ವೇಳೆ ಧ್ವಂಸಗೊಂಡಿದ್ದ ಜೈಶ್ ಪ್ರಧಾನ ಕಚೇರಿ ರೆಡಿ, ಮತ್ತೆ ಚುರುಕಾಯ್ತು ಜೆಇಎಂ ಉಗ್ರ ಜಾಲ

ಆಪರೇಷನ್ ಸಿಂಧೂರ್ ನಂತರ ಧ್ವಂಸವಾಗಿದ್ದ ಜೈಶ್-ಎ-ಮೊಹಮ್ಮದ್ (JeM) ಪ್ರಧಾನ ಕಚೇರಿ ಬಹಾವಲ್ಪುರದಲ್ಲಿ ಪಾಕ್ ನೆರವಿನಿಂದ 15 ತಿಂಗಳಲ್ಲಿ ಪುನರ್ನಿರ್ಮಾಣಗೊಂಡಿದೆ. 25 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಮರುನಿರ್ಮಾಣಗೊಂಡು, ಶಸ್ತ್ರಾಸ್ತ್ರ ಸಂಗ್ರಹ, ಡ್ರೋನ್ ಕಾರ್ಯಾಚರಣೆ ಹಾಗೂ ಭಾರತ ವಿರೋಧಿ ಪ್ರಚಾರಕ್ಕೆ ಸಿದ್ಧವಾಗಿದೆ. ಭಾರತವು ಯಾವುದೇ ಪ್ರಚೋದನೆಗೆ ಮರು ದಾಳಿ ನಡೆಸಲು ಸನ್ನದ್ಧವಾಗಿದೆ ಎಂದು ಎಚ್ಚರಿಕೆ ನೀಡಿದೆ.

‘ಆಪರೇಷನ್ ಸಿಂಧೂರ್’ ಡಾಕ್ಯುಮೆಂಟರಿಗೆ ಬೆಚ್ಚಿದ ಪಾಕಿಸ್ತಾನ; ತಡರಾತ್ರಿ 2 ಗಂಟೆಗೆ ಪಾಕ್ ಸೇನೆ ಪ್ರತಿಕ್ರಿಯೆ

ಏಪ್ರಿಲ್ 2025ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಕುರಿತು ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾದ ಸಾಕ್ಷ್ಯಚಿತ್ರ ಸೀರೀಸ್​​ಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಸೇನೆಯು ಮಧ್ಯರಾತ್ರಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಆಗಸ್ಟ್ 15ರಂದು ಪ್ರಸಾರವಾದ 'ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್' ಎಂಬ ಎರಡು ಭಾಗಗಳ ಈ ಸಾಕ್ಷ್ಯಚಿತ್ರ ಸರಣಿ ಮೇ 7, 2025ರಂದು ಪ್ರಾರಂಭವಾದ ಈ ಕಾರ್ಯಾಚರಣೆಯ ಯೋಜನೆ ಮತ್ತು ಅದ್ನು ನಿರ್ವಹಿಸಿದ ಭಾರತದ ಹಿರಿಯ ಮಿಲಿಟರಿ ಹಾಗೂ ಭದ್ರತಾ ಅಧಿಕಾರಿಗಳ ಸಂದರ್ಶನಗಳನ್ನು ಒಳಗೊಂಡಿದೆ.

ಪಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಕೇಳಿದ ಮೊದಲ ಪ್ರಶ್ನೆಯನ್ನು ಬಹಿರಂಗಪಡಿಸಿದ ಅಜಿತ್ ದೋವಲ್

ಪಹಲ್ಗಾಮ್ ಉಗ್ರರ ದಾಳಿಯ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲಿಗೆ ತಿಳಿಯಲು ಬಯಸಿದ್ದು ಈ ದಾಳಿಗೆ ಯಾರು ಹೊಣೆಗಾರರು ಎಂಬುದನ್ನು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಹೇಳಿದ್ದಾರೆ. ಡಿಸ್ಕವರಿ ಚಾನೆಲ್​ನ ಸಂದರ್ಶನವೊಂದರಲ್ಲಿ ಅವರು ಭಾರತ ನಡೆಸಿದ 'ಆಪರೇಷನ್ ಸಿಂಧೂರ್' (Operation Sindoor) ಕಾರ್ಯಾಚರಣೆಗೆ ಕಾರಣವಾದ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ನೀಡಿರುವ ತಮ್ಮ ಮೊದಲ ಸಂದರ್ಶನದಲ್ಲಿ ದೋವಲ್ ಪ್ರಮುಖ ನಿರ್ಧಾರಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು

"ಮೂರೂ ಸಶಸ್ತ್ರ ಪಡೆಗಳು, ಎಲ್ಲಾ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ನಾನು ಶ್ಲಾಘಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿಸುತ್ತಿರುವ ಭಾರತೀಯರನ್ನು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ" ಎಂದು ಹೇಳಿದರು.

ಪಾಕ್ ಮುಖವಾಡ ಮತ್ತೊಮ್ಮೆ ಬಯಲು; ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಯನ್ನು ಒಪ್ಪಿಕೊಂಡ ಭಯೋತ್ಪಾದಕ

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನ ತಾನು ಯಾವುದೇ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡಿಲ್ಲ ಎಂದು ಘೋಷಿಸಿಕೊಂಡಿತ್ತು. ಆದರೆ, ಇದೀಗ ಪಾಕಿಸ್ತಾನದ ಅಸಲಿ ಮುಖ ಮತ್ತೊಮ್ಮೆ ಬಯಲಾಗಿದೆ. ಲಷ್ಕರ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ರಿಜ್ವಾನ್ ಹನೀಫ್ ಎಂಬಾತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಷೇಧಿತ ಉಗ್ರ ಸಂಘಟನೆಯನ್ನು ದೇಶದಿಂದಲೇ ನಿವಾರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಈ ವಿಡಿಯೋ ಪಾಕಿಸ್ತಾನದ ಸುಳ್ಳನ್ನು ಬಯಲು ಮಾಡಿದೆ.

ಪಹಲ್ಗಾಮ್ ದಾಳಿ ಹಿಂದೆ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಕೈವಾಡ; ಕೊನೆಗೂ ಎನ್​ಐಎಯಿಂದ ಚಾರ್ಜ್‌ಶೀಟ್ ಸಲ್ಲಿಕೆ

ಭಾರತದಲ್ಲಿ ನಿರಂತರವಾಗಿ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸುತ್ತಿರುವ ಜಮಾತ್-ಉದ್-ದವಾ (JuD) ಮತ್ತು ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಂದು ಗಂಭೀರ ಕ್ರಮ ಕೈಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭೀಕರ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ಹಫೀಜ್ ಸಯೀದ್‌ನನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಆಪರೇಷನ್ ಸಿಂಧೂರ್ ಹುತಾತ್ಮರ ವಿವಾದ; ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್​ಗೆ ಕಾಂಗ್ರೆಸ್ ಪತ್ರ

ಕಳೆದ ವರ್ಷ ನಡೆದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಯಾವುದೇ ಭಾರತೀಯ ಸೈನಿಕರು ಹುತಾತ್ಮರಾಗಿಲ್ಲ ಎಂದು ಹೇಳುವ ಮೂಲಕ ಸಂಸತ್ತನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಜುಲೈ 28, 2025ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿ ಮತ್ತು ಅದರ ನಂತರ ನಡೆದ 'ಆಪರೇಷನ್ ಸಿಂಧೂರ್' ಕುರಿತ ಸಂಸತ್ ಚರ್ಚೆಯ ಸಂದರ್ಭದಲ್ಲಿ, ರಾಜನಾಥ್ ಸಿಂಗ್ ಅವರು ಭಾರತೀಯ ಸೈನಿಕರಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳಿದ್ದರು. ಆದರೆ, ಇದೀಗ ಆಪರೇಷನ್ ಸಿಂಧೂರ್ ವೇಳೆ ಹುತಾತ್ಮರಾದ 6 ಸೈನಿಕರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.

ಆಪರೇಷನ್ ಸಿಂಧೂರ್​​ ಕಾರ್ಯಾಚರಣೆ ವೇಳೆ ಹುತಾತ್ಮರಾದ ವೀರ ಯೋಧರ ಹೆಸರು ಪ್ರಕಟ

Operation Sindoor: 'ಆಪರೇಷನ್ ಸಿಂಧೂರ್'ನಲ್ಲಿ ಹುತಾತ್ಮರಾದ ಆರು ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಶತ್ರು ನೆಲದ ಉಗ್ರರ ಶಿಬಿರಗಳ ನಾಶಕ್ಕೆ ನಡೆದ ಈ ರಹಸ್ಯ ಕಾರ್ಯಾಚರಣೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಹೆಸರುಗಳನ್ನು ಇದೀಗ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಇದು ಅವರ ಅಪ್ರತಿಮ ಶೌರ್ಯಕ್ಕೆ ನಮನ.

‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ರಾಜಕೀಯವನ್ನು ಬದಿಗಿಟ್ಟು ದೇಶದೊಂದಿಗೆ ನಿಲ್ಲಬೇಕಾದ ಅವರು, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಇಮೇಜ್‌ಗೆ ಧಕ್ಕೆ ತರುವಂತಹ ಮತ್ತು ಶತ್ರು ದೇಶಗಳ ನಿರೂಪಣೆಗಳನ್ನು ಪುಷ್ಟೀಕರಿಸುವಂತಹ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು?

How Celebi Aviation lost huge business it built over 17 years: 2025ರ ಆಪರೇಷನ್ ಸಿಂದೂರ್ ಸಂದರ್ಭದಲ್ಲಿ ಭಾರತದಲ್ಲಿ ಏರ್​ಪೋರ್ಟ್ ಗ್ರೌಂಡ್ ಹ್ಯಾಂಡ್ಲಿಂಗ್ ಲೈಸೆನ್ಸ್ ಅನ್ನು ಕಳೆದುಕೊಂಡಿದ್ದ ಟರ್ಕಿ ಕಂಪನಿ ಈಗ ಆ ವಿಚಾರ ಪ್ರಸ್ತಾಪಿಸಿದೆ. ಬ್ಲೂಮ್​ಬರ್ಗ್ ಮಾಧ್ಯಮದೊಂದಿಗೆ ಮಾತನಾಡಿರುವ ಚೆಲೆಬಿ ಏವಿಯೇಶನ್​ನ ಛೇರ್ಮನ್ ಚೆಲೆಬಿಯೋಗ್ಲು ಅವರು ನೋವು ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನಕ್ಕೆ ಟರ್ಕಿಯಿಂದ ಡ್ರೋನ್ ಪೂರೈಕೆ ಮಾಡಲಾಗಿದ್ದರಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು.

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ರಕ್ಷಣಾ ವಲಯದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದ ವೀರ ಯೋಧರಿಗೆ ಕೀರ್ತಿ ಚಕ್ರ, ವೀರ ಚಕ್ರ ಮತ್ತು ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸಶಸ್ತ್ರ ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Pahalgam Attack: ಪಹಲ್ಗಾಮ್​ನ​ ಭೀಕರ ದಾಳಿಯ ದಿನ ಏನೇನಾಯ್ತು? ಉಗ್ರರ ಸಿದ್ಧತೆ ಹೇಗಿತ್ತು?  

2025ರಲ್ಲಿ ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಮುಸ್ಲಿಂ ಧರ್ಮದವರನ್ನು ಬಿಟ್ಟು ಬೇರೆಯವರನ್ನು ಕೊಲ್ಲಲಾಗಿತ್ತು. ಮಹಿಳೆಯರನ್ನು ಹಾಗೇ ಬಿಟ್ಟು ಪುರುಷರನ್ನು ಮಾತ್ರ ಕೊಲೆ ಮಾಡಲಾಗಿತ್ತು. ಈ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ನಡೆಸಿತ್ತು. ಈ ದಾಳಿಯ ದಿನ ಏನೇನಾಯ್ತು? ಈ ದಾಳಿಗೆ ಉಗ್ರರ ಸಿದ್ಧತೆ ಹೇಗಿತ್ತು? ಪಹಲ್ಗಾಮ್ ಕಣಿವೆಗೆ ಉಗ್ರರು ತಲುಪಿದ್ದು ಹೇಗೆ? ಎಂಬ ಪೂರ್ತಿ ಮಾಹಿತಿ ಇಲ್ಲಿದೆ.