Operation Sindoor
ಆಪರೇಷನ್ ಸಿಂಧೂರ್
ಭಾರತದ ಸೇನೆಯು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದ್ದು ಈ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ನಿನ್ನ ಧರ್ಮ ಯಾವುದು ಎಂದು ಕೇಳಿ ಹಿಂದೂಗಳ ಮೇಲೆ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿದೆ
ಗಣರಾಜ್ಯೋತ್ಸವ ಪರೇಡ್ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್ ವಿಜಯೋತ್ಸವ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಒಗ್ಗಟ್ಟಿನ ಶಕ್ತಿಯನ್ನು ತೋರಿಸುವ ವಿಜಯೋತ್ಸವದ ಮಾದರಿಯನ್ನು ಇಂದು ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರದರ್ಶಿಸಲಾಯಿತು. ಯುರೋಪಿನ ಮುಖ್ಯ ಅತಿಥಿಗಳು, ವಿದೇಶಿ ನಿಯೋಗಗಳು, ಗಣ್ಯರು ಮತ್ತು ಸಾವಿರಾರು ಪ್ರೇಕ್ಷಕರು ಭಾರತದ ಪರಂಪರೆ ಮತ್ತು ಅದರ ಕಾರ್ಯತಂತ್ರದ ರಕ್ಷಣಾ ವಿಕಸನ ಎರಡನ್ನೂ ಒತ್ತಿಹೇಳುವ ಅಸಾಧಾರಣ ಮೆರವಣಿಗೆಗೆ ಸಾಕ್ಷಿಯಾದರು.
- Sushma Chakre
- Updated on: Jan 26, 2026
- 9:53 pm
ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ
ಪಹಲ್ಗಾಮ್ ದಾಳಿಯ ನಂತರ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ, ಉಗ್ರರ ಸೇನಾ ನೆಲೆಗಳನ್ನು ಧ್ವಂಸಗೊಳಿಸಿತ್ತು. ಆದರೆ, ಈ ದಾಳಿಯಿಂದ ಪಾಕಿಸ್ತಾನಕ್ಕೆ ಆದ ನಷ್ಟವನ್ನು ಪಾಕಿಸ್ತಾನ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ. ಈ ದಾಳಿ ನಡೆದು 8-10 ತಿಂಗಳುಗಳೇ ಕಳೆದಿವೆ. ಇದೀಗ ಪಾಕಿಸ್ತಾನದ ಒಂದೊಂದೇ ನಿಜರೂಪ ಜಗತ್ತಿನೆದುರು ಹೊರಬೀಳತೊಡಗಿದೆ.
- Sushma Chakre
- Updated on: Jan 26, 2026
- 9:11 pm
ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸು, ಪಾಕಿಸ್ತಾನದ ಭಯೋತ್ಪಾದನಾ ನೀತಿಯ ಬಗ್ಗೆ ಲಷ್ಕರ್ ಕಮಾಂಡರ್ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಹಫೀಜ್ ಅಬ್ದುಲ್ ರೌಫ್, ಭಾರತದ ಆಪರೇಷನ್ ಸಿಂಧೂರ್ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಕೇಂದ್ರಕ್ಕೆ ವಿನಾಶಕಾರಿ ಹೊಡೆತವನ್ನು ನೀಡಿತು ಎಂದು ಒಪ್ಪಿಕೊಂಡಿದ್ದಾರೆ.
- Sushma Chakre
- Updated on: Jan 16, 2026
- 4:46 pm
ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ!
ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಎಲ್ಒಸಿಯಲ್ಲಿ ಡ್ರೋನ್ಗಳು ಕಾಣಿಸಿಕೊಂಡಿವೆ. ಕಳೆದ 48 ಗಂಟೆಗಳಲ್ಲಿ ಭಾರತದ ಗಡಿಯೊಳಗೆ ಕಾಣಿಸಿಕೊಂಡ ಪಾಕಿಸ್ತಾನದ 2ನೇ ಡ್ರೋನ್ ಇದಾಗಿದೆ.
- Sushma Chakre
- Updated on: Jan 13, 2026
- 10:46 pm
ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ
ಪಾಕಿಸ್ತಾನದ ವೈಫಲ್ಯಗಳನ್ನು ಆಪರೇಷನ್ ಸಿಂಧೂರ್ ಬಹಿರಂಗಪಡಿಸಿತು. ಹಾಗೇ, ಇದರಿಂದಾಗಿ ಪಾಕ್ ಸಂವಿಧಾನವನ್ನೇ ಬದಲಾಯಿಸುವಂತಾಯಿಸಿತು ಎಂದು ಭಾರತದ ರಕ್ಷಣಾ ಮುಖ್ಯಸ್ಥ ಹೇಳಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಅದು ಎದುರಿಸಿದ ವೈಫಲ್ಯಗಳನ್ನು ಪ್ರತಿಬಿಂಬಿಸುತ್ತವೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ. ಪಾಕಿಸ್ತಾನದ ಸಂವಿಧಾನದ 243ನೇ ವಿಧಿಗೆ ತಿದ್ದುಪಡಿ ಮಾಡುವುದರಿಂದ ದೇಶದ ಉನ್ನತ ರಕ್ಷಣಾ ಸಂಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ.
- Sushma Chakre
- Updated on: Jan 10, 2026
- 3:51 pm
ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ
ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ನಡೆಸಿದ್ದ ಪಾಕ್ ಬೆಂಬಲಿತ ಉಗ್ರರನ್ನು ಮಟ್ಟ ಹಾಕಲು ಭಾರತ ರಾತ್ರೋರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ನಮ್ಮ ದೇಶದ 26 ಅಮಾಯಕರನ್ನು ಬಲಿ ಪಡೆದ ಉಗ್ರರನ್ನು ಸದೆಬಡಿಯಲು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ವೈಮಾನಿಕ ದಾಳಿ ನಡೆಸಿದ್ದ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿತ್ತು. ಆಗ ಅಮೆರಿಕ, ರಷ್ಯಾ ಮುಂತಾದ ಭಾರತದ ಸ್ನೇಹ ಬಳಗದಲ್ಲಿರುವ ದೇಶಗಳ ಮೊರೆಹೋಗಿದ್ದ ಪಾಕಿಸ್ತಾನ ಕದನವಿರಾಮಕ್ಕೆ ಒಪ್ಪಿಸುವಂತೆ ಗೋಗರೆದಿತ್ತು. ಆದರೆ, ಭಾರತ ಮೂರನೇ ದೇಶದ ಮಧ್ಯಸ್ಥಿಕೆಗೆ ಒಪ್ಪದ ಕಾರಣದಿಂದ ಪಾಕಿಸ್ತಾನವೇ ಭಾರತದ ಮುಂದೆ ಅಂಗಲಾಚಿ ದಾಳಿಯನ್ನು ನಿಲ್ಲಿಸಲು ಬೇಡಿಕೊಂಡಿತ್ತು. ಆದರೆ, ಈಗ ಪಾಕಿಸ್ತಾನ ಹೊಸ ಕತೆ ಕಟ್ಟುತ್ತಿದೆ.
- Sushma Chakre
- Updated on: Jan 3, 2026
- 8:22 pm
ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’; ಐಎಡಿಎಫ್ಎಸ್ ಖರೀದಿಗೆ ಸರ್ಕಾರ ಅನುಮೋದನೆ
Govt buying Rs 5,181 crore worth Integrated Air Defence Weapon System: ದೆಹಲಿ ಎನ್ಸಿಆರ್ ಪ್ರದೇಶವನ್ನು ವಾಯು ದಾಳಿಗಳಿಂದ ರಕ್ಷಿಸಲು ಸರ್ಕಾರ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಖರೀದಿಸಲಿದೆ. 2035ರ ಮಿಷನ್ ಸುದರ್ಶನ ಚಕ್ರದ ಗುರಿ ಮುಟ್ಟುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದೆ. ಡಿಆರ್ಡಿಒ ಅಭಿವೃದ್ದಿಪಡಿಸಿರುವ ಐಎಡಿಎಫ್ಡಬ್ಲ್ಯುಎಸ್ ಅನ್ನು 5,181 ಕೋಟಿ ರೂಗೆ ಸರ್ಕಾರ ಖರೀದಿಸುತ್ತಿದೆ.
- Vijaya Sarathy SN
- Updated on: Dec 30, 2025
- 3:14 pm
ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ
ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ನೆನಪುಗಳನ್ನು ಪದೇ ಪದೇ ಚರ್ಚಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಅದರ ನಡುವೆ ಅಸಿಮ್ ಮುನೀರ್ ಅವರ ಈ ವರ್ತನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Sushma Chakre
- Updated on: Dec 29, 2025
- 10:51 pm
ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರೇ ಒಪ್ಪಿಕೊಂಡಿದ್ದಾರೆ. 80 ಡ್ರೋನ್ಗಳು 36 ಗಂಟೆಗಳ ಕಾಲ ದಾಳಿ ನಡೆದಿವೆ. ಭಾರತದ ಆಪರೇಷನ್ ಸಿಂಧೂರ್ ದಾಳಿಯು ನೂರ್ ಖಾನ್ ನೆಲೆಗೆ ಹಾನಿಯನ್ನುಂಟುಮಾಡಿದೆ ಎಂದು ಪಾಕಿಸ್ತಾನದ ಸಚಿವ ಒಪ್ಪಿಕೊಂಡಿದ್ದಾರೆ.
- Sushma Chakre
- Updated on: Dec 28, 2025
- 4:31 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂಲಕ ಶತ್ರುಗಳ ಪ್ರದೇಶದೊಳಗೆ ನುಗ್ಗಿ ದಾಳಿ ಮಾಡುವ ಸಾಮರ್ಥ್ಯ ಪ್ರದರ್ಶಿಸಿತು. ರಕ್ಷಣಾ ಉತ್ಪಾದನೆ, ಬಜೆಟ್ ಹೆಚ್ಚಳ, ಸ್ವದೇಶಿ ತಂತ್ರಜ್ಞಾನ ಬಳಕೆಯಿಂದ ಭಾರತದ ಸೇನಾ ಶಕ್ತಿ ಮತ್ತು ಸ್ವಾವಲಂಬನೆ ಗಣನೀಯವಾಗಿ ಬೆಳೆದಿದೆ. ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಆತ್ಮವಿಶ್ವಾಸ ಎದ್ದು ಕಾಣುತ್ತದೆ.
- Vijaya Sarathy SN
- Updated on: Dec 26, 2025
- 10:26 pm
ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನಿಗೆ ವಿಶೇಷ ಪುರಸ್ಕಾರ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು ಗುರುತಿಸಲ್ಪಟ್ಟ 10 ವರ್ಷದ ಶ್ರವಣ್ ಸಿಂಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಧೈರ್ಯ, ಕರುಣೆ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಿ ಗೌರವಿಸಿದ್ದಾರೆ.
- Sushma Chakre
- Updated on: Dec 26, 2025
- 7:08 pm
ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?
ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಈ ದಾಳಿಗಳು ಎರಡೂ ದೇಶಗಳ ನಡುವೆ 4 ದಿನಗಳ ತೀವ್ರ ಘರ್ಷಣೆಗೆ ಕಾರಣವಾಯಿತು. ಮೇ 10ರಂದು ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದದೊಂದಿಗೆ ಈ ಸಂಘರ್ಷ ಕೊನೆಗೊಂಡಿತು.
- Sushma Chakre
- Updated on: Dec 22, 2025
- 9:29 pm