Operation Sindoor
ಆಪರೇಷನ್ ಸಿಂಧೂರ್
ಭಾರತದ ಸೇನೆಯು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದ್ದು ಈ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ನಿನ್ನ ಧರ್ಮ ಯಾವುದು ಎಂದು ಕೇಳಿ ಹಿಂದೂಗಳ ಮೇಲೆ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿದೆ
ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’; ಐಎಡಿಎಫ್ಎಸ್ ಖರೀದಿಗೆ ಸರ್ಕಾರ ಅನುಮೋದನೆ
Govt buying Rs 5,181 crore worth Integrated Air Defence Weapon System: ದೆಹಲಿ ಎನ್ಸಿಆರ್ ಪ್ರದೇಶವನ್ನು ವಾಯು ದಾಳಿಗಳಿಂದ ರಕ್ಷಿಸಲು ಸರ್ಕಾರ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಖರೀದಿಸಲಿದೆ. 2035ರ ಮಿಷನ್ ಸುದರ್ಶನ ಚಕ್ರದ ಗುರಿ ಮುಟ್ಟುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದೆ. ಡಿಆರ್ಡಿಒ ಅಭಿವೃದ್ದಿಪಡಿಸಿರುವ ಐಎಡಿಎಫ್ಡಬ್ಲ್ಯುಎಸ್ ಅನ್ನು 5,181 ಕೋಟಿ ರೂಗೆ ಸರ್ಕಾರ ಖರೀದಿಸುತ್ತಿದೆ.
- Vijaya Sarathy SN
- Updated on: Dec 30, 2025
- 3:14 pm
ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ
ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ನೆನಪುಗಳನ್ನು ಪದೇ ಪದೇ ಚರ್ಚಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಅದರ ನಡುವೆ ಅಸಿಮ್ ಮುನೀರ್ ಅವರ ಈ ವರ್ತನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Sushma Chakre
- Updated on: Dec 29, 2025
- 10:51 pm
ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರೇ ಒಪ್ಪಿಕೊಂಡಿದ್ದಾರೆ. 80 ಡ್ರೋನ್ಗಳು 36 ಗಂಟೆಗಳ ಕಾಲ ದಾಳಿ ನಡೆದಿವೆ. ಭಾರತದ ಆಪರೇಷನ್ ಸಿಂಧೂರ್ ದಾಳಿಯು ನೂರ್ ಖಾನ್ ನೆಲೆಗೆ ಹಾನಿಯನ್ನುಂಟುಮಾಡಿದೆ ಎಂದು ಪಾಕಿಸ್ತಾನದ ಸಚಿವ ಒಪ್ಪಿಕೊಂಡಿದ್ದಾರೆ.
- Sushma Chakre
- Updated on: Dec 28, 2025
- 4:31 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂಲಕ ಶತ್ರುಗಳ ಪ್ರದೇಶದೊಳಗೆ ನುಗ್ಗಿ ದಾಳಿ ಮಾಡುವ ಸಾಮರ್ಥ್ಯ ಪ್ರದರ್ಶಿಸಿತು. ರಕ್ಷಣಾ ಉತ್ಪಾದನೆ, ಬಜೆಟ್ ಹೆಚ್ಚಳ, ಸ್ವದೇಶಿ ತಂತ್ರಜ್ಞಾನ ಬಳಕೆಯಿಂದ ಭಾರತದ ಸೇನಾ ಶಕ್ತಿ ಮತ್ತು ಸ್ವಾವಲಂಬನೆ ಗಣನೀಯವಾಗಿ ಬೆಳೆದಿದೆ. ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಆತ್ಮವಿಶ್ವಾಸ ಎದ್ದು ಕಾಣುತ್ತದೆ.
- Vijaya Sarathy SN
- Updated on: Dec 26, 2025
- 10:26 pm
ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನಿಗೆ ವಿಶೇಷ ಪುರಸ್ಕಾರ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು ಗುರುತಿಸಲ್ಪಟ್ಟ 10 ವರ್ಷದ ಶ್ರವಣ್ ಸಿಂಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಧೈರ್ಯ, ಕರುಣೆ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಿ ಗೌರವಿಸಿದ್ದಾರೆ.
- Sushma Chakre
- Updated on: Dec 26, 2025
- 7:08 pm
ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?
ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಈ ದಾಳಿಗಳು ಎರಡೂ ದೇಶಗಳ ನಡುವೆ 4 ದಿನಗಳ ತೀವ್ರ ಘರ್ಷಣೆಗೆ ಕಾರಣವಾಯಿತು. ಮೇ 10ರಂದು ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದದೊಂದಿಗೆ ಈ ಸಂಘರ್ಷ ಕೊನೆಗೊಂಡಿತು.
- Sushma Chakre
- Updated on: Dec 22, 2025
- 9:29 pm
ಆಪರೇಷನ್ ಸಿಂಧೂರ್ನ ಮೊದಲ ದಿನವೇ ಭಾರತ ಸೋತಿತ್ತು; ಮಾಜಿ ಸಿಎಂ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ
Operation Sindoor: ಪಹಲ್ಗಾಮ್ ದಾಳಿಯ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಆರಂಭಿಸಿದ ಮೊದಲ ದಿನವೇ ಭಾರತ ಸೋತಿತ್ತು ಎಂಬ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಕ್ಕೀಡಾಗಿದ್ದಾರೆ. ಆಪರೇಷನ್ ಸಿಂಧೂರ್ನ ಮೊದಲ ದಿನದಂದು ಭಾರತೀಯ ಮಿಲಿಟರಿ ವಿಮಾನಗಳನ್ನು ಪಾಕ್ ಪಡೆಗಳು ಹೊಡೆದುರುಳಿಸಿದವು ಎಂದು ಹೇಳಿದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಬಿಜೆಪಿ ಹಾಗೂ ಎನ್ಡಿಎ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.
- Sushma Chakre
- Updated on: Dec 17, 2025
- 3:36 pm
ಪಾಕಿಸ್ತಾನಕ್ಕೆ ಶೇ. 19, ಭಾರತಕ್ಕೆ ಶೇ. 50 ಸುಂಕ ಹಾಕಿದ್ದೇಕೆ ಅಮೆರಿಕ? ರಘುರಾಮ್ ರಾಜನ್ ಹೇಳಿದ್ದಿದು
Raghuram Rajan speaks at Zurich University event: ರಷ್ಯನ್ ತೈಲ ಖರೀದಿ ಮಾಡುತ್ತಿರುವುದಕ್ಕೆ ಶಾಸ್ತಿಯಾಗಿ ಭಾರತದ ಮೇಲೆ ಟ್ಯಾರಿಫ್ ಹಾಕಿದ್ದಾಗಿ ಅಮೆರಿಕ ಹೇಳಿದೆ. ಆದರೆ, ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಪ್ರಕಾರ, ಭಾರತದ ಮೇಲೆ ಟ್ಯಾರಿಫ್ ಹಾಕಲು ರಷ್ಯನ್ ತೈಲ ಖರೀದಿ ಕಾರಣ ಅಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಅಂತ್ಯಕ್ಕೆ ತಾನು ಕಾರಣ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆಗಳನ್ನು ಸರಿಯಾಗಿ ನಿರ್ವಹಿಸದೇ ಇದ್ದದ್ದು ಕಾರಣ ಎಂದು ರಾಜನ್ ಹೇಳಿದ್ದಾರೆ.
- Vijaya Sarathy SN
- Updated on: Dec 10, 2025
- 5:34 pm
ಆಪರೇಷನ್ ಸಿಂಧೂರ್ ವೇಳೆ ಶ್ರೀಕೃಷ್ಣನ ಸಂದೇಶವನ್ನು ಅನುಸರಿಸಿದೆವು; ಕುರುಕ್ಷೇತ್ರದಲ್ಲಿ ಸಚಿವ ರಾಜನಾಥ್ ಸಿಂಗ್
ಪಹಲ್ಗಾಮ್ ದಾಳಿಗೆ ಭಾರತದ ಪ್ರತಿಕ್ರಿಯೆ ದೃಢ ಮತ್ತು ನಿರ್ಣಾಯಕವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ, ಸಶಸ್ತ್ರ ಪಡೆಗಳು ಜವಾಬ್ದಾರಿಯುತರಿಗೆ ಬಲವಾದ ಸಂದೇಶವನ್ನು ನೀಡಿತು, ಆ ಸಂದೇಶವನ್ನು ಅವರು ಇಂದಿನವರೆಗೂ ಮರೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಪ್ರತಿಕ್ರಿಯೆಯು ಶ್ರೀಕೃಷ್ಣ ಪಾಂಡವರಿಗೆ ನೀಡಿದ ಸಂದೇಶದಿಂದ ರೂಪುಗೊಂಡಿದೆ ಎಂದು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
- Sushma Chakre
- Updated on: Nov 24, 2025
- 8:21 pm
ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಭಾರತದ ಮೇಲೆ ದಾಳಿ ನಡೆಸಿದ್ದೇವೆ; ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ!
ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ಸ್ಟೇಷನ್ ಹೊರಗೆ ನಡೆದ ಕಾರು ಬಾಂಬ್ ದಾಳಿಯ ಹಿಂದೆ ಉಗ್ರರ ಕೈವಾಡವಿದೆ ಎಂದು ಭಾರತದ ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು. ಇದೀಗ ಖುದ್ದು ಪಾಕಿಸ್ತಾನವೇ ಈ ಬಗ್ಗೆ ದೊಡ್ಡ ಸತ್ಯ ಹೊರಹಾಕಿದೆ. ಪಾಕಿಸ್ತಾನದ ನಾಯಕ ಚೌಧರಿ ಅನ್ವರುಲ್ ಹಕ್ ಪಾಕಿಸ್ತಾನದ ಸದನದಲ್ಲಿ ಮಾತನಾಡುವಾಗ ತಮ್ಮದೇನೋ ದೊಡ್ಡ ಸಾಧನೆಯೆಂಬಂತೆ ಈ ವಿಚಾರವನ್ನು ಬಹಿರಂಗಪಡಿಸುವ ಮೂಲಕ ಜಗತ್ತಿನೆದುರು ಮತ್ತೊಮ್ಮೆ ಪಾಕಿಸ್ತಾನದ ಭಯೋತ್ಪಾದಕತೆಯ ಮುಖ ತೆರೆದಿಟ್ಟಿದ್ದಾರೆ!
- Sushma Chakre
- Updated on: Nov 19, 2025
- 9:55 pm
ಭಾರತದಲ್ಲಿ ಮತ್ತೊಂದು ಉಗ್ರರ ದಾಳಿಯ ಎಚ್ಚರಿಕೆ; ಜಮ್ಮು ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅದಾಗಿ 6 ತಿಂಗಳಾಗಿವೆ. ಇದೀಗ ಮತ್ತೆ ಭಾರತದಲ್ಲಿ ಮತ್ತೊಂದು ಪ್ರಮುಖ ಭಯೋತ್ಪಾದಕ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಘಟಿತ ದಾಳಿಗಳಿಗೆ ಎಲ್ಇಟಿ, ಜೆಇಎಂ ಪ್ಲಾನ್ ಮಾಡುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಭದ್ರತೆಯನ್ನು ಹೆಚ್ಚಿಸಲಾಗಿದೆ.
- Sushma Chakre
- Updated on: Nov 6, 2025
- 5:33 pm
ನೀವು ಸಿಖ್ಖರಲ್ಲ; ಗುರುನಾನಕ್ ಜಯಂತಿಗೆ ಭಾರತದ 14 ಹಿಂದೂಗಳಿಗೆ ಪ್ರವೇಶ ನಿರಾಕರಿಸಿದ ಪಾಕಿಸ್ತಾನ
ಗುರುನಾನಕ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ 14 ಹಿಂದೂ ಯಾತ್ರಿಕರಿಗೆ ಅವರು ಸಿಖ್ ಧರ್ಮದವರಲ್ಲ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಗುರುನಾನಕ್ ಜಯಂತಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಲು ಸುಮಾರು 2100 ಜನರಿಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಇಸ್ಲಾಮಾಬಾದ್ ಕೂಡ ಅದೇ ಸಂಖ್ಯೆಯ ಸಂದರ್ಶಕರಿಗೆ ಪ್ರಯಾಣದ ದಾಖಲೆಗಳನ್ನು ನೀಡಿತ್ತು. ಇದಲ್ಲದೆ ಸ್ವತಂತ್ರವಾಗಿ ತಾವೇ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ 300 ಜನರನ್ನು ಗೃಹ ಸಚಿವಾಲಯದ ಅನುಮೋದನೆ ಇಲ್ಲದ ಕಾರಣ ಭಾರತದ ಗಡಿಯಲ್ಲಿ ವಾಪಾಸ್ ಕಳುಹಿಸಲಾಗಿದೆ
- Sushma Chakre
- Updated on: Nov 5, 2025
- 5:58 pm