AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OTT platform

OTT platform

ಭಾರತದಲ್ಲಿ ಹಾಗೂ ವಿಶ್ವಾದ್ಯಂತ ಒಟಿಟಿ ಪ್ಲಾಟ್​ಫಾರ್ಮ್​ಗಳು ಜನಪ್ರಿಯತೆ ಪಡೆದುಕೊಂಡಿದೆ. ಲಾಕ್​ಡೌನ್​ ಬಳಿಕ ಜನರು ಒಟಿಟಿಯನ್ನು ಹೆಚ್ಚು ಬಳಸಲು ಆರಂಭಿಸಿದರು. ಸಿನಿಮಾ, ಸೀರಿಯಲ್​, ಕ್ರೀಡೆ, ಕಾಮಿಡಿ ಶೋ, ನ್ಯೂಸ್​ ಸೇರಿದಂತೆ ಅನೇಕ ಕಂಟೆಂಟ್​ಗಳನ್ನು ಬಿತ್ತರಿಸುವ ಹಲವು ಜನಪ್ರಿಯ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿವೆ. ‘ನೆಟ್‌ಫ್ಲಿಕ್ಸ್ ’ ಪ್ರಪಂಚದಾದ್ಯಂತದ ವಿವಿಧ ರೀತಿಯ ಕಂಟೆಂಟ್​ ಬಿತ್ತರಿಸುವ ಮೂಲಕ ಹೆಸರುವಾಸಿಯಾಗಿದೆ. ಕೆಲವು ದೊಡ್ಡ ಸಿನಿಮಾಗಳು ಸೇರಿದಂತೆ ಜಾಗತಿಕ ಮತ್ತು ಭಾರತೀಯ ಪೇಕ್ಷಕರು ಮೆಚ್ಚುವಂತಹ ಶೋಗಳ ಪ್ರಸಾರದಿಂದ ‘ಅಮೇಜಾನ್​ ಪ್ರೈಂ ವೀಡಿಯೋ’ ಜನಮನ ಗೆದ್ದಿದೆ. ‘ಡಿಸ್ನಿ ಪ್ಲಸ್​ ಹಾಟ್‌ಸ್ಟಾರ್’ ಸಿನಿಮಾ ಜೊತೆಗೆ ಕ್ರೀಡೆಗಳ ಪ್ರಸಾರಕ್ಕೆ ಫೇಮಸ್​ ಆಗಿದೆ. ವಿವಿಧ ಭಾಷೆಗಳಲ್ಲಿ ವೈವಿಧ್ಯಮಯ ಕಂಟೆಂಟ್​ ಪ್ರದರ್ಶನ ಮಾಡುವ ಕಾರಣಕ್ಕೆ ‘ಜೀ5’ ಜನಮನ ಗೆದ್ದಿದೆ. ALTBalaji ಮತ್ತು Voot ಕೂಡ ತಮ್ಮದೇ ಆದ ಭಾರತೀಯ ಕಂಟೆಂಟ್​ಗಳ ನಿರ್ಮಾಣ ಮತ್ತು ಪ್ರಸಾರವನ್ನು ಮಾಡುತ್ತಿವೆ. SonyLIV ಒಟಿಟಿ ಕೂಡ ಭಾರತದಲ್ಲಿ ಜನಪ್ರಿಯತೆ ಪಡೆದಿದೆ. ಈ ಪ್ಲಾಟ್​ಫಾರ್ಮ್​ಗಳು ಭಾರತೀಯ ಪ್ರೇಕ್ಷಕರ ಮನರಂಜನೆಯ ದೊಡ್ಡ ಭಾಗವಾಗಿದೆ.

ಇನ್ನೂ ಹೆಚ್ಚು ಓದಿ

ಒಟಿಟಿಯಲ್ಲಿ ‘ಧುರಂಧರ್’ ಸಿನಿಮಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಇಂಡಿಯಾಸ್ ಗಾಟ್ ಲೇಟೆಂಟ್ 2’

ದೊಡ್ಡ ದೊಡ್ಡ ಸಿನಿಮಾಗಳ ನಡುವೆಯೂ ವಿಭಿನ್ನವಾದ ಕಾನ್ಸೆಪ್ಟ್ ಹೊಂದಿರುವ ರಿಯಾಲಿಟಿ ಶೋಗಳು ಹಾಗೂ ವಿಭಿನ್ನ ಕಥಾಹಂದರದ ಚಿತ್ರಗಳು ಭಾರತೀಯ ಒಟಿಟಿ ಪ್ರೇಕ್ಷಕರನ್ನು ಅಪಾರವಾಗಿ ಸೆಳೆಯುತ್ತಿವೆ ಎಂಬುದಕ್ಕೆ ಆರ್ಮ್ಯಾಕ್ಸ್ ಮೀಡಿಯಾದ ಈ ವರದಿಯೇ ಸಾಕ್ಷಿ. ‘ಇಂಡಿಯಾಸ್ ಗಾಟ್ ಲೇಟೆಂಟ್ 2’ ಶೋ ನಂಬರ್ ಒನ್ ಸ್ಥಾನ ಪಡೆದಿದೆ.

‘ಸತ್ಲುಜ್’ ಸಿನಿಮಾ ನೋಡದೆಯೇ ನಿಷೇಧ ಹೇರಿದ ಸೆನ್ಸಾರ್ ಮಂಡಳಿ ಅಧ್ಯಕ್ಷ? ಅನುರಾಗ್ ಕಶ್ಯಪ್ ಆರೋಪ

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅನುರಾಗ್ ಕಶ್ಯಪ್ ಅವರು ಸಿನಿಮಾದ ಸೆನ್ಸಾರ್ ಪ್ರಕ್ರಿಯೆಯ ಕಹಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರಣಿ ಸೆನ್ಸಾರ್ ವಿವಾದಗಳು ನಡೆಯುತ್ತಿದ್ದರೂ ಪ್ರಸೂನ್ ಜೋಶಿ ಮೌನಕ್ಕೆ ಶರಣಾಗಿರುವುದನ್ನು ಅನುರಾಗ್ ಕಶ್ಯಪ್ ಪ್ರಶ್ನಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ? ‘ಸತ್ಲುಜ್’ ವಿವಾದದ ಬೆನ್ನಲ್ಲೇ ಕೇಂದ್ರದ ಚಿಂತನೆ

ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾವನ್ನು ಸೆನ್ಸಾರ್ ಪ್ರಮಾಣಪತ್ರ ಇಲ್ಲದೇ ಒಟಿಟಿಯಲ್ಲಿ ಬಿಡುಗಡೆ ಮಾಡಿದ್ದರಿಂದ ದೊಡ್ಡ ವಿವಾದ ಸೃಷ್ಟಿ ಆಗಿದೆ. ಈ ಹಿನ್ನೆಲೆಯಲ್ಲಿ ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆ ಕುರಿತು ಇಲ್ಲಿದೆ ವಿವರ..

ಮಿಶ್ರ ಪ್ರತಿಕ್ರಿಯೆ ನಡುವೆಯೂ ಒಟಿಟಿಯಲ್ಲಿ ಟ್ರೆಂಡ್ ಆಗುತ್ತಿರುವ ‘ಪೆದ್ದಿ’ ಸಿನಿಮಾ

Peddi Movie OTT: ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿರುವ ‘ಪೆದ್ದಿ’ ಸಿನಿಮಾಗೆ ವಿವಿಧ ರೀತಿಯ ವಿಮರ್ಶೆ ಸಿಗುತ್ತಿದೆ. ಮಿಶ್ರ ಪ್ರತಿಕ್ರಿಯೆ ನಡುವೆಯೂ ಈ ಸಿನಿಮಾ ನೆಟ್‌ಫ್ಲಿಕ್ಸ್‌ ಟ್ರೆಂಡಿಂಗ್‌ನ 3ನೇ ಸ್ಥಾನದಲ್ಲಿದೆ. ರಾಮ್ ಚರಣ್, ಜಾನ್ವಿ ಕಪೂರ್, ಶಿವರಾಜ್​ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ನೆಟ್‌ಫ್ಲಿಕ್ಸ್‌ನಲ್ಲಿ ‘ಪೆದ್ದಿ’ ಬಿಡುಗಡೆ: ಜಾನ್ವಿ ಕಪೂರ್ ನಟನೆಯ ವಿವಾದಾತ್ಮಕ ದೃಶ್ಯಕ್ಕೆ ಕತ್ತರಿ

‘ಪೆದ್ದಿ’ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಕೆಲವು ಕಾರಣಗಳಿಂದ ಟೀಕೆಗೆ ಗುರಿ ಆಗಿತ್ತು. ನಟಿ ಜಾನ್ವಿ ಕಪೂರ್ ಅವರು ಕಾಣಿಸಿಕೊಂಡ ದೃಶ್ಯಗಳು ಆಕ್ಷೇಪಾರ್ಹವಾಗಿವೆ ಎಂದು ಕೆಲವರು ತಕರಾರು ತೆಗೆದಿದ್ದರು. ಈಗ ಒಟಿಟಿ ವರ್ಷನ್​ನಲ್ಲಿ ಆ ದೃಶ್ಯಗಳನ್ನು ತೆಗೆದುಹಾಕಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ಸತ್ಲುಜ್’ ಸಿನಿಮಾ ವಿವಾದ; ಒಟಿಟಿ ಬ್ಯಾನ್ ಬೆನ್ನಲ್ಲೇ ಐಎಂಡಿಬಿ ರೇಟಿಂಗ್ ಮಾಯ

ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾಗೆ ಒಂದಲ್ಲಾ ಒಂದು ವಿಘ್ನ ಎದುರಾಗುತ್ತಲೇ ಇದೆ. ಮೊದಲು ಸೆನ್ಸಾರ್ ಸಮಸ್ಯೆ ಆಗಿತ್ತು. ಬಳಿಕ ಈ ಸಿನಿಮಾವನ್ನು ಒಟಿಟಿಯಿಂದ ತೆಗೆದುಹಾಕಲಾಗಿತ್ತು. ಈ ಸಿನಿಮಾಗೆ ಐಎಂಡಿಬಿ ರೇಟಿಂಗ್ ಕೂಡ ಈಗ ಇಲ್ಲದಂತಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪ್ರಮಾಣಪತ್ರ ಪಡೆಯದೇ ‘ಸತ್ಲುಜ್’ ಸಿನಿಮಾ ಬಿಡುಗಡೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆರೋಪ

ಜುಲೈ 5ರಂದು ZEE5 ಸಂಸ್ಥೆಯು ಭಾರತದಲ್ಲಿ ‘ಸತ್ಲುಜ್’ ಸಿನಿಮಾದ ಪ್ರಸಾರ ಸ್ಥಗಿತಗೊಳಿಸಿರುವುದನ್ನು ಖಚಿತಪಡಿಸಿದೆ. ಹನಿ ಟ್ರೆಹನ್ ನಿರ್ದೇಶನದ ಈ ಸಿನಿಮಾ ಬ್ಯಾನ್ ಆಗಿರುವ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚಿತ್ರಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಸಿನಿಮಾ ಪ್ರಸಾರಕ್ಕೆ ಮತ್ತೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಭಾರತದಲ್ಲಿ ‘ಸತ್ಲುಜ್’ ಸಿನಿಮಾ ನಿಷೇಧ; ಡೌನ್‌ಲೋಡ್ ಕಾಪಿ ಹಂಚಿಕೊಳ್ಳಿ ಎಂದ ನಟ ದಿಲ್ಜಿತ್ ದೋಸಾಂಜ್

ಭಾರತದ ಹೊರಗಿನ ದೇಶಗಳಲ್ಲಿ (ZEE5 Global) ‘ಸತ್ಲುಜ್’ ಸಿನಿಮಾ ಇನ್ನೂ ಲಭ್ಯವಿದ್ದು, ಭಾರತದಲ್ಲಿ ಡೌನ್‌ಲೋಡ್ ಮಾಡಿಕೊಂಡಿರುವವರು ತಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಇದನ್ನು ಶೇರ್ ಮಾಡಿ, ಕಥೆಯನ್ನು ಜೀವಂತವಾಗಿಡುವಂತೆ ದಿಲ್ಜಿತ್ ದೋಸಾಂಜ್ ಮನವಿ ಮಾಡಿದ್ದಾರೆ. ‘ಸತ್ಲುಜ್’ ಸಿನಿಮಾದ ವಿವಾದದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸೂಪರ್ ಹಿಟ್ ಹಾರರ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಎಂಟ್ರಿ; ಆದರೆ ದೊಡ್ಡ ಟ್ವಿಸ್ಟ್

ಭಾರತದಲ್ಲಿ ‘ಅಬ್ಸೆಷನ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಭಾರಿ ಕತ್ತರಿ ಹಾಕಿದೆ ಎಂಬ ಟೀಕೆಗಳು ಕೇಳಿಬಂದಿದ್ದವು. ಈಗ ಒಟಿಟಿಯಲ್ಲಿ ಚಿತ್ರದ ಅನ್​ಕಟ್ ವರ್ಷನ್ ನೋಡಲು ಪ್ರೇಕ್ಷಕರು ಬಯಸಿದ್ದಾರೆ. ಒಟಿಟಿಯಲ್ಲಿ ‘ಅಬ್ಸೆಷನ್’ ಸಿನಿಮಾ ಲಭ್ಯವಾಗಿದೆ. ಆದರೆ ಉಚಿತವಾಗಿ ನೋಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಒಟಿಟಿಗೆ ಲಗ್ಗೆ ಇಟ್ಟ ರಿತೇಶ್ ದೇಶ್‌ಮುಖ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ರಾಜಾ ಶಿವಾಜಿ’

ಅಂದಾಜು 75 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾದ ‘ರಾಜಾ ಶಿವಾಜಿ’ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 117 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈಗ ಒಟಿಟಿ ಅಂಗಳಕ್ಕೆ ಕಾಲಿಡಲು ಸಜ್ಜಾಗಿದೆ. ರಿತೇಶ್ ದೇಶ್‌ಮುಖ್ ಅವರು ಈ ಸಿನಿಮಾದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ.

ಭಾರತದಲ್ಲಿ ಸೂಪರ್ ಹಿಟ್ ಆದ ಹಾಲಿವುಡ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಬರೋದು ಯಾವಾಗ?

ಹಾಲಿವುಡ್​ನ ‘ಅಬ್ಸೆಷನ್’ ಸಿನಿಮಾ ಭಾರತದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ನಿರೀಕ್ಷೆಯೇ ಇಲ್ಲದೇ ಈ ಸಿನಿಮಾ ಅಂದಾಜು 100 ಕೋಟಿ ರೂಪಾಯಿ ಗಳಿಕೆ ಮಾಡುವಂತಾಗಿದೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಲು ಕಾದಿರುವ ಪ್ರೇಕ್ಷಕರಿಗೆ ಒಂದು ಗುಡ್ ನ್ಯೂಸ್ ಇದೆ.

ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ‘ಧುರಂಧರ್ 2’: ಅನ್‌ಕಟ್ ಜಾಗತಿಕ ವರ್ಷನ್‌ನಲ್ಲಿ ಏನೆಲ್ಲಾ ಇರಲಿದೆ?

‘ಧುರಂಧರ್ 2’ ಚಿತ್ರತಂಡವು ನೆಟ್​ಫ್ಲಿಕ್ಸ್ ಮೂಲಕ ಪ್ರೇಕ್ಷಕರಿಗೆ ಸರ್ಪ್ರೈಸ್ ನೀಡಲಿದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ರೀಮಿಯರ್ ಆದಾಗ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರಿಗೆ, ‘ನೆಟ್​ಫ್ಲಿಕ್ಸ್’ ಒಟಿಟಿಯಲ್ಲಿ ಬೇರೆಯದೇ ವರ್ಷನ್​ನ ‘ಧುರಂಧರ್ 2’ ಸಿನಿಮಾ ನೋಡಲು ಸಿಗಲಿದೆ. ಹಲವು ದೃಶ್ಯಗಳು ಇದರಲ್ಲಿ ಹೊಸದಾಗಿ ಲಭ್ಯವಾಗಲಿವೆ.

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ