AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Padayatra

Padayatra

ಪಾದಯಾತ್ರೆ ಒಂದು ಹೊರಾಂಗಣ ಚಟುವಟಿಕೆ. ನಾನಾ ಕಾರಣಗಳಿಗೆ ಪಾದಯಾತ್ರೆ ಮಾಡಲಾಗುತ್ತೆ. ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಲು ಪಾದಯಾತ್ರೆ, ಕೆಲ ಘಟನೆಗಳನ್ನು ವಿರೋಧಿಸಿ ನ್ಯಾಯಕ್ಕಾಗಿ ಮಾಡುವುದು. ವಿವಿಧ ಬೇಡಿಕೆಗೆ ಪಾದಯಾತ್ರೆ ಮಾಡುವುದು. ಹೀಗೆ ವಿವಿಧ ರೀತಿಯಲ್ಲಿ ಪಾದಯಾತ್ರೆಗಳು ನಡೆಯುತ್ತವೆ. ಅದರಲ್ಲೂ ರಾಜಕೀಯದಲ್ಲಿ ಕ್ಷೇತ್ರದಲ್ಲಿ ನಡೆಯುವ ಪಾದಯಾತ್ರೆಯೇ ಬೇರೆ. ನಾನಾ ಕಾರಣಗಳಿಗೆ ರಾಜಕೀಯ ಪಕ್ಷಗಳು ತಮ್ಮ ವಿರೋಧಿ ಪಕ್ಷಗಳ ವಿರುದ್ಧ ಪಾದಯಾತ್ರೆ ಕೈಗೊಳ್ಳುವುದು ಉಂಟು. ಅದರಂತೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಪಾದಯಾತ್ರೆಗಳು ನಡೆದಿವೆ. ಅದರಲ್ಲಿ ಪ್ರಮುಖವಾಗಿ ಹೇಳಬೇಕೆಂದರೆ ಈ ಹಿಂದೆ ರೆಡ್ಡಿ ಬ್ರದರ್ಸ್​ ವಿರುದ್ಧ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿರುವುದು ಹೆಸರಾಗಿದೆ. ಮೇಕೆದಾಟು ಯೋಜನೆಗಾಗಿ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದ ವಾಲ್ಮೀಕಿ ಮತ್ತು ಮುಡಾ ಹಗರಣಗಳ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದೆ.

ಇನ್ನೂ ಹೆಚ್ಚು ಓದಿ

ಬಳ್ಳಾರಿ ಚಲೋ ಪಾದಯಾತ್ರೆ; ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಗೋ ಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯ 4ನೇ ದಿನ ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ಆರಂಭವಾಯಿತು. ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗೋ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ಅವರು ಬಡ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಅಂಗವಿಕಲರ ಪಿಂಚಣಿ ನಿಲ್ಲಿಸಿರುವುದನ್ನು ಖಂಡಿಸಿದರು.

4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್; ಸಿಂಧನೂರಿನಲ್ಲಿ ಗೋ ಪೂಜೆ ನೆರವೇರಿಸಿ ವಿಜಯೇಂದ್ರ ಚಾಲನೆ

ರಾಯಚೂರಿನ ಸಿಂಧನೂರಿನಲ್ಲಿ ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಯ ನಾಲ್ಕನೇ ದಿನದ ಯಾತ್ರೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಚಾಲನೆ ನೀಡಿದರು. ಇದೇ ವೇಳೆ, ಮುಸ್ಲಿಂ ಮೋರ್ಚಾದ ಮುಖಂಡರು, ಸದಸ್ಯರೂ ಸಾಥ್ ನೀಡಿದರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಗೋಪೂಜೆ ನೆರವೇರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು.

Sep 4th Kannada News highlights: ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ತಡೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

TV9 Kannada News Today Live Updates: ಬೆಂಗಳೂರು ಟನಲ್ ರೋಡ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರ್ದೇಶನ, ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ವೈಭವದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಹಾಗೂ ತಿರುಪತಿ ಟಿಟಿಡಿ ಉಪ ಇಒ ಮನೆಯಲ್ಲಿ ಎಸಿಬಿ ಭೇಟೆಯಾಗಿ 5 ಕೋಟಿ ರೂ.ಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿರುವ ವರದಿ ಸೇರಿದಂತೆ ಇಂದಿನ ಪ್ರಮುಖ ಸುದ್ಧಿಗಳ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ: 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ, ಇಂದು ಸಿಂಧನೂರಿನತ್ತ ಪಯಣ

BJP Padayatra: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ದಲಿತ ಮುಖಂಡರೊಂದಿಗೆ ಸಂವಾದ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಕೂಡ ಕೌಂಟರ್‌ ಪ್ಲ್ಯಾನ್ ರೂಪಿಸುತ್ತಿದೆ.

ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್ ಕೊಡಲು ರಣತಂತ್ರ

ಬಳ್ಳಾರಿ ರಾಜ್ಯ ರಾಜಕಾರಣದ ಅತ್ಯಂತ ಪ್ರಮುಖ ಕದನವಾಗಿ ಮಾರ್ಪಟ್ಟಿದೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್​ ಕೂಡ ತಮ್ಮದೇ ಆದ ರೀತಿಯಲ್ಲಿ ಪ್ರತಿತಂತ್ರ ಮಾಡುತ್ತಿದೆ. ಈಗಾಗಲೇ ನನಗೂ ಪಾದಯಾತ್ರೆಗೆ ಅನುಮತಿ ಕೊಡಿ ಅಂತಾ ಹೈಕಮಾಂಡ್​ಗೆ ನಾಗೇಂದ್ರ ಮನವಿ ಮಾಡಿದ್ರು. ಆದ್ರೆ ನಾಗೇಂದ್ರ ಪರ ಫೀಲ್ಡಿಗಿಳಿಯುವಂತೆ ಕಾಂಗ್ರೆಸ್​ ಶಾಸಕರಿಗೆ ವರಿಷ್ಠರು ಸೂಚನೆ ಕೊಟ್ಟಿದ್ರು. ಇದೀಗ ಸಿಎಂ ಡಿಕೆಶಿನೂ ಅಖಾಡಕ್ಕಿಳಿದಿದ್ದಾರೆ.

ಬಿಜೆಪಿಯ ಮೊದಲ ದಿನದ ಬಳ್ಳಾರಿ ಪಾದಯಾತ್ರೆ ಅಂತ್ಯ: ಕೇಸರಿ ಪಡೆಯ ಪ್ರಮುಖ ಅಜೆಂಡಾ ಹೀಗಿದೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಲಿಂಗಸೂಗೂರಿನಿಂದ ಇಂದಿನಿಂದ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆ ಸೆಪ್ಟೆಂಬರ್ 10ರಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ. ರಾಜ್ಯ ಸರ್ಕಾರದ ವಿವಿಧ ವೈಪಲ್ಯಗಳ ವಿರುದ್ಧ ಹೋರಾಟ ಜೋರಾಗಿದೆ. ಹಾಗಾದ್ರೆ, ಮೊದಲ ದಿನ ಪಾದಯಾತ್ರೆ ಎಲ್ಲಿಗೆ ಬಂತು ಎನ್ನುವ ಡಿಟೇಲ್ಸ್ ಇಲ್ಲಿದೆ.

Ballary Chalo: ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ 'ಬಳ್ಳಾರಿ ಚಲೋ' ಪಾದಯಾತ್ರೆ ಆರಂಭವಾಗಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರೂ ವಾಲ್ಮೀಕಿ ನಿಗಮದ 187 ಕೋಟಿ ಹಗರಣದ ಹಣ ವಾಪಸ್ ತರುವುದು ಹಾಗೂ ಸರ್ಕಾರದ ರೈತ, ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಈ ಬೃಹತ್ ಹೋರಾಟ ಕೈಗೊಳ್ಳಲಾಗಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

BJP Bellary Chalo Padayatra Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಿಜೆಪಿಯ 'ಬಳ್ಳಾರಿ ಚಲೋ' ಬೃಹತ್ ಪಾದಯಾತ್ರೆ ಇಂದಿನಿಂದ ಆರಂಭವಾಗಿದೆ. 10 ದಿನಗಳ ಕಾಲ 175 ಕಿ.ಮೀ. ಸಾಗಲಿರುವ ಈ ಯಾತ್ರೆಯು ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿಯ 9 ಕ್ಷೇತ್ರಗಳನ್ನು ತಲುಪಲಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, 10ನೇ ದಿನ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ನಾಗೇಂದ್ರ ಆಯ್ತು, ಕೆಪಿಎಸ್​​ಸಿ ಹಗರಣದಲ್ಲಿ ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್ಸಿ ಹಗರಣ, ಬರಗಾಲ ನಿರ್ವಹಣೆ, ಗೃಹಲಕ್ಷ್ಮಿ ಯೋಜನೆಯಲ್ಲಿನ ವಿಳಂಬ ಮತ್ತು ನಾಗೇಂದ್ರ ರಾಜೀನಾಮೆ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಮುಖ್ಯಮಂತ್ರಿಗಳ ಗದಗ ಭೇಟಿಯನ್ನು ನಾಟಕ ಎಂದು ಅಶೋಕ್ ಟೀಕಿಸಿದ್ದಾರೆ.

Video: ಬಳ್ಳಾರಿ ಚಲೋ ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ

ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಕ್ಕೂ ಮುನ್ನ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಯಚೂರು ಜಿಲ್ಲೆಯ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಪಾದಯಾತ್ರೆಯು 10 ದಿನಗಳ ಕಾಲ 175 ಕಿಲೋಮೀಟರ್ ದೂರ ಕ್ರಮಿಸಲಿದ್ದು, ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ಕಲ್ಯಾಣ ಕರ್ನಾಟಕದ ನಾಯಕರ ಮಹತ್ವದ ಸಭೆ ಕರೆದ ಕೆಪಿಸಿಸಿ

ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಿಸುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕರಿಗೆ ರಾಜಕೀಯವಾಗಿ ಕೌಂಟರ್ ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಕಲ್ಯಾಣ ಕರ್ನಾಟಕದ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಸಭೆ ಕರೆದು, ಪಾದಯಾತ್ರೆಯಲ್ಲಿ ಬಿಜೆಪಿ ಪ್ರಸ್ತಾಪಿಸುವ ಪ್ರತಿಯೊಂದು ವಿಚಾರಕ್ಕೂ ತಿರುಗೇಟು ನೀಡಲು ತಂತ್ರ ರೂಪಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ ಇದೀಗ.

BJP Padayatra: ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಹಣ ವಾಪಸ್‌ ಆಗ್ರಹಿಸಿ ಬಿಜೆಪಿ ಇಂದಿನಿಂದ ಬಳ್ಳಾರಿ ಚಲೋ ಪಾದಯಾತ್ರೆ ಆರಂಭಿಸಿದೆ. ರಾಯಚೂರಿನ ಲಿಂಗಸುಗೂರಿನಿಂದ ಆರಂಭವಾಗಿ 10 ದಿನಗಳಲ್ಲಿ 170 ಕಿ.ಮೀ. ಸಾಗುವ ಈ ಯಾತ್ರೆಗೆ ಬಿ.ವೈ. ವಿಜಯೇಂದ್ರ ಮುಂದಾಳತ್ವ ವಹಿಸಿದ್ದಾರೆ. ಇದಕ್ಕೆ ಪ್ರತಿತಂತ್ರ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಲ್ಯಾಣ ಕರ್ನಾಟಕದ ಶಾಸಕರ ಸಭೆ ಕರೆದಿದ್ದಾರೆ.