
Padma Awards
Padma Awards
ಕನ್ನಡಿಗರ ಬೇಡಿಕೆ ಫಲಿಸಿದ ಕ್ಷಣ; ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸರಳವಾದ ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಪತ್ನಿ ಗಾಯತ್ರಿ, ಮಗಳು ಹಾಗೂ ಅಳಿಯ ಸಂತೋಷದಿಂದ ಚಪ್ಪಾಳೆ ತಟ್ಟುತ್ತಾ ಅಭಿನಂದಿಸಿದರು. ಅನಂತ್ ನಾಗ್ 5 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟರಾಗಿ ಅಭಿನಯಿಸುತ್ತಿದ್ದಾರೆ.
- Sushma Chakre
- Updated on: May 27, 2025
- 9:01 pm
ಖ್ಯಾತ ನಟ ಅನಂತನಾಗ್, ವಯಲಿನ್ ವಾದಕ ಎಲ್. ಸುಬ್ರಮಣ್ಯಂ ಸೇರಿ 71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ
ಪದ್ಮ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಗೌರವಗಳಾಗಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಇದರಲ್ಲಿ, ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣವನ್ನು ನೀಡಲಾಗುತ್ತದೆ. ಪದ್ಮಭೂಷಣ ಪ್ರಶಸ್ತಿಯನ್ನು ಅತ್ಯುನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 71 ಸಾಧಕರಿಗೆ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಲಾಯಿತು.
- Sushma Chakre
- Updated on: May 27, 2025
- 9:01 pm
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಟಾಲಿವುಡ್ನಲ್ಲಿ ಬಾಲಯ್ಯ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳಲ್ಲಿ ಅವರ ಗತ್ತು ಗಮ್ಮತ್ತು ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ಬಾಲಯ್ಯ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು.
- Madan Kumar
- Updated on: Apr 28, 2025
- 10:36 pm
ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಕರ್ನಾಟಕದ ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ ಭೀಮವ್ವ ಇಂದು ದೇಶದ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಭೀಮವ್ವ ತನ್ನ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡಿಕೊಂಡು ಬಂದವರು. ಕೊಪ್ಪಳ ತಾಲೂಕಿನ ಕುಗ್ರಾಮ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.
- Sushma Chakre
- Updated on: Apr 28, 2025
- 10:07 pm
ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್
ತೆಲುಗು ನಟ ನಂದಮೂರಿ ಬಾಲಕೃಷ್ಣ, ತಮಿಳು ನಟ ಅಜಿತ್ ಕುಮಾರ್, ಹಿಂದಿ ಸಿನಿಮಾ ನಿರ್ದೇಶಕ ಶೇಖರ್ ಕಪೂರ್ ಮುಂತಾದವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸಂಗೀತ ಸಂಯೋಜಕ ರಿಕ್ಕಿ ಕೇಜ್, ಗಾಯಕ ಅರಿಜಿತ್ ಸಿಂಗ್ ಮುಂತಾದವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಎಲ್ಲ ಸಾಧಕರಿಗೆ ಅಪ್ತರು ಮತ್ತು ಅಭಿಮಾನಿಗಳು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.
- Madan Kumar
- Updated on: Apr 28, 2025
- 9:21 pm
Padma Awards: 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪ್ರಾರಂಭ; ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ
2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಆರಂಭವಾಗಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜುಲೈ 31. awards.gov.inನಲ್ಲಿ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಹತೆ, ನಾಮನಿರ್ದೇಶನದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ಇಲ್ಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಗುವುದು.
- Sushma Chakre
- Updated on: Mar 17, 2025
- 4:24 pm
ಪದ್ಮಶ್ರೀ ಪುರಸ್ಕೃತರಾದ ವೆಂಕಪ್ಪ ಅಂಬಾಜಿ ಸುಗತೇಕರ್ನ್ನು ಸನ್ಮಾನಿಸಿದ ಪ್ರಲ್ಹಾದ್ ಜೋಶಿ
76ನೇ ಗಣರಾಜ್ಯೋತ್ಸವದಂದು ಕರ್ನಾಟಕದ ಮೂವರು ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇದರಲ್ಲಿ ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಒಬ್ಬರು. 71 ವರ್ಷಗಳ ಕಲಾಸೇವೆಗೆ ಈ ಪ್ರಶಸ್ತಿ ಲಭಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ವೆಂಕಪ್ಪ ಅವರನ್ನು ಅಭಿನಂದಿಸಿದ್ದಾರೆ.
- Gangadhar Saboji
- Updated on: Jan 26, 2025
- 8:02 pm
ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ
ಗೊಂದಳಿ ಕಲಾವಿದ ವೆಂಕಪ್ಪ ಸುಗತೇಕರ್ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿ ಒಲಿದೆ ಬಂದಿದೆ. 71 ವರ್ಷಗಳಿಂದ ಗೊಂದಳಿ ಪದಗಳನ್ನು ಹಾಡುತ್ತಿರುವ ಅವರು, 2022ರಲ್ಲಿ ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಅವರನ್ನು ಕೊಂಡಾಡಿದ್ದಾರೆ.
- Ravi H Mooki
- Updated on: Jan 25, 2025
- 11:09 pm
ಕೊಪ್ಪಳ: ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ 96 ವರ್ಷದ ಭೀಮವ್ವ ಶಿಳ್ಳೇಕ್ಯಾತಗೆ ಒಲಿದ ಪದ್ಮಶ್ರೀ
ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರು ಪದ್ಮಶ್ರೀ ಪ್ರಶಸ್ತಿ ಪಡೆದಿರುವುದು ಕನ್ನಡದ ತೊಗಲುಗೊಂಬೆಯಾಟ ಕಲೆಗೆ ದೊರೆತ ಅಪಾರ ಗೌರವವಾಗಿದೆ. ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ. ತಮ್ಮ ಕುಟುಂಬದ ಮೂಲಕ ಈ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಅವರು ಸಾಧನೆ ಮಾಡಿದ್ದಾರೆ.
- Sanjayya Chikkamath
- Updated on: Jan 25, 2025
- 8:37 pm
Padma Awards 2025: ಪದ್ಮ ಪ್ರಶಸ್ತಿ ಪಡೆದ ಕರ್ನಾಟಕ ಸಾಧಕರ ಸಂಪೂರ್ಣ ಪಟ್ಟಿ ಇಲ್ಲಿದೆ
Padma Awards 2025 Karnataka Winners List: 76ನೇ ಗಣರಾಜ್ಯೋತ್ಸವ ಹಿನ್ನಲೆ ಶನಿವಾರ ರಾಷ್ಟ್ರಪತಿಗಳು 2025ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರುನಾಡಿನ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.
- Gangadhar Saboji
- Updated on: Jan 25, 2025
- 9:49 pm