AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Padma Awards

Padma Awards

Padma Awards

Padma Awards 2026: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸದ ರೋಹಿತ್ ಶರ್ಮಾ..! ಕಾರಣವೇನು?

Rohit Sharma Padma Award Absence: 2026ರ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರ ಘೋಷಿಸಿದ ಪದ್ಮ ಪ್ರಶಸ್ತಿಗಳಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ ಹೆಸರಿತ್ತು. ಮೇ 25ರ ಪ್ರದಾನ ಸಮಾರಂಭಕ್ಕೆ ಅವರು ಗೈರುಹಾಜರಾಗಿದ್ದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗಳನ್ನು ವಿವಿಧ ಹಂತಗಳಲ್ಲಿ ಪ್ರದಾನ ಮಾಡಲಾಗುತ್ತದೆ. ರೋಹಿತ್ ಅವರ ಬಿಡುವಿಲ್ಲದ ವೇಳಾಪಟ್ಟಿ, ವಿಶೇಷವಾಗಿ ಐಪಿಎಲ್ ಕಾರಣ, ಮೊದಲ ಹಂತದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅವರು ಎರಡನೇ ಹಂತದಲ್ಲಿ ಪದ್ಮಶ್ರೀ ಸ್ವೀಕರಿಸುವ ನಿರೀಕ್ಷೆಯಿದೆ.

ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ

ಮನರಂಜನಾ ಕ್ಷೇತ್ರದಿಂದ ದಿವಂಗತ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಧರ್ಮೇಂದ್ರ ಪರವಾಗಿ ಅವರ ಪತ್ನಿ ಹೇಮಾ ಮಾಲಿನಿ ಅವರು ಇಂದು (ಮೇ 25) ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಡಿಯೋ ಇಲ್ಲಿದೆ..

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು (ಮೇ 25) ಪ್ರದಾನ ಮಾಡಲಾಗುತ್ತದೆ. ಮಮ್ಮುಟ್ಟಿ, ಧರ್ಮೇಂದ್ರ, ಅಲ್ಕಾ ಯಾಗ್ನಿಕ್, ಆರ್. ಮಾಧವನ್ ಮುಂತಾದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಮನರಂಜನಾ ಕ್ಷೇತ್ರದಲ್ಲಿ ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾದ ಪ್ರಮುಖರ ವಿವರ ಇಲ್ಲಿದೆ.

ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ

ಪದ್ಮಶ್ರೀ ಪುರಸ್ಕೃತ ಅಂಕೇಗೌಡರು ಮಂಡ್ಯ ಜಿಲ್ಲೆಯ ಚಿನಕುರಳಿ ಗ್ರಾಮದಲ್ಲಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಗ್ರಂಥಾಲಯ ಸ್ಥಾಪಿಸಿದ್ದಾರೆ. ನೂರು ವರ್ಷ ಹಳೆಯ ಕೃತಿಗಳು, 3000 ರಾಮಾಯಣ ಆವೃತ್ತಿಗಳು, ಭಗವದ್ಗೀತೆ, ಗಾಂಧಿ ಕುರಿತು ಸಾವಿರಾರು ಪುಸ್ತಕಗಳಿರುವ ಈ ಗ್ರಂಥಾಲಯ ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಅಕ್ಷರಶಃ ಜ್ಞಾನದ ಆಗರವಾಗಿದೆ.

ಕನ್ನಡಿಗರ ಬೇಡಿಕೆ ಫಲಿಸಿದ ಕ್ಷಣ; ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸರಳವಾದ ಕುರ್ತಾ ಧರಿಸಿ ಬಂದಿದ್ದ ಅನಂತ್ ನಾಗ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಅವರ ಪತ್ನಿ ಗಾಯತ್ರಿ, ಮಗಳು ಹಾಗೂ ಅಳಿಯ ಸಂತೋಷದಿಂದ ಚಪ್ಪಾಳೆ ತಟ್ಟುತ್ತಾ ಅಭಿನಂದಿಸಿದರು. ಅನಂತ್ ನಾಗ್ 5 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟರಾಗಿ ಅಭಿನಯಿಸುತ್ತಿದ್ದಾರೆ.

ಖ್ಯಾತ ನಟ ಅನಂತನಾಗ್, ವಯಲಿನ್ ವಾದಕ ಎಲ್. ಸುಬ್ರಮಣ್ಯಂ ಸೇರಿ 71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ

ಪದ್ಮ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಗೌರವಗಳಾಗಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಇದರಲ್ಲಿ, ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣವನ್ನು ನೀಡಲಾಗುತ್ತದೆ. ಪದ್ಮಭೂಷಣ ಪ್ರಶಸ್ತಿಯನ್ನು ಅತ್ಯುನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 71 ಸಾಧಕರಿಗೆ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಲಾಯಿತು.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಟಾಲಿವುಡ್​ನಲ್ಲಿ ಬಾಲಯ್ಯ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳಲ್ಲಿ ಅವರ ಗತ್ತು ಗಮ್ಮತ್ತು ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ಬಾಲಯ್ಯ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು.

ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಕರ್ನಾಟಕದ ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ ಭೀಮವ್ವ ಇಂದು ದೇಶದ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಭೀಮವ್ವ ತನ್ನ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡಿಕೊಂಡು ಬಂದವರು. ಕೊಪ್ಪಳ ತಾಲೂಕಿನ ಕುಗ್ರಾಮ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.

ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಾಲಯ್ಯ, ಅಜಿತ್ ಕುಮಾರ್, ಶೇಖರ್ ಕಪೂರ್

ತೆಲುಗು ನಟ ನಂದಮೂರಿ ಬಾಲಕೃಷ್ಣ, ತಮಿಳು ನಟ ಅಜಿತ್ ಕುಮಾರ್, ಹಿಂದಿ ಸಿನಿಮಾ ನಿರ್ದೇಶಕ ಶೇಖರ್ ಕಪೂರ್ ಮುಂತಾದವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸಂಗೀತ ಸಂಯೋಜಕ ರಿಕ್ಕಿ ಕೇಜ್, ಗಾಯಕ ಅರಿಜಿತ್ ಸಿಂಗ್ ಮುಂತಾದವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಎಲ್ಲ ಸಾಧಕರಿಗೆ ಅಪ್ತರು ಮತ್ತು ಅಭಿಮಾನಿಗಳು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.

Padma Awards: 2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪ್ರಾರಂಭ; ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ

2026ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಆರಂಭವಾಗಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜುಲೈ 31. awards.gov.inನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಹತೆ, ನಾಮನಿರ್ದೇಶನದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ಇಲ್ಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಗುವುದು.

ಪದ್ಮಶ್ರೀ ಪುರಸ್ಕೃತರಾದ ವೆಂಕಪ್ಪ ಅಂಬಾಜಿ ಸುಗತೇಕರ್‌​​ನ್ನು ಸನ್ಮಾನಿಸಿದ ಪ್ರಲ್ಹಾದ್ ಜೋಶಿ

76ನೇ ಗಣರಾಜ್ಯೋತ್ಸವದಂದು ಕರ್ನಾಟಕದ ಮೂವರು ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇದರಲ್ಲಿ ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್‌ ಒಬ್ಬರು. 71 ವರ್ಷಗಳ ಕಲಾಸೇವೆಗೆ ಈ ಪ್ರಶಸ್ತಿ ಲಭಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ವೆಂಕಪ್ಪ ಅವರನ್ನು ಅಭಿನಂದಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ

ಗೊಂದಳಿ ಕಲಾವಿದ ವೆಂಕಪ್ಪ ಸುಗತೇಕರ್ ಅವರಿಗೆ 2025ರ​ ಪದ್ಮಶ್ರೀ ಪ್ರಶಸ್ತಿ ಒಲಿದೆ ಬಂದಿದೆ. 71 ವರ್ಷಗಳಿಂದ ಗೊಂದಳಿ ಪದಗಳನ್ನು ಹಾಡುತ್ತಿರುವ ಅವರು, 2022ರಲ್ಲಿ ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಅವರನ್ನು ಕೊಂಡಾಡಿದ್ದಾರೆ.