AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan

Pakistan

ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.

ಇನ್ನೂ ಹೆಚ್ಚು ಓದಿ

ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್​​ನಿಂದ ಯುದ್ಧದ ಬೆದರಿಕೆ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ. ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶೀತಲ ಸಮರವನ್ನು ದುರುಪಯೋಗಪಡಿಸಿಕೊಳ್ಳಲು ಪಾಕ್ ಪ್ರಯತ್ನಿಸುತ್ತಿದೆ. ಪಾಕಿಸ್ತಾನದ ಯುವ ನಾಯಕರೊಬ್ಬರ ವಿಡಿಯೋ ಹೇಳಿಕೆ ಇದೀಗ ವೈರಲ್ ಆಗಿದ್ದು, ಇದರಲ್ಲಿ ಅವರು ಬಾಂಗ್ಲಾದೇಶದ ಪರವಾಗಿ ಹೇಳಿಕೆ ನೀಡಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಆದರೆ, ಈ ಹೇಳಿಕೆಗೆ ಭಾರತ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?

ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಈ ದಾಳಿಗಳು ಎರಡೂ ದೇಶಗಳ ನಡುವೆ 4 ದಿನಗಳ ತೀವ್ರ ಘರ್ಷಣೆಗೆ ಕಾರಣವಾಯಿತು. ಮೇ 10ರಂದು ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದದೊಂದಿಗೆ ಈ ಸಂಘರ್ಷ ಕೊನೆಗೊಂಡಿತು.

ಕೊಚ್ಚಿನ್ ಶಿಪ್ ಯಾರ್ಡ್​ನಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಉಡುಪಿಯಲ್ಲಿ ಮತ್ತೊಬ್ಬ ಆರೋಪಿಯ ಬಂಧನ

ಉಡುಪಿಯ ಮಲ್ಪೆ ಪೊಲೀಸರು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಗುತ್ತಿಗೆ ನೌಕರರಾದ ರೋಹಿತ್ ಮತ್ತು ಸಂತ್ರಿ ಎಂಬವರು ಹಿರೇಂದ್ರ ಒದಗಿಸಿದ ಸಿಮ್‌ಗಳಿಂದ ಪಾಕಿಸ್ತಾನದವರಿಗೆ ಹಡಗುಗಳ ಚಲನವಲನಗಳ ಮಾಹಿತಿ ನೀಡುತ್ತಿದ್ದರು.

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಲವಂತವಾಗಿ ಯುವ ಮುಸ್ಲಿಂ ವೈದ್ಯೆಯೊಬ್ಬರ 'ಹಿಜಾಬ್' (ಮುಖದ ಪರದೆ) ಎಳೆದ ವಿಡಿಯೋ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮವೊಂದರಲ್ಲಿ ಸರ್ಟಿಫಿಕೆಟ್ ನೀಡುವಾಗ ಈ ಘಟನೆ ನಡೆದಿತ್ತು. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಕ್ಷಮೆಯನ್ನು ಕೂಡ ಕೇಳಿರಲಿಲ್ಲ. ಈ ಘಟನೆಯಿಂದ ಆ ವೈದ್ಯೆ ತೀವ್ರ ಮುಜುಗರಕ್ಕೀಡಾಗಿದ್ದರು. ಇದೀಗ ಬಿಹಾರದ ಮುಖ್ಯಮಂತ್ರಿಯ ಈ ವರ್ತನೆಯನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ. ಪಾಕಿಸ್ತಾನದ ಗ್ಯಾಂಗ್​ಸ್ಟರ್​ ಶಹಜಾದ್ ಭಟ್ಟಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಬೆದರಿಕೆಯನ್ನೂ ಹಾಕಿದ್ದಾರೆ.

ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು ಈಗಲೂ ಒದ್ದಾಡುತ್ತಿವೆ. ನೋಟು ಎಷ್ಟು ಪ್ರಿಂಟ್ ಮಾಡಬೇಕು, ಹಣ ಎಷ್ಟು ಹೆಚ್ಚಿಸಬೇಕು ಎಂಬುದಕ್ಕೆ ಒಂದು ಲೆಕ್ಕಾಚಾರ ಇರುತ್ತದೆ. ಆ ಕ್ರಮ ಮೀರಿದರೆ ದೇಶ ಹಾಳಾಗುತ್ತದೆ.

ಅಮೆರಿಕದಿಂದ ಪಾಕಿಸ್ತಾನಕ್ಕೆ ಮಿಲಿಟರಿ ಪ್ಯಾಕೇಜ್; ಪಾಕ್ ಅಂದ್ರೆ ಅಮೆರಿಕ, ಚೀನಾಗೆ ಯಾಕೆ ಪ್ರೀತಿ?

Why USA and China support the alleged terror nation Pakistan: ಪಾಕಿಸ್ತಾನದ ಬಗ್ಗೆ ಅಮೆರಿಕ ಮತ್ತು ಚೀನಾ ದೇಶಗಳು ಮೃದು ಧೋರಣೆ ಹೊಂದಿವೆ. ಅಮೆರಿಕದ ನಿಲುವು ಅನೇಕರಿಗೆ ಅಚ್ಚರಿ ಎನಿಸಿದರೂ, ಅದಕ್ಕೆ ಹಲವು ಸಹಜ ಕಾರಣಗಳಿವೆ. ಅಮೆರಿಕ ಮತ್ತು ಚೀನಾ ದೇಶಗಳು ಪಾಕಿಸ್ತಾನವನ್ನು ಆಲಂಗಿಸಲು ಸದಾ ಮುಂದಾಗಲು ಪ್ರಮುಖ ಕಾರಣಗಳಿವೆ.

ಆಸ್ಟ್ರೇಲಿಯಾ ಬೀಚ್ ಶೂಟರ್​​​ಗೆ ಹೈದರಾಬಾದ್​ ನಂಟು; 6 ಬಾರಿ ಭಾರತಕ್ಕೆ ಬಂದಿದ್ದ ಆರೋಪಿ

ಆಸ್ಟ್ರೇಲಿಯಾದ ಬೋಂಡಿ ಬೀಚ್ ಗುಂಡಿನ ದಾಳಿ ಪ್ರಕರಣದ ಆರೋಪಿ ಸಾಜಿದ್ ಅಕ್ರಮ್ ಪಾಕಿಸ್ತಾನಿ ಪ್ರಜೆ ಎಂಬ ಸಂಗತಿ ಬಯಲಾಗಿದೆ. ಆದರೆ, ಅದಕ್ಕೂ ಮುಖ್ಯವಾಗಿ ಆತನಿಗೂ ಭಾರತಕ್ಕೂ ನಂಟಿತ್ತು ಎಂಬ ಅಚ್ಚರಿಯ ಸಂಗತಿಯನ್ನೂ ಪತ್ತೆಹಚ್ಚಲಾಗಿದೆ. ಆರೋಪಿ ಸಾಜಿದ್ ಅಕ್ರಮ್ ಭಾರತಕ್ಕೆ 6 ಬಾರಿ ಭೇಟಿ ನೀಡಿದ್ದ. ಆತನ ಕುಟುಂಬದವರು ಹಲವು ವರ್ಷಗಳ ಹಿಂದೆಯೇ ಆತನೊಂದಿಗೆ ಸಂಬಂಧ ಕಡಿತಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಧುರಂಧರ್: ಇವರೆಲ್ಲ ಪಾಕಿಸ್ತಾನಕ್ಕೆ ಸ್ಪೈ ಆಗಿ ಹೋದರೆ ಮಾಡುವ ಎಡವಟ್ಟು ಒಂದೆರಡಲ್ಲ

ಸಿನಿಮಾಗಳು ಸೂಪರ್ ಹಿಟ್ ಆದಾಗ ಅದಕ್ಕೆ ತಕ್ಕಂತೆ ಜನರು ರೀಲ್ಸ್ ಮಾಡುವುದು ಸಹಜ. ‘ಧುರಂಧರ್’ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ಈ ಸಿನಿಮಾದ ಕಥೆಗೆ ಅನುಗುಣವಾಗಿ ಸೋಶಿಯಲ್ ಮೀಡಿಯಾದಲ್ಲಿ ನಾನಾ ಬಗೆಯ ರೀಲ್ಸ್ ಮಾಡಲಾಗುತ್ತಿದೆ. ‘First day as a spy in Pakistan’ ಎಂಬುದು ಇನ್​ಸ್ಟಾಗ್ರಾಮ್​ ತುಂಬೆಲ್ಲ ಹಾವಳಿ ಎಬ್ಬಿಸಿದೆ.

ಪಹಲ್ಗಾಮ್ ದಾಳಿಗೆ ಪಾಕ್ ಉಗ್ರನೇ ಮಾಸ್ಟರ್​​ಮೈಂಡ್; ಲಷ್ಕರ್ ಕಮಾಂಡರ್ ಸಂಚು ಬಯಲಿಗೆಳೆದ ಎನ್​ಐಎ

ಈ ವರ್ಷ ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಭಾರತದ ಪಾಲಿಗೆ ಕರಾಳ ನೆನಪಾಗಿಯೇ ಉಳಿದಿದೆ. ಇಡೀ ಜಗತ್ತನ್ನು ಕಂಗೆಡಿಸಿದ್ದ ಈ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಸರ್ಕಾರ ನೇರ ಆರೋಪ ಮಾಡಿದ್ದರೂ ಪಾಕ್ ಅದನ್ನು ನಿರಾಕರಿಸಿತ್ತು. ಇದೀಗ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್​ಇಟಿ) ಶಾಖೆಯ ನೇತೃತ್ವ ವಹಿಸಿದ್ದ ಪಾಕಿಸ್ತಾನಿ ಭಯೋತ್ಪಾದಕನೇ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಎಂದು ಎನ್​ಐಎ ತನ್ನ ವರದಿಯಲ್ಲಿ ಘೋಷಿಸಿದೆ.

40 ನಿಮಿಷ ಕಾದರೂ ಬಾರದ ಪುಟಿನ್; ತಾಳ್ಮೆಗೆಟ್ಟು ರಷ್ಯಾ ಅಧ್ಯಕ್ಷರ ರೂಂಗೇ ನುಗ್ಗಿದ ಪಾಕ್ ಪ್ರಧಾನಿ

ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು 40 ನಿಮಿಷ ಕಾದರೂ ಪುಟಿನ್ ಬರಲಿಲ್ಲ. ಇದರಿಂದ ತಾಳ್ಮೆ ಕಳೆದುಕೊಂಡ ಅವರು ಆಹ್ವಾನ ಇಲ್ಲದಿದ್ದರೂ ಪುಟಿನ್ ಅವರ ಮೀಟಿಂಗ್ ನಡೆಯುತ್ತಿದ್ದ ಕೊಠಡಿಯೊಳಗೆ ನುಗ್ಗಿದ್ದಾರೆ. ಬಳಿಕ 10 ನಿಮಿಷ ಪುಟಿನ್ ಜೊತೆ ಮಾತುಕತೆ ನಡೆಸಿ ಅಲ್ಲಿಂದ ವಾಪಾಸ್ ಬಂದಿದ್ದಾರೆ. ಹಾಗಂತ, ಪುಟಿನ್ ಪಾಕ್ ಪ್ರಧಾನಿಯನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಇದೇ ಮೊದಲೇನಲ್ಲ.

ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್​!

ಪಾಕಿಸ್ತಾನ ಭಾರತದಿಂದ ವಿಭಜನೆಯಾದ ಬಳಿಕ ಮೊತ್ತ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಮಹಾಭಾರತದ ಭಾಗವನ್ನು ಒಳಗೊಂಡ ಸಂಸ್ಕೃತ ಶ್ಲೋಕಗಳನ್ನು ಪಠ್ಯದಲ್ಲಿ ಪರಿಚಯಿಸಲಾಗಿದೆ. ಮಹಾಭಾರತ ಮತ್ತು ಭಗವದ್ಗೀತೆಯ ಭಾಗಗಳನ್ನು ಒಳಗೊಂಡಂತೆ ಸಂಸ್ಕೃತ ಪದ್ಯಗಳನ್ನು ಲಾಹೋರ್ ಮ್ಯಾನೇಜ್‌ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯದ (LUMS) ತರಗತಿಯೊಳಗೆ ಕಲಿಸಲಾಗುತ್ತಿದೆ. ಏಕೆಂದರೆ ಈ ಸಂಸ್ಥೆಯು ಐತಿಹಾಸಿಕ ಭಾಷೆಯನ್ನು ಔಪಚಾರಿಕವಾಗಿ ಕಲಿಸಲು ಪ್ರಾರಂಭಿಸಿದೆ.

ಪಾಕಿಸ್ತಾನದಲ್ಲಿ ನ್ಯಾಯಾಧೀಶರ ರೂಂನಿಂದ ಸೇಬು ಹಣ್ಣು, ಹ್ಯಾಂಡ್​​ವಾಶ್ ಕಳ್ಳತನ; ಕೇಸ್ ದಾಖಲು

ಪಾಕಿಸ್ತಾನದ ಲಾಹೋರ್‌ನಲ್ಲಿ ಸೆಷನ್ಸ್ ನ್ಯಾಯಾಧೀಶರ ಕೊಠಡಿಯಿಂದ ಎರಡು ಸೇಬು ಮತ್ತು ಹ್ಯಾಂಡ್ ವಾಶ್ ಕಳ್ಳತನ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸೆಂಬರ್ 5ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೂರ್ ಮುಹಮ್ಮದ್ ಬಸ್ಮಲ್ ಅವರ ಕೊಠಡಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್