Pakistan
ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.
ನೀವು ಅಸಲಿ ಕಾಶ್ಮೀರಿಗಳಲ್ಲ; ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಪಿಒಕೆಯಲ್ಲಿ ಭಾರಿ ಆಕ್ರೋಶ
ಪಾಕಿಸ್ತಾನದ ರಕ್ಷಣಾ ಸಚಿವರು ಪಾಕ್ ಆಕ್ರಮಿತ ಕಾಶ್ಮೀರದ (PoK) ಜನರ ಗುರುತಿನ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಭಾರೀ ಚರ್ಚೆಗೆ ಒಳಗಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಸ್ಥಳೀಯ ಪ್ರತಿಭಟನಾಕಾರರು ಮತ್ತು ವಿಮರ್ಶಕರ ಕಾಶ್ಮೀರಿ ಗುರುತನ್ನೇ ಪ್ರಶ್ನಿಸಿದ್ದಾರೆ. ರಾವಲಕೋಟ್ ಮತ್ತು ಮಿರ್ಪುರ್ ಭಾಗದ ಜನರು ಸಾಂಪ್ರದಾಯಿಕ ಕಾಶ್ಮೀರಿ ಭಾಷೆಯ ಬದಲಿಗೆ ಪ್ರಮುಖವಾಗಿ 'ಪೊಟೊಹಾರಿ' ಮತ್ತು 'ಪಹಾರಿ' ಉಪಭಾಷೆಗಳನ್ನು ಮಾತನಾಡುವುದರಿಂದ, ಅವರನ್ನು ನಿಜವಾದ ಕಾಶ್ಮೀರಿಗಳು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆಸಿಫ್ ವಾದಿಸಿದ್ದಾರೆ.
- Sushma Chakre
- Updated on: Jun 24, 2026
- 9:28 pm
‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ರಾಜಕೀಯವನ್ನು ಬದಿಗಿಟ್ಟು ದೇಶದೊಂದಿಗೆ ನಿಲ್ಲಬೇಕಾದ ಅವರು, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಇಮೇಜ್ಗೆ ಧಕ್ಕೆ ತರುವಂತಹ ಮತ್ತು ಶತ್ರು ದೇಶಗಳ ನಿರೂಪಣೆಗಳನ್ನು ಪುಷ್ಟೀಕರಿಸುವಂತಹ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
- Sushma Chakre
- Updated on: Jun 24, 2026
- 8:18 pm
ಪಾಕಿಸ್ತಾನದಲ್ಲಿ ಮಾಧ್ಯಮ ಸ್ವಾತಂತ್ರ್ಯವೇ ಇಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಟೀಕೆ
ಅಮೆರಿಕ ಮತ್ತು ಇರಾನ್ ನಡುವೆ ಇತ್ತೀಚೆಗೆ ಸಹಿ ಮಾಡಲಾದ ಶಾಂತಿ ಎಂಒಯು (MoU) ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ವಿಳಂಬವಾದದ್ದಕ್ಕೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಕಾರಣ ನೀಡಿದ್ದಾರೆ. ಪ್ರಮುಖವಾಗಿ ಪಾಕಿಸ್ತಾನದಂತಹ ದೇಶಗಳಲ್ಲಿ ಮುಕ್ತ ಮಾಧ್ಯಮ ಸ್ವಾತಂತ್ರ್ಯ ಇಲ್ಲದೇ ಇರುವುದು ಮತ್ತು ಮಾಹಿತಿ ಸೋರಿಕೆಯಾಗುವ ಭೀತಿಯೇ ಈ ವಿಳಂಬಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಮಾಧ್ಯಮ ಸ್ವಾತಂತ್ರ್ಯದ ವಿಷಯದಲ್ಲಿ ಅವರು ಪಾಕಿಸ್ತಾನವನ್ನು ಟೀಕಿಸಿರುವ ಅವರು ಪಾಕಿಸ್ತಾನದಲ್ಲಿ ಮಾಧ್ಯಮ ಸ್ವಾತಂತ್ರ್ಯವೇ ಇಲ್ಲ ಎಂದಿದ್ದಾರೆ.
- Sushma Chakre
- Updated on: Jun 20, 2026
- 5:18 pm
ರಾಂಚಿಯ ಆರ್ಎಸ್ಎಸ್ ಕಚೇರಿಯ ದಾಳಿಗೆ ಐಎಸ್ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್
ರಾಂಚಿಯಲ್ಲಿರುವ ಆರ್ಎಸ್ಎಸ್ (RSS) ಕಚೇರಿ ಮೇಲಿನ ದಾಳಿಯ ತನಿಖೆಯ ವೇಳೆ ಈ ದಾಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಉಗ್ರಗಾಮಿ ಸಂಘಟನೆಯ ಲಿಂಕ್ ಇರುವುದು ಪತ್ತೆಯಾಗಿದೆ. ಜಾರ್ಖಂಡ್ನ ರಾಂಚಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಭದ್ರತಾ ಸಂಸ್ಥೆಗಳಿಗೆ ಭಾರಿ ಸುಳಿವು ಸಿಕ್ಕಿದೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ಐ ಹಣಕಾಸು ನೆರವು ಪಡೆಯುತ್ತಿರುವ 'ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್' (TTH) ಉಗ್ರಗಾಮಿ ಸಂಘಟನೆಯ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.
- Sushma Chakre
- Updated on: Jun 19, 2026
- 3:27 pm
ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟ ಹಾಗೂ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಬೆಂಬಲಿತ ಬೃಹತ್ ಭಯೋತ್ಪಾದಕ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ ಭೇದಿಸಿದೆ. ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರಮುಖ ಹಬ್ಬಗಳ ಮುನ್ನಾದಿನದ ಭದ್ರತೆಯ ನಡುವೆಯೇ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕಾರ್ಯಾಚರಣೆಯ ವೇಳೆ ಭೀಕರ ಕೃತ್ಯಕ್ಕೆ ಸಿದ್ಧತೆ ನಡೆಸಿದ್ದ 7 ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಮಾರಕಾಸ್ತ್ರಗಳು ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
- Sushma Chakre
- Updated on: Jun 16, 2026
- 10:08 pm
ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು?
How Celebi Aviation lost huge business it built over 17 years: 2025ರ ಆಪರೇಷನ್ ಸಿಂದೂರ್ ಸಂದರ್ಭದಲ್ಲಿ ಭಾರತದಲ್ಲಿ ಏರ್ಪೋರ್ಟ್ ಗ್ರೌಂಡ್ ಹ್ಯಾಂಡ್ಲಿಂಗ್ ಲೈಸೆನ್ಸ್ ಅನ್ನು ಕಳೆದುಕೊಂಡಿದ್ದ ಟರ್ಕಿ ಕಂಪನಿ ಈಗ ಆ ವಿಚಾರ ಪ್ರಸ್ತಾಪಿಸಿದೆ. ಬ್ಲೂಮ್ಬರ್ಗ್ ಮಾಧ್ಯಮದೊಂದಿಗೆ ಮಾತನಾಡಿರುವ ಚೆಲೆಬಿ ಏವಿಯೇಶನ್ನ ಛೇರ್ಮನ್ ಚೆಲೆಬಿಯೋಗ್ಲು ಅವರು ನೋವು ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನಕ್ಕೆ ಟರ್ಕಿಯಿಂದ ಡ್ರೋನ್ ಪೂರೈಕೆ ಮಾಡಲಾಗಿದ್ದರಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು.
- Vijaya Sarathy SN
- Updated on: Jun 16, 2026
- 5:48 pm
‘ಬಾಲಿವುಡ್ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್
ನಟ ರಣವೀರ್ ಸಿಂಗ್ ಅವರನ್ನು ಕೆಲವರು ಟಾರ್ಗೆಟ್ ಮಾಡಿದ್ದಾರೆ. ಅಂಥವರ ಬಗ್ಗೆ ಕಂಗನಾ ರಣಾವತ್ ಮಾತನಾಡಿದ್ದಾರೆ. ‘ಧುರಂಧರ್’ ಸಿನಿಮಾ ಗೆದ್ದ ಬೆನ್ನಲ್ಲೇ ‘ಡಾನ್ 3’ ವಿವಾದ ಇಟ್ಟುಕೊಂಡು ರಣವೀರ್ ಸಿಂಗ್ ಅವರನ್ನು ಬ್ಯಾನ್ ಮಾಡಲು ಪ್ರಯತ್ನಿಸಿದ್ದು ಯಾಕೆ ಎಂಬುದಕ್ಕೆ ಕಂಗನಾ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
- Madan Kumar
- Updated on: Jun 12, 2026
- 6:17 pm
ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ
Pakistan Poverty Jumps: ಪಾಕಿಸ್ತಾನದಲ್ಲಿ ಕಳೆದ ಆರು ವರ್ಷಗಳಲ್ಲಿ ಬಡತನ ದರ ಶೇ. 7ರಷ್ಟು ಜಿಗಿದು 28.9% ಕ್ಕೆ ತಲುಪಿದೆ. ಸುಮಾರು 2.7 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ಒಟ್ಟು 7 ಕೋಟಿ ಜನ ಬಡವರಾಗಿದ್ದಾರೆ. ಆರ್ಥಿಕ ಸಮೀಕ್ಷೆ 2025-26 ಪ್ರಕಾರ, ಹಣದುಬ್ಬರ, ಆರ್ಥಿಕ ಆಘಾತಗಳು ಮತ್ತು IMF ಷರತ್ತುಗಳು ಬಡತನ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ, ಇದರಿಂದ ಆದಾಯ ಅಸಮಾನತೆಯೂ ತೀವ್ರಗೊಂಡಿದೆ.
- Vijaya Sarathy SN
- Updated on: Jun 12, 2026
- 3:21 pm
ಪಿಒಕೆಯಲ್ಲಿ ರಕ್ತಪಾತ; ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಈದ್ಗಾ ಮೈದಾನದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆಯು ಎಕೆ-47 ರೈಫಲ್ಗಳಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 37ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸಹಾಯಧನದ ದರದಲ್ಲಿ ಗೋಧಿ ಹಿಟ್ಟು, ಅಕ್ಕಿ, ವಿದ್ಯುತ್ ಮತ್ತು ಮೂಲಭೂತ ಹಕ್ಕುಗಳನ್ನು ಒತ್ತಾಯಿಸಿ ಸಾಮಾನ್ಯ ನಾಗರಿಕರು ಹಮ್ಮಿಕೊಂಡಿದ್ದ ಈ ಪ್ರತಿಭಟನೆ ಆರಂಭದಲ್ಲಿ ಶಾಂತಿಯುತವಾಗಿಯೇ ಇತ್ತು.
- Sushma Chakre
- Updated on: Jun 11, 2026
- 7:36 pm
ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಸಮೀಪ ಇಂದು ಪಾಕಿಸ್ತಾನ ಸೇನಾ ವಿಮಾನಯಾನ ವಿಭಾಗಕ್ಕೆ ಸೇರಿದ ಎಂಐ-17 ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಅದರಲ್ಲಿದ್ದ ಎಲ್ಲಾ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಈ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಸೇನೆ ಖಚಿತಪಡಿಸಿದೆ. ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದ್ದರೂ, ಅಪಘಾತಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಅಧಿಕೃತ ತನಿಖೆಗೆ ಆದೇಶಿಸಿದ್ದಾರೆ.
- Sushma Chakre
- Updated on: Jun 10, 2026
- 5:58 pm
ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯಾಕಾಂಡಕ್ಕೆ ಪಾಕಿಸ್ತಾನವೇ ಹೊಣೆ; ಭಾರತ ಖಂಡನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನದ ಪೊಲೀಸ್, ಭದ್ರತಾ ಪಡೆಗಳಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆದಿದೆ. ಇದರಿಂದ 30 ಜನ ಮೃತಪಟ್ಟಿದ್ದಾರೆ. ಈ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತ "ಈ ಕೃತ್ಯಕ್ಕೆ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭಾವಿಸುತ್ತೇವೆ" ಎಂದು ಪ್ರತಿಕ್ರಿಯಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಭೀಕರ ಘರ್ಷಣೆಯಲ್ಲಿ ಹಲವು ಜನರು ಸಾವನ್ನಪ್ಪಿದ ಬೆನ್ನಲ್ಲೇ ಭಾರತವು ಇಸ್ಲಾಮಾಬಾದ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
- Sushma Chakre
- Updated on: Jun 9, 2026
- 8:53 pm
ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣ ತಪ್ಪಿದೆ. ಇಂದು (ಜೂನ್ 9) ಮಧ್ಯಾಹ್ನ ಬಂದ್ ಮತ್ತು ಪ್ರತಿಭಟನೆಗಳಿಗೆ ಕರೆ ನೀಡಲಾಗುತ್ತಿದ್ದು, ಪಿಒಕೆಯಾದ್ಯಂತ ದಂಗೆಯ ಲಕ್ಷಣಗಳು ಕಾಣುತ್ತಿವೆ. ರಾವಲ್ಕೋಟ್, ಮುಜಫರಾಬಾದ್, ಕೋಟ್ಲಿ, ಭಿಂಬರ್, ದದ್ಯಾಲ್, ಪಲಾಂದ್ರಿ, ಸುಧಾನೋತಿ ಸೇರಿದಂತೆ ಹಲವು ಆಯಕಟ್ಟಿನ ಪ್ರದೇಶಗಳಲ್ಲಿ ಸಾವಿರಾರು ಸ್ಥಳೀಯ ಜನರು ಪಾಕಿಸ್ತಾನ ಸರ್ಕಾರ ಮತ್ತು ಪಾಕಿಸ್ತಾನಿ ಸೇನೆಯ ವಿರುದ್ಧ ಬೀದಿಗಿಳಿದಿದ್ದಾರೆ. ಪಾಕಿಸ್ತಾನಿ ಸೆರೆಯಿಂದ ಸ್ವಾತಂತ್ರ್ಯಕ್ಕಾಗಿ ಘೋಷಣೆಗಳನ್ನು ಕೂಗುತ್ತಿರುವುದರಿಂದ ಈ ಪ್ರದೇಶ ಉದ್ವಿಗ್ನಗೊಂಡಿದೆ.
- Sushma Chakre
- Updated on: Jun 9, 2026
- 6:46 pm