Pakistan
ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.
ಇನ್ನೂ ಹೆಚ್ಚು ಓದಿಆಪರೇಷನ್ ಸಿಂಧೂರ್ ವೇಳೆ ಧ್ವಂಸಗೊಂಡಿದ್ದ ಜೈಶ್ ಪ್ರಧಾನ ಕಚೇರಿ ರೆಡಿ, ಮತ್ತೆ ಚುರುಕಾಯ್ತು ಜೆಇಎಂ ಉಗ್ರ ಜಾಲ
ಆಪರೇಷನ್ ಸಿಂಧೂರ್ ನಂತರ ಧ್ವಂಸವಾಗಿದ್ದ ಜೈಶ್-ಎ-ಮೊಹಮ್ಮದ್ (JeM) ಪ್ರಧಾನ ಕಚೇರಿ ಬಹಾವಲ್ಪುರದಲ್ಲಿ ಪಾಕ್ ನೆರವಿನಿಂದ 15 ತಿಂಗಳಲ್ಲಿ ಪುನರ್ನಿರ್ಮಾಣಗೊಂಡಿದೆ. 25 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಮರುನಿರ್ಮಾಣಗೊಂಡು, ಶಸ್ತ್ರಾಸ್ತ್ರ ಸಂಗ್ರಹ, ಡ್ರೋನ್ ಕಾರ್ಯಾಚರಣೆ ಹಾಗೂ ಭಾರತ ವಿರೋಧಿ ಪ್ರಚಾರಕ್ಕೆ ಸಿದ್ಧವಾಗಿದೆ. ಭಾರತವು ಯಾವುದೇ ಪ್ರಚೋದನೆಗೆ ಮರು ದಾಳಿ ನಡೆಸಲು ಸನ್ನದ್ಧವಾಗಿದೆ ಎಂದು ಎಚ್ಚರಿಕೆ ನೀಡಿದೆ.
- Nayana Rajeev
- Updated on: Aug 24, 2026
- 10:23 am
‘ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ’ ಎಂದ ಅಮೆರಿಕಕ್ಕೆ ಪಾಕಿಸ್ತಾನದಿಂದ ಸಮನ್ಸ್!
ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಅವರು ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ನೀಡಿದ ಹೇಳಿಕೆಯನ್ನು ಖಂಡಿಸಿ, ಪಾಕಿಸ್ತಾನವು ಇಂದು ಇಸ್ಲಮಾಬಾದ್ನಲ್ಲಿರುವ ಅಮೆರಿಕದ ಹಿರಿಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು, ಇಸ್ಲಾಮಾಬಾದ್ನಲ್ಲಿರುವ ಅಮೆರಿಕ ರಾಯಭಾರಿಯನ್ನು ಕರೆಸಿ ಗೋರ್ ಅವರ ಹೇಳಿಕೆ ವಿರುದ್ಧ "ತೀವ್ರ ಪ್ರತಿಭಟನೆ" ದಾಖಲಿಸಲಾಗಿದೆ ಎಂದು ತಿಳಿಸಿದೆ.
- Sushma Chakre
- Updated on: Aug 19, 2026
- 11:32 pm
‘ಆಪರೇಷನ್ ಸಿಂಧೂರ್’ ಡಾಕ್ಯುಮೆಂಟರಿಗೆ ಬೆಚ್ಚಿದ ಪಾಕಿಸ್ತಾನ; ತಡರಾತ್ರಿ 2 ಗಂಟೆಗೆ ಪಾಕ್ ಸೇನೆ ಪ್ರತಿಕ್ರಿಯೆ
ಏಪ್ರಿಲ್ 2025ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಕುರಿತು ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾದ ಸಾಕ್ಷ್ಯಚಿತ್ರ ಸೀರೀಸ್ಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಸೇನೆಯು ಮಧ್ಯರಾತ್ರಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಆಗಸ್ಟ್ 15ರಂದು ಪ್ರಸಾರವಾದ 'ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್' ಎಂಬ ಎರಡು ಭಾಗಗಳ ಈ ಸಾಕ್ಷ್ಯಚಿತ್ರ ಸರಣಿ ಮೇ 7, 2025ರಂದು ಪ್ರಾರಂಭವಾದ ಈ ಕಾರ್ಯಾಚರಣೆಯ ಯೋಜನೆ ಮತ್ತು ಅದ್ನು ನಿರ್ವಹಿಸಿದ ಭಾರತದ ಹಿರಿಯ ಮಿಲಿಟರಿ ಹಾಗೂ ಭದ್ರತಾ ಅಧಿಕಾರಿಗಳ ಸಂದರ್ಶನಗಳನ್ನು ಒಳಗೊಂಡಿದೆ.
- Sushma Chakre
- Updated on: Aug 19, 2026
- 4:43 pm
ಪಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಕೇಳಿದ ಮೊದಲ ಪ್ರಶ್ನೆಯನ್ನು ಬಹಿರಂಗಪಡಿಸಿದ ಅಜಿತ್ ದೋವಲ್
ಪಹಲ್ಗಾಮ್ ಉಗ್ರರ ದಾಳಿಯ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲಿಗೆ ತಿಳಿಯಲು ಬಯಸಿದ್ದು ಈ ದಾಳಿಗೆ ಯಾರು ಹೊಣೆಗಾರರು ಎಂಬುದನ್ನು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಹೇಳಿದ್ದಾರೆ. ಡಿಸ್ಕವರಿ ಚಾನೆಲ್ನ ಸಂದರ್ಶನವೊಂದರಲ್ಲಿ ಅವರು ಭಾರತ ನಡೆಸಿದ 'ಆಪರೇಷನ್ ಸಿಂಧೂರ್' (Operation Sindoor) ಕಾರ್ಯಾಚರಣೆಗೆ ಕಾರಣವಾದ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ನೀಡಿರುವ ತಮ್ಮ ಮೊದಲ ಸಂದರ್ಶನದಲ್ಲಿ ದೋವಲ್ ಪ್ರಮುಖ ನಿರ್ಧಾರಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.
- Sushma Chakre
- Updated on: Aug 15, 2026
- 4:14 pm
‘ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ’; ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು
ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, "ಇಡೀ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಅಂಗವಾಗಿದೆ ಎಂಬುದನ್ನು ನಾನು ಹೇಳಲು ಬಯಸುತ್ತೇನೆ. ಅಕ್ರಮವಾಗಿ ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರದಲ್ಲಿ ಪ್ರಸ್ತುತ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ಗಡಿಪಾರಿನ ಭಯೋತ್ಪಾದನೆಗಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಬಳಸಿಕೊಳ್ಳುತ್ತಿರುವುದು ಅಂತಾರಾಷ್ಟ್ರೀಯ ಸಮುದಾಯದ ಕಾಳಜಿಗೆ ಕಾರಣವಾಗಬೇಕಾದ ವಿಷಯಗಳಾಗಿವೆ" ಎಂದು ಹೇಳಿದ್ದಾರೆ.
- Sushma Chakre
- Updated on: Aug 14, 2026
- 8:51 pm
‘ಪಾಕಿಸ್ತಾನ ನಮ್ಮ ರಕ್ತವನ್ನು ಹೀರಿಬಿಟ್ಟಿದೆ’; ಸಿಂಧೂ ಜಲ ಒಪ್ಪಂದ ರದ್ದತಿಗೆ ಒಮರ್ ಅಬ್ದುಲ್ಲಾ ಬೆಂಬಲ
ಸಿಂಧೂ ನದಿ ನೀರು ಒಪ್ಪಂದವನ್ನು ತೀವ್ರವಾಗಿ ಟೀಕಿಸಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, "ಈ ಒಪ್ಪಂದದ ಮೂಲಕ ದಶಕಗಳಿಂದ ನಮ್ಮ ರಕ್ತವನ್ನು ಸಂಪೂರ್ಣವಾಗಿ ಹೀರಿ ಕಳೆಯಲಾಗಿದೆ. ಇವು ನಮ್ಮ ನದಿಗಳು ಮತ್ತು ಇವುಗಳ ಮೇಲಿನ ಮೊದಲ ಹಕ್ಕು ಕಾಶ್ಮೀರದ ಜನರಿಗೇ ಇತ್ತು" ಎಂದು ಪ್ರತಿಪಾದಿಸಿದ್ದಾರೆ. ಕೇಂದ್ರ ಸರ್ಕಾರವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿರುವ ನಿರ್ಧಾರಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಅವರು, "ಈ ಒಪ್ಪಂದವು ಈಗ ರದ್ದಾಗಿದ್ದು, ಇನ್ಮುಂದೆ ರದ್ದಾಗಿಯೇ ಉಳಿಯಬೇಕು. ಆಗ ಮಾತ್ರ ನಾವು ನಮ್ಮ ಜಲಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತದೆ" ಎಂದಿದ್ದಾರೆ.
- Sushma Chakre
- Updated on: Aug 14, 2026
- 8:36 pm
ಜೈಲಿನಲ್ಲಿದ್ದ ಇಮ್ರಾನ್ ಖಾನ್ ನಿಜವಾಗಿಯೂ ಸತ್ತಿದ್ದಾರಾ? ಕೊನೆಗೂ ಮೌನ ಮುರಿದ ಪಾಕಿಸ್ತಾನ
ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಿಧನರಾಗಿದ್ದಾರೆ ಎಂಬ ಸುದ್ದಿಗಳು ಇಂದು ಬೆಳಗ್ಗೆಯಿಂದ ಹರಿದಾಡಿದ್ದವು. ಈ ವರದಿಗಳನ್ನು ಪಾಕಿಸ್ತಾನ ಸೇನೆ ನಿರಾಕರಿಸಿದೆ. ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯ ಮೂವರು ಹಿರಿಯ ಅಧಿಕಾರಿಗಳು ಇಮ್ರಾನ್ ಖಾನ್ ಇನ್ನು ಮುಂದೆ ಜೀವಂತವಾಗಿಲ್ಲದಿರಬಹುದು ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಪಾಕಿಸ್ತಾನಿ ಪತ್ರಕರ್ತರೊಬ್ಬರು ಹೇಳಿದ್ದರು. ಇದು ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಇದೀಗ ಈ ಬಗ್ಗೆ ಪಾಕಿಸ್ತಾನ ಸೇನೆ ಸ್ಪಷ್ಟನೆ ನೀಡಿದೆ.
- Sushma Chakre
- Updated on: Aug 12, 2026
- 9:22 pm
ಇಮ್ರಾನ್ ಖಾನ್ ಬದುಕಿಲ್ಲವೇ?; ಮಾಜಿ ಪ್ರಧಾನಿಯ ಕುರಿತು ಪಾಕಿಸ್ತಾನಿ ಪತ್ರಕರ್ತನ ಶಾಕಿಂಗ್ ಹೇಳಿಕೆ
ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ಅನಿಶ್ಚಿತತೆ ಮುಂದುವರಿದಿದೆ. "ಬಂಧನದಲ್ಲಿರುವ ಇಮ್ರಾನ್ ಖಾನ್ ಜೈಲಿನಲ್ಲೇ ನಿಧನ ಹೊಂದಿರಬಹುದು" ಎಂಬ ಅಮೆರಿಕ ಮೂಲದ ಪಾಕಿಸ್ತಾನಿ ಪತ್ರಕರ್ತನ ಸ್ಫೋಟಕ ಹೇಳಿಕೆಯು ಭಾರಿ ಸಂಚಲನ ಮೂಡಿಸಿದೆ. ಪ್ರಸ್ತುತ ಅಮೆರಿಕದಲ್ಲಿ ವಾಸಿಸುತ್ತಿರುವ ಪ್ರಸಿದ್ಧ ಪತ್ರಕರ್ತ ವಜಾಹತ್ ಸಯೀದ್ ಖಾನ್ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿದ್ದಾರೆ. ಈ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
- Sushma Chakre
- Updated on: Aug 12, 2026
- 6:45 pm
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ರಾವಲ್ಪಿಂಡಿಯಲ್ಲಿರುವ ಸೇನೆಯ ಮುಖ್ಯ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಬಳಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರ ಪ್ರವೇಶ ತಪಾಸಣಾ ಕೇಂದ್ರದ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಮಿಲಿಟರಿ ಕಮಾಂಡ್ ಸೆಂಟರ್ನಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಪ್ರತಿದಾಳಿ ನಡೆಸಿದ್ದಾರೆ. ಆದರೂ ಈ ಘಟನೆಯಲ್ಲಿ ಪಾಕಿಸ್ತಾನದ ಓರ್ವ ಸೈನಿಕ ಮೃತಪಟ್ಟಿದ್ದಾರೆ. ಎರಡೂ ಕಡೆಗಳಿಂದ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಓರ್ವ ಯೋಧ ಕರ್ತವ್ಯ ನಿರತರಾಗಿದ್ದಾಗಲೇ ಮೃತರಾಗಿದ್ದಾರೆ.
- Sushma Chakre
- Updated on: Aug 11, 2026
- 9:21 pm
ಪಾಕ್ ಮುಖವಾಡ ಮತ್ತೊಮ್ಮೆ ಬಯಲು; ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಯನ್ನು ಒಪ್ಪಿಕೊಂಡ ಭಯೋತ್ಪಾದಕ
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನ ತಾನು ಯಾವುದೇ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡಿಲ್ಲ ಎಂದು ಘೋಷಿಸಿಕೊಂಡಿತ್ತು. ಆದರೆ, ಇದೀಗ ಪಾಕಿಸ್ತಾನದ ಅಸಲಿ ಮುಖ ಮತ್ತೊಮ್ಮೆ ಬಯಲಾಗಿದೆ. ಲಷ್ಕರ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ರಿಜ್ವಾನ್ ಹನೀಫ್ ಎಂಬಾತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಷೇಧಿತ ಉಗ್ರ ಸಂಘಟನೆಯನ್ನು ದೇಶದಿಂದಲೇ ನಿವಾರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಈ ವಿಡಿಯೋ ಪಾಕಿಸ್ತಾನದ ಸುಳ್ಳನ್ನು ಬಯಲು ಮಾಡಿದೆ.
- Sushma Chakre
- Updated on: Aug 3, 2026
- 9:21 pm
ಭಾರತದ ಗಡಿಯಲ್ಲಿ ಪಾಕಿಸ್ತಾನದಿಂದ ಚೀನಾದ 250 ಫಿರಂಗಿಗಳ ನಿಯೋಜನೆ
ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಆರ್ಟಿಲರಿ (ಫಿರಂಗಿ) ಪಡೆಯ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಭಾರತೀಯ ಗಡಿಯುದ್ದಕ್ಕೂ ಚೀನಾ ನಿರ್ಮಿತ 250 SH-15 ಫಿರಂಗಿಗಳನ್ನು ನಿಯೋಜಿಸಿದೆ ಎಂದು ಉನ್ನತ ಗೂಢಚಾರ ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಸ್ಲಾಮಾಬಾದ್ ಕೈಗೊಂಡ ಅತ್ಯಂತ ದೊಡ್ಡ ಮಿಲಿಟರಿ ಬಲವರ್ಧನೆಗಳಲ್ಲಿ ಇದೂ ಒಂದಾಗಿದೆ. ಚೀನಾದ ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಸ್ಥೆ ನೋರಿಂಕೋ ತಯಾರಿಸಿರುವ SH-15, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (PLA) ಬಳಸುವ 'PCL-181' ವೀಲ್ಡ್ ಹೌವಿಟ್ಜರ್ನ ಆವೃತ್ತಿಯಾಗಿದೆ.
- Sushma Chakre
- Updated on: Aug 3, 2026
- 8:30 pm
ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ
India to strengthen border regions by upgrading railway infrastructure: ಗಡಿಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲು ಮತ್ತು ಸಮರ ಸನ್ನದ್ಧತೆಯನ್ನು ತೀವ್ರಗೊಳಿಸಲು ಭಾರತ ಮತ್ತೊಂದು ಹೆಜ್ಜೆ ಇಡುತ್ತಿದೆ. ಪಾಕಿಸ್ತಾನ, ಚೀನಾ, ಬಾಂಗ್ಲಾ ಗಡಿಗಳಲ್ಲಿ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿಗೆ ಭಾರತ ಯೋಜನೆ ಹಾಕಿದೆ. 45,000 ಕೋಟಿ ರೂ ಹೂಡಿಕೆ ಬೇಕಾಗಬಹುದು. ಎರಡು ವರ್ಷದಲ್ಲಿ ಈ ಹೂಡಿಕೆ ಆಗಲಿದೆ.
- Vijaya Sarathy SN
- Updated on: Aug 3, 2026
- 2:35 pm