AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan

Pakistan

ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.

ಇನ್ನೂ ಹೆಚ್ಚು ಓದಿ

ಏನಿದು ಅಬ್ರಹಾಂ ಒಪ್ಪಂದ? ಟ್ರಂಪ್ ಮಾತಿಗೆ ಒಪ್ಪಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ?

Abraham Accords: ಮಧ್ಯಪ್ರಾಚ್ಯದಲ್ಲಿ ಪ್ರಾದೇಶಿಕ ಶಾಂತಿ ಮಾತುಕತೆಗಳ ಭಾಗವಾಗಿ ಪಾಕಿಸ್ತಾನ, ಸೌದಿ ಅರೇಬಿಯಾ, ಕತಾರ್ ಮತ್ತು ಟರ್ಕಿ ಸೇರಿದಂತೆ ಪ್ರಮುಖ ಮುಸ್ಲಿಂ ರಾಷ್ಟ್ರಗಳು ಇಸ್ರೇಲ್ ಜೊತೆಗಿನ 'ಅಬ್ರಹಾಂ ಒಪ್ಪಂದ'ಕ್ಕೆ ತಕ್ಷಣವೇ ಸಹಿ ಹಾಕಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರ್ವಜನಿಕವಾಗಿ ಕರೆ ನೀಡಿದ್ದರು. ಒಂದು ವೇಳೆ ಭವಿಷ್ಯದಲ್ಲಿ ರಾಜತಾಂತ್ರಿಕ ಅಥವಾ ಆರ್ಥಿಕ ಒತ್ತಡಕ್ಕೆ ಮಣಿದು ಪಾಕಿಸ್ತಾನವು ಇಸ್ರೇಲ್ ಜೊತೆ ಒಪ್ಪಂದಕ್ಕೆ ಮುಂದಾದರೆ, ಅಲ್ಲಿನ ಇಡೀ ದೇಶದ ಪಾಸ್‌ಪೋರ್ಟ್ ವ್ಯವಸ್ಥೆಯನ್ನೇ ಬದಲಾಯಿಸಬೇಕಾಗುತ್ತದೆ. ಏನಿದಕ್ಕೆ ಕಾರಣ? ಎಂಬುದರ ಮಾಹಿತಿ ಇಲ್ಲಿದೆ.

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾದಲ್ಲಿನ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಹೋಗುತ್ತಿದ್ದ ಪ್ರಯಾಣಿಕ ರೈಲಿನ ಮೇಲೆ ಆತ್ಮಾಹುತಿ ದಾಳಿ ನಡೆಸಲಾಗಿದೆ. ಇದರಿಂದಾಗಿ 24 ಜನ ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ರೈಲು ಹಳಿ ತಪ್ಪಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಸ್ಥಳದಲ್ಲಿ ಗುಂಡಿನ ಚಕಮಕಿಯೂ ಕೇಳಿಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿವೆ. ಈ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಹೊತ್ತುಕೊಂಡಿದೆ.

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ

ಪುಲ್ವಾಮಾ ದಾಳಿಗೆ ಸಂಬಂಧಿಸಿದ ವಾಂಟೆಡ್ ಭಯೋತ್ಪಾದಕನಾದ ಹಮ್ಜಾ ಬುರ್ಹಾನ್ ಎಂಬುವವನನ್ನು ಇಂದು ಪಾಕಿಸ್ತಾನದ ಮುಜಫರಾಬಾದ್ ಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಹಮ್ಜಾ ಬುರ್ಹಾನ್ ಎಂಬ ಭಯೋತ್ಪಾದಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ, ಆತನ ಮೇಲೆ ಹಲವಾರು ಸುತ್ತು ಗುಂಡುಗಳನ್ನು ಎಸೆದಿದ್ದಾರೆ. ಈ ದಾಳಿಯ ಸಮಯದಲ್ಲಿ ಆತ ತೀವ್ರವಾಗಿ ಗಾಯಗೊಂಡಿದ್ದ. ಕೊನೆಗೆ ಆತ ಮೃತಪಟ್ಟಿದ್ದಾನೆ.

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ಅರೇಬಿಯಾಕ್ಕೆ 16 ಜೆಟ್, 8,000 ಸೈನಿಕರನ್ನು ಕಳುಹಿಸಿದ ಪಾಕಿಸ್ತಾನ

ಇರಾನ್ ನಡೆಸುತ್ತಿರುವ ಯುದ್ಧದಲ್ಲಿ ಸೌದಿ ಅರೇಬಿಯಾವನ್ನು ರಕ್ಷಿಸಲು ಪಾಕಿಸ್ತಾನ ಭಾರೀ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪಾಕಿಸ್ತಾನ ಸೌದಿ ಅರೇಬಿಯಾಕ್ಕೆ ಈಗಾಗಲೇ 16 ಯುದ್ಧ ವಿಮಾನಗಳು, 50 ಡ್ರೋನ್‌ಗಳು ಮತ್ತು 8,000 ಸೈನಿಕರನ್ನು ಕಳುಹಿಸಿದೆ. ಕಳೆದ ವರ್ಷ ಉಭಯ ದೇಶಗಳ ನಡುವೆ ಸಹಿ ಹಾಕಲಾದ ಜಂಟಿ ಕಾರ್ಯತಂತ್ರದ ರಕ್ಷಣಾ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನವು ಸೌದಿ ಅರೇಬಿಯಾದಲ್ಲಿ ತನ್ನ ಮಿಲಿಟರಿ ಸಾಮರ್ಥ್ಯವನ್ನು ವಿಸ್ತರಿಸಿದೆ.

ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!

ಭಯೋತ್ಪಾದನೆಯನ್ನು ಪೋಷಿಸುವುದನ್ನು ನಿಲ್ಲಿಸದಿದ್ದರೆ ಪಾಕಿಸ್ತಾನವು ಜಾಗತಿಕ ಭೂಪಟ ಮತ್ತು ಇತಿಹಾಸದಿಂದಲೇ ನಾಮಾವಶೇಷವಾಗಲಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕ್ ಆಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ವಿಚಾರವಾಗಿ ಮಾತನಾಡುವಾಗ ಅವರು ಈ ಎಚ್ಚರಿಕೆ ನೀಡಿದರು.

10 ಫೋರ್, 2 ಸಿಕ್ಸ್​: ವಿಶ್ವ ದಾಖಲೆಯೇ ಉಡೀಸ್!

Fatima Sana Records: ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಸ್ಫೋಟಕ ಬ್ಯಾಟಿಂಗ್ ಅಬ್ಬರವೊಂದಕ್ಕೆ ಕರಾಚಿಯ ನ್ಯಾಷನಲ್ ಸ್ಟೇಡಿಯಂ ಸಾಕ್ಷಿಯಾಗಿದೆ. ಝಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡದ ನಾಯಕಿ ಫಾತಿಮಾ ಸನಾ ಶರವೇಗದ ಅರ್ಧಶತಕ ಸಿಡಿಸಿ ಟಿ20 ಕ್ರಿಕೆಟ್​​ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು

Pakistan Terror Attack: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ತೆಹ್ರೀಕ್-ಇ-ತಾಲಿಬಾನ್ (ಟಿಟಿಪಿ) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಪಾಕ್ ಸೇನಾ ಶಿಬಿರದ ಮೇಲೆ ನಡೆದ ಆತ್ಮಹತ್ಯಾ ದಾಳಿ ಮತ್ತು ಗುಂಡಿನ ಕಾಳಗದಲ್ಲಿ 9 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ

ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದು ನಿಜ ಎಂಬ ವರದಿಗಳಿಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತ, ಜವಾಬ್ದಾರಿಯುತ ರಾಷ್ಟ್ರಗಳು ಭಯೋತ್ಪಾದನೆಯನ್ನು ಬಿತ್ತುವವರಿಗೆ ಬೆಂಬಲ ನೀಡುವ ಮೊದಲು ಯೋಚಿಸಬೇಕು ಎಂದು ಭಾರತ ಹೇಳಿದೆ.

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್

ಇಂದು ಭಾರತ ಆಪರೇಷನ್ ಸಿಂಧೂರ್ ನ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಇದನ್ನು ಆಧುನಿಕ ಯುದ್ಧದ ಮಾನದಂಡ ಎಂದು ಕರೆದಿದ್ದಾರೆ. ಮೂರು ಸಶಸ್ತ್ರ ಪಡೆಗಳ ನಡುವಿನ ಅದರ ಅಪ್ರತಿಮ ನಿಖರತೆ ಮತ್ತು ಅತ್ಯುತ್ತಮ ಸಮನ್ವಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಭಾರತ ಕಳೆದ ವರ್ಷ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಇದರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿಗಳು ನಡೆದವು.

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ?

ಜಗತ್ತಿನಲ್ಲಿ ಹಲವು ಯುದ್ಧಗಳು ನಡೆದಿವೆ. ರಷ್ಯಾ-ಉಕ್ರೇನ್ ಯುದ್ಧವು ಐದನೇ ವರ್ಷಕ್ಕೆ ಕಾಲಿಟ್ಟಿದ್ದರೂ ಯಾವುದೇ ಸ್ಪಷ್ಟ ಪರಿಹಾರ ಸಿಕ್ಕಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆಯೂ ಯುದ್ಧ ನಡೆದು ಅದರ ಪರಿಣಾಮವನ್ನು ಅನೇಕ ಇತರೆ ದೇಶಗಳೂ ಅನುಭವಿಸಿವೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಈ ಎಲ್ಲ ಯುದ್ಧಗಳಿಗಿಂತಲೂ ಬಹಳ ಭಿನ್ನವಾಗಿತ್ತು. ಆ ಕಾರ್ಯಾಚರಣೆಯಲ್ಲಿ ಭಾರತ ಒಂದೇ ಒಂದು ಅಮಾಯಕರ ಜೀವವನ್ನೂ ಬಲಿ ಪಡೆಯದೆ ಕೇವಲ ಉಗ್ರರನ್ನು ಮಾತ್ರ ಟಾರ್ಗೆಟ್ ಮಾಡಿ ನಾಶಪಡಿಸಿದ್ದು ವಿಶೇಷ. ಆಪರೇಷನ್ ಸಿಂಧೂರ್​​ ನಡೆದು 1 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಹಿನ್ನೋಟ ಇಲ್ಲಿದೆ.

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್

ಮೊದಲ ಮೂರು ಎಸೆತಗಳಲ್ಲಿ ಕೇವಲ ಹುನೈನ್ ಶಾ ಕೇವಲ ಒಂದು ರನ್ ಮಾತ್ರ ಬಿಟ್ಟುಕೊಟ್ಟರು. ಅಲ್ಲದೆ ನಾಲ್ಕನೇ ಎಸೆತದಲ್ಲಿ ಫಯೀಮ್ ಅಶ್ರಫ್ ವಿಕೆಟ್ ಕಬಳಿಸಿದರು. ಇನ್ನು 5ನೇ ಮತ್ತು 6ನೇ ಎಸೆತಗಳಲ್ಲಿ ನೀಡಿದ್ದು ಕೇವಲ 2 ರನ್​ ಮಾತ್ರ. ಈ ಮೂಲಕ ಕೊನೆಯ ಓವರ್​ನಲ್ಲಿ ಕೇವಲ 2 ರನ್​ಗಳ ರೋಚಕ ಜಯ ತಂದುಕೊಡುವ ಮೂಲಕ ಹೈದರಾಬಾದ್ ಕಿಂಗ್ಸ್​ಮೆನ್ ತಂಡವನ್ನು ಫೈನಲ್​ಗೇರಿಸಿದ್ದಾರೆ.

ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ

Babar Azam Records: ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎಂಬ ಮಾತನ್ನು ಬಾಬರ್ ಆಝಂ ತಮ್ಮ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಹಿಂದೆ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 12,000 ರನ್ ಪೂರೈಸಿದ ವಿಶ್ವ ದಾಖಲೆ ಬರೆದಿದ್ದ ಬಾಬರ್ ಇದೀಗ ನಾಯಕನಾಗಿ ಅತಿ ಹೆಚ್ಚು ಶತಕ ಸಿಡಿಸಿದ ವರ್ಲ್ಡ್​ ರೆಕಾರ್ಡ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.