Pakistan
ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.
ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ
ಪಾಕಿಸ್ತಾನದ ವೈಫಲ್ಯಗಳನ್ನು ಆಪರೇಷನ್ ಸಿಂಧೂರ್ ಬಹಿರಂಗಪಡಿಸಿತು. ಹಾಗೇ, ಇದರಿಂದಾಗಿ ಪಾಕ್ ಸಂವಿಧಾನವನ್ನೇ ಬದಲಾಯಿಸುವಂತಾಯಿಸಿತು ಎಂದು ಭಾರತದ ರಕ್ಷಣಾ ಮುಖ್ಯಸ್ಥ ಹೇಳಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಅದು ಎದುರಿಸಿದ ವೈಫಲ್ಯಗಳನ್ನು ಪ್ರತಿಬಿಂಬಿಸುತ್ತವೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ. ಪಾಕಿಸ್ತಾನದ ಸಂವಿಧಾನದ 243ನೇ ವಿಧಿಗೆ ತಿದ್ದುಪಡಿ ಮಾಡುವುದರಿಂದ ದೇಶದ ಉನ್ನತ ರಕ್ಷಣಾ ಸಂಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ.
- Sushma Chakre
- Updated on: Jan 10, 2026
- 3:51 pm
Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ?
Income tax payers in Pakistan: ಪಾಕಿಸ್ತಾನದಲ್ಲಿ ನೊಂದಾಯಿತ ಟ್ಯಾಕ್ಸ್ ಪೇಯರ್ಸ್ ಸಂಖ್ಯೆ 59 ಲಕ್ಷದಷ್ಟಿದೆ ಎಂದು ಹೇಳಲಾಗುತ್ತಿದೆ. ಇವರ ಪೈಕಿ 3 ಲಕ್ಷ ರೂ (ಪಿಕೆಆರ್) ಮೇಲ್ಪಟ್ಟ ಮಾಸಿಕ ಸಂಬಳದ ಆದಾಯದವರ ಸಂಖ್ಯೆ ಕೆಲವೇ ಲಕ್ಷ ಇರಬಹುದು. ಪಾಕಿಸ್ತಾನದಲ್ಲಿ ಆದಾಯ ತೆರಿಗೆಗಳಿಂದ ಸುಮಾರು 9 ಲಕ್ಷ ಕೋಟಿ ರೂ ಆದಾಯ ಸಿಗುತ್ತಿರಬಹುದು.
- Vijaya Sarathy SN
- Updated on: Jan 8, 2026
- 1:28 pm
ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ
ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ನಡೆಸಿದ್ದ ಪಾಕ್ ಬೆಂಬಲಿತ ಉಗ್ರರನ್ನು ಮಟ್ಟ ಹಾಕಲು ಭಾರತ ರಾತ್ರೋರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ನಮ್ಮ ದೇಶದ 26 ಅಮಾಯಕರನ್ನು ಬಲಿ ಪಡೆದ ಉಗ್ರರನ್ನು ಸದೆಬಡಿಯಲು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ವೈಮಾನಿಕ ದಾಳಿ ನಡೆಸಿದ್ದ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿತ್ತು. ಆಗ ಅಮೆರಿಕ, ರಷ್ಯಾ ಮುಂತಾದ ಭಾರತದ ಸ್ನೇಹ ಬಳಗದಲ್ಲಿರುವ ದೇಶಗಳ ಮೊರೆಹೋಗಿದ್ದ ಪಾಕಿಸ್ತಾನ ಕದನವಿರಾಮಕ್ಕೆ ಒಪ್ಪಿಸುವಂತೆ ಗೋಗರೆದಿತ್ತು. ಆದರೆ, ಭಾರತ ಮೂರನೇ ದೇಶದ ಮಧ್ಯಸ್ಥಿಕೆಗೆ ಒಪ್ಪದ ಕಾರಣದಿಂದ ಪಾಕಿಸ್ತಾನವೇ ಭಾರತದ ಮುಂದೆ ಅಂಗಲಾಚಿ ದಾಳಿಯನ್ನು ನಿಲ್ಲಿಸಲು ಬೇಡಿಕೊಂಡಿತ್ತು. ಆದರೆ, ಈಗ ಪಾಕಿಸ್ತಾನ ಹೊಸ ಕತೆ ಕಟ್ಟುತ್ತಿದೆ.
- Sushma Chakre
- Updated on: Jan 3, 2026
- 8:22 pm
ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ನೀಡಿದ್ದು, ಒಂದು ಕಡೆ ಭಾರತದಿಂದ ಸಹಕಾರವನ್ನು ಬಯಸುವ ಮತ್ತೊಂದು ಕಡೆ ಭಯೋತ್ಪಾದನೆಯನ್ನು ಬೆಂಬಲಿಸುವ ನೆರೆಹೊರೆಯವರ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕು ಭಾರತಕ್ಕಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನವನ್ನು ಉಲ್ಲೇಖಿಸಿದ ಅವರು, ಉತ್ತಮ ನೆರೆಹೊರೆಯ ಸಂಬಂಧಗಳು ನಿರಂತರ ಭಯೋತ್ಪಾದನಾ ಕೃತ್ಯಗಳೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.
- Sushma Chakre
- Updated on: Jan 2, 2026
- 3:54 pm
ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ
ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ನೆನಪುಗಳನ್ನು ಪದೇ ಪದೇ ಚರ್ಚಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಅದರ ನಡುವೆ ಅಸಿಮ್ ಮುನೀರ್ ಅವರ ಈ ವರ್ತನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Sushma Chakre
- Updated on: Dec 29, 2025
- 10:51 pm
ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು
ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಪಾಕಿಸ್ತಾನದ ಹೇಳಿಕೆಗಳಿಗೆ ಭಾರತ ಪ್ರತಿಕ್ರಿಯಿಸಿದೆ. ಸಾಂಪ್ರದಾಯಿಕವಾಗಿ ಹೆಚ್ಚು ಸಹಿಷ್ಣುತೆಯನ್ನು ಹೊಂದಿರುವ ಕೇರಳ ರಾಜ್ಯದಲ್ಲಿಯೂ ಸಹ ಕ್ಯಾರೋಲ್ಗಳನ್ನು ಹಾಡುವ ಹದಿಹರೆಯದವರ ಗುಂಪಿನ ಮೇಲೆ ದಾಳಿ ಮಾಡಿ ಅವರ ವಾದ್ಯಗಳನ್ನು ನಾಶಪಡಿಸಿದ ನಂತರ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್ಎಸ್ಎಸ್-ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಯಿತು. ಇದೆಲ್ಲವನ್ನೂ ಆಧಾರವಾಗಿಟ್ಟುಕೊಂಡು ಆರೋಪ ಮಾಡಿದ್ದ ಪಾಕಿಸ್ತಾನ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿಯಾಗುತ್ತಿದೆ ಎಂದು ಹೇಳಿತ್ತು.
- Sushma Chakre
- Updated on: Dec 29, 2025
- 10:25 pm
ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರೇ ಒಪ್ಪಿಕೊಂಡಿದ್ದಾರೆ. 80 ಡ್ರೋನ್ಗಳು 36 ಗಂಟೆಗಳ ಕಾಲ ದಾಳಿ ನಡೆದಿವೆ. ಭಾರತದ ಆಪರೇಷನ್ ಸಿಂಧೂರ್ ದಾಳಿಯು ನೂರ್ ಖಾನ್ ನೆಲೆಗೆ ಹಾನಿಯನ್ನುಂಟುಮಾಡಿದೆ ಎಂದು ಪಾಕಿಸ್ತಾನದ ಸಚಿವ ಒಪ್ಪಿಕೊಂಡಿದ್ದಾರೆ.
- Sushma Chakre
- Updated on: Dec 28, 2025
- 4:31 pm
ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್ನಿಂದ ಯುದ್ಧದ ಬೆದರಿಕೆ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ. ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶೀತಲ ಸಮರವನ್ನು ದುರುಪಯೋಗಪಡಿಸಿಕೊಳ್ಳಲು ಪಾಕ್ ಪ್ರಯತ್ನಿಸುತ್ತಿದೆ. ಪಾಕಿಸ್ತಾನದ ಯುವ ನಾಯಕರೊಬ್ಬರ ವಿಡಿಯೋ ಹೇಳಿಕೆ ಇದೀಗ ವೈರಲ್ ಆಗಿದ್ದು, ಇದರಲ್ಲಿ ಅವರು ಬಾಂಗ್ಲಾದೇಶದ ಪರವಾಗಿ ಹೇಳಿಕೆ ನೀಡಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಆದರೆ, ಈ ಹೇಳಿಕೆಗೆ ಭಾರತ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
- Sushma Chakre
- Updated on: Dec 23, 2025
- 4:47 pm
ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?
ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಈ ದಾಳಿಗಳು ಎರಡೂ ದೇಶಗಳ ನಡುವೆ 4 ದಿನಗಳ ತೀವ್ರ ಘರ್ಷಣೆಗೆ ಕಾರಣವಾಯಿತು. ಮೇ 10ರಂದು ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದದೊಂದಿಗೆ ಈ ಸಂಘರ್ಷ ಕೊನೆಗೊಂಡಿತು.
- Sushma Chakre
- Updated on: Dec 22, 2025
- 9:29 pm
ಕೊಚ್ಚಿನ್ ಶಿಪ್ ಯಾರ್ಡ್ನಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಉಡುಪಿಯಲ್ಲಿ ಮತ್ತೊಬ್ಬ ಆರೋಪಿಯ ಬಂಧನ
ಉಡುಪಿಯ ಮಲ್ಪೆ ಪೊಲೀಸರು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ ಗುತ್ತಿಗೆ ನೌಕರರಾದ ರೋಹಿತ್ ಮತ್ತು ಸಂತ್ರಿ ಎಂಬವರು ಹಿರೇಂದ್ರ ಒದಗಿಸಿದ ಸಿಮ್ಗಳಿಂದ ಪಾಕಿಸ್ತಾನದವರಿಗೆ ಹಡಗುಗಳ ಚಲನವಲನಗಳ ಮಾಹಿತಿ ನೀಡುತ್ತಿದ್ದರು.
- Prajwal Amin
- Updated on: Dec 22, 2025
- 10:12 am
ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್ಗೆ ಪಾಕಿಸ್ತಾನದ ಗ್ಯಾಂಗ್ಸ್ಟರ್ನಿಂದ ಬೆದರಿಕೆ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಲವಂತವಾಗಿ ಯುವ ಮುಸ್ಲಿಂ ವೈದ್ಯೆಯೊಬ್ಬರ 'ಹಿಜಾಬ್' (ಮುಖದ ಪರದೆ) ಎಳೆದ ವಿಡಿಯೋ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮವೊಂದರಲ್ಲಿ ಸರ್ಟಿಫಿಕೆಟ್ ನೀಡುವಾಗ ಈ ಘಟನೆ ನಡೆದಿತ್ತು. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಕ್ಷಮೆಯನ್ನು ಕೂಡ ಕೇಳಿರಲಿಲ್ಲ. ಈ ಘಟನೆಯಿಂದ ಆ ವೈದ್ಯೆ ತೀವ್ರ ಮುಜುಗರಕ್ಕೀಡಾಗಿದ್ದರು. ಇದೀಗ ಬಿಹಾರದ ಮುಖ್ಯಮಂತ್ರಿಯ ಈ ವರ್ತನೆಯನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ. ಪಾಕಿಸ್ತಾನದ ಗ್ಯಾಂಗ್ಸ್ಟರ್ ಶಹಜಾದ್ ಭಟ್ಟಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಬೆದರಿಕೆಯನ್ನೂ ಹಾಕಿದ್ದಾರೆ.
- Sushma Chakre
- Updated on: Dec 19, 2025
- 3:38 pm
ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?
Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು ಈಗಲೂ ಒದ್ದಾಡುತ್ತಿವೆ. ನೋಟು ಎಷ್ಟು ಪ್ರಿಂಟ್ ಮಾಡಬೇಕು, ಹಣ ಎಷ್ಟು ಹೆಚ್ಚಿಸಬೇಕು ಎಂಬುದಕ್ಕೆ ಒಂದು ಲೆಕ್ಕಾಚಾರ ಇರುತ್ತದೆ. ಆ ಕ್ರಮ ಮೀರಿದರೆ ದೇಶ ಹಾಳಾಗುತ್ತದೆ.
- Vijaya Sarathy SN
- Updated on: Dec 19, 2025
- 12:23 pm