Pakistan
ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.
ಬಲೂಚಿಸ್ತಾನದ ಗಣಿಯಲ್ಲಿ ಉಗ್ರರ ದಾಳಿ; ಟರ್ಕಿಶ್ ಪ್ರಜೆ ಸೇರಿದಂತೆ 10 ಜನ ಸಾವು
ಪಾಕಿಸ್ತಾನದ ಬಲೂಚಿಸ್ತಾನ್ನ ಗಣಿಗಾರಿಕೆ ಸ್ಥಳದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ತಾಮ್ರ ಮತ್ತು ಚಿನ್ನದ ಗಣಿಗಾರಿಕೆ ಯೋಜನೆಯ ಮೇಲೆ ನಡೆದ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 10 ಜನರಲ್ಲಿ ಟರ್ಕಿಶ್ ಪ್ರಜೆಯೂ ಸೇರಿದ್ದಾರೆ. ಈ ಸುದ್ದಿಯನ್ನು ದೃಢಪಡಿಸಿದ ಅಧಿಕಾರಿಗಳು, ದಾಳಿಕೋರರು ಮತ್ತೊಬ್ಬ ಟರ್ಕಿಶ್ ಪ್ರಜೆಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
- Sushma Chakre
- Updated on: Apr 23, 2026
- 11:09 pm
ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಬಾಬರ್ ಆಝಂ
Babar Azam World Record: ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ 12ನೇ ಶತಕ ಬಾರಿಸಿದ್ದಾರೆ. ಆದರೆ ಈ ಹನ್ನೆರಡನೇ ಶತಕ ಮೂಡಿಬಂದಿದ್ದು ಕೇವಲ ಒಂದು ಡಾಟ್ ಬಾಲ್ನೊಂದಿಗೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆಯುವಲ್ಲಿ ಬಾಬರ್ ಯಶಸ್ವಿಯಾಗಿದ್ದಾರೆ.
- Zahir Yusuf
- Updated on: Apr 20, 2026
- 7:44 am
PSL 2026: ಜೊತೆಯಾಗಿ ಕಣಕ್ಕಿಳಿದ ‘ಮೂಲ’ ಮತ್ತು ‘ಬದಲಿ’ ಆಟಗಾರ!
PSL 2026: ಪಾಕಿಸ್ತಾನ್ ಸೂಪರ್ ಲೀಗ್ನ 2026ರ ಆವೃತ್ತಿಯು ಒಂದು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಒಬ್ಬ ಆಟಗಾರ ಟೂರ್ನಿಯಿಂದ ಹೊರಹೋಗುತ್ತಿದ್ದಾರೆ ಎಂದು ಅಧಿಕೃತವಾಗಿ ಘೋಷಣೆಯಾದ ಮೇಲೂ, ಅವರು ತಮ್ಮ 'ಬದಲಿ' ಆಟಗಾರನ ಜೊತೆಯಲ್ಲೇ ಅಂತಿಮ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗೆ ಇಬ್ಬರನ್ನು ಕಣಕ್ಕಿಳಿಸಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಇದೀಗ ಸಖತ್ ಸುದ್ದಿಯಲ್ಲಿದೆ.
- Zahir Yusuf
- Updated on: Apr 18, 2026
- 2:25 pm
ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ
ಅಮೆರಿಕ- ಇರಾನ್ ನಡುವಿನ ಕದನವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ದೂರವಾಣಿ ಸಂಭಾಷಣೆ ಇದಾಗಿದೆ. ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು ನಡೆಸಿದ ನಂತರ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಂಡಿತ್ತು.
- Sushma Chakre
- Updated on: Apr 14, 2026
- 9:26 pm
IPL vs PSL: KKR ಆಟಗಾರ 2 ವರ್ಷ ಬ್ಯಾನ್..!
PSL vs IPL: ಕ್ರಿಕೆಟ್ ಲೋಕದ ಎರಡು ಲೀಗ್ಗಳ ನಡುವಿನ ಸಂಘರ್ಷ ಈಗ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ.ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಧಿಕ್ಕರಿಸಿ, ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಪ್ರತಿನಿಧಿಸಲು ನಿರ್ಧರಿಸಿದ ಮುಝರಬಾನಿ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಕಠಿಣ ಕ್ರಮ ಕೈಗೊಂಡಿದೆ.
- Zahir Yusuf
- Updated on: Apr 14, 2026
- 4:42 pm
ಪಾಕಿಸ್ತಾನದ ಚಾನೆಲ್ನಲ್ಲಿ ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕುವಂತಿಲ್ಲ!
ತಮ್ಮ ದೇಶದ ಟಿವಿಯಲ್ಲಿ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಗೌರವ ಸಲ್ಲಿಸಿದ್ದಕ್ಕೆ ಪಾಕಿಸ್ತಾನ ಕಠಿಣ ಕ್ರಮ ತೆಗೆದುಕೊಂಡಿದೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಸಾವಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಸಾರಕ ಜಿಯೋ ನ್ಯೂಸ್ಗೆ ಪಾಕಿಸ್ತಾನ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಶೋ-ಕಾಸ್ ನೋಟಿಸ್ ನೀಡಿದೆ. ಭಾರತದ ಗಾಯಕಿ ಆಶಾ ಭೋಸ್ಲೆ ಏಪ್ರಿಲ್ 12 ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಗಡಿಯಾಚೆಯಿಂದ ಸೇರಿದಂತೆ ಅನೇಕ ಕಲಾವಿದರು ಈ ಹಿರಿಯ ಗಾಯಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
- Sushma Chakre
- Updated on: Apr 13, 2026
- 8:56 pm
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
1979ರ ಇಸ್ಲಾಮಿಕ್ ಕ್ರಾಂತಿಯ ನಂತರ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಅತ್ಯುನ್ನತ ಮಟ್ಟದ ಮುಖಾಮುಖಿ ಮಾತುಕತೆಗಳನ್ನು ಗುರುತಿಸುವ ಐತಿಹಾಸಿಕ ಕ್ಷಣದಲ್ಲಿ ಜೆಡಿ ವ್ಯಾನ್ಸ್ ಇಂದು ನಂತರ ಇರಾನಿನ ನಿಯೋಗದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅವರ ಜೊತೆ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಇರುತ್ತಾರೆ. ಇರಾನಿನ ತಂಡವನ್ನು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ನೇತೃತ್ವ ವಹಿಸಲಿದ್ದಾರೆ.
- Sushma Chakre
- Updated on: Apr 11, 2026
- 6:03 pm
ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ
What happens to Pakistan's economy if it repays loan to UAE: ಪಾಕಿಸ್ತಾನಕ್ಕೆ ಕೊಟ್ಟಿರುವ ಸಾಲವನ್ನು ನವೀಕರಿಸಲು ಯುಎಇ ನಿರಾಕರಿಸಿದೆ. ತನ್ನ ಸಾಲ ವಾಪಸ್ ಮಾಡುವಂತೆ ತಿಳಿಸಿದೆ. ಸಾಲ ತೀರಿಸಲು ತಕ್ಕುದಾದ ವರಮಾನ ಇಲ್ಲದ ಪಾಕಿಸ್ತಾನಕ್ಕೆ ಈಗ ಒತ್ತಡದ ಸ್ಥಿತಿ ಬಂದಿದೆ. ಚೀನಾ, ಸೌದಿ ದೇಶಗಳೂ ಕೂಡ ಸಾಲ ವಾಪಸ್ ಮಾಡುವಂತೆ ಪಾಕಿಸ್ತಾನಕ್ಕೆ ದುಂಬಾಲು ಬಿದ್ದರೆ ಏನು ಗತಿ?
- Vijaya Sarathy SN
- Updated on: Apr 8, 2026
- 1:50 pm
PSL 2026: ತಲೆಗೆ ಚೆಂಡು ಬಡಿದು ಪ್ರಜ್ಞೆ ತಪ್ಪಿ ಬಿದ್ದ ಪಾಕ್ ಆಟಗಾರ
Mir Hamza Sajjad: ಮೀರ್ ಹಂಝ ಸಜ್ಜಾದ್ ಪಾಕಿಸ್ತಾನದ ವೇಗದ ಬೌಲರ್. ಇವರು 2026ರ PSLನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡದ ಭಾಗವಾಗಿದ್ದಾರೆ. ಇತ್ತೀಚೆಗೆ ಅಭ್ಯಾಸದ ವೇಳೆ ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
- Zahir Yusuf
- Updated on: Apr 8, 2026
- 11:23 am
ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!
ಕೊನೆಗೂ ಜಗತ್ತಿಗೆ ತಾತ್ಕಾಲಿಕ ಸಿಹಿ ಸುದ್ದಿ ಸಿಕ್ಕಿದೆ! ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಇರಾನ್ ಮೇಲಿನ ಬಾಂಬ್ ದಾಳಿಯ ನಿರ್ಧಾರದಿಂದ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದು, ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಲು ಇರಾನ್ ಸಮ್ಮತಿಸಿದೆ.
- Ganapathi Sharma
- Updated on: Apr 8, 2026
- 6:51 am
1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ
ಕೊಲ್ಕತ್ತಾದ ಮೇಲೆ ದಾಳಿ ನಡೆಸಲಾಗುವುದು ಎಂಬ ಪಾಕಿಸ್ತಾನದ ಸಚಿವ ಖವಾಜಾ ಆಸಿಫ್ ಬೆದರಿಕೆಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೇಲೆ ದಾಳಿ ಮಾಡುವ ಪಾಕಿಸ್ತಾನದ ರಕ್ಷಣಾ ಸಚಿವರ ಬೆದರಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 55 ವರ್ಷಗಳ ಹಿಂದೆ ಏನಾಗಿತ್ತು ಎಂಬುದನ್ನು ನೆನಪಿಸಿದ್ದಾರೆ. ಪಾಕಿಸ್ತಾನವು ಭಾರತದ ಪೂರ್ವ ಮಹಾನಗರವಾದ ಕೊಲ್ಕತ್ತಾದ ಮೇಲೆ ದಾಳಿ ನಡೆಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬೆದರಿಕೆ ಹಾಕಿದ್ದರು.
- Sushma Chakre
- Updated on: Apr 7, 2026
- 5:31 pm
ಅಮೆರಿಕದ ಕದನವಿರಾಮದ ಪ್ರಸ್ತಾಪಕ್ಕೆ ಒಪ್ಪದ ಇರಾನ್ ಹಾಕಿದ ಷರತ್ತುಗಳಿವು
ಇರಾನ್ ಮತ್ತು ಅಮೆರಿಕದ ನಡುವೆ ಕದನವಿರಾಮಕ್ಕೆ ಪಾಕಿಸ್ತಾನ ಪ್ರಯತ್ನ ಮಾಡಿತ್ತು. ಆದರೆ, ಈ ಸಂಧಾನ ಫಲಪ್ರದವಾಗಿಲ್ಲ. ಇರಾನ್ ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಅಲ್ಲದೆ, ಪ್ರಮುಖ ಷರತ್ತುಗಳನ್ನು ಹಾಕುವ ಮೂಲಕ ಯುದ್ಧಕ್ಕೆ ಶಾಶ್ವತ ಅಂತ್ಯ ಬಯಸಿದೆ. ಇರಾನ್ ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಮತ್ತು ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಪಾಕಿಸ್ತಾನಕ್ಕೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದೆ.
- Sushma Chakre
- Updated on: Apr 6, 2026
- 9:33 pm