Pakistan

Pakistan

ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.

ಇನ್ನೂ ಹೆಚ್ಚು ಓದಿ

ಭಾರತ-ಪಾಕಿಸ್ತಾನ ಈಗಾಗಲೇ 75 ವರ್ಷಗಳನ್ನು ವ್ಯರ್ಥ ಮಾಡಿದೆ, ಮುಂದಿನ 75 ವರ್ಷ ಹಾಗಾಗುವುದು ಬೇಡ: ನವಾಜ್ ಷರೀಫ್​

ಶಾಂಘೈ ಸಹಕಾರ ಶೃಂಗ (ಎಸ್‌ಇ ಒ) ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಪಾಕಿಸ್ತಾನ ಭೇಟಿಯ ಬಳಿಕ ಉಭಯ ದೇಶಗಳ ಸಂಬಂಧಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದೊಂದು ಸಕಾರಾತ್ಮಕ ಬದಲಾವಣೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನವೂ ಈ ಬಗ್ಗೆ ವಿಶೇಷ ಒಲವು ತೋರಿದೆ. ಮೋದಿ ಪಾಕಿಸ್ತಾನಕ್ಕೆ ಬಂದಿದ್ದರೆ ಖುಷಿಯಾಗುತ್ತಿತ್ತು ಎಂದು ಹೇಳಿದ್ದಾರೆ.

ಇಷ್ಟಪಟ್ಟವನೊಂದಿಗೆ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಕುಟುಂಬದ 13 ಮಂದಿಯನ್ನು ಕೊಂದ ಯುವತಿ

ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಲು ಅವಕಾಶ ನೀಡದಿದ್ದಕ್ಕೆ ಯುವತಿಯೊಬ್ಬಳು ತನ್ನ ಕುಟುಂಬದ 13 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಯುವತಿ ತನ್ನ ಕುಟುಂಬದ 13 ಸದಸ್ಯರಿಗೆ ಊಟದಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದಾಳೆ.

ಫಾರೆಕ್ಸ್ ರಿಸರ್ವ್ಸ್ ಸತತ ಆರನೇ ವಾರವೂ ಏರಿಕೆ; 700 ಬಿಲಿಯನ್ ಡಾಲರ್ ಮೈಲಿಗಲ್ಲಿಗೆ ಸಮೀಪ

Forex reserves of India on 2024 Sept 20th: ಆರ್​ಬಿಐನ ವಿದೇಶೀ ವಿನಿಮಯ ಮೀಸಲು ನಿಧಿ ಮತ್ತಷ್ಟು ಹೆಚ್ಚಳ ಕಂಡಿದೆ. ಸೆಪ್ಟೆಂಬರ್ 20ರಂದು ಅಂತ್ಯಗೊಂಡ ವಾರದಲ್ಲಿ 2.84 ಬಿಲಿಯನ್ ಡಾಲರ್​ನಷ್ಟು ಸಂಪತ್ತು ಹೆಚ್ಚಿದೆ. ಒಟ್ಟು ಫಾರೆಕ್ಸ್ ರಿಸರ್ವ್ಸ್ 692.3 ಬಿಲಿಯನ್ ಡಾಲರ್ ಆಗಿದೆ. ಇದು ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿದೆ. ಇದೇ ವೇಳೆ ರುಪಾಯಿ ಕರೆನ್ಸಿಯೂ ಕೂಡ ಬಲವರ್ಧನೆ ಕಂಡಿದೆ.

ಸಾಲ ಕೇಳಿದ ಪಾಕಿಸ್ತಾನಕ್ಕೆ ಭಾರತದ ಉಲ್ಲಾಸ್ ಸ್ಕೀಮ್ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ ಎಡಿಬಿ

ADB recommendation to Pakistan: ಅಧಃಪತನಗೊಂಡಿರುವ ತನ್ನ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಪಾಕಿಸ್ತಾನವು ಎಡಿಬಿ ಬಳಿ ಸಾಲಕ್ಕೆ ಕೈ ಚಾಚಿದೆ. ಭಾರತದಲ್ಲಿ ಜಾರಿಗೆ ತರಲಾಗಿರುವ ಉಲ್ಲಾಸ್ ಯೋಜನೆಯ ಮಾದರಿಯಲ್ಲಿ ಶಿಕ್ಷಣ ವ್ಯವಸ್ಥೆ ಸರಿಪಡಿಸಬೇಕೆಂದು ಪಾಕಿಸ್ತಾನಕ್ಕೆ ಎಡಿಬಿ ಸಲಹೆ ನೀಡಿದೆ. ಪಾಕಿಸ್ತಾನದಲ್ಲಿ ಶಿಕ್ಷಣ ವ್ಯವಸ್ಥೆ ಹೆಚ್ಚಿನ ಜನರನ್ನು ತಲುಪಲು ವಿಫಲವಾಗಿದೆ. 23 ಕೋಟಿಗೂ ಹೆಚ್ಚು ಜನರು ಶಾಲೆಯನ್ನು ಮಧ್ಯದಲ್ಲೇ ಬಿಟ್ಟಿದ್ದಾರೆನ್ನಲಾಗಿದೆ.

ಟೆರರಿಸ್ಟ್ ಪಾತ್ರಕ್ಕೆ ಭೋಲಾ, ಶಂಕರ್​ ಹೆಸರು; ನೆಟ್​ಫ್ಲಿಕ್ಸ್​ ಮುಖ್ಯಸ್ಥರನ್ನು ವಿಚಾರಣೆಗೆ ಕರೆದ ಸರ್ಕಾರ

ನೈಜ ಘಟನೆ ಆಧರಿಸಿ ‘ಐಸಿ 814: ದಿ ಕಂದಹಾರ್​ ಹೈಜಾಕ್​’ ವೆಬ್ ಸಿರೀಸ್​ ನಿರ್ಮಾಣ ಆಗಿದೆ. ಆದರೆ ಇದರಲ್ಲಿ ಭಯೋತ್ಪಾದಕರ ಹೆಸರನ್ನು ಬದಲಾಯಿಸಲಾಗಿದೆ ಎಂಬ ಆರೋಪ ಇದೆ. ಪಾಕಿಸ್ತಾನದ ಭಯೋತ್ಪಾದಕರಿಗೆ ಭೋಲಾ ಮತ್ತು ಶಂಕರ್ ಎಂದು ಹೆಸರು ಇಡಲಾಗಿದೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ನೆಟ್​ಫ್ಲಿಕ್ಸ್​ನಲ್ಲಿ ಈ ವೆಬ್​ ಸಿರೀಸ್​ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ಆಕ್ಷೇಪ ಎತ್ತಿದ್ದಾರೆ.

Pakistan SCO Meet: ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಗೆ ಆಹ್ವಾನ ಕಳುಹಿಸಿದ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಅಕ್ಟೋಬರ್​ನಲ್ಲಿ ನಡೆಯಲಿರುವ ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯನ್ನು ಪಾಕಿಸ್ತಾನ ಆಯೋಜಿಸುತ್ತದೆ.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ದೇಶದ ಜಿಡಿಪಿಗೂ ಅದರ ಪಾಸ್​ಪೋರ್ಟ್ ಶಕ್ತಿಗೂ ಸಂಬಂಧ ಇದೆಯಾ? ಇಲ್ಲಿದೆ ವಿವಿಧ ದೇಶಗಳ ಪಾಸ್​ಪೋರ್ಟ್ ಶಕ್ತಿ

Henley Passport Index 2024: ಈ ವರ್ಷದ ಹೆನ್ಲಿ ಪಾಸ್ಪೋರ್ಟ್ ಸೂಚ್ಯಂಕ ಪ್ರಕಟವಾಗಿದ್ದು ಸತತ ನಾಲ್ಕನೇ ವರ್ಷವೂ ಪಾಕ್ ಪಾಸ್ಪೋರ್ಟ್ 100ನೇ ಸ್ಥಾನದಲ್ಲಿದೆ. ಸಿಂಗಾಪುರ ಮೊದಲ ಸ್ಥಾನದಲ್ಲಿ ಮುಂದುವರದಿದೆ. ಹಾಗಾದರೆ ಭಾರತ ಯಾವ ಸ್ಥಾನದಲ್ಲಿದೆ? ಯಾವ ಯಾವ ದೇಶಗಳು ಎಷ್ಟನೇ ಸ್ಥಾನ ಪಡೆದುಕೊಂಡಿವೆ, ಅನ್ನೋದನ್ನ ತಿಳಿಯಬೇಕಾದ್ರೆ ಈ ಲೇಖನವನ್ನು ಪೂರ್ತಿಯಾಗಿ ಓದಿ.

ಪೇಶಾವರದಲ್ಲಿ ಇಳಿಯುತ್ತಿದ್ದಂತೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಪಾರು

ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ವಿಮಾನದ ಎಡ ಲ್ಯಾಂಡಿಂಗ್ ಗೇರ್‌ನಿಂದ ಹೊಗೆ ಮತ್ತು ಬೆಂಕಿಕಿಡಿಗಳು ಬರುತ್ತಿರುವುದನ್ನು ಕಂಡು ಪೈಲಟ್‌ಗಳಿಗೆ ಎಚ್ಚರಿಕೆ ನೀಡಿದರು. ಅವರು ವಿಮಾನ ನಿಲ್ದಾಣದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳಿಗೂ ಮಾಹಿತಿ ನೀಡಿದ್ದಾರೆ ಎಂದು ಸಿಎಎ ವಕ್ತಾರ ಸೈಫುಲ್ಲಾ  ಹೇಳಿದ್ದಾರೆ.ಸಿಎಎ ಅಗ್ನಿಶಾಮಕ ವಾಹನಗಳು ತ್ವರಿತವಾಗಿ ಆಗಮಿಸಿ ಲ್ಯಾಂಡಿಂಗ್ ಗೇರ್‌ನಲ್ಲಿದ್ದ ಬೆಂಕಿಯನ್ನು ನಂದಿಸಿದವು ಎಂದು ಹೇಳಿಕೆ ತಿಳಿಸಿದೆ.

ಜರ್ಮನಿ, ರಷ್ಯಾಗಿಂತಲೂ ಭಾರತದಲ್ಲಿ ಹೆಚ್ಚು ಕುಬೇರರು; ಪಾಕಿಸ್ತಾನದಲ್ಲಿ ಇರೋರೇ ನಾಲ್ವರು ಬಿಲಿಯನೇರ್ಸ್; ಇಲ್ಲಿದೆ ದೇಶವಾರು ಪಟ್ಟಿ

Billionaires list of countries: ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತವು ಅತಿಹೆಚ್ಚು ಬಿಲಿಯನೇರ್​ಗಳನ್ನು ಹೊಂದಿದ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅಮೆರಿಕ, ಚೀನಾ ಬಿಟ್ಟರೆ ಅತಿಹೆಚ್ಚು ಕುಬೇರರು ಇರುವುದು ಭಾರತದಲ್ಲೇ. ಪಾಕಿಸ್ತಾನದಲ್ಲಿ ಕೇವಲ ನಾಲ್ವರು ಮಾತ್ರವೇ ಬಿಲಿಯನೇರ್ಸ್ ಎನಿಸಿರುವುದು.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ