Pakistan
ಪಾಕಿಸ್ತಾನ, ಅಧಿಕೃತವಾಗಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ ಹೊಂದಿದೆ. ಪಾಕಿಸ್ತಾನವು ಭಾರತ, ಅಫ್ಘಾನಿಸ್ತಾನ, ಇರಾನ್ ಮತ್ತು ಚೀನಾದೊಂದಿಗೆ ಗಡಿಗಳನ್ನು ಹಂಚಿಕೊಂಡಿದೆ. ಇಸ್ಲಾಮಾಬಾದ್ ರಾಜಧಾನಿ. ಕರಾಚಿ, ಲಾಹೋರ್ ಮತ್ತು ಇಸ್ಲಾಮಾಬಾದ್ ಪ್ರಮುಖ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿವೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯವನ್ನು ಗಳಿಸಿದಾಗ ಭಾರತದಿಂದ ವಿಭಜನೆಗೊಂಡು ಪಾಕಿಸ್ತಾನ ದೇಶವಾಯಿತು. ರಾಜಕೀಯ ಅಸ್ಥಿರತೆ, ಸಾಮಾಜಿಕ-ಆರ್ಥಿಕ ಸಮಸ್ಯೆಗಳು ಮತ್ತು ಭಾರತದೊಂದಿಗಿನ ಸಂಘರ್ಷಗಳು ಸೇರಿದಂತೆ ದೇಶವು ಸವಾಲುಗಳನ್ನು ಎದುರಿಸಿದೆ. ಪಾಕಿಸ್ತಾನವು ಪರ್ವತಗಳು, ಮರುಭೂಮಿಗಳು ಮತ್ತು ಅರೇಬಿಯನ್ ಸಮುದ್ರದ ಉದ್ದಕ್ಕೂ ಕರಾವಳಿ ಸೇರಿದಂತೆ ವೈವಿಧ್ಯಮಯ ಭೂದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಕೈಗಾರಿಕೆಗಳು ಮತ್ತು ಸೇವೆಗಳ ಜೊತೆಗೆ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸವಾಲುಗಳ ಹೊರತಾಗಿಯೂ, ಪಾಕಿಸ್ತಾನವು ಭದ್ರತೆ, ಆರ್ಥಿಕತೆ ಮತ್ತು ರಾಜತಾಂತ್ರಿಕತೆಯ ಜಾಗತಿಕ ಚರ್ಚೆಗಳಿಗೆ ಕೊಡುಗೆ ನೀಡುತ್ತದೆ. ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವೈವಿಧ್ಯಮಯ ಸಂಪ್ರದಾಯಗಳು ವಿಶ್ವ ವೇದಿಕೆಯಲ್ಲಿ ಅದರ ವಿಶಿಷ್ಟ ಗುರುತಿಗೆ ಕಾರಣವಾಗಿದೆ.
ಇನ್ನೂ ಹೆಚ್ಚು ಓದಿಪಾಕ್ ಮುಖವಾಡ ಮತ್ತೊಮ್ಮೆ ಬಯಲು; ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಯನ್ನು ಒಪ್ಪಿಕೊಂಡ ಭಯೋತ್ಪಾದಕ
ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನ ತಾನು ಯಾವುದೇ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡಿಲ್ಲ ಎಂದು ಘೋಷಿಸಿಕೊಂಡಿತ್ತು. ಆದರೆ, ಇದೀಗ ಪಾಕಿಸ್ತಾನದ ಅಸಲಿ ಮುಖ ಮತ್ತೊಮ್ಮೆ ಬಯಲಾಗಿದೆ. ಲಷ್ಕರ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ರಿಜ್ವಾನ್ ಹನೀಫ್ ಎಂಬಾತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಷೇಧಿತ ಉಗ್ರ ಸಂಘಟನೆಯನ್ನು ದೇಶದಿಂದಲೇ ನಿವಾರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಈ ವಿಡಿಯೋ ಪಾಕಿಸ್ತಾನದ ಸುಳ್ಳನ್ನು ಬಯಲು ಮಾಡಿದೆ.
- Sushma Chakre
- Updated on: Aug 3, 2026
- 9:21 pm
ಭಾರತದ ಗಡಿಯಲ್ಲಿ ಪಾಕಿಸ್ತಾನದಿಂದ ಚೀನಾದ 250 ಫಿರಂಗಿಗಳ ನಿಯೋಜನೆ
ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಆರ್ಟಿಲರಿ (ಫಿರಂಗಿ) ಪಡೆಯ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಭಾರತೀಯ ಗಡಿಯುದ್ದಕ್ಕೂ ಚೀನಾ ನಿರ್ಮಿತ 250 SH-15 ಫಿರಂಗಿಗಳನ್ನು ನಿಯೋಜಿಸಿದೆ ಎಂದು ಉನ್ನತ ಗೂಢಚಾರ ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಸ್ಲಾಮಾಬಾದ್ ಕೈಗೊಂಡ ಅತ್ಯಂತ ದೊಡ್ಡ ಮಿಲಿಟರಿ ಬಲವರ್ಧನೆಗಳಲ್ಲಿ ಇದೂ ಒಂದಾಗಿದೆ. ಚೀನಾದ ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಸ್ಥೆ ನೋರಿಂಕೋ ತಯಾರಿಸಿರುವ SH-15, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (PLA) ಬಳಸುವ 'PCL-181' ವೀಲ್ಡ್ ಹೌವಿಟ್ಜರ್ನ ಆವೃತ್ತಿಯಾಗಿದೆ.
- Sushma Chakre
- Updated on: Aug 3, 2026
- 8:30 pm
ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ
India to strengthen border regions by upgrading railway infrastructure: ಗಡಿಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲು ಮತ್ತು ಸಮರ ಸನ್ನದ್ಧತೆಯನ್ನು ತೀವ್ರಗೊಳಿಸಲು ಭಾರತ ಮತ್ತೊಂದು ಹೆಜ್ಜೆ ಇಡುತ್ತಿದೆ. ಪಾಕಿಸ್ತಾನ, ಚೀನಾ, ಬಾಂಗ್ಲಾ ಗಡಿಗಳಲ್ಲಿ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿಗೆ ಭಾರತ ಯೋಜನೆ ಹಾಕಿದೆ. 45,000 ಕೋಟಿ ರೂ ಹೂಡಿಕೆ ಬೇಕಾಗಬಹುದು. ಎರಡು ವರ್ಷದಲ್ಲಿ ಈ ಹೂಡಿಕೆ ಆಗಲಿದೆ.
- Vijaya Sarathy SN
- Updated on: Aug 3, 2026
- 2:35 pm
ಜಂತರ್ ಮಂತರ್ನಲ್ಲಿ ಬಂಗಾಳ ಸಿಎಂ ಮೇಲೆ ದಾಳಿಗೆ ನಡೆದಿತ್ತಾ ಪಿತೂರಿ? ಗರ್ಲ್ಫ್ರೆಂಡ್ಳ ಸೋಷಿಯಲ್ ಮೀಡಿಯಾದಿಂದ ಸಂಚು ಬಯಲು
Terror suspect allegedly plotted disturbances at Jantar Mantar: ಪಶ್ಚಿಮ ಬಂಗಾಳದಲ್ಲಿ ಬಂಧಿತನಾಗಿರುವ ವ್ಯಕ್ತಿಯೊಬ್ಬನ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನೀ ಹ್ಯಾಂಡ್ಲರ್ಗಳ ಅಣತಿಯಂತೆ ನಡೆಯುತ್ತಿದ್ದ ಈ ಶಂಕಿತ ಉಗ್ರನು ಜಂತರ್ ಮಂತರ್ನಲ್ಲಿ ದೊಡ್ಡ ಗಲಭೆ ಸೃಷ್ಟಿಸಲು ಯತ್ನಿಸಿದ್ದನೆನ್ನಲಾಗಿದೆ. ಪೊಲೀಸ್ ವೇಷದಲ್ಲಿ ಜಂತರ್ ಮಂತರ್ ಪ್ರತಿಭಟನೆಗೆ ಹೋಗಿ ಗಲಭೆ ಸೃಷ್ಟಿಸುವ ಸಂಚು ನಡೆದಿತ್ತು.
- Vijaya Sarathy SN
- Updated on: Aug 2, 2026
- 7:15 pm
‘ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’ – ಭಾರತ ಮತ್ತು ಅಫ್ಘಾನ್ ಸಂಬಂಧಕ್ಕೆ ಹುಳಿ ಹಿಂಡಲು ಪಾಕಿಸ್ತಾನ ಯತ್ನ
‘Muslims Shouldn’t Befriend Kaafirs’: Pakistan Army- ಭಾರತ ಮತ್ತು ಅಫ್ಘಾನಿಸ್ತಾನದ ಮಧ್ಯೆ ರಾಜತಾಂತ್ರಿಕ ಸಂಬಂಧ ಗಟ್ಟಿಗೊಳ್ಳುತ್ತಿರುವುದು ಪಾಕಿಸ್ತಾನಕ್ಕೆ ಮಗ್ಗುಲ ಮುಳ್ಳಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನದ ಸೇನೆಯ ವಕ್ತಾರರೊಬ್ಬರು ನೀಡಿದ ಹೇಳಿಕೆ ಗಮನ ಸೆಳೆದಿದೆ. ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು ಎಂದು ಹೇಳಿ ಭಾರತ ವಿರುದ್ಧ ಅಫ್ಘಾನ್ ಅನ್ನು ಪರೋಕ್ಷವಾಗಿ ಎತ್ತಿಕಟ್ಟಲು ಯತ್ನಿಸಿದ್ದಾರೆ.
- Vijaya Sarathy SN
- Updated on: Aug 2, 2026
- 6:18 pm
ಕರಾಚಿಯಲ್ಲಿ ಗ್ಯಾಂಗ್ಸ್ಟರ್ ಸಹೋದರನ ಮೇಲೆ ಗುಂಡಿನ ದಾಳಿ: ‘ಧುರಂಧರ್’ ಸಿನಿಮಾಗೆ ಇದೆ ನಂಟು
ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ್ದ ‘ಧುರಂಧರ್’ ಸಿನಿಮಾದಲ್ಲಿ ಉಜೈರ್ ಬಲೋಚ್ ಪಾತ್ರವನ್ನು ತೋರಿಸಲಾಗಿತ್ತು. ಈಗ ಆತನ ಸಹೋದರ ಜುಬೈರ್ ಬಲೋಚ್ ಮೇಲೆ ಗುಂಡಿನ ದಾಳಿ ನಡೆದಿದೆ. ಆ ಚಿತ್ರದಲ್ಲಿದ್ದ ತೋರಿಸಿದ್ದ ಭೂಗತ ಪಾತಕಿಗಳ ನಡುವಿನ ಸಂಘರ್ಷ ನಿಜ ಜೀವನದಲ್ಲಿ ಇಂದಿಗೂ ಮುಂದುವರಿದಿದೆ.
- Madan Kumar
- Updated on: Jul 31, 2026
- 10:02 pm
ಪಿಒಕೆಯ ದೌರ್ಜನ್ಯಗಳಿಗೆ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಿ’: ಅಂತಾರಾಷ್ಟ್ರೀಯ ಸಮುದಾಯಕ್ಕೆ ಭಾರತ ಆಗ್ರಹ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಸಾರ್ವಜನಿಕರ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ನಡೆಸುತ್ತಿರುವ ಬಲಪ್ರಯೋಗ ಹಾಗೂ ಹಿಂಸಾಚಾರವನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಪ್ರತಿಭಟನೆ ನಡೆಸುತ್ತಿರುವ ಸಾಮಾನ್ಯ ನಾಗರಿಕರನ್ನೇ ‘ಶತ್ರುಗಳು’ ಎಂದು ಕರೆಯುವ ಮೂಲಕ ಪಾಕಿಸ್ತಾನ ಅಲ್ಲಿನ ಜನರ ಮೇಲೆ ತೋರಿಸುತ್ತಿರುವ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ ಎಂದು ಭಾರತ ಹೇಳಿದೆ.
- Sushma Chakre
- Updated on: Jul 31, 2026
- 7:17 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಮಂದಿ ಸಾವು
ಪಾಕಿಸ್ತಾನದ ಬಲೂಚಿಸ್ತಾನ್ನ ಕ್ವೆಟ್ಟಾ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇನ್ನೂ 10 ಮಂದಿ ಗಣಿಯೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸುರಕ್ಷತಾ ನಿಯಮಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ. ಸರ್ಕಾರವು ಘಟನೆಯ ತನಿಖೆಗೆ ಆದೇಶಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸುರಕ್ಷತಾ ಪ್ರೋಟೋಕಾಲ್ಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಲಾಗಿದೆ.
- Nayana Rajeev
- Updated on: Jul 31, 2026
- 8:28 am
ಪಾಕಿಸ್ತಾನ ಸೇನೆಯಿಂದ ಬಲೂಚಿಸ್ತಾನದ ಬಾಲಕಿಯ ಹತ್ಯೆ; ಹಮಾಸ್ ರೀತಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ
ಪಾಕಿಸ್ತಾನ ಸೇನಾ ಸಿಬ್ಬಂದಿ ಬಲೂಚಿಸ್ತಾನದಲ್ಲಿ ನಿರಪರಾಧಿ ಬಾಲಕಿಯೊಬ್ಬಳಿಗೆ ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ಸೇನಾ ವಾಹನದ ಮುಂಭಾಗದಲ್ಲಿ ಕಟ್ಟಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಹಮಾಸ್ ಮಾದರಿಯ ಈ ಕೃತ್ಯದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಬಲೂಚಿಸ್ತಾನವು ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.
- Sushma Chakre
- Updated on: Jul 29, 2026
- 10:38 pm
‘ಪಿಒಕೆ ಪ್ರತಿಭಟನಾಕಾರರು ಭಾರತದಂತೆಯೇ ನಮ್ಮ ಶತ್ರುಗಳು’; ಹತ್ಯೆಯನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಸಚಿವ
ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ನಡೆಸುತ್ತಿರುವ ಬಲಪ್ರಯೋಗವನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸಮರ್ಥಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಪ್ರತಿಭಟನಾಕಾರರನ್ನು ಭಾರತಕ್ಕೆ ಹೋಲಿಸಿ, ಅವರೆಲ್ಲರೂ ಪಾಕಿಸ್ತಾನದ ಶತ್ರುಗಳು ಎಂದು ಕರೆದಿದ್ದಾರೆ. ಅವರ ಹೇಳಿಕೆಯ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ವಿವಾದ ಸೃಷ್ಟಿಸಿದೆ. ಪಾಕಿಸ್ತಾನದ ಈ ಉದ್ಧಟತನದ ಹೇಳಿಕೆಯಿಂದ ಪಿಒಕೆಯ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.
- Sushma Chakre
- Updated on: Jul 28, 2026
- 10:38 pm
ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ; 12 ಯೋಧರು ಸೇರಿ 15 ಜನ ಸಾವು
ಪಾಕಿಸ್ತಾನದಲ್ಲಿ ಗುರುವಾರ ರಾತ್ರಿ ಭದ್ರತಾ ತಪಾಸಣಾ ಕೇಂದ್ರಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಯೋಧರು, ಪೊಲೀಸರು ಮತ್ತು ಸರ್ಕಾರಿ ಸಿಬ್ಬಂದಿ ಸೇರಿದಂತೆ 15 ಜನರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಈ ದಾಳಿಗೆ ಪ್ರತಿಯಾಗಿ ನಡೆಸಿದ ಪ್ರತಿದಾಳಿಯಲ್ಲಿ 12 ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರು ಭದ್ರತಾ ವ್ಯವಸ್ಥೆಯನ್ನು ಭೇದಿಸಲು ವಿಫಲರಾದ ನಂತರ, ಸ್ಫೋಟಕ ತುಂಬಿದ್ದ ವಾಹನವನ್ನು ಚೆಕ್ಪೋಸ್ಟ್ನ ಹೊರಗೋಡೆಗೆ ಡಿಕ್ಕಿ ಹೊಡೆಸಿ ಸ್ಫೋಟಿಸಿದ್ದಾರೆ.
- Sushma Chakre
- Updated on: Jul 24, 2026
- 10:34 pm
ಪ್ರತಿಭಟನೆ ಬಗ್ಗೆ ಸುಳ್ಳು ಸುದ್ದಿ ಪ್ರಸಾರ; ಪಾಕಿಸ್ತಾನ ಮೂಲದ 480 ಖಾತೆಗಳಿಗೆ ದೆಹಲಿ ಪೊಲೀಸ್ ನಿರ್ಬಂಧ
ಸಂಘಟಿತ ರೀತಿಯಲ್ಲಿ ಭಾರತದ ವಿರುದ್ಧ ಸುಳ್ಳು ಸುದ್ದಿ ಹಾಗೂ ತಪ್ಪು ಮಾಹಿತಿಗಳನ್ನು ಹರಡುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಸುಮಾರು 480 ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ, ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ದೇಶದಲ್ಲಾಗುತ್ತಿರುವ ಪ್ರಸ್ತುತ ವಿದ್ಯಾರ್ಥಿ ಪ್ರತಿಭಟನೆಯ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ವದಂತಿಗಳನ್ನು ಹರಡುತ್ತಿರುವ ಇಂತಹ ವಿದೇಶಿ ಖಾತೆಗಳ ಬಗ್ಗೆ ಜಾಗರೂಕರಾಗಿರುವಂತೆ ದೆಹಲಿ ಪೊಲೀಸರು ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.
- Sushma Chakre
- Updated on: Jul 23, 2026
- 11:04 pm