Pariksha Pe Charcha
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗೆಗಿನ ಒತ್ತಡ, ಆತಂಕವನ್ನು ನಿವಾರಿಸುವ ದೃಷ್ಟಿಯಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018ರಿಂದ ಪ್ರತಿ ವರ್ಷವೂ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಬಾರಿ ಫೆಬ್ರವರಿ 10ರಂದು ಬೆಳಗ್ಗೆ 11 ಗಂಟೆಗೆ ಚರ್ಚೆ ಆರಂಭವಾಗಲಿದೆ. ಇದರಲ್ಲಿ ಪೋಷಕರು ಕೂಡ ಮಕ್ಕಳ ಪರೀಕ್ಷೆ ಸಮಯದಲ್ಲಿ ಮಕ್ಕಳೊಂದಿಗೆ ಹೇಗೆ ನಡೆದುಕೊಳ್ಳಬೇಕು, ಪೋಷಕರು ಹೇರುವ ಒತ್ತಡದಿಂದ ಮಕ್ಕಳ ಮನಸ್ಸಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ. ಮಕ್ಕಳು ಸುಸೂತ್ರವಾಗಿ ನೆಮ್ಮದಿಯಿಂದ ಪರೀಕ್ಷೆ ಬರೆಯುವಲ್ಲ ಪೋಷಕರು ಹಾಗೂ ಶಿಕ್ಷಕರ ಪಾತ್ರವೇನು ಎಂಬುದರ ಕುರಿತಾಗಿ ಚರ್ಚಿಸಲಾಗುತ್ತದೆ. ಮಕ್ಕಳ ಹಲವು ಪ್ರಶ್ನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸುತ್ತಾರೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಕೇವಲ ಪ್ರಧಾನಿ ಮಾತ್ರ ಸಲಹೆ ನೀಡುತ್ತಿದ್ದರು ಆದರೆ ಈ ಬಾರಿ ಆಧ್ಯಾತ್ಮಿಕ ಗುರು ಸದ್ಗುರು, ನಟಿ ದೀಪಿಕಾ ಪಡುಕೋಣೆ, ಮೇರಿ ಕೋಂ ಸೇರಿದಂತೆ ಹಲವರು ಈ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷೆಯ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಚರ್ಚಾ ಕಾರ್ಯಕ್ರಮವು ಇದೇ ಫೆಬ್ರವರಿ 10 ರಂದು ನಡೆಯಲಿದೆ. ಈ ಕಾರ್ಯಕ್ರಮವು ಭಾರತ್ ಮಂಡಪಮ್ ನವದೆಹಲಿಯಲ್ಲಿ ನಡೆಯಲಿದ್ದು ಆಯ್ಕೆ ಮಾಡಲಾದ 2,500 ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಪೋಷಕರು ತಮ್ಮ ಮಕ್ಕಳಿಗೆ ಒತ್ತಡ ಹೇರದೆ, ಆರೋಗ್ಯಕರ ಕಲಿಕೆಯ ವಾತಾವರಣವನ್ನು ಸೃಷ್ಟಿಸುವುದು ಹೇಗೆ ಎನ್ನುವುದನ್ನು ಇಲ್ಲಿ ಪೋಷಕರು ಕಲಿಯಬಹುದು.ಪ್ರಧಾನಿಯವರ ಪ್ರೇರಣೆ ತುಂಬಿದ ಮಾತುಗಳು ವಿದಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ
Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ಉತ್ತಮ ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಹನ ನಡೆಸಿದರು. ಆ ವೇಳೆ ವಿದ್ಯಾರ್ಥಿಯೊಬ್ಬರು ನಾಯಕನಾಗಲು ಎಂಥಾ ಮನಸ್ಥಿತಿ ಇರಬೇಕು, ಉತ್ತಮ ನಾಯಕನಾಗುವುದು ಹೇಗೆ ಎನ್ನು ಪ್ರಶ್ನೆ ಕೇಳಿದ್ದರು, ಅದಕ್ಕೆ ಪ್ರಧಾನಿ ಮೋದಿ ಉತ್ತರಿಸಿದ್ದಾರೆ.
- Nayana Rajeev
- Updated on: Feb 9, 2026
- 11:18 am
Pariksha Pe Charcha 2026: ಕೃತಕಬುದ್ಧಿಮತ್ತೆಯನ್ನು ನಿಮ್ಮ ಯಜಮಾನನನ್ನಾಗಿ ಮಾಡಿಕೊಂಡು, ಅದರ ಗುಲಾಮರಾಗಬೇಡಿ: ಮೋದಿ ಸಲಹೆ
ಪರೀಕ್ಷಾ ಪೆ ಚರ್ಚಾ 2026ರಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನದ ಬಗ್ಗೆ ಪ್ರಮುಖ ಸಲಹೆ ನೀಡಿದರು. AIಗೆ ಗುಲಾಮರಾಗದೆ, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಿದರು. ಪರೀಕ್ಷಾ ಒತ್ತಡ ನಿರ್ವಹಣೆ, ಶಿಸ್ತಿನ ಮಹತ್ವ ಮತ್ತು ಸಣ್ಣ ಸ್ಟಾರ್ಟಪ್ಗಳನ್ನು ಪ್ರಾರಂಭಿಸುವ ಬಗ್ಗೆಯೂ ಚರ್ಚಿಸಿದರು. ತಂತ್ರಜ್ಞಾನಕ್ಕೆ ಹೆದರದೆ, ಅದನ್ನು ಅರ್ಥಮಾಡಿಕೊಳ್ಳುವಂತೆ ಕರೆ ನೀಡಿದರು.
- Nayana Rajeev
- Updated on: Feb 9, 2026
- 10:40 am
ಇಂದು ಪರೀಕ್ಷಾ ಪೆ ಚರ್ಚಾ ಎರಡನೇ ಸಂಚಿಕೆ, ಮತ್ತಷ್ಟು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪರೀಕ್ಷಾ ಪೆ ಚರ್ಚಾ 2026 ರ ಎರಡನೇ ಸಂಚಿಕೆಯಲ್ಲಿ ಸಂವಾದ ನಡೆಸಲಿದ್ದಾರೆ. ಫೆಬ್ರವರಿ 9 ರಂದು ಬೆಳಗ್ಗೆ 10 ಗಂಟೆಗೆ ಪ್ರಸಾರವಾಗುವ ಈ ಕಾರ್ಯಕ್ರಮದಲ್ಲಿ ಪರೀಕ್ಷೆಗೆ ಸಂಬಂಧಿಸಿದ ತಯಾರಿ ತಂತ್ರಗಳು, ಸಮಯ ನಿರ್ವಹಣೆ, ಆತ್ಮವಿಶ್ವಾಸ ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ. ಈ ವರ್ಷ, ಮೊದಲ ಬಾರಿಗೆ, ಪರೀಕ್ಷಾ ಪೆ ಚರ್ಚಾ ಒಂದು ಸ್ವರೂಪವನ್ನು ಅಳವಡಿಸಿಕೊಂಡಿದೆ, ಇದರಲ್ಲಿ ಪ್ರಧಾನಿಯವರು ನಾಲ್ಕು ರಾಜ್ಯಗಳಾದ ತಮಿಳುನಾಡು, ಛತ್ತೀಸ್ಗಢ, ಗುಜರಾತ್ ಮತ್ತು ಅಸ್ಸಾಂನ ನಾಲ್ಕು ವಿಭಿನ್ನ ಸ್ಥಳಗಳ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಾಯಿತು.
- Nayana Rajeev
- Updated on: Feb 9, 2026
- 9:48 am
Pariksha Pe Charcha: ಹಿಂದಿ, ನೇಪಾಳಿ, ಬಂಗಾಳಿ ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೆ ಚರ್ಚಾ 9ನೇ ಆವೃತ್ತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಜೊತೆ ಅನೌಪಚಾರಿಕ ಸಂವಾದ ನಡೆಸಿದರು. ಸಿಕ್ಕಿಂನ ವಿದ್ಯಾರ್ಥಿನಿಯೊಬ್ಬಳು ಹಿಂದಿ, ನೇಪಾಳಿ ಮತ್ತು ಬಂಗಾಳಿ ಎಂಬ ಮೂರು ಭಾಷೆಗಳಲ್ಲಿ 'ಹಮಾರ ಭಾರತ್ ಭೂಮಿ' ಎಂಬ ದೇಶಭಕ್ತಿ ಗೀತೆಯನ್ನು ರಚಿಸಿರುವುದಾಗಿ ಹಂಚಿಕೊಂಡಳು. ಇದು ಒಂದು ದೇಶಭಕ್ತಿ ಗೀತೆಯಾಗಿದೆ.
- Sushma Chakre
- Updated on: Feb 6, 2026
- 3:14 pm
Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮನರಂಜನೆಗಾಗಿ ಗೇಮಿಂಗ್ನಲ್ಲಿ ಸಮಯ ವ್ಯರ್ಥ ಮಾಡದಂತೆ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
- Nayana Rajeev
- Updated on: Feb 6, 2026
- 3:03 pm
Pariksha Pe Charcha 2026: ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು “ವರದಾನ” ಎಂದು ಸ್ವೀಕರಿಸಿ
ಪ್ರಧಾನಿ ನರೇಂದ್ರ ಮೋದಿ ಅವರು 9ನೇ 'ಪರೀಕ್ಷಾ ಪೇ ಚರ್ಚಾ 2026' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇವಲ ಪರೀಕ್ಷೆಗಳ ಬಗ್ಗೆ ಮಾತ್ರವಲ್ಲದೆ, ಸುಸ್ಥಿರ ಭವಿಷ್ಯಕ್ಕಾಗಿ ಜವಾಬ್ದಾರಿಯುತ ನಾಗರಿಕರಾಗಲು ಕರೆ ನೀಡಿದರು. 'ವಿಕಸಿತ ಭಾರತ'ದ ಗುರಿ ತಲುಪಲು ಸ್ವಚ್ಛತೆ ಮತ್ತು ತಂತ್ರಜ್ಞಾನವನ್ನು ವರದಾನವಾಗಿ ಬಳಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಸಮಾಜದಲ್ಲಿ ಸ್ವಚ್ಛತೆಯ ಅರಿವು ಮೂಡಿಸುವಲ್ಲಿ ಪಾತ್ರ ವಹಿಸಬೇಕು ಎಂದರು.
- Akshay Pallamajalu
- Updated on: Feb 6, 2026
- 2:30 pm
Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ
ಪರೀಕ್ಷಾ ಪೆ ಚರ್ಚಾ 2026ರಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಮಹತ್ವದ ಸಲಹೆಗಳನ್ನು ನೀಡಿದರು. ಕನಸು ಕಾಣುವುದು ಅಪರಾಧವಲ್ಲ, ಆದರೆ ಅದನ್ನು ನನಸಾಗಿಸಲು ಶ್ರಮಿಸಬೇಕು ಎಂದರು. ಅಂಕಗಳಿಗಿಂತ ಕೌಶಲ್ಯ ಮತ್ತು ಜೀವನದ ನಿಜವಾದ ಉದ್ದೇಶಕ್ಕೆ ಒತ್ತು ನೀಡುವಂತೆ ಪ್ರೋತ್ಸಾಹಿಸಿದರು. ಸಮಯ ನಿರ್ವಹಣೆ, ಹೊಸ ವಿಷಯಗಳನ್ನು ಕಲಿಯುವುದು, ಮತ್ತು ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದಿರುವುದು ಯಶಸ್ಸಿಗೆ ಮುಖ್ಯ ಎಂದು ಮೋದಿ ಪ್ರತಿಪಾದಿಸಿದರು.
- Nayana Rajeev
- Updated on: Feb 6, 2026
- 2:27 pm
Pariksha Pe Charcha 2025: ನಿಮ್ಮನ್ನು ಬೇರೆಯವರೊಂದಿಗೆ ಹೋಲಿಸಿಕೊಳ್ಳಬೇಡಿ, ವಿದ್ಯಾರ್ಥಿಗಳಿಗೆ ಕ್ರೀಡಾ ದಿಗ್ಗಜರ ಅಭಯ
ಪರೀಕ್ಷಾ ಪೆ ಚರ್ಚಾದ 7ನೇ ಸಂಚಿಕೆ ಇಂದು ಪ್ರಸಾರಗೊಂಡಿದೆ. ಕ್ರೀಡಾ ದಿಗ್ಗಜರು ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ. ವಿದ್ಯಾರ್ಥಿಗಳು ಮೇರಿ ಕೋಮ್, ಅವನಿ ಲೇಖರಾ ಮತ್ತು ಸುಹಾಸ್ ಯತಿರಾಜ್ ಅವರೊಂದಿಗೆ ಸಂವಹನ ನಡೆಸಿದರು. ಪ್ಯಾರಾ-ಬ್ಯಾಡ್ಮಿಂಟನ್ ಬೆಳ್ಳಿ ಪದಕ ವಿಜೇತ ಮತ್ತು ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್, ಶಾಲಾ ಪರೀಕ್ಷೆಯಾಗಿರಲಿ ಅಥವಾ ಜೀವನದಲ್ಲಿ ಸವಾಲಾಗಿರಲಿ, ಪ್ರತಿಯೊಂದು ಪರೀಕ್ಷೆಯೊಂದಿಗೆ ಬರುವ ಸವಾಲುಗಳ ಬಗ್ಗೆ ಮಾತನಾಡಿದರು.
- Nayana Rajeev
- Updated on: Feb 17, 2025
- 12:18 pm
ಪರೀಕ್ಷಾ ಪೇ ಚರ್ಚಾದಲ್ಲಿ ಸದ್ಗುರು: ಮಕ್ಕಳಿಗೆ ನೀಡಿದ ಟಿಪ್ಸ್ಗಳೇನು? ಇಲ್ಲಿವೆ ನೋಡಿ
ಪರೀಕ್ಷಾ ಪೇ ಚರ್ಚಾ 2025ರಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ವಿದ್ಯಾರ್ಥಿಗಳ ಪರೀಕ್ಷಾ ಒತ್ತಡವನ್ನು ನಿವಾರಿಸುವುದರ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣವು ಕೇವಲ ಪರೀಕ್ಷೆಗಳಲ್ಲ, ಜೀವನ ಕಲಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಪರೀಕ್ಷೆಗಳನ್ನು ಮೋಜಿನಿಂದ ಕೂಡಿಸುವುದು ಮತ್ತು ಧನಾತ್ಮಕ ಮನೋಭಾವವನ್ನು ಉಳಿಸಿಕೊಳ್ಳುವುದು ಒತ್ತಡ ನಿವಾರಣೆಗೆ ಸಹಾಯ ಮಾಡುತ್ತದೆ ಎಂದು ಸದ್ಗುರು ಸಲಹೆ ನೀಡಿದ್ದಾರೆ.
- Vivek Biradar
- Updated on: Feb 15, 2025
- 11:11 am
8 ಎಪಿಸೋಡ್ಗಳಲ್ಲಿ ಪ್ರಸಾರವಾಗಲಿದೆ ಪರೀಕ್ಷಾ ಪೇ ಚರ್ಚೆ; ಮಿಸ್ ಮಾಡದೆ ನೋಡಿ ಎಂದ ಮೋದಿ
ಈ ವರ್ಷ ಪರೀಕ್ಷಾ ಪೇ ಚರ್ಚಾ ಕೇವಲ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಯುವುದಿಲ್ಲ. ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳು ವಿದ್ಯಾರ್ಥಿಗಳಿಗೆ ತಮ್ಮ ಬಾಲ್ಯದ ಅನುಭವಗಳನ್ನು, ಸವಾಲುಗಳನ್ನು ಹೇಳುವ ಮೂಲಕ ಸ್ಫೂರ್ತಿ ತುಂಬಲಿದ್ದಾರೆ. ಈಗಾಗಲೇ ಮೋದಿಯವರ ಸಂಚಿಕೆ ಪ್ರಸಾರವಾಗಿದ್ದು, ನಾಳೆ ಬೆಳಗ್ಗೆ ನಟಿ ದೀಪಿಕಾ ಪಡುಕೋಣೆ ಅವರ ಸಂಚಿಕೆ ಪ್ರಸಾರವಾಗಲಿದೆ. ಒಟ್ಟು 8 ಸಂಚಿಕೆಗಳಲ್ಲಿ ಈ ಬಾರಿಯ ಪರೀಕ್ಷಾ ಪೇ ಚರ್ಚೆ ಪ್ರಸಾರ ಕಾಣಲಿದೆ.
- Sushma Chakre
- Updated on: Feb 11, 2025
- 3:50 pm
‘ಪರೀಕ್ಷಾ ಪೆ ಚರ್ಚಾ’ದಲ್ಲಿ ಖಿನ್ನತೆ ಬಗ್ಗೆ ಮಾತನಾಡಿದ ದೀಪಿಕಾ; ಪ್ರಧಾನಿ ಮೋದಿಗೆ ಧನ್ಯವಾದ
‘ಪರೀಕ್ಷಾ ಪೆ ಚರ್ಚಾ’ದ ಎಂಟನೇ ಆವೃತ್ತಿಯಲ್ಲಿ ದೀಪಿಕಾ ಪಡುಕೋಣೆ ಅವರು ಭಾಗವಹಿಸಿದ್ದಾರೆ. ಪರೀಕ್ಷಾ ಒತ್ತಡ, ಖಿನ್ನತೆ ಮತ್ತು ಯಶಸ್ಸಿನ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಲ್ಯದ ನೆನಪುಗಳು, ಗಣಿತದಲ್ಲಿನ ತಮ್ಮ ದುರ್ಬಲತೆ ಮತ್ತು ಖಿನ್ನತೆಯನ್ನು ನಿಭಾಯಿಸಿದ ರೀತಿಯನ್ನು ಅವರು ವಿವರಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸಲು ಸಲಹೆಗಳನ್ನು ನೀಡುವುದರ ಜೊತೆಗೆ, ಅವರು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಪ್ರಯತ್ನಿಸಿದ್ದಾರೆ.
- Rajesh Duggumane
- Updated on: Feb 11, 2025
- 2:50 pm
Pariksha Pe Charcha 2025: ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಉಪಯೋಗಿ ಹೊರತು ಬಿರುಗಾಳಿಯಲ್ಲ: ಮೋದಿ
ತಂತ್ರಜ್ಞಾನ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯೇ ಹೊರತು ಬಿರುಗಾಳಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದಿಂದಾಗಿಯೇ ಮಕ್ಕಳು ಹಾಳಾಗುತ್ತಿದ್ದಾರೆ, ನಿತ್ಯ ಸಿನೆಮಾ, ರೀಲ್ಸ್ಗಳನ್ನು ನೋಡುತ್ತಿದ್ದಾರೆ ಎಂದುಕೊಳ್ಳುವುದು ತಪ್ಪು, ಅದು ಶಿಕ್ಷಣದಲ್ಲಿ ಪ್ರಮುಖ ಪಾತ್ರವಹಿಸಿದೆ.
- Nayana Rajeev
- Updated on: Feb 10, 2025
- 12:51 pm