Parliament

Parliament

ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.

ಇನ್ನೂ ಹೆಚ್ಚು ಓದಿ

ನೆಹರೂ ಸರ್ಕಾರ ನಟ ದೇವ್ ಆನಂದ್, ಗಾಯಕ ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ರಾಜ್ಯಸಭೆಯಲ್ಲಿ ಮೋದಿ ಟೀಕೆ

‘ಸಂವಿಧಾನವನ್ನು ಹತ್ತಿಕ್ಕುವ’ ಬಗ್ಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ವಿರುದ್ಧ ಕಟುವಾದ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ದಂತಕಥೆಯಾಗಿರುವ ಬಾಲಿವುಡ್ ನಟ ದೇವ್ ಆನಂದ್ ಸೇರಿದಂತೆ ಕಲಾವಿದರು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಳೊಂದಿಗೆ ಹೊಂದಿಕೆಯಾಗದ ಕಾರಣ ಅದರ ಪರಿಣಾಮಗಳನ್ನು ಎದುರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕವಿ ಮಜ್ರೂಹ್ ಸುಲ್ತಾನ್ಪುರಿ ಮತ್ತು ನಟ ಬಲರಾಜ್ ಸಾಹ್ನಿ ಅವರ ಬಂಧನಗಳು ಮತ್ತು ತುರ್ತು ಪರಿಸ್ಥಿತಿಯ ಸಮಯದಲ್ಲಿ ದೂರದರ್ಶನದಲ್ಲಿ ದೇವ್ ಆನಂದ್ ಅವರ ಚಲನಚಿತ್ರಗಳ ಮೇಲಿನ ನಿಷೇಧವನ್ನು ಉಲ್ಲೇಖಿಸಿ ಕಾಂಗ್ರೆಸ್ ಅನ್ನು ವಾಕ್ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು ಎಂದಿದ್ದಾರೆ.

ಕುಟುಂಬವೇ ಮೊದಲು ಎನ್ನುವ ಕಾಂಗ್ರೆಸ್​ನಿಂದ ಸಬ್ಕಾ ವಿಕಾಸ್​ ನಿರೀಕ್ಷಿಸುವುದೇ ತಪ್ಪು; ರಾಜ್ಯಸಭೆಯಲ್ಲಿ ಮೋದಿ ವಾಗ್ದಾಳಿ

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಂಗಳವಾರ ಅವರು ಲೋಕಸಭೆ ಅಧಿವೇಶನದಲ್ಲಿ ಭಾಷಣ ಮಾಡಿದ್ದರು. ಸಂಸತ್ತಿನ ಬಜೆಟ್ ಅಧಿವೇಶನ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯುತ್ತಿದ್ದರೆ, ಎರಡನೇ ಭಾಗ ಮಾರ್ಚ್ 10ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ.

ಗುಡಿಸಲೆದುರು ಫೋಟೋಶೂಟ್ ಮಾಡಿಸಿಕೊಳ್ಳುವವರಿಗೆ ಬಡವರ ಕುರಿತ ಭಾಷಣ ನೀರಸವಾಗೇ ಇರುತ್ತದೆ; ರಾಹುಲ್ ಗಾಂಧಿಗೆ ಮೋದಿ ಚಾಟಿ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಾ ಪ್ರಧಾನಿ ನರೇಂದ್ರ ಮೋದಿ "ತಮ್ಮ ಮನರಂಜನೆಗಾಗಿ ಬಡವರ ಗುಡಿಸಲುಗಳಲ್ಲಿ ಫೋಟೋಶೂಟ್ ಮಾಡಿಸುವ ನಾಯಕರಿಗೆ ಸಂಸತ್ತಿನಲ್ಲಿ ಬಡವರ ಕುರಿತ ಚರ್ಚೆ ಬೇಸರ ತರಿಸುವುದರಲ್ಲಿ ಆಶ್ಚರ್ಯವೇನಿಲ್ಲ" ಎಂದು ಹೇಳಿದರು. ರಾಹುಲ್ ಗಾಂಧಿಯಂತಹ ನಾಯಕರು ನಿರಂತರವಾಗಿ ಸೋಲನ್ನು ಎದುರಿಸಿದ ನಂತರ ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುತ್ತಾರೆ ಎಂದು ಮೋದಿ ಹೇಳಿದರು.

ದೇಶದ 25 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದೇವೆ; ಸಂಸತ್​ನಲ್ಲಿ ಪ್ರಧಾನಿ ಮೋದಿ ಭಾಷಣ

ಲೋಕಸಭಾ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರ ನೀಡುತ್ತಿದ್ದಾರೆ. ಈ ವೇಳೆ ಮೋದಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಂದು ಪ್ರಾರಂಭವಾಯಿತು. ಇದು ಎರಡು ಭಾಗಗಳಲ್ಲಿ ಮುಂದುವರಿಯಲಿದೆ. ಮೊದಲ ಭಾಗ ಫೆಬ್ರವರಿ 13ರಂದು ಮುಕ್ತಾಯಗೊಳ್ಳುತ್ತದೆ. ಎರಡನೇ ಭಾಗ ಮಾರ್ಚ್ 10ರಂದು ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ನಡೆಯಲಿದೆ.

ಮಹಾಕುಂಭ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಸರ್ಕಾರ ಮರೆಮಾಡುತ್ತಿದೆ; ಅಖಿಲೇಶ್ ಯಾದವ್ ಆರೋಪ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸರ್ಕಾರವು 100 ಕೋಟಿ ಭಕ್ತರಿಗೆ ವ್ಯವಸ್ಥೆಗಳನ್ನು ಮಾಡುವುದಾಗಿ ಹೇಳಿಕೊಂಡರೂ ಸಮಯಕ್ಕೆ ಸರಿಯಾಗಿ 'ಅಮೃತ ಸ್ನಾನ'ವನ್ನು ನಡೆಸಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಮಹಾಕುಂಭ ಕಾಲ್ತುಳಿತದ ಕುರಿತು ಸರ್ವಪಕ್ಷ ಸಭೆ ನಡೆಸುವಂತೆ ಅಖಿಲೇಶ್ ಯಾದವ್ ಕರೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡುತ್ತಾ ಮಹಾಕುಂಭದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸುವಂತೆ ಕೋರಿ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.

ಮಹಾರಾಷ್ಟ್ರ ಚುನಾವಣೆಗೂ ಮುನ್ನ ದಿಢೀರನೆ 70 ಲಕ್ಷ ಹೊಸ ಮತದಾರರ ಸೇರ್ಪಡೆ; ರಾಹುಲ್ ಗಾಂಧಿ ಆರೋಪ

ಸಂಸತ್ ಅಧಿವೇಶನದಲ್ಲಿ ಇಂದು ಭಾಷಣ ಮಾಡಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕ್ ಇನ್ ಇಂಡಿಯಾ ವಿಫಲವಾಗಿದ್ದರಿಂದಲೇ ಭಾರತದಲ್ಲಿ ಚೀನಾ ಪ್ರಾಬಲ್ಯ ಹೆಚ್ಚಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ. ಹಾಗೇ, ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ನಿರುದ್ಯೋಗ ಹೋಗಲಾಡಿಸಲು ನಮ್ಮ ಸರ್ಕಾರಕ್ಕೂ ಆಗಲಿಲ್ಲ, ಮೋದಿಗೂ ಸಾಧ್ಯವಾಗಲಿಲ್ಲ; ರಾಹುಲ್ ಗಾಂಧಿ

ನಾವು ಸ್ವಲ್ಪ ನಿಧಾನವಾಗಿ ಬೆಳೆಯುತ್ತಿದ್ದೇವೆ. ಆದರೆ, ನಾವು ಬೆಳೆಯುತ್ತಿದ್ದೇವೆ. ನಾವು ಎದುರಿಸುತ್ತಿರುವ ಸಾರ್ವತ್ರಿಕ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆಯನ್ನು ನಿಭಾಯಿಸಲು ನಮಗೆ ಸಾಧ್ಯವಾಗುತ್ತಿಲ್ಲ. ನಮ್ಮ ಯುಪಿಎ ಸರ್ಕಾರವಾಗಲಿ ಅಥವಾ ಇಂದಿನ ಎನ್‌ಡಿಎ ಸರ್ಕಾರವಾಗಲಿ ಈ ದೇಶದ ಯುವಕರಿಗೆ ಉದ್ಯೋಗದ ಬಗ್ಗೆ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ ಎಂಬುದನ್ನು ನಿರಾಕರಿಸಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಸಂಸತ್ ಅಧಿವೇಶನದ ಭಾಷಣದಲ್ಲಿ ಹೇಳಿದ್ದಾರೆ.

ಮೇಕ್ ಇನ್ ಇಂಡಿಯಾ ಒಳ್ಳೆ ಐಡಿಯಾ, ಆದರೆ ಮೋದಿ ಯಶಸ್ವಿಯಾಗಲಿಲ್ಲ; ರಾಹುಲ್ ಗಾಂಧಿ

Parliament Session: ನಿರುದ್ಯೋಗವನ್ನು ಹೋಗಲಾಡಿಸಲು ನಮ್ಮ ಸರ್ಕಾರಕ್ಕೂ ಸಾಧ್ಯವಾಗಲಿಲ್ಲ, ಮೋದಿ ನೇತೃತ್ವದ ಎನ್​ಡಿಎ ಸರ್ಕಾರಕ್ಕೂ ಆಗಲಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ 'ಮೇಕ್ ಇನ್ ಇಂಡಿಯಾ' ಉಪಕ್ರಮವು ಒಳ್ಳೆಯದಾಗಿತ್ತು. ಆದರೆ ಅದು ವಿಫಲವಾಯಿತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮಹಾಕುಂಭದ ಕಾಲ್ತುಳಿತದಲ್ಲಿ ಸತ್ತವರ ಶವವನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಆರೋಪ

ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನೀರಿನ ಗುಣಮಟ್ಟ ಕಲುಷಿತವಾಗಿದೆ ಎಂದು ಹೇಳಿದ್ದಾರೆ. ಸಂಸತ್ತಿನ ಅಧಿವೇಶನದಲ್ಲಿ ಮಹಾಕುಂಭವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜಯಾ ಬಚ್ಚನ್, ಮಹಾಕುಂಭದ ನೀರು ಅತ್ಯಂತ ಕಲುಷಿತವಾಗಿದೆ. ಪವಿತ್ರ ಗಂಗೆ ಕಲುಷಿತಳಾಗಿದ್ದಾಳೆ ಎಂಬುದು ಬೇಸರದ ಸಂಗತಿ ಎಂದಿದ್ದಾರೆ. ಹಾಗೇ, ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ಗಂಗಾ ನದಿಗೆ ಎಸೆಯಲಾಗಿದೆ ಎಂದು ಕೂಡ ಆರೋಪಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಗದ್ದಲ, ಸರ್ಕಾರದ ವಿರುದ್ಧ ಘೋಷಣೆ; ಮಹಾಕುಂಭದ ಕಾಲ್ತುಳಿತದ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ

ಲೋಕಸಭಾ ಸಂಸತ್ ಅಧಿವೇಶನದ 3ನೇ ದಿನವಾದ ಇಂದು ಕೂಡ ವಿಪಕ್ಷಗಳು ಕಲಾಪವನ್ನು ಅಡ್ಡಿಪಡಿಸಿವೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸದನದಲ್ಲಿ ವಿರೋಧ ಪಕ್ಷಗಳ ಸಂಸದರು ಗಲಾಟೆಯೆಬ್ಬಿಸಿದ್ದಾರೆ. ಮಹಾಕುಂಭದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯಬೇಕೆಂದು ಘೋಷಣೆ ಕೂಗಲಾಯಿತು. ಪ್ರಶ್ನೋತ್ತರ ಅವಧಿ ಮುಗಿದ ನಂತರ ಮಹಾಕುಂಭ ಕಾಲ್ತುಳಿತದ ವಿಷಯವನ್ನು ಪ್ರಸ್ತಾಪಿಸುವಂತೆ ಸ್ಪೀಕರ್ ಓಂ ಬಿರ್ಲಾ ನಿರ್ದೇಶನ ನೀಡಿದ್ದರೂ ವಿರೋಧ ಪಕ್ಷದ ನಾಯಕರು ಲೋಕಸಭೆಯಲ್ಲಿ ಘೋಷಣೆಗಳನ್ನು ಮುಂದುವರೆಸಿದರು.

ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ