AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament

Parliament

ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.

ಇನ್ನೂ ಹೆಚ್ಚು ಓದಿ

Video: 2001ರ ಭಾರತೀಯ ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್

ಭಾರತೀಯ ಸಂಸತ್ ಮೇಲೆ 2001ರಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಫ್ಜಲ್​ ಗುರು ಬಗ್ಗೆ ಕಾದಂಬರಿಗಾರ್ತಿ ಅರುಂಧತಿ ರಾಯ್ ಮೃದು ಧೋರಣೆ ತೋರಿದ್ದಾರೆ. ಆತ ನಿರಪರಾಧಿ, ಆತ ಅಪರಾಧಿ ಎಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿರಲಿಲ್ಲ. ಏಕಾಏಕಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಭಾರತೀಯ ಸಂಸತ್ತು ಸೇರಿದಂತೆ ನಡೆದ ಭಯೋತ್ಪಾದಕ ದಾಳಿಗಳೆಲ್ಲವೂ ಕಲ್ಪಿತ ಕಥೆಗಳು ಎನ್ನುವ ರೀತಿ ಅರುಂಧತಿ ರಾಯ್ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳು ವಿಳಂಬವಾಗ್ತಿರೋದೇಕೆ? ಕೇಂದ್ರ ಸರ್ಕಾರ ಕೊಟ್ಟ ಕಾರಣ ಇಲ್ಲಿದೆ

ಕೇಂದ್ರ ಸರ್ಕಾರವು ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬೃಹತ್ ಅನುದಾನ ನೀಡಿದ್ದರೂ, ರಾಜ್ಯ ಸರ್ಕಾರದ ಭೂಸ್ವಾಧೀನ ವಿಳಂಬದಿಂದಾಗಿ ಹಲವು ಯೋಜನೆಗಳು ಸ್ಥಗಿತಗೊಂಡಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ ಎಂದು ಅವರು ಹೇಳಿದ್ದಾರೆ.

ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರುದ್ಧ ಧ್ವನಿಯೆತ್ತಿದ ಸಚಿವ ಅನುರಾಗ್ ಠಾಕೂರ್

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಆರೋಪದ ನಂತರ, ಬಿಜೆಪಿ ಸಂಸದರು ತಮ್ಮ ಸ್ಥಾನಗಳಿಂದ ಎದ್ದು ನಿಂತು ಪ್ರತಿಭಟಿಸಿದರು. ಸದನದಲ್ಲಿ ಸ್ವಲ್ಪ ಸಮಯದವರೆಗೆ ಗೊಂದಲ ಉಂಟಾಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲಾ ಸಂಸದರು ಶಾಂತವಾಗಿರಲು ಮನವಿ ಮಾಡಿದರು ಮತ್ತು ಸಂಸತ್ತಿನ ಶಿಸ್ತನ್ನು ಗೌರವಿಸಬೇಕು ಎಂದು ಹೇಳಿದರು. ಚಳಿಗಾಲದ ಅಧಿವೇಶನ ಡಿಸೆಂಬರ್ 19ರಂದು ಮುಕ್ತಾಯವಾಗಲಿದೆ.

ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ

ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್​ಐಆರ್​ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ

ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಆಗಾಗ ವಿದೇಶ ಪ್ರವಾಸ ಮಾಡುವ ಮೂಲಕ ಅವರು ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ

ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.

ಮಕ್ಕಳನ್ನು ಪೋಷಕರು ಆನ್​ಲೈನ್ ಕಂಟೆಂಟ್ ರೀತಿ ಬಳಸುತ್ತಿದ್ದಾರೆ; ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಕಳವಳ

ರಾಜ್ಯಸಭಾ ಸದಸ್ಯೆಯಾಗಿರುವ ಸುಧಾ ಮೂರ್ತಿ ಪಾರ್ಲಿಮೆಂಟ್​​ನಲ್ಲಿ ಮಾಡುವ ಭಾಷಣಗಳು ಆಗಾಗ ಗಮನಸೆಳೆಯುತ್ತಲೇ ಇರುತ್ತವೆ. ಬಹಳ ಸಾಮಾಜಿಕ ಕಳಕಳಿಯ ಸಂಗತಿಗಳನ್ನು ಪ್ರಸ್ತಾಪಿಸಿ ಮಾತನಾಡುವ ಸುಧಾ ಮೂರ್ತಿ ಅವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳನ್ನು ಅವರ ಪೋಷಕರು ಆನ್​ಲೈನ್ ಕಂಟೆಂಟ್ ಮಷಿನ್​​ಗಳಂತೆ ಬಳಸುತ್ತಿದ್ದಾರೆ ಎಂದು ಸುಧಾ ಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ ಅಸ್ತು; ರಾಜ್ಯಗಳಿಗೂ ಲಾಭ ಹಂಚಿಕೆ ಎಂದ ನಿರ್ಮಲಾ ಸೀತಾರಾಮನ್

Parliament approves Central Excise Amendment Bill: ಅಬಕಾರಿ ತಿದ್ದುಪಡಿ ಮಸೂದೆಗೆ ಲೋಕಸಭೆ ಬಳಿಕ ರಾಜ್ಯಸಭೆಯೂ ಅನುಮೋದನೆ ನೀಡಿದೆ. ಇದರೊಂದಿಗೆ ಈ ಮಸೂದೆಗೆ ಸಂಸತ್​ನ ಅಂಗೀಕಾರ ಸಿಕ್ಕಂತಾಗಿದೆ. ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆಯನ್ನೂ ಇದೇ ವೇಳೆ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಸದ್ಯ ಇರುವ ಕಾಂಪೆನ್ಸೇಶನ್ ಸೆಸ್ ಅವಧಿ ಮುಗಿಯುತ್ತಾ ಬಂದಿದ್ದು ಇದರಿಂದ ಬರಲಿರುವ ಆದಾಯ ಕೊರತೆ ನೀಗಿಸಲು ಅಬಕಾರಿ ಸುಂಕ ನೆರವಿಗೆ ಬರಲಿದೆ.

ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಪಿವಿ ಮಾಡ್ಯೂಲ್; ಸೃಷ್ಟಿಯಾದ ಉದ್ಯೋಗಗಳ ಸಂಖ್ಯೆ 43,000

PLI scheme for Solar Module manufacturing creates 43,000 jobs in 9 states: ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಫೋಟೋ ವೋಲ್ಟಾಯ್ಕ್ ಮಾಡ್ಯೂಲ್​ಗಳನ್ನು ತಯಾರಿಸಲು ವಿವಿಧ ಸಂಸ್ಥೆಗಳಿಗೆ ಅನುಮತಿಸಲಾಗಿದೆ. ದೇಶಾದ್ಯಂತ 9 ರಾಜ್ಯಗಳಲ್ಲಿ ಸ್ಥಾಪನೆಯಾಗಿರುವ ಪಿವಿ ಮಾಡ್ಯೂಲ್ ಘಟಕಗಳಿಂದ 43,000 ಉದ್ಯೋಗಗಳು ಸೃಷ್ಟಿಯಾಗಿವೆ. ಗುಜರಾತ್​ನಲ್ಲೇ ಅರ್ಧದಷ್ಟು ಉದ್ಯೋಗಗಳು ಸೃಷ್ಟಿಯಾಗಿವೆ. ತಮಿಳುನಾಡಿನಲ್ಲೂ 6,800 ಉದ್ಯೋಗಗಳು ಸೃಷ್ಟಿಯಾಗಿವೆ.

ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ

ನಕಲಿ ಸುದ್ದಿ ಮತ್ತು ಸಾಮಾಜಿಕ ಮಾಧ್ಯಮದ ದುರುಪಯೋಗವು ದೇಶದ ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು AI ಡೀಪ್‌ಫೇಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಕಲಿ ಸುದ್ದಿಗಳು ಭಾರತೀಯ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

SIR ಕುರಿತು ಚರ್ಚೆ ನಡೆಸುವುದಿಲ್ಲ ಎಂದಿಲ್ಲ, ಪ್ರತಿಕ್ರಿಯಿಸಲು ಸಮಯ ಕೊಡಿ; ರಾಜ್ಯಸಭೆಯಲ್ಲಿ ಸಚಿವ ಕಿರಣ್ ರಿಜಿಜು

SIR ಪ್ರಕ್ರಿಯೆಯನ್ನು ಕೈಗೊಳ್ಳುವ ಭಾರತದ ಚುನಾವಣಾ ಆಯೋಗದ ನಿರ್ಧಾರವು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಅದರ ಬಗ್ಗೆ ನಿರಂತರವಾಗಿ ಉನ್ನತ ಚುನಾವಣಾ ಸಂಸ್ಥೆಯ ಮೇಲೆ ದಾಳಿ ಮಾಡುತ್ತಿವೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ವಿರೋಧ ಪಕ್ಷಗಳು ಈ ಪ್ರಕ್ರಿಯೆಯನ್ನು ಚರ್ಚಿಸಲು ಬಯಸುತ್ತವೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ತಿಳಿಸಿದೆ.