![Parliament](https://images.tv9kannada.com/wp-content/uploads/2024/01/parliament-23.jpg)
Parliament
ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.
ಐಪಿಸಿ, ಸಿಆರ್ಪಿಸಿ ಇನ್ನು ಗತ ಇತಿಹಾಸ; ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಅಸ್ತಿತ್ವಕ್ಕೆ
New Criminal Laws in India from today: ನೂರಕ್ಕೂ ಹೆಚ್ಚು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ಕ್ರಿಮಿನಲ್ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿಲಾಂಜಲಿ ಹೇಳಿದೆ. ಐಪಿಸಿ, ಸಿಆರ್ಪಿಸಿ, ಎವಿಡೆನ್ಸ್ ಆ್ಯಕ್ಟ್ ಬದಲು ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ. ಸಾಕ್ಷ್ಯ ಅಧಿನಿಯಮ ಇಂದಿನಿಂದ ಜಾರಿಗೆ ಬಂದಿದೆ. ತ್ವರಿತವಾಗಿ ವಿಚಾರಣೆ ಮತ್ತು ನ್ಯಾಯ ಸಿಗುವ ರೀತಿಯಲ್ಲಿ ಕಾನೂನು ರೂಪಿಸಲಾಗಿದೆ.
- Vijaya Sarathy SN
- Updated on: Jul 1, 2024
- 11:55 am
Parliament Session: ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಗುರುವಾರ) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಸಭೆಯ 264ನೇ ಅಧಿವೇಶನ ಇಂದು (ಜೂನ್ 27) ಆರಂಭವಾಗಲಿದೆ. ನೂತನ ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ರಾಷ್ಟ್ರಪತಿ ಮುರ್ಮು ಇಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
- Sushma Chakre
- Updated on: Jun 27, 2024
- 7:20 am
Droupadi Murmu: ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
Parliament Session 2024: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಭಾಷಣ ಮಾಡಿದ ನಂತರ ಎನ್ಡಿಎ ಸಂಸತ್ತಿನ ಉಭಯ ಸದನಗಳಲ್ಲಿ ನಿರ್ಣಯವನ್ನು ಮಂಡಿಸುವ ನಿರೀಕ್ಷೆಯಿದೆ. ಈ ಪ್ರಸ್ತಾವನೆಯನ್ನು ಸಂಸದರು ಚರ್ಚಿಸಿ, ರಾಷ್ಟ್ರಪತಿಗಳ ಭಾಷಣ ಮತ್ತು ಅದರಲ್ಲಿ ವಿವರಿಸಿರುವ ಸರ್ಕಾರದ ನೀತಿಗಳ ಕುರಿತು ಚರ್ಚಿಸಲು ಮತ್ತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಮಾಡಿಕೊಡುತ್ತಾರೆ.
- Sushma Chakre
- Updated on: Jun 26, 2024
- 8:45 pm
PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್ಗೆ ಪ್ರಧಾನಿ ಮೋದಿ ಮೆಚ್ಚುಗೆ
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು 1975ರ ಜೂನ್ 25ರಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿಯನ್ನು ಭಾರತೀಯ ಇತಿಹಾಸದಲ್ಲಿ "ಕಪ್ಪು ಅಧ್ಯಾಯ" ಎಂದು ಕರೆದಿದ್ದಾರೆ. ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಸಂವಿಧಾನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಅವರ ಈ ನಿಲುವಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Sushma Chakre
- Updated on: Jun 26, 2024
- 4:37 pm
Lok Sabha Speaker Election: ಇಂದು ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ; ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಸಂಸತ್
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಇದುವರೆಗೂ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಇಂದು (ಬುಧವಾರ) ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರವೇ ಬಿಜೆಪಿ, ಕಾಂಗ್ರೆಸ್, ಟಿಡಿಪಿ ತನ್ನ ಸಂಸದರಿಗೆ ಇಂದು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿವೆ.
- Sushma Chakre
- Updated on: Jun 26, 2024
- 6:29 am
ಸಂಸದರಾಗಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಹಿಂದೂ ರಾಷ್ಟ್ರ ಘೋಷಣೆ ಕೂಗಿದ ಛತ್ರಪಾಲ್ ಸಿಂಗ್ ಗಂಗ್ವಾರ್
Chhatrapal Singh Gangwar: ಬಿಜೆಪಿ ಸಂಸದ ಛತ್ರಪಾಲ್ ಸಿಂಗ್ ಗಂಗ್ವಾರ್ ಇಂದು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವೇಳೆ "ಜೈ ಹಿಂದೂ ರಾಷ್ಟ್ರ, ಜೈ ಭಾರತ್" ಎಂಬ ಘೋಷಣೆಗಳೊಂದಿಗೆ ತಮ್ಮ ಪ್ರಮಾಣವಚನವನ್ನು ಮುಕ್ತಾಯಗೊಳಿಸಿದರು. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕರಿಂದ ಆಕ್ಷೇಪ ವ್ಯಕ್ತಪಡಿಸಿದರು.
- Sushma Chakre
- Updated on: Jun 25, 2024
- 8:34 pm
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ
ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ವೆಂಕಯ್ಯ ನಾಯ್ಡು ಅವರ ಬುದ್ಧಿವಂತಿಕೆ ಮತ್ತು ದೇಶದ ಪ್ರಗತಿಯ ಉತ್ಸಾಹವನ್ನು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರೂ ರಾಷ್ಟ್ರೀಯ ಹಿತಾಸಕ್ತಿ ಕುರಿತು ಅಭಿಪ್ರಾಯ ಹಂಚಿಕೊಂಡರು. ತಮ್ಮಿಬ್ಬರ ಭೇಟಿಯ ಬಗ್ಗೆ ಮೋದಿ ಟ್ವೀಟ್ ಮಾಡಿದ್ದಾರೆ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ದಶಕಗಳ ಕಾಲ ಅವರೊಂದಿಗಿದ್ದೇನೆ ಎಂದರು.
- Sushma Chakre
- Updated on: Jun 25, 2024
- 6:28 pm
Asaduddin Owaisi: ಸದನದಲ್ಲಿ ಜೈ ಭೀಮ್, ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ; ವಿಡಿಯೋ ವೈರಲ್
ಈಗಾಗಲೇ ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಮೊದಲ ಸಂಸತ್ ಅಧಿವೇಶನ ಇಂದಿನಿಂದ ನಡೆಯುತ್ತಿದೆ. 18ನೇ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿರುವ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ಸೋಮವಾರದಿಂದ ನಡೆಯುತ್ತಿದೆ. ಸದನದ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಎಲ್ಲ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
- Sushma Chakre
- Updated on: Jun 25, 2024
- 4:21 pm
ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ಕಪ್ಪು ಚುಕ್ಕೆ ಎಂದ ಮೋದಿ; ಮಲ್ಲಿಕಾರ್ಜುನ ಖರ್ಗೆ ತಿರುಗೇಟು
NEET ಪರೀಕ್ಷೆ ಕುರಿತಾದ ಪ್ರತಿಭಟನೆಗಳು, ಮಣಿಪುರ ಹಿಂಸಾಚಾರ ಮತ್ತು ಪಶ್ಚಿಮ ಬಂಗಾಳದ ರೈಲು ಅಪಘಾತದಂತಹ ವಿಷಯಗಳ ಬಗ್ಗೆ ತಮ್ಮ ಸಂಸತ್ ಅಧಿವೇಶನ ಪೂರ್ವ ಭಾಷಣದಲ್ಲಿ ಮಾತನಾಡದ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ತರಾಟೆಗೆ ತೆಗೆದುಕೊಂಡಿದ್ದಾರೆ.
- Sushma Chakre
- Updated on: Jun 24, 2024
- 9:21 pm
ರಾಷ್ಟ್ರಪತಿ ಭವನದಲ್ಲಿ ಇಂದು ನೂತನ ಸಚಿವ ಸಂಪುಟಕ್ಕೆ ಭೋಜನ ಏರ್ಪಡಿಸಿರುವ ದ್ರೌಪದಿ ಮುರ್ಮು
18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ಹಲವು ಪ್ರಮುಖ ರಾಜಕೀಯ ವ್ಯಕ್ತಿಗಳು ಸಂಸತ್ತಿನ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಸೇರಿದ್ದಾರೆ.
- Sushma Chakre
- Updated on: Jun 24, 2024
- 6:22 pm