Parliament
ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.
ಇನ್ನೂ ಹೆಚ್ಚು ಓದಿ‘ರಾಹುಲ್ ಗಾಂಧಿಯ ಅಹಂಕಾರದಿಂದ ಇಡೀ ಅಧಿವೇಶನ ಹಾದಿ ತಪ್ಪಿತು’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದನದಲ್ಲಿ ಅರ್ಥಪೂರ್ಣ ಚರ್ಚೆಯಿಂದ ಪದೇ ಪದೇ ತಪ್ಪಿಸಿಕೊಂಡು, ವಿದೇಶಿ ನೆಲದಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುತ್ತಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಚರ್ಚೆ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ಆಗ್ರಹಿಸಿತ್ತು. ಅದಕ್ಕೆ ಸರ್ಕಾರ ಒಪ್ಪಿಕೊಂಡಿದ್ದರೂ ವಿರೋಧ ಪಕ್ಷವು ಚರ್ಚೆಯಲ್ಲಿ ಭಾಗಿಯಾಗಿಲ್ಲ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
- Sushma Chakre
- Updated on: Aug 13, 2026
- 4:26 pm
ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ: ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ, ದಲಿತರಿಗೆ ಜಾಗ ಇಲ್ಲ ಎಂದು ಖರ್ಗೆ ಕಿಡಿ
Haldwani ‘Shuddhikaran’ Row: Kharge Accuses BJP Of ‘Untouchability’: ಉತ್ತರಾಖಂಡ್ ರಾಜ್ಯದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶ್ರೀರಾಮಸೇನಾ ಸದಸ್ಯರು ಹವನದಿಂದ ಶುದ್ಧೀಕರಣ ಮಾಡಿದ್ದರು. ಈ ಘಟನೆಯ ವಿರುದ್ಧ ಖರ್ಗೆ ಕಿಡಿ ಕಾರಿದ್ದು, ರಾಜ್ಯಸಭೆಯಲ್ಲಿ ಇವತ್ತು ಆ ವಿಚಾರ ಪ್ರಸ್ತಾಪಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ. ತನ್ನ ವಿರುದ್ಧ ತೋರಿದ ಅಸ್ಪೃಶ್ಯತೆ. ಈ ದೇಶದಲ್ಲಿ ದಲಿತರಿಗೆ ಜಾಗವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Vijaya Sarathy SN
- Updated on: Aug 13, 2026
- 12:56 pm
ಮನೆಯಲ್ಲಿ ಹಣ ಪತ್ತೆ ಪ್ರಕರಣ; ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ 3 ಆರೋಪಗಳು ಸಾಬೀತು
ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಬೃಹತ್ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಆರೋಪಿಯಾಗಿದ್ದ ದೆಹಲಿ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ದೋಷಿ ಎಂದು ತನಿಖಾ ಸಮಿತಿ ವರದಿ ನೀಡಿದೆ. ಆ ಹಣದ ಮೂಲದ ಬಗ್ಗೆ ಸೂಕ್ತ ವಿವರಣೆ ನೀಡಲು ವಿಫಲರಾದ ಹಿನ್ನೆಲೆಯಲ್ಲಿ, ಅವರ ಮೇಲಿದ್ದ ಮೂರೂ ಆರೋಪಗಳು ಸಾಬೀತಾಗಿವೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಚಿಸಿದ್ದ ಮೂವರು ಸದಸ್ಯರ ತನಿಖಾ ಸಮಿತಿ ತೀರ್ಮಾನಿಸಿದೆ.
- Sushma Chakre
- Updated on: Aug 12, 2026
- 5:31 pm
‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ
ಅಮಿತ್ ಶಾ ಅವರ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳಿಗೆ ಗೃಹ ಸಚಿವರಿಂದ ಉಪದೇಶ ಅಥವಾ ಉಪನ್ಯಾಸ ಕೇಳುವ ಆಸಕ್ತಿಯಿಲ್ಲ. ಅದರ ಬದಲಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉತ್ತರಗಳು ಬೇಕಾಗಿವೆ ಎಂದು ಹೇಳಿದ್ದಾರೆ. "ಅಮಿತ್ ಶಾ ಅವರು ನಮಗೆ ಉಪನ್ಯಾಸ ನೀಡುವುದರಲ್ಲಿ ವಿಪಕ್ಷಗಳಿಗೆ ಯಾವುದೇ ಆಸಕ್ತಿಯಿಲ್ಲ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ" ಎಂದು ರಾಹುಲ್ ಗಾಂಧಿ ತಿಳಿಸಿದರು.
- Sushma Chakre
- Updated on: Aug 12, 2026
- 4:49 pm
FCRA Bill: ವಿಪಕ್ಷಗಳ ತೀವ್ರ ವಿರೋಧದ ನಡುವೆ ಧ್ವನಿ ಮತದ ಮೂಲಕ ಎಫ್ಸಿಆರ್ಎ ವಿಧೇಯಕ ಜೆಪಿಸಿಗೆ ರವಾನೆ
ಲೋಕಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಮತ್ತು ಆಕ್ಷೇಪಗಳ ನಡುವೆ ಕೇಂದ್ರ ಸರ್ಕಾರವು ಮಂಡಿಸಿದ ಪ್ರಸ್ತಾವನೆಯನ್ನು ಧ್ವನಿ ಮತದ ಮೂಲಕ ಸ್ವೀಕರಿಸಲಾಗಿದ್ದು, 'ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ವಿಧೇಯಕ, 2026' ಅನ್ನು ಜಂಟಿ ಸಂಸದೀಯ ಸಮಿತಿಗೆ (JPC) ರವಾನಿಸಲಾಗಿದೆ. ಪ್ರಸ್ತಾವಿತ ಮಸೂದೆಯು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಗ್ದಾಳಿ ನಡೆಯಿತು.
- Sushma Chakre
- Updated on: Aug 12, 2026
- 4:34 pm
‘ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಚರ್ಚೆಗೆ ಸಿದ್ಧ’; ವಿಪಕ್ಷಗಳಿಗೆ ಗೃಹ ಸಚಿವ ಅಮಿತ್ ಶಾ ತಿರುಗೇಟು
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನ ಕಲಾಪದಲ್ಲಿ 24 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸುವುದಾಗಿ ವಿರೋಧ ಪಕ್ಷಗಳಿಗೆ ಆಫರ್ ನೀಡಿದ್ದು, ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಚರ್ಚೆಯಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 3 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ತಾವು ಸದನದಲ್ಲಿಯೇ ಉಪಸ್ಥಿತರಿರುವುದಾಗಿ ಅಮಿತ್ ಶಾ ಹೇಳಿದ್ದಾರೆ. ವಿಪಕ್ಷಗಳು ಎತ್ತುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ರಾತ್ರಿಯಿಡೀ ಚರ್ಚೆ ಮುಂದುವರಿಸಲು ತಾವು ಸಿದ್ಧರಾಗಿರುವುದಾಗಿ ಅವರು ತಿಳಿಸಿದರು. ಸಂಸತ್ತಿನಲ್ಲಿ ವಿವರವಾದ ಚರ್ಚೆಯಲ್ಲಿ ಭಾಗವಹಿಸಬೇಕೋ ಅಥವಾ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಬೇಕೋ ಎಂಬುದನ್ನು ವಿರೋಧ ಪಕ್ಷಗಳೇ ಈಗ ನಿರ್ಧರಿಸಬೇಕು ಎಂದು ಅಮಿತ್ ಶಾ ಹೇಳಿದರು.
- Sushma Chakre
- Updated on: Aug 12, 2026
- 3:18 pm
‘ಜಂತರ್ ಮಂತರ್ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಸೋಮವಾರ ತಿರುಗೇಟು ನೀಡಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ, 'ಜಂತರ್ ಮಂತರ್ನಲ್ಲಿ ಯಾವುದೇ ಗುಂಡಿನ ದಾಳಿ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ಹಾಗೂ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ' ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ಗಳಿಂದ ದಾಳಿ ನಡೆಸಲು ಯಾರು ಆದೇಶ ನೀಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ ಬೆನ್ನಲ್ಲೇ ಜೆಪಿ ನಡ್ಡಾ ಈ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Aug 10, 2026
- 9:39 pm
ಚರ್ಚೆಯಿಲ್ಲದೆ ಲೋಕಸಭೆಯಲ್ಲಿ ಟ್ರಿಬ್ಯೂನಲ್ ಸುಧಾರಣಾ ಮಸೂದೆ ಅಂಗೀಕಾರ; ಏನಿದರ ವಿಶೇಷತೆ?
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷದ ಸದಸ್ಯರು ನಡೆಸಿದ ತೀವ್ರ ಗದ್ದಲದ ನಡುವೆಯೇ 'ಟ್ರಿಬ್ಯೂನಲ್ ಸುಧಾರಣಾ ಮಸೂದೆ, 2026' ಅನ್ನು ಲೋಕಸಭೆ ಇಂದು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಿತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಸೂದೆಯನ್ನು ಮಂಡಿಸಿದ ನಂತರ, ವಿಪಕ್ಷಗಳ ಘೋಷಣೆಗಳ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.
- Sushma Chakre
- Updated on: Aug 10, 2026
- 7:57 pm
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಪ್ರತಿಪಕ್ಷಗಳ ಮನವಿ ಪರಿಗಣಿಸಲು ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು 'ಅಮಿತ್ ಶಾ, ಸದನ್ ಮೇ ಆವೋ' (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು ಕೂಗುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳು, "ಗೃಹ ಸಚಿವರು ಸದನಕ್ಕೆ ಬರಬೇಕೆಂಬ ಮನವಿಯನ್ನು ಪರಿಗಣಿಸುವಂತೆ ನಾನು ನಿಮಗೆ ವಿನಂತಿಸುತ್ತೇನೆ. ಸಂಸದೀಯ ವ್ಯವಹಾರಗಳ ಸಚಿವರಾಗಿ, ನೀವು ವಿರೋಧ ಪಕ್ಷಗಳ ಭಾವನೆಗಳನ್ನು ಗೃಹ ಸಚಿವರಿಗೆ ತಲುಪಿಸಬೇಕು" ಎಂದು ಹೇಳಿದರು.
- Sushma Chakre
- Updated on: Aug 6, 2026
- 10:23 pm
ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?
Karnataka’s Arecanut Productivity Drops: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ 32ಕ್ಕೂ ಹೆಚ್ಚು ವಿಸ್ತರಿಸಿದ್ದರೂ, ಪ್ರತಿ ಹೆಕ್ಟೇರ್ ಉತ್ಪಾದಕತೆ ಸುಮಾರು ಶೇ 37ರಷ್ಟು ಕುಸಿದಿದೆ. ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಅಂಕಿಅಂಶಗಳು ರಾಜ್ಯದ ಅಡಿಕೆ ಕ್ಷೇತ್ರದ ಹೊಸ ಸವಾಲನ್ನು ಬಹಿರಂಗಪಡಿಸಿವೆ.
- Ganapathi Sharma
- Updated on: Aug 6, 2026
- 9:50 am
ಪ್ರಧಾನಿ ಮೋದಿಯಿಂದ ಮಾತ್ರ ಪರೀಕ್ಷಾ ಸುಧಾರಣೆ ಸಾಧ್ಯ; ಲೋಕಸಭೆಯಲ್ಲಿ ವಿಪಕ್ಷಗಳ ಬೆವರಿಳಿಸಿದ ತೇಜಸ್ವಿ ಸೂರ್ಯ
ಸಂಸತ್ ಅಧಿವೇಶನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ಸವಾಲುಗಳನ್ನು ಹಾಗೂ ಸರ್ಕಾರ ತಂದಿರುವ ಸುಧಾರಣೆಗಳನ್ನು ಕುರಿತು ಮಾಡಿದ ಭಾಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೊಳಗಾಗುತ್ತಿವೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಗೌರವ್ ಗೊಗೋಯ್ ಮುಂತಾದ ವಿರೋಧ ಪಕ್ಷಗಳ ಸಂಸದರ ಟೀಕೆಗೆ ಉತ್ತರಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕರ್ನಾಟಕದ ಸರ್ಕಾರದ ಕೆಪಿಎಸ್ಸಿ ಹಗರಣದ ಬಗ್ಗೆಯೂ ಸದನದಲ್ಲಿ ಕನ್ನಡದಲ್ಲೇ ವಾಗ್ದಾಳಿ ನಡೆಸಿದ್ದರು.
- Sushma Chakre
- Updated on: Aug 5, 2026
- 6:02 pm
ತೆರಿಗೆ ತಿದ್ದುಪಡಿ ಮಸೂದೆ ಮಂಡನೆ: ತೆರಿಗೆ, ವಿದೇಶಿ ಹೂಡಿಕೆ, ಯುಪಿಐ ಪಾವತಿ ಇತ್ಯಾದಿ ನಿಯಮಗಳ ಪರಿಷ್ಕರಣೆಗೆ ಪ್ರಸ್ತಾಪ
Highlights of taxation amendment bill 2026: ಕೇಂದ್ರ ಸರ್ಕಾರವು ಟ್ಯಾಕ್ಸೇಶನ್ ಅಮೆಂಡ್ಮೆಂಟ್ ಬಿಲ್ ಅನ್ನು ಲೋಕಸಭೆಯಲ್ಲಿ ಆಗಸ್ಟ್ 4ರಂದು ಮಂಡನೆ ಮಾಡಿದೆ. ಆದಾಯ ತೆರಿಗೆ ಕಾಯ್ದೆ, ಪೇಮೆಂಟ್ ಮತ್ತು ಸೆಟಲ್ಮೆಂಟ್ ಸಿಸ್ಟಮ್ಸ್ ಕಾಯ್ದೆಗೆ ತಿದ್ದುಪಡಿಗಳನ್ನು ತರಲು ಇದು ಪ್ರಸ್ತಾಪಿಸಿದೆ. ವಿದೇಶೀ ಹೂಡಿಕೆದಾರರಿಗೆ ತೆರಿಗೆ ವಿನಾಯಿತಿ, ಯುಪಿಐ ಪಾವತಿಗಳಿಗೆ ಎಂಡಿಆರ್ ನಿಗದಿ ಮಾಡುವ ಅಧಿಕಾರ ಇತ್ಯಾದಿ ನಿಯಮಗಳನ್ನು ಪರಿಷ್ಕರಿಸುವ ಪ್ರಸ್ತಾಪ ಇದೆ.
- Vijaya Sarathy SN
- Updated on: Aug 4, 2026
- 7:38 pm