AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament

Parliament

ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.

ಇನ್ನೂ ಹೆಚ್ಚು ಓದಿ

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್

ಲೋಕಸಭಾ ಅಧಿವೇಶನದ ವೇಳೆ ಫೆ. 4ರಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಕಾಂಗ್ರೆಸ್ ಮಹಿಳಾ ಸಂಸದರು ಅಡ್ಡಿಪಡಿಸಿ, ಪ್ರಧಾನಿಯ ಕುರ್ಚಿಯನ್ನು ಮುತ್ತಿಗೆ ಹಾಕಿದ್ದರು ಎಂಬ ವಿಷಯ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ವಿಡಿಯೋವನ್ನು ಕೂಡ ಕೇಂದ್ರ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪಕ್ಕೆ ಕೇಂದ್ರ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ ನೀಡಿದ್ದು, ಎಪ್ಸ್ಟೀನ್ ಜೊತೆಗಿನ ಭೇಟಿ ಐಪಿಐ ನಿಯೋಗದ ಶಿಷ್ಟಾಚಾರದ ಭಾಗವಾಗಿದ್ದವೇ ವಿನಃ ಬೇರೇನೂ ಇಲ್ಲ ಎಂದು ಹೇಳಿದ್ದಾರೆ. ಸಚಿವ ಹರ್ದೀಪ್ ಪುರಿ ಅವರ ಹೆಸರನ್ನು ಎಪ್ಸ್ಟೀನ್ ಫೈಲ್ಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ ನಂತರ ಈ ಸ್ಪಷ್ಟೀಕರಣ ಬಂದಿದೆ.

ಭಾರತ ಮಾರಾಟಕ್ಕಿಲ್ಲ; ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡುವುದಾಗಿ ಕಿರಣ್ ರಿಜಿಜು ಎಚ್ಚರಿಕೆ

ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿಯವರ ಭಾಷಣ ಮುಗಿದ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ ಎಂದು ಹೇಳಿದ್ದಾರೆ. ಇಂದು ಸದನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ ನಡೆಯಿತು.

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ವಿವಾದಿತ ಆತ್ಮಚರಿತ್ರೆಯ ಬಗ್ಗೆ ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಕ್ಕೆ ಭಾರೀ ಗದ್ದಲ ಏರ್ಪಟ್ಟಿತ್ತು. ಇನ್ನೂ ಪ್ರಕಟವಾಗದ ಪುಸ್ತಕವನ್ನು ಸದನದಲ್ಲಿ ಓದುವಂತಿಲ್ಲ ಎಂದು ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನರವಾಣೆಯವರ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ, ಯಾವುದೇ ಆನ್​ಲೈನ್​ನಲ್ಲಿ ಕೂಡ ಇದರ ಸಾಫ್ಟ್​ ಕಾಫಿಯನ್ನು ಹರಿಯಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ

ಫೆ. 4ರಂದು ಲೋಕಸಭಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು. ಆದರೆ, ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕುರ್ಚಿಯನ್ನು ಸುತ್ತುವರೆದು ಗದ್ದಲ ಎಬ್ಬಿಸಿದ್ದರಿಂದ ಪ್ರಧಾನಿ ಮೋದಿ ಸದನಕ್ಕೆ ಹಾಜರಾಗಲಿಲ್ಲ. ಹೀಗಾಗಿ, ಅವರ ಭಾಷಣ ರದ್ದಾಯಿತು. ಪ್ರಧಾನಿ ಮೋದಿಗೆ ನಾವು ಬೆದರಿಕೆ ಹಾಕಿಲ್ಲ ಎಂದು ಕಾಂಗ್ರೆಸ್ ಪುನರುಚ್ಛರಿಸುತ್ತಿರುವುದರಿಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆ ದಿನ ನಡೆದ ಘಟನೆಯ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು

ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವಿನ ಗಲಭೆಯ ಕೇಂದ್ರಬಿಂದುವಾಗಿರುವ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್ ರೂಪದಲ್ಲಿ ಎಲ್ಲೆಡೆ ಹಂಚುತ್ತಿರುವ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಪುಸ್ತಕದ ಸಾಫ್ಟ್​ ಕಾಪಿಯನ್ನು ಆನ್​ಲೈನ್​ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದ ಬಳಿಕ ದೆಹಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ.

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಭಯದಿಂದಾಗಿ ಸಂಸತ್ ಅಧಿವೇಶನದ ಕಲಾಪಕ್ಕೆ ಗೈರುಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಮಹಿಳಾ ಸಂಸತ್ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ತಮ್ಮ ಪ್ರತಿಭಟನೆಯು ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆಯನ್ನುಂಟುಮಾಡಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಮೋದಿ ಸದನಕ್ಕೆ ಗೈರುಹಾಜರಾಗಿರುವುದು ಭಯದಿಂದಲೇ ಹೊರತು ನಮ್ಮ ಒತ್ತಡದಿಂದಲ್ಲ ಎಂದು ಪ್ರತಿಪಾದಿಸಿದೆ.

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು "ಕ್ರೂರ ಸರ್ಕಾರ" ಎಂದು ಟೀಕಿಸಿದ ಮೋದಿ, "ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಒಳನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ?" ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ರವನೀತ್ ಸಿಂಗ್ ಬಿಟ್ಟು ಅವರನ್ನು ದೇಶದ್ರೋಹಿ ಎಂದು ಕರೆಯಲು ಅವರು ಸಿಖ್ ಸಮುದಾಯದವರು ಎಂಬುದೇ ಕಾರಣ. ಇದು ಸಿಖ್ಖರಿಗೆ ಮಾಡಿದ ಅವಮಾನ, ಗುರುಗಳಿಗೆ ಮಾಡಿದ ಅವಮಾನ. ಇದು ಕಾಂಗ್ರೆಸ್‌ನಲ್ಲಿ ತುಂಬಿರುವ ಸಿಖ್ಖರ ಮೇಲಿನ ದ್ವೇಷದ ಅಭಿವ್ಯಕ್ತಿಯಾಗಿತ್ತು. ರವನೀತ್ ಬಿಟ್ಟು ದೇಶಕ್ಕಾಗಿ ತಮ್ಮನ್ನು ತಾವು ತ್ಯಾಗ ಮಾಡಿದ ಕುಟುಂಬದ ಸದಸ್ಯ. ಅಂಥವರನ್ನು ದೇಶದ್ರೋಹಿ ಎಂದು ಕರೆಯುವುದನ್ನು ದೇಶ ಹೇಗೆ ಸಹಿಸಿಕೊಳ್ಳುತ್ತದೆ? ಇದು ಅತ್ಯಂತ ದುರದೃಷ್ಟಕರ ಎಂದು ಪ್ರಧಾನಿ ಮೋದಿ ಆಕ್ರೋಶ ಹೊರಹಾಕಿದ್ದಾರೆ.

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಪ್ರಧಾನಿ ಮೋದಿಯವರಿಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಇಂದು ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಭಾಷಣವನ್ನು ವಿರೋಧಿಸಿ ವಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಬಳಿಕ ಸಭಾತ್ಯಾಗ ನಡೆಸಿ, ಸಂಸತ್ ಹೊರಗೆ ಪ್ರತಿಭಟನೆ ಮುಂದುವರೆಸಿದರು.

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುತ್ತಿರುವಾಗ ರಾಜ್ಯಸಭೆ ಅಧಿವೇಶನದಿಂದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಇದು ಮೇಲ್ಮನೆಯಲ್ಲಿ ಕೋಲಾಹಲದ ವಾತಾವರಣಕ್ಕೆ ಕಾರಣವಾಯಿತು. ಲೋಕಸಭಾ ವಿಪಕ್ಷ ನಾಯಕನಿಗೆ ಮಾತನಾಡಲು ಅವಕಾಶ ನೀಡಿ ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷಗಳು ಸದನದಿಂದ ಮಾಡಿ ಹೊರನಡೆದವು.

ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ

ನಿನ್ನೆ (ಬುಧವಾರ) ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರವಾಗಿ ಭಾಷಣ ಮಾಡಬೇಕಿತ್ತು. ಆದರೆ, ಅವರು ಸದನಕ್ಕೆ ಗೈರುಹಾಜರಾಗಿದ್ದರು. ಸಂಜೆ ಪ್ರಧಾನಿ ಮೊದಿಯವರ ಭಾಷಣ ಸಮಯ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ ಕುರ್ಚಿಗೆ ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿದ್ದರು. ತಮಗೆ ಈ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಸಿಕ್ಕಿದ್ದರಿಂದಲೇ ಭದ್ರತಾ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಕಲಾಪಕ್ಕೆ ಗೈರುಹಾಜರಾಗಲು ಸಲಹೆ ನೀಡಿದ್ದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ