Parliament
ಭಾರತದ ಸಂಸತ್ತು ಕಾನೂನುಗಳನ್ನು ರೂಪಿಸುವ ಮತ್ತು ಸರ್ಕಾರದ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಎರಡು ಸದನಗಳನ್ನು ಒಳಗೊಂಡಿರುತ್ತದೆ – ಲೋಕಸಭೆ ಮತ್ತು ರಾಜ್ಯಸಭೆ. ಭಾರತದ ಸಂಸತ್ತು ದೇಶದ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.ಜನರಿಂದ ನೇರವಾಗಿ ಆಯ್ಕೆಯಾದ ಸದಸ್ಯರನ್ನು ಹೊಂದಿರುವ ಲೋಕಸಭೆಯು ಪ್ರಾಥಮಿಕ ಶಾಸಕಾಂಗ ಭವನವಾಗಿದ್ದು, ರಾಜ್ಯಸಭೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುತ್ತದೆ. ಎರಡೂ ಸದನಗಳಲ್ಲಿ ಸಂಸದರು ವಿವಿಧ ಪ್ರದೇಶಗಳು ಮತ್ತು ಸಮುದಾಯಗಳಿಂದ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಮೂಲಕ ವ್ಯಾಪಕ ಶ್ರೇಣಿಯ ಸಮಸ್ಯೆಗಳ ಕುರಿತು ಉದ್ದೇಶಪೂರ್ವಕವಾಗಿ, ಚರ್ಚೆ ಮತ್ತು ಕಾನೂನುಗಳನ್ನು ಅಂಗೀಕರಿಸುತ್ತಾರೆ.ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಪ್ರಧಾನ ಮಂತ್ರಿಗಳು ಮಂತ್ರಿ ಮಂಡಳಿಯೊಂದಿಗೆ ಜವಾಬ್ದಾರರಾಗಿರುತ್ತಾರೆ. ಸಂಸತ್ತಿನ ಅಧಿವೇಶನಗಳು, ಚರ್ಚೆಗಳು ಮತ್ತು ಶಾಸಕಾಂಗ ಚಟುವಟಿಕೆಗಳು ಭಾರತದ ಪ್ರಜಾಸತ್ತಾತ್ಮಕ ಆಡಳಿತದ ಅಗತ್ಯ ಅಂಶಗಳಾಗಿವೆ.
ಇನ್ನೂ ಹೆಚ್ಚು ಓದಿರಾಜ್ಯಸಭೆಯಲ್ಲೂ ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರ; ರಾಷ್ಟ್ರಪತಿಯ ಸಮ್ಮತಿ ಬಾಕಿ
ಲೋಕಸಭೆ ಅಂಗೀಕರಿಸಿದ ಬೆನ್ನಲ್ಲೇ ಇಂದು ರಾಜ್ಯಸಭೆಯು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಅನ್ನು ಅಂಗೀಕರಿಸಿದೆ. ಈ ವಿಧೇಯಕವು ಕಾನೂನಾಗಿ ಜಾರಿಗೆ ಬರುವ ಮುನ್ನ ಅಂತಿಮ ಅಂಕಿತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನೆಯಾಗಲಿದೆ. ಸಾರ್ವಜನಿಕರ ಹೆಚ್ಚುತ್ತಿರುವ ಒತ್ತಡದ ನಡುವೆ ಕೇಂದ್ರ ಸರ್ಕಾರವು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಿತು.
- Sushma Chakre
- Updated on: Jul 30, 2026
- 10:03 pm
ಐಐಟಿ ಪ್ರಾಧ್ಯಾಪಕರನ್ನು ಗೋಮೂತ್ರ ತಜ್ಞ ಎಂದಿದ್ದ ಪ್ರಿಯಾಂಕಾ ಗಾಂಧಿ; 215ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ತೀವ್ರ ಖಂಡನೆ
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್ ನಡುವೆ ನಡೆದ ತೀವ್ರ ವಾಗ್ದಾಳಿಯ ನಂತರ, ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು "ಗೋಮೂತ್ರ ತಜ್ಞ" ಎಂದು ಟೀಕಿಸಿದ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯನ್ನು ಹಲವು ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಕುಲಪತಿಗಳು ತೀವ್ರವಾಗಿ ಖಂಡಿಸಿದ್ದಾರೆ. ಬಹಿರಂಗ ಪತ್ರವೊಂದರಲ್ಲಿ ಈ ಹೇಳಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕುಲಪತಿಗಳು ಇದು ಶೈಕ್ಷಣಿಕ ಮತ್ತು ವೈಜ್ಞಾನಿಕ ಸಂಸ್ಥೆಗಳ ಘನತೆಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.
- Web contact
- Updated on: Jul 30, 2026
- 6:30 pm
‘ಕ್ಷಮೆಯಾಚಿಸಿ ರಾಜೀನಾಮೆ ನೀಡಿ’; ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜುಲೈ 20ರಂದು ನಡೆದ ಸಿಜೆಪಿ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡ ರೀತಿ ಮತ್ತು ನೀಟ್ (NEET-UG) ಪರೀಕ್ಷೆಯಲ್ಲಿನ ಅಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯಿತು. ಸಂಸತ್ ಅಧಿವೇಶನಕ್ಕೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಗೈರು ಹಾಜರಾಗುತ್ತಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
- Sushma Chakre
- Updated on: Jul 30, 2026
- 5:30 pm
ಯುವಕರ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಜ್ಯಸಭೆಯಲ್ಲೂ ಮಂಡನೆಯಾಯ್ತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆ
ರಾಜ್ಯಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಮಂಡನೆಯಾಗಿದೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಈ ಮಸೂದೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಪರೀಕ್ಷಾ ಮಾಫಿಯಾಗಳಿಗೆ 10 ಕೋಟಿ ರೂ.ವರೆಗೂ ದಂಡ, 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 2 ತಿಂಗಳಲ್ಲಿ ತನಿಖೆ, 3 ತಿಂಗಳಲ್ಲಿ ತೀರ್ಪು ನೀಡಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ರಚನೆಗೆ ಅವಕಾಶವಿದೆ. ಯುವಜನರ ಭವಿಷ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡಿಸುವುದು ಸರ್ಕಾರದ ಗುರಿಯಾಗಿದೆ. ಕಾಕ್ರೋಚ್ ಜನತಾ ಪಕ್ಷ (CJP) ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ಸುದೀರ್ಘ ಪ್ರತಿಭಟನೆಯಿಂದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಬಳಿಕ ಜುಲೈ 27ರಂದು ಕೇಂದ್ರ ಸರ್ಕಾರ ಈ ನೂತನ ತಿದ್ದುಪಡಿ ಮಸೂದೆಯನ್ನು ಸಂಸತ್ತಿಗೆ ತಂದಿತು.
- Nayana Rajeev
- Updated on: Jul 30, 2026
- 3:03 pm
ಇ20 ಪೆಟ್ರೋಲ್ನಿಂದ ವಾಹನದ ಎಂಜಿನ್ಗೆ ಹಾನಿ, ಮೈಲೇಜ್ ಇಳಿಯುತ್ತೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ:ನಿತಿನ್ ಗಡ್ಕರಿ ಸ್ಪಷ್ಟನೆ
E20 ಪೆಟ್ರೋಲ್ನಿಂದ ವಾಹನದ ಎಂಜಿನ್ಗೆ ಹಾನಿ ಅಥವಾ ಮೈಲೇಜ್ ಇಳಿಕೆ ಕುರಿತ ಆತಂಕಗಳಿಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ವ್ಯಾಪಕ ಅಧ್ಯಯನಗಳು, ಕ್ಷೇತ್ರ ಪ್ರಯೋಗಗಳ ನಂತರವೇ E20 ಜಾರಿಗೆ ತರಲಾಗಿದೆ. ಹಳೆಯ BS-III ವಾಹನಗಳ ಕೆಲವು ಭಾಗಗಳಿಗೆ ಮಾತ್ರ ಬದಲಾವಣೆ ಬೇಕಾಗಬಹುದು. ಮೈಲೇಜ್ ಅನೇಕ ಅಂಶಗಳನ್ನು ಅವಲಂಬಿಸಿದೆ, ಇಂಧನ ಪ್ರಕಾರವನ್ನು ಮಾತ್ರವಲ್ಲ.
- Nayana Rajeev
- Updated on: Jul 30, 2026
- 7:57 am
ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ; ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ
ರಾಷ್ಟ್ರಗೀತೆ ‘ವಂದೇ ಮಾತರಂ’ಗೆ ಅಪಮಾನ ಮಾಡುವುದನ್ನು ಅಪರಾಧವೆಂದು ಪರಿಗಣಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯು ಬುಧವಾರ ಅಂಗೀಕರಿಸಿದೆ. ಈ ವಿಧೇಯಕವನ್ನು ಈಗಾಗಲೇ ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ವಿಧೇಯಕವನ್ನು ಜುಲೈ 24ರಂದು ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಡಿಸಿದ್ದರು. ಇಂದಿನ ಚರ್ಚೆಯ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ಈ ವಿಧೇಯಕದ ಮೇಲಿನ ಚರ್ಚೆ ಮುಂದುವರಿಯುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆದರು.
- Sushma Chakre
- Updated on: Jul 29, 2026
- 7:40 pm
ಏರ್ ಇಂಡಿಯಾ ಅಪಘಾತ; ವಿಮಾನದ ಇಂಧನ ಸ್ವಿಚ್ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಸಂಸತ್ಗೆ ಸರ್ಕಾರ ಮಾಹಿತಿ
ಏರ್ ಇಂಡಿಯಾ ಸಂಸ್ಥೆಯ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದ ಇಂಧನ ನಿಯಂತ್ರಣ ಸ್ವಿಚ್ನಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದರೊಂದಿಗೆ ಈ ಘಟನೆಗೆ ಸಂಬಂಧಿಸಿದ ತನಿಖೆಯು ಈಗ ಅಂತಿಮ ಹಂತವನ್ನು ತಲುಪಿದೆ. ಏರ್ ಇಂಡಿಯಾ AI-171 ವಿಮಾನದ ಇಂಧನ ನಿಯಂತ್ರಣದ ಸ್ವಿಚ್ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಪ್ರಾಥಮಿಕ ಹಾಗೂ ತಾಂತ್ರಿಕ ತಪಾಸಣೆಗಳ ನಂತರ ವಿಮಾನದ ಇಂಧನ ನಿಯಂತ್ರಣ ವ್ಯವಸ್ಥೆ ಅಥವಾ ಸ್ವಿಚ್ನಲ್ಲಿ ಯಾವುದೇ ರೀತಿಯ ಯಾಂತ್ರಿಕ ದೋಷವಿಲ್ಲ ಎಂಬುದು ದೃಢಪಟ್ಟಿದೆ.
- Sushma Chakre
- Updated on: Jul 29, 2026
- 6:58 pm
‘ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ’; ರಾಹುಲ್ ಗಾಂಧಿ ಆರೋಪಕ್ಕೆ ಸರ್ಕಾರ ಸ್ಪಷ್ಟನೆ
ಕೇಂದ್ರ ಗೃಹ ಸಚಿವರ ಆದೇಶದಿಂದಲೇ ದೆಹಲಿಯ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಸಂಸತ್ನಲ್ಲಿ ಆರೋಪ ಮಾಡಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, "ಯಾವುದೇ ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಇಂತಹ ಆದೇಶವನ್ನು ನೀಡುವ ಅಧಿಕಾರ ಮ್ಯಾಜಿಸ್ಟ್ರೇಟ್ಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ" ಎಂದು ಹೇಳಿದ್ದಾರೆ.
- Sushma Chakre
- Updated on: Jul 29, 2026
- 6:24 pm
‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್
ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂದು ಸಂಸತ್ ಅಧಿವೇಶನದಲ್ಲಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಅವರೇ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಕುರಿತು ಸಂಸತ್ತನ್ನು ಎದುರಿಸುವ ಮತ್ತು ಮಾತನಾಡುವ ಧೈರ್ಯ ಈಗ ಗೃಹ ಸಚಿವರಿಗೆ ಇಲ್ಲ" ಎಂದು ಲೇವಡಿ ಮಾಡಿದರು. ಅಮಿತ್ ಶಾ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.
- Sushma Chakre
- Updated on: Jul 29, 2026
- 3:33 pm
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ್ರಿಯಾಂಕಾ ಗಾಂಧಿ ಆಕ್ರೋಶ
"ದೇಶದ ಯುವಜನತೆಯ ಮೇಲೆ ಪೆಲೆಟ್ ಗನ್ಗಳು ಮತ್ತು ಎಕೆ-47 ಬಂದೂಕುಗಳನ್ನು ಪ್ರಯೋಗಿಸುವ ಅಗತ್ಯವೇನಿತ್ತು? ಅವರೇನು ಭಯೋತ್ಪಾದಕರಾ? ಪೆಲೆಟ್ ಗನ್ ಬಳಸಲು ಆದೇಶ ನೀಡಿದವರು ಯಾರು? ಪ್ರಧಾನಿ ಮೋದಿಯವರೋ? ಅಥವಾ ಗೃಹ ಸಚಿವರೋ? ಅವರು ಇದಕ್ಕೆ ಉತ್ತರಿಸಲೇಬೇಕು. ಇಡೀ ದೇಶವೇ ಈ ಪ್ರಶ್ನೆಯನ್ನು ಕೇಳುತ್ತಿದೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಪ್ರಶ್ನೆಯಲ್ಲ. ಇಡೀ ದೇಶವೇ ಇದಕ್ಕೆ ಉತ್ತರವನ್ನು ಬಯಸುತ್ತಿದೆ" ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
- Sushma Chakre
- Updated on: Jul 28, 2026
- 9:03 pm
ಹಾರ ಹಾಕಿ ಸನ್ಮಾನಿಸಲು ಧರ್ಮೇಂದ್ರ ಪ್ರಧಾನ್ ಪಾಕ್ ವಿರುದ್ಧ ಯುದ್ಧ ಗೆದ್ದು ಬಂದಿದ್ದಾರಾ?; ಕಾಂಗ್ರೆಸ್ ವಾಗ್ದಾಳಿ
ಪರೀಕ್ಷಾ ಅಕ್ರಮಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸರ್ಕಾರದ ಹೊಣೆಗಾರಿಕೆಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಬೇಡಿಕೆಗೆ ತಲೆಬಾಗಿದ್ದ ಧರ್ಮೇಂದ್ರ ಪ್ರಧಾನ್ ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಸೋಮವಾರ ಸಂಸತ್ತಿನಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ (NDA) ಸಂಸದರು ಧರ್ಮೇಂದ್ರ ಪ್ರಧಾನ್ ಅವರನ್ನು ಜೈಕಾರಗಳೊಂದಿಗೆ ಸ್ವಾಗತಿಸಿದ್ದು, ಅವರ ರಾಜೀನಾಮೆಯನ್ನು ಸಾಹಸದ ಗೆಲುವಿನಂತೆ ಬಿಂಬಿಸಲು ಯತ್ನಿಸಿದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
- Sushma Chakre
- Updated on: Jul 28, 2026
- 5:52 pm
ಪ್ರಧಾನ್ ಅವರನ್ನು ತೆಗೆದುಹಾಕಿ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿರಿ; ಸಂಸತ್ನಲ್ಲಿ ಅಖಿಲೇಶ್ ಯಾದವ್ ವ್ಯಂಗ್ಯ
ಸಮಾಜವಾದಿ ಪಾರ್ಟಿ (SP) ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಸಂಸತ್ತಿನಲ್ಲಿ, ಪ್ರಧಾನ ಮಂತ್ರಿಯವರನ್ನು ಉಳಿಸಲು ಸರ್ಕಾರವು ಧರ್ಮೇಂದ್ರ ಪ್ರಧಾನ್ ಅವರನ್ನು ತೆಗೆದುಹಾಕಿದೆ ಎಂದು ಹೇಳಿದರು. "ಪ್ರಧಾನ್ ಅವರನ್ನು ತೆಗೆದುಹಾಕುವ ಮೂಲಕ ತಮ್ಮ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡೆವು ಎಂದು ಸರ್ಕಾರ ನಿಟ್ಟುಸಿರು ಬಿಟ್ಟಿರಬಹುದು" ಎಂದು ಅವರು ತಿಳಿಸಿದರು. "ಯುವಜನತೆ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಸ್ವೀಕರಿಸುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದೂ ಅವರು ಹೇಳಿದರು.
- Sushma Chakre
- Updated on: Jul 28, 2026
- 4:10 pm