AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

pawan kalyan

pawan kalyan

ಕೊನಿಡೆಲಾ ಪವನ್ ಕಲ್ಯಾಣ್, ಸೆಪ್ಟೆಂಬರ್ 2, 1971 ರಂದು ಜನನ .ಇವರು ನಟ, ರಾಜಕಾರಣಿ ಮತ್ತು ಜನ ಸೇನಾ ಪಕ್ಷದ ಸಂಸ್ಥಾಪಕರು. ಅವರು ತೆಲುಗು ಚಲನಚಿತ್ರೋದ್ಯಮದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಜನಪ್ರಿಯ ನಟ ಚಿರಂಜೀವಿ ಅವರ ಕಿರಿಯ ಸಹೋದರ ಪವನ್ ಕಲ್ಯಾಣ್ ಅವರು 1996 ರಲ್ಲಿ “ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ” ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ವರ್ಷಗಳಲ್ಲಿ, ಅವರು ಬ್ಲಾಕ್ಬಸ್ಟರ್ ಚಲನಚಿತ್ರಗಳೊಂದಿಗೆ ಅಪಾರ ಜನಪ್ರಿಯತೆಯನ್ನು ಗಳಿಸಿದರು ಮತ್ತು ತೆಲುಗು ಚಿತ್ರರಂಗದಲ್ಲಿ ಪ್ರಮುಖ ನಟರಾದರು. 2014 ರಲ್ಲಿ, ಪವನ್ ಕಲ್ಯಾಣ್ ರಾಜಕೀಯಕ್ಕೆ ಪ್ರವೇಶಿಸಿ ಜನಸೇನಾ ಪಕ್ಷವನ್ನು ಸ್ಥಾಪಿಸಿದರು, ಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪ್ರತಿಪಾದಿಸಿದರು. ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವಿ ರಾಜಕೀಯ ವ್ಯಕ್ತಿಯಾಗಿದ್ದಾರೆ. ಪವನ್ ಕಲ್ಯಾಣ್ ಅವರ ರಾಜಕೀಯ ಪ್ರವೇಶವು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರದೇಶದ ಸುಧಾರಣೆಗೆ ಕೊಡುಗೆ ನೀಡುವ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಇನ್ನೂ ಹೆಚ್ಚು ಓದಿ

‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರಿಗೆ ಇಷ್ಟ ಆಗಿಲ್ಲ.

ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮೊದಲ ದಿನ ₹34.75 ಕೋಟಿ ಭರ್ಜರಿ ಗಳಿಕೆ ಕಂಡರೂ, ಎರಡನೇ ದಿನ ಕಲೆಕ್ಷನ್ ಕುಸಿದಿರುವುದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪವನ್ ಕಲ್ಯಾಣ್ ಅಭಿನಯದ ಈ ಚಿತ್ರದ ಭವಿಷ್ಯವು ಶನಿವಾರ ಹಾಗೂ ಭಾನುವಾರದ ಕಲೆಕ್ಷನ್ ಮೇಲೆ ಅವಲಂಬಿತವಾಗಿದೆ.

‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ. ರಣವೀರ್ ಸಿಂಗ್ ಅವರ 'ಧುರಂಧರ್ 2' ಪ್ರಪಂಚದಾದ್ಯಂತ ಅಬ್ಬರಿಸುತ್ತಿದ್ದು, ತೆಲುಗು ಪ್ರದೇಶಗಳಲ್ಲೂ ಪ್ರದರ್ಶನ ಕಾಣುತ್ತಿದೆ. ಇದು 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ ಸವಾಲು ಒಡ್ಡಿದೆ. ರಾಜಕೀಯ ಬ್ಯುಸಿ ನಡುವೆಯೂ ಪವನ್ ಕಲ್ಯಾಣ್ ಈ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹಲವರು ಚಿತ್ರವನ್ನು ಹಳೆಯ ಕಮರ್ಷಿಯಲ್ ಅಂಶಗಳ ಸಂಗ್ರಹ ಎಂದರೆ, ಮತ್ತೆ ಕೆಲವರು ವಿಂಟೇಜ್ ಶೈಲಿಯನ್ನು ಮೆಚ್ಚಿದ್ದಾರೆ.

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಟಿಕೆಟ್ ದರ ಹೆಚ್ಚಳದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 'ಇದು ಶೋಷಣೆಯಲ್ಲ, ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ನೆಟ್‌ಫ್ಲಿಕ್ಸ್ ಆಯ್ಕೆಗಳಿವೆ' ಎಂದರು. 'ಉಸ್ತಾದ್ ಭಗತ್ ಸಿಂಗ್' ಪ್ರೀ-ರಿಲೀಸ್ ಇವೆಂಟ್‌ನಲ್ಲಿ ನೀಡಿದ ಈ ಹೇಳಿಕೆ ಪರ-ವಿರೋಧ ಅಭಿಪ್ರಾಯಗಳನ್ನು ಹುಟ್ಟುಹಾಕಿದೆ.

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’

‘ಧುರಂಧರ್ 2’ ಸಿನಿಮಾಗೆ ಪೈಪೋಟಿ ನೀಡಲು ತೆಲುಗಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬರುತ್ತಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿದ್ದಂತೆಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಕ್ಸ್ ಆಫೀಸ್​​ನಲ್ಲಿ ರಣವೀರ್ ಸಿಂಗ್ ಸಿನಿಮಾ ಎದುರು ಪವನ್ ಕಲ್ಯಾಣ್ ಸಿನಿಮಾ ಪೈಪೋಟಿ ನೀಡಲಿದೆ.

ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ತಮ್ಮ ತಾಯಿ ಅಂಜನಾ ದೇವಿ ಹುಟ್ಟುಹಬ್ಬದ ಅಂಗವಾಗಿ ವಿಶಾಖಪಟ್ಟಣಂನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್‌ನಲ್ಲಿ ಎರಡು ಜಿರಾಫೆಗಳನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ, ಅವರು ಪ್ರಾಣಿ ರಕ್ಷಣೆಗೆ ಒತ್ತು ನೀಡಿದರು ಮತ್ತು ಕಾರ್ಪೊರೇಟ್‌ಗಳು ವನ್ಯಜೀವಿ ಸಂರಕ್ಷಣೆಯಲ್ಲಿ ಭಾಗವಹಿಸಲು ಕರೆ ನೀಡಿದರು. ಮೃಗಾಲಯಗಳ ಮಹತ್ವವನ್ನು ತಿಳಿಸುತ್ತಾ, ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ರಕ್ಷಿಸುವಲ್ಲಿ ಅವುಗಳ ಪಾತ್ರವನ್ನು ಶ್ಲಾಘಿಸಿದರು.

ಅರ್ಧಕ್ಕೆ ನಿಂತು ಹೋಯ್ತು ಪವನ್ ಕಲ್ಯಾಣ್ ನಟನೆಯ ಸಿನಿಮಾ

‘ಓಜಿ’ ಸಿನಿಮಾನ ಎರಡು ಪಾರ್ಟ್​ಗಳಲ್ಲಿ ತರಬೇಕು ಎಂಬುದು ತಂಡದ ಆಲೋಚನೆ ಆಗಿತ್ತು. ಇದಕ್ಕೆ ಸಿದ್ಧತೆ ಕೂಡ ನಡೆದಿತ್ತು.ಈಗ ನಿರ್ಮಾಪಕ ಡಿವಿವಿ ದಾನಯ್ಯ ಎರಡನೇ ಪಾರ್ಟ್ ಮಾಡುವ ಆಲೋಚನೆ ಕೈ ಬಿಟ್ಟಿದ್ದಾರಂತೆ. ಓಜಿ ಚಿತ್ರವನ್ನು ಸುಜೀತ್ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ನಿರ್ದೇಶನ ಮಾಡಿದ್ದ ‘ಸಾಹೋ’ ಸಿನಿಮಾ ಕೂಡ ಫ್ಲಾಪ್ ಆಗಿತ್ತು.

ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ಡಿಸಿಎಂ ಪವನ್​ ಕಲ್ಯಾಣ್​ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

‘ಓಜಿ’ ಓಟಕ್ಕೆ ಹೊಡೆತ ಕೊಟ್ಟ ‘ಕಾಂತಾರ: ಚಾಪ್ಟರ್ 1’ ಅಬ್ಬರ

‘ಕಾಂತಾರ: ಚಾಪ್ಟರ್ 1’ ಮೂಲತಃ ಕನ್ನಡದ ಸಿನಿಮಾ. ಈ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ಷೆಲ್. ‘ಕಾಂತಾರ’ ತೆಲುಗು ಭಾಗದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈ ಕಾರಣದಿಂದಲೇ ಪ್ರೀಕ್ಷೆಲ್ ಬಗ್ಗೆ ನಿರೀಕ್ಷೆ ಮೂಡಿದೆ. ನಿರೀಕ್ಷೆಯನ್ನೂ ಮೀರಿ ಸಿನಿಮಾ ಗಳಿಕೆ ಮಾಡುತ್ತಿದೆ.

‘ಓಜಿ’ ಅಬ್ಬರದ ಗಳಿಕೆ; ಇತ್ತೀಚಿನ ವರ್ಷಗಳಲ್ಲೇ ಅತಿ ದೊಡ್ಡ ಗೆಲುವು ಕಂಡ ಪವನ್ ಕಲ್ಯಾಣ್

OG Movie Collection: ಓಜಿ ಸಿನಿಮಾ ಮೂಲಕ ಪವನ್ ಕಲ್ಯಾಣ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಸೆಪ್ಟೆಂಬರ್ 25ರಂದು ರಿಲೀಸ್ ಆದ ಈ ಸಿನಿಮಾ ಮೂರೇ ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸರಿ ಹೊಸ ದಾಖಲೆ ಬರೆದಿದೆ. ಇತ್ತೀಚಿನ ವರ್ಷಗಳಲ್ಲಿ ಪವನ್ ಕಲ್ಯಾಣ್ ಕಂಡ ಅತಿದೊಡ್ಡ ಗೆಲುವು ಇದಾಗಿದೆ.

ಶುಕ್ರವಾರವೂ ಭರ್ಜರಿಯಾಗಿ ಗಳಿಕೆ ಮಾಡಿದ ಪವನ್ ಕಲ್ಯಾಣ್ ‘ಓಜಿ’

OG Movie Collection: ಸದ್ಯ ಚಿತ್ರದ ಒಟ್ಟಾರೆ ಕಲೆಕ್ಷನ್ 104 ಕೋಟಿ ರೂಪಾಯಿ ಆಗಿದೆ. ಸಿನಿಮಾ ಒಂದು ಎರಡೇ ದಿನಕ್ಕೆ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ ಎಂದರೆ ಚಿತ್ರ ಗೆಲುವು ಕಂಡಿದೇ ಎಂದೇ ಅರ್ಥ. ಇದು ಪವನ್ ಕಲ್ಯಾಣ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ. ಈ ಗೆಲುವನ್ನು ಅವರು ಖುಷಿಯಿಂದ ಆಚರಿಸಿದ್ದಾರೆ. ಪವನ್ ಕಲ್ಯಾಣ್ ಕೂಡ ಖುಷಿ ಪಟ್ಟಿದ್ದಾರೆ.