pawan kalyan
ಕೊನಿಡೆಲಾ ಪವನ್ ಕಲ್ಯಾಣ್, ಸೆಪ್ಟೆಂಬರ್ 2, 1971 ರಂದು ಜನನ .ಇವರು ನಟ, ರಾಜಕಾರಣಿ ಮತ್ತು ಜನ ಸೇನಾ ಪಕ್ಷದ ಸಂಸ್ಥಾಪಕರು. ಅವರು ತೆಲುಗು ಚಲನಚಿತ್ರೋದ್ಯಮದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಜನಪ್ರಿಯ ನಟ ಚಿರಂಜೀವಿ ಅವರ ಕಿರಿಯ ಸಹೋದರ ಪವನ್ ಕಲ್ಯಾಣ್ ಅವರು 1996 ರಲ್ಲಿ “ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ” ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ವರ್ಷಗಳಲ್ಲಿ, ಅವರು ಬ್ಲಾಕ್ಬಸ್ಟರ್ ಚಲನಚಿತ್ರಗಳೊಂದಿಗೆ ಅಪಾರ ಜನಪ್ರಿಯತೆಯನ್ನು ಗಳಿಸಿದರು ಮತ್ತು ತೆಲುಗು ಚಿತ್ರರಂಗದಲ್ಲಿ ಪ್ರಮುಖ ನಟರಾದರು. 2014 ರಲ್ಲಿ, ಪವನ್ ಕಲ್ಯಾಣ್ ರಾಜಕೀಯಕ್ಕೆ ಪ್ರವೇಶಿಸಿ ಜನಸೇನಾ ಪಕ್ಷವನ್ನು ಸ್ಥಾಪಿಸಿದರು, ಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪ್ರತಿಪಾದಿಸಿದರು. ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವಿ ರಾಜಕೀಯ ವ್ಯಕ್ತಿಯಾಗಿದ್ದಾರೆ. ಪವನ್ ಕಲ್ಯಾಣ್ ಅವರ ರಾಜಕೀಯ ಪ್ರವೇಶವು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರದೇಶದ ಸುಧಾರಣೆಗೆ ಕೊಡುಗೆ ನೀಡುವ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ
ವಿಜಯ್ ಅವರ ಯಶಸ್ಸನ್ನು ತಮಗೆ ಹೋಲಿಸುತ್ತಿರುವ ಜನರಿಗೆ ಪವನ್ ಕಲ್ಯಾಣ್ ತಿರುಗೇಟು ನೀಡಿದ್ದಾರೆ. ‘ಪಕ್ಕದ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಕಟ್ಟಿ ಸಿಎಂ ಆದರು, ನೀವೂ ಆಂಧ್ರದಲ್ಲಿ ಹಾಗೆಯೇ ಮಾಡಬೇಕಿತ್ತು ಎಂದು ಹಲವರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ರಾಜಕೀಯ ಪರಿಸ್ಥಿತಿಗಳು ತೀರಾ ಭಿನ್ನವಾಗಿವೆ. ಈ ಹೋಲಿಕೆ ಸರಿಯಲ್ಲ’ ಎಂದಿದ್ದಾರೆ.
- Rajesh Duggumane
- Updated on: May 27, 2026
- 7:09 am
ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆರೋಗ್ಯ ಸಮಸ್ಯೆಯಿಂದಾಗಿ ಸದ್ಯ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಹಳೆಯ ಗಾಯಗಳು ಮತ್ತು ಇತ್ತೀಚಿನ ಮೂಗಿನ ಶಸ್ತ್ರಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೂ ಈ ಬಗ್ಗೆ ಮಾತನಾಡಿದ್ದಾರೆ. ಡಿಸಿಎಂ ಜವಾಬ್ದಾರಿ, ಆರೋಗ್ಯದ ಕಡೆ ಗಮನಹರಿಸುತ್ತಿದ್ದು, ದೈಹಿಕ ಸಾಮರ್ಥ್ಯ ಮರಳಿ ಪಡೆಯುವವರೆಗೂ ಚಿತ್ರೀಕರಣಕ್ಕೆ ಮರಳದಿರಲು ನಿರ್ಧರಿಸಿದ್ದಾರೆ.
- Rajesh Duggumane
- Updated on: May 15, 2026
- 9:29 am
ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ
ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಮೆಗಾ ಸ್ಟಾರ್ ಚಿರಂಜೀವಿ, ರಜನಿಕಾಂತ್, ಪವನ್ ಕಲ್ಯಾಣ್, ಖುಷ್ಬೂ ಸುಂದರ್ ಸೇರಿದಂತೆ ಹಲವರು ಆರ್.ಬಿ. ಚೌಧರಿ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.
- Madan Kumar
- Updated on: May 6, 2026
- 7:20 am
ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ
ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಪವನ್ ಕಲ್ಯಾಣ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಅಭಿಮಾನಿಗಳಿಗೆ ಆತಂಕ ಮೂಡಿದೆ. ಅವರ ಆರೋಗ್ಯದ ಪರಿಸ್ಥಿತಿ ಈಗ ಹೇಗಿದೆ ಎಂಬುದರ ಬಗ್ಗೆ ಸಹೋದರ ಚಿರಂಜೀವಿ ಅವರು ಅಪ್ಡೇಟ್ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Apr 20, 2026
- 6:10 pm
‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು
ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Apr 10, 2026
- 10:25 pm
‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ
ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರಿಗೆ ಇಷ್ಟ ಆಗಿಲ್ಲ.
- Madan Kumar
- Updated on: Mar 22, 2026
- 1:14 pm
ತೀವ್ರ ಗತಿಯಲ್ಲಿ ಕುಸಿದ ‘ಉಸ್ತಾದ್ ಭಗತ್ ಸಿಂಗ್’ ಕಲೆಕ್ಷನ್; ಒಂದಕಿಂಗೆ ಬಂದ ಗಳಿಕೆ
‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮೊದಲ ದಿನ ₹34.75 ಕೋಟಿ ಭರ್ಜರಿ ಗಳಿಕೆ ಕಂಡರೂ, ಎರಡನೇ ದಿನ ಕಲೆಕ್ಷನ್ ಕುಸಿದಿರುವುದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪವನ್ ಕಲ್ಯಾಣ್ ಅಭಿನಯದ ಈ ಚಿತ್ರದ ಭವಿಷ್ಯವು ಶನಿವಾರ ಹಾಗೂ ಭಾನುವಾರದ ಕಲೆಕ್ಷನ್ ಮೇಲೆ ಅವಲಂಬಿತವಾಗಿದೆ.
- Rajesh Duggumane
- Updated on: Mar 21, 2026
- 9:11 am
‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ. ರಣವೀರ್ ಸಿಂಗ್ ಅವರ 'ಧುರಂಧರ್ 2' ಪ್ರಪಂಚದಾದ್ಯಂತ ಅಬ್ಬರಿಸುತ್ತಿದ್ದು, ತೆಲುಗು ಪ್ರದೇಶಗಳಲ್ಲೂ ಪ್ರದರ್ಶನ ಕಾಣುತ್ತಿದೆ. ಇದು 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ ಸವಾಲು ಒಡ್ಡಿದೆ. ರಾಜಕೀಯ ಬ್ಯುಸಿ ನಡುವೆಯೂ ಪವನ್ ಕಲ್ಯಾಣ್ ಈ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.
- Rajesh Duggumane
- Updated on: Mar 20, 2026
- 9:07 am
‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹಲವರು ಚಿತ್ರವನ್ನು ಹಳೆಯ ಕಮರ್ಷಿಯಲ್ ಅಂಶಗಳ ಸಂಗ್ರಹ ಎಂದರೆ, ಮತ್ತೆ ಕೆಲವರು ವಿಂಟೇಜ್ ಶೈಲಿಯನ್ನು ಮೆಚ್ಚಿದ್ದಾರೆ.
- Rajesh Duggumane
- Updated on: Mar 19, 2026
- 11:26 am
‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್
ಪವನ್ ಕಲ್ಯಾಣ್ ಟಿಕೆಟ್ ದರ ಹೆಚ್ಚಳದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 'ಇದು ಶೋಷಣೆಯಲ್ಲ, ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ನೆಟ್ಫ್ಲಿಕ್ಸ್ ಆಯ್ಕೆಗಳಿವೆ' ಎಂದರು. 'ಉಸ್ತಾದ್ ಭಗತ್ ಸಿಂಗ್' ಪ್ರೀ-ರಿಲೀಸ್ ಇವೆಂಟ್ನಲ್ಲಿ ನೀಡಿದ ಈ ಹೇಳಿಕೆ ಪರ-ವಿರೋಧ ಅಭಿಪ್ರಾಯಗಳನ್ನು ಹುಟ್ಟುಹಾಕಿದೆ.
- Rajesh Duggumane
- Updated on: Mar 16, 2026
- 10:06 am
‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’
‘ಧುರಂಧರ್ 2’ ಸಿನಿಮಾಗೆ ಪೈಪೋಟಿ ನೀಡಲು ತೆಲುಗಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬರುತ್ತಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿದ್ದಂತೆಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಕ್ಸ್ ಆಫೀಸ್ನಲ್ಲಿ ರಣವೀರ್ ಸಿಂಗ್ ಸಿನಿಮಾ ಎದುರು ಪವನ್ ಕಲ್ಯಾಣ್ ಸಿನಿಮಾ ಪೈಪೋಟಿ ನೀಡಲಿದೆ.
- Madan Kumar
- Updated on: Mar 5, 2026
- 3:34 pm
ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್
ಪವನ್ ಕಲ್ಯಾಣ್ ತಮ್ಮ ತಾಯಿ ಅಂಜನಾ ದೇವಿ ಹುಟ್ಟುಹಬ್ಬದ ಅಂಗವಾಗಿ ವಿಶಾಖಪಟ್ಟಣಂನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್ನಲ್ಲಿ ಎರಡು ಜಿರಾಫೆಗಳನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ, ಅವರು ಪ್ರಾಣಿ ರಕ್ಷಣೆಗೆ ಒತ್ತು ನೀಡಿದರು ಮತ್ತು ಕಾರ್ಪೊರೇಟ್ಗಳು ವನ್ಯಜೀವಿ ಸಂರಕ್ಷಣೆಯಲ್ಲಿ ಭಾಗವಹಿಸಲು ಕರೆ ನೀಡಿದರು. ಮೃಗಾಲಯಗಳ ಮಹತ್ವವನ್ನು ತಿಳಿಸುತ್ತಾ, ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ರಕ್ಷಿಸುವಲ್ಲಿ ಅವುಗಳ ಪಾತ್ರವನ್ನು ಶ್ಲಾಘಿಸಿದರು.
- Shreelaxmi H
- Updated on: Jan 30, 2026
- 7:51 am