pawan kalyan

pawan kalyan

ಕೊನಿಡೆಲಾ ಪವನ್ ಕಲ್ಯಾಣ್, ಸೆಪ್ಟೆಂಬರ್ 2, 1971 ರಂದು ಜನನ .ಇವರು ನಟ, ರಾಜಕಾರಣಿ ಮತ್ತು ಜನ ಸೇನಾ ಪಕ್ಷದ ಸಂಸ್ಥಾಪಕರು. ಅವರು ತೆಲುಗು ಚಲನಚಿತ್ರೋದ್ಯಮದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಜನಪ್ರಿಯ ನಟ ಚಿರಂಜೀವಿ ಅವರ ಕಿರಿಯ ಸಹೋದರ ಪವನ್ ಕಲ್ಯಾಣ್ ಅವರು 1996 ರಲ್ಲಿ “ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ” ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ವರ್ಷಗಳಲ್ಲಿ, ಅವರು ಬ್ಲಾಕ್ಬಸ್ಟರ್ ಚಲನಚಿತ್ರಗಳೊಂದಿಗೆ ಅಪಾರ ಜನಪ್ರಿಯತೆಯನ್ನು ಗಳಿಸಿದರು ಮತ್ತು ತೆಲುಗು ಚಿತ್ರರಂಗದಲ್ಲಿ ಪ್ರಮುಖ ನಟರಾದರು. 2014 ರಲ್ಲಿ, ಪವನ್ ಕಲ್ಯಾಣ್ ರಾಜಕೀಯಕ್ಕೆ ಪ್ರವೇಶಿಸಿ ಜನಸೇನಾ ಪಕ್ಷವನ್ನು ಸ್ಥಾಪಿಸಿದರು, ಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪ್ರತಿಪಾದಿಸಿದರು. ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವಿ ರಾಜಕೀಯ ವ್ಯಕ್ತಿಯಾಗಿದ್ದಾರೆ. ಪವನ್ ಕಲ್ಯಾಣ್ ಅವರ ರಾಜಕೀಯ ಪ್ರವೇಶವು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರದೇಶದ ಸುಧಾರಣೆಗೆ ಕೊಡುಗೆ ನೀಡುವ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಇನ್ನೂ ಹೆಚ್ಚು ಓದಿ

ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವೈಎಸ್​ಆರ್​ ಕಾಂಗ್ರೆಸ್​ ತಮ್ಮ ಭೂಮಿಯನ್ನು ಕಬಳಿಸಿದೆ ಎಂದು ಆರೋಪಿಸಿರುವ ಮಹಿಳೆ ಎತ್ತರದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಪೊಲೀಸರು ಮಧ್ಯಪ್ರವೇಶಿಸಿ ಮಹಿಳೆಯನ್ನು ತಡೆದಿದ್ದಾರೆ.

ಪವನ್​ ಕಲ್ಯಾಣ್​ ಭೇಟಿಗೆ ಬರ್ತಿದ್ದಾರೆ ‘RRR’, ‘ಪುಷ್ಪ 2’, ‘ಕಲ್ಕಿ 2898 ಎಡಿ’ ನಿರ್ಮಾಪಕರು

ಪವನ್​ ಕಲ್ಯಾಣ್​ ಅವರು ಈಗ ಉಪ ಮುಖ್ಯಮಂತ್ರಿ ಆಗಿರುವುದರಿಂದ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ತೆಲುಗು ಚಿತ್ರರಂಗದ ಅನೇಕ ಘಟಾನುಘಟಿ ನಿರ್ಮಾಪಕರು ಒಟ್ಟಾಗಿ ಬಂದು ವಿಜಯವಾಡದಲ್ಲಿ ಪವನ್​ ಕಲ್ಯಾಣ್​ ಅವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯ ಹಿಂದೆ ಒಂದು ಪ್ರಮುಖ ಕಾರಣ ಇದೆ. ಮಾತುಕತೆ ನಡೆದ ನಂತರ ಹೆಚ್ಚಿನ ಮಾಹಿತಿ ಬಹಿರಂಗ ಆಗಲಿದೆ.

Pawan Kalyan: ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಅಧಿಕಾರ ಸ್ವೀಕಾರ

ವೇದಘೋಷಗಳೊಂದಿಗೆ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ-ರಾಜಕಾರಣಿ ಪವನ್ ಕಲ್ಯಾಣ್ ಇಂದು ವಿಜಯವಾಡದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್​ ಕಲ್ಯಾಣ್​ ಜತೆ ನರೇಂದ್ರ ಮೋದಿ ಗೆಲುವಿನ ನಗು

ಪಿಎಂ ನರೇಂದ್ರ ಮೋದಿ ಇಂದು (ಜೂನ್​ 12) ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇದಿಕೆಯಲ್ಲಿ ಟಾಲಿವುಡ್​ ಸ್ಟಾರ್‌ ನಟರಾದ ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಜೊತೆ ಆತ್ಮೀಯವಾಗಿ ಗೆಲುವಿನ ನಗೆ ಬೀರಿದರು. ಮೈತ್ರಿಯ ಈ ಫೋಟೋ ವೈರಲ್​ ಆಗಿದೆ.

ಚುನಾವಣೆ ಗೆದ್ದ ಪವನ್​ ಕಲ್ಯಾಣ್​ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..

ಪವನ್​ ಕಲ್ಯಾಣ್​ ಅವರು ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಹೈದರಾಬಾದ್​ಗೆ ಮರಳಿದ್ದಾರೆ. ಬಳಿಕ ಅವರು ಸಹೋದರ ಮೆಗಾ ಸ್ಟಾರ್​ ಚಿರಂಜೀವಿ ನಿವಾಸಕ್ಕೆ ಬಂದಿದ್ದಾರೆ. ಅಲ್ಲಿ ಪವನ್​ ಕಲ್ಯಾಣ್​ಗೆ ವೈಭವದ ಸ್ವಾಗತ ನೀಡಲಾಗಿದೆ. ಹೂವಿನ ಮಳೆ ಸುರಿಸಲಾಗಿದೆ. ತಮ್ಮನಿಗೆ ಚಿರಂಜೀವಿ ಹಾರ ಹಾಕಿದ್ದಾರೆ. ಅಣ್ಣನ ಕಾಲಿಗೆ ಬಿದ್ದು ಪವನ್​ ಕಲ್ಯಾಣ್​ ಅವರು ಆಶೀರ್ವಾದ ಪಡೆದ ವಿಡಿಯೋ ಇಲ್ಲಿದೆ..

‘ಯಾವನಾದ್ರು ಇನ್ಮೇಲೆ ಬುದ್ಧಿವಂತ ಅಂದ್ರೆ ಚೆನ್ನಾಗಿರಲ್ಲ’: ಚುನಾವಣಾ ರಿಸಲ್ಟ್ ಬಳಿಕ ಉಪೇಂದ್ರ ಖಡಕ್​ ಮಾತು

ಆಂಧ್ರ ಪ್ರದೇಶದಲ್ಲಿ ಪವನ್​ ಕಲ್ಯಾಣ್​ ಅವರು ಚುನಾವಣೆ ಗೆದ್ದಿದ್ದಾರೆ. ಇದನ್ನು ಮುಂದಿಟ್ಟುಕೊಂಡು ನೆಟ್ಟಿಗರು ಉಪೇಂದ್ರ ಅವರ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ‘ಕನ್ನಡಿಗರು ಉಪೇಂದ್ರರನ್ನು ಗೆಲ್ಲಿಸೋದು ಯಾವಾಗ?’ ಅಂತ ಟ್ರೋಲ್​ ಪುಟದಲ್ಲಿ ಪ್ರಶ್ನೆ ಮಾಡಲಾಗಿದೆ. ಇದನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಉಪೇಂದ್ರ ಅವರು ಈ ರೀತಿ ಹೇಳಿದ್ದಾರೆ.

ಹೆಚ್ಚಿತು ಪವನ್ ಕಲ್ಯಾಣ್ ಸಾಲ; ಒಟ್ಟಾರೆ ಆಸ್ತಿ ಎಷ್ಟು? ಅಫಿಡವಿಟ್​ನಲ್ಲಿ ಮಾಹಿತಿ ನೀಡಿದ ನಟ

Pawan Kalyan Net Worth: ಕಾಕಿನಾಡು ಜಿಲ್ಲೆಯ ಪೀಟಾಪುರಮ್ ವಿಧಾನಸಭಾ ಕ್ಷೇತ್ರದಿಂದ ಪವನ್ ಕಲ್ಯಾಣ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಚರಾಸ್ಥಿ ಹಾಗೂ ಸ್ಥಿರಾಸ್ತಿ ಮೊತ್ತ 136 ಕೋಟಿ ರೂಪಾಯಿ ಎಂದು ಮಾಹಿತಿ ನೀಡಿದ್ದಾರೆ. 2019ರಲ್ಲಿ ಅವರ ಆಸ್ತಿ 52.85 ಕೋಟಿ ರೂಪಾಯಿ ಇತ್ತು. ಈಗ ಅದು ದ್ವಿಗುಣವಾಗಿದೆ. ಅದೇ ರೀತಿ ಸಾಲದಲ್ಲೂ ಏರಿಕೆ ಆಗಿದೆ.

ಲೋಕಸಭಾ ಚುನಾವಣೆ: ಪವನ್​ ಕಲ್ಯಾಣ್​ ಎದುರು ರಾಮ್​ ಗೋಪಾಲ್​ ವರ್ಮಾ ಸ್ಪರ್ಧೆ

ಅನೇಕ ಸೆಲೆಬ್ರಿಟಿಗಳು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ನಟ ಪವನ್​ ಕಲ್ಯಾಣ್​ ಎದುರು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ಸುಮ್ಮನಿದ್ದ ಆರ್​ಜಿವಿ ಅವರು ಈಗ ಏಕಾಏಕಿ ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅವರ ಈ ಘೋಷಣೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ.

ರಾಮ್ ಗೋಪಾಲ್ ವರ್ಮಾ ಜೊತೆ ರಶ್ಮಿಕಾ ಮಂದಣ್ಣ? ಗಮನವಿಟ್ಟು ನೋಡಿ

Rashmika Mandanna: ಇದೇನಿದು ರಾಮ್ ಗೋಪಾಲ್ ವರ್ಮಾ ಜೊತೆಗೆ ರಶ್ಮಿಕಾ ಮಂದಣ್ಣ! ಇದು ಹೇಗೆ ಸಾಧ್ಯ? ಸ್ವಲ್ಪ ಗಮನವಿಟ್ಟು ನೋಡಿ...

ತಮ್ಮದೇ ಸಿನಿಮಾ ಹೆಸರು ಮರೆತ ಪವನ್​ ಕಲ್ಯಾಣ್​; ವೇದಿಕೆ ಮೇಲೆ ತಡಬಡಾಯಿಸಿದ ಹೀರೋ

ಮಹಾ ಮ್ಯಾಕ್ಸ್ ಎಂಟರ್​ಟೇನ್​ಮೆಂಟ್ ಚಾನೆಲ್​ನ ಲಾಂಚ್ ಮಾಡಲು ಬಂದಿದ್ದರು ಪವನ್ ಕಲ್ಯಾಣ್. ಈ ವೇಳೆ ಅವರು ತಮ್ಮ ಸಿನಿಮಾ ಹೆಸರು ಹೇಳಲು ಹೋದರು. ಆದರೆ, ಅದು ನೆನಪಿಗೆ ಬರಲೇ ಇಲ್ಲ. ಅಷ್ಟಕ್ಕೂ ಅವರು ಹೇಳಲು ಹೊರಟಿದ್ದ ಸಿನಿಮಾದ ಹೆಸರು ‘ಉಸ್ತಾದ್ ಭಗತ್ ಸಿಂಗ್’.

ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು