Sign In

By signing in or creating an account, you agree with Associated Broadcasting Company's Terms & Conditions and Privacy Policy.

pawan kalyan

pawan kalyan

ಕೊನಿಡೆಲಾ ಪವನ್ ಕಲ್ಯಾಣ್, ಸೆಪ್ಟೆಂಬರ್ 2, 1971 ರಂದು ಜನನ .ಇವರು ನಟ, ರಾಜಕಾರಣಿ ಮತ್ತು ಜನ ಸೇನಾ ಪಕ್ಷದ ಸಂಸ್ಥಾಪಕರು. ಅವರು ತೆಲುಗು ಚಲನಚಿತ್ರೋದ್ಯಮದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಜನಪ್ರಿಯ ನಟ ಚಿರಂಜೀವಿ ಅವರ ಕಿರಿಯ ಸಹೋದರ ಪವನ್ ಕಲ್ಯಾಣ್ ಅವರು 1996 ರಲ್ಲಿ “ಅಕ್ಕಡ ಅಮ್ಮಾಯಿ ಇಕ್ಕಡ ಅಬ್ಬಾಯಿ” ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ವರ್ಷಗಳಲ್ಲಿ, ಅವರು ಬ್ಲಾಕ್ಬಸ್ಟರ್ ಚಲನಚಿತ್ರಗಳೊಂದಿಗೆ ಅಪಾರ ಜನಪ್ರಿಯತೆಯನ್ನು ಗಳಿಸಿದರು ಮತ್ತು ತೆಲುಗು ಚಿತ್ರರಂಗದಲ್ಲಿ ಪ್ರಮುಖ ನಟರಾದರು. 2014 ರಲ್ಲಿ, ಪವನ್ ಕಲ್ಯಾಣ್ ರಾಜಕೀಯಕ್ಕೆ ಪ್ರವೇಶಿಸಿ ಜನಸೇನಾ ಪಕ್ಷವನ್ನು ಸ್ಥಾಪಿಸಿದರು, ಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪ್ರತಿಪಾದಿಸಿದರು. ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವಿ ರಾಜಕೀಯ ವ್ಯಕ್ತಿಯಾಗಿದ್ದಾರೆ. ಪವನ್ ಕಲ್ಯಾಣ್ ಅವರ ರಾಜಕೀಯ ಪ್ರವೇಶವು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರದೇಶದ ಸುಧಾರಣೆಗೆ ಕೊಡುಗೆ ನೀಡುವ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಇನ್ನೂ ಹೆಚ್ಚು ಓದಿ

ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್; ಇನ್ನಾದರೂ ಬದಲಾಗ್ತಾರಾ?

ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಚಿತ್ರ ಸೆಟ್ಟೇರಿ ಐದು ವರ್ಷಗಳಾಗಿವೆ. ಆದಾಗ್ಯೂ ಸಿನಿಮಾ ರಿಲೀಸ್ ಆಗುತ್ತಿಲ್ಲ ಎಂಬುದು ಅಭಿಮಾನಿಗಳ ಕೊರಗು. ರಾಜಕೀಯ ಚಟುವಟಿಕೆಗಳು, ಆರೋಗ್ಯ ಸಮಸ್ಯೆಗಳು ಮತ್ತು VFX ಕೆಲಸಗಳ ಅಪೂರ್ಣತೆಯಿಂದಾಗಿ ಚಿತ್ರದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ .

ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಕಲ್ಯಾಣ್ ಪತ್ನಿ

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಗೆ ತೆರಳಿ ಮುಡಿಕೊಟ್ಟಿದ್ದಾರೆ. ಇಂದು (ಏಪ್ರಿಲ್ 14) ಅವರು ದೇವಸ್ಥಾನ ದರ್ಶನ ಮಾಡಿ, ತೆಂಗಿನ ಕಾಯಿ ಒಡೆದಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ.  

Anna Lezhneva: ಅಗ್ನಿ ಅವಘಡದಿಂದ ಮಗ ಪಾರಾಗಿದ್ದಕ್ಕೆ ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

Pawan Kalyan Wife: ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಇತ್ತೀಚೆಗೆ ಅವರ ಪುತ್ರ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ. ಈಗ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ

ನಟ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಸಿಲುಕಿದಾಗ ಎಲ್ಲರಿಗೂ ಆತಂಕ ಆಗಿತ್ತು. ಆ ಕಷ್ಟದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಈಗ ಧನ್ಯವಾದ ಅರ್ಪಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಮಾಹಿತಿ ನೀಡಿದ ಚಿರಂಜೀವಿ

ಸುಟ್ಟಗಾಯಗಳಿಂದ ಬಳಲುತ್ತಿರುವ ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಚಿರಂಜೀವಿ ಅವರು ಅಪ್​ಡೇಟ್ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಕ್​ ಶಂಕರ್​ನನ್ನು ಡಿಸ್ಚಾರ್ಜ ಮಾಡಲಾಗಿದೆ. ಪವನ್ ಕಲ್ಯಾಣ್ ಪರವಾಗಿ ಅಭಿಮಾನಿಗಳಿಗೆ ಚಿರಂಜೀವಿ ಅವರು ಧನ್ಯವಾದ ತಿಳಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ..

‘ಅಂದುಕೊಂಡಿದ್ದಕ್ಕಿಂತ ಹೆಚ್ಚೇ ಆಗಿದೆ’; ಮಗನ ಆರೋಗ್ಯದ ಅಪ್​ಡೇಟ್ ಕೊಟ್ಟ ಪವನ್ ಕಲ್ಯಾಣ್

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೈ ಮತ್ತು ಕಾಲುಗಳಿಗೆ ತೀವ್ರ ಸುಟ್ಟಗಾಯಗಳಾಗಿವೆ. ಪವನ್ ಕಲ್ಯಾಣ್ ಅವರು ಮಾರ್ಕ್ ಶಂಕರ್‌ರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿ, ಅವರ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದೂ ಹೇಳಿದ್ದಾರೆ.

ಪವನ್​ ಕಲ್ಯಾಣ್​ ಚಿತ್ರವನ್ನು ತನ್ನ ರಕ್ತದಲ್ಲಿ ಬಿಡಿಸಿದ ಕಟ್ಟಾಭಿಮಾನಿ

Pawan Kalyan: ನಟ ಪವನ್ ಕಲ್ಯಾಣ್ ಈಗ ರಾಜಕಾರಣಿ. ಆಂಧ್ರದ ಉಪಮುಖ್ಯಮಂತ್ರಿ ಆದ ಬಳಿಕ ಸಿನಿಮಾಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೂ ಅವರ ಅಭಿಮಾನಿಗಳ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಇದೀಗ ಪವನ್ ಕಲ್ಯಾಣ್ ಕಟ್ಟಾ ಅಭಿಮಾನಿಯೊಬ್ಬ, ತನ್ನ ನೆಚ್ಚಿನ ನಟನ ಚಿತ್ರವನ್ನು ರಕ್ತದಲ್ಲಿ ಬರೆದಿದ್ದಾನೆ. ಇಲ್ಲಿದೆ ನೋಡಿ ಚಿತ್ರ.

ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?

Pawan Kalyan: ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ರಾಜಕೀಯ ಯಶಸ್ಸು ಕಂಡಿದ್ದಾರೆ. ಈಗ ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಸಿಎಂ ಆಗುವ ಆಸೆ ವಿಜಯ್​ಗೆ ಇದೆ. ಇದಕ್ಕೆ ಪವನ್ ಕಿವಿ ಮಾತು ಹೇಳಿದ್ದಾರೆ. ಪಕ್ಷದ ಬಲಪಡಿಸುವಿಕೆ ಮತ್ತು ಸ್ಥಿರತೆಯ ಮಹತ್ವವನ್ನು ಪವನ್ ಒತ್ತಿ ಹೇಳಿದ್ದಾರೆ. ಜನರನ್ನು ತಲುಪುವ ಬಲವಾದ ವ್ಯವಸ್ಥೆಯ ಅಗತ್ಯವನ್ನೂ ಅವರು ಸೂಚಿಸಿದ್ದಾರೆ.

ಹಿಂದಿ ಹೇರಿಕೆ ಗಲಾಟೆ; ತಮಿಳು ಸಿಎಂ ಸ್ಟಾಲಿನ್​ಗೆ ಟಾಂಗ್ ಕೊಟ್ಟ ಪವನ್ ಕಲ್ಯಾಣ್

ತಮಿಳುನಾಡು ಸರ್ಕಾರದ ಹಿಂದಿ ವಿರೋಧ ಮತ್ತು ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯ ಬಗ್ಗೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮಾತನಾಡಿದ್ದಾರೆ. ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡಿ ಆರ್ಥಿಕ ಲಾಭ ಪಡೆಯುವ ರಾಜಕಾರಣಿಗಳು ಹಿಂದಿಯನ್ನು ವಿರೋಧಿಸುವುದು ಸರಿ ಅಲ್ಲ ಎಂದಿದ್ದಾರೆ.

ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮಹಾಕುಂಭಮೇಳದಲ್ಲಿ ಭಾಗಿ ಆಗಿದ್ದಾರೆ. ಪ್ರಯಾಗ್ ರಾಜ್​ನಲ್ಲಿ ಅವರು ಪುಣ್ಯಸ್ನಾನ ಮಾಡಿದ್ದಾರೆ. ಅವರ ಜೊತೆ ಪತ್ನಿ ಹಾಗೂ ಮಗ ಕೂಡ ಪಾಲ್ಗೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಗಂಗಾನದಿಯಲ್ಲಿ ಪವನ್ ಕಲ್ಯಾಣ್ ಅವರು ಪೂಜೆ ಸಲ್ಲಿಸಿದ್ದಾರೆ.