AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol

Petrol

ಪೆಟ್ರೋಲ್ ಈ ಭೂಮಿಯಲ್ಲಿ ಸೀಮಿತ ಪ್ರಮಾಣದಲ್ಲಿ ಲಭ್ಯ ಇರುವ ಸಂಪನ್ಮೂಲ. ಕಚ್ಚಾ ತೈಲ ಅಥವಾ ಪೆಟ್ರೋಲಿಯಂನಿಂದ ತಯಾರಿಸಲಾಗುವ ಉಪ ಉತ್ಪನ್ನಗಳಲ್ಲಿ ಪೆಟ್ರೋಲ್ ಒಂದು. ಮರಗಿಡ ಇತ್ಯಾದಿ ವಸ್ತುಗಳು ಲಕ್ಷಾಂತರ ವರ್ಷಗಳ ಕಾಲ ಭೂಗರ್ಭದಲ್ಲಿ ಹುದುಗಿ ಡೀಕಂಪೋಸ್ ಆದಾಗ ಪೆಟ್ರೋಲಿಯಂ ಆಗಿ ಪರಿವರ್ತಿತಗೊಳ್ಳುತ್ತದೆ. ಈ ಕಚ್ಚಾ ತೈಲವನ್ನು ಹೊರತೆಗೆದು, ಅದನ್ನು ಸಂಸ್ಕರಿಸಿ ಪೆಟ್ರೋಲ್, ಡೀಸೆಲ್, ಕೆರೋಸಿನ್, ಎಟಿಎಫ್, ಪ್ಯಾರಾಫಿನ್ ಇತ್ಯಾದಿ ಉಪ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಪೆಟ್ರೋಲ್ ಅನ್ನು ಅಮೆರಿಕ ಮೊದಲಾದ ಕೆಲ ದೇಶಗಳಲ್ಲಿ ಗ್ಯಾಸೋಲಿನ್ ಎಂದೂ ಕರೆಯುತ್ತಾರೆ. ವಾಹನಗಳಿಗೆ ಇಂಧನವಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಬಳಸಲಾಗುತ್ತದೆ. ಹೀಗಾಗಿ, ಇವೆರಡಕ್ಕೆ ಬಹಳ ದೊಡ್ಡ ಬೇಡಿಕೆ ಇದೆ. ಅದರಲ್ಲೂ ನೂರು ವರ್ಷಗಳಿಂದ ಪೆಟ್ರೋಲ್ ಅತ್ಯಂತ ಬೇಡಿಕೆ ಹೊಂದಿದ್ದ ಸಂಪನ್ಮೂಲ ಎನಿಸಿದೆ. ಆದರೆ, ಪೆಟ್ರೋಲ್ ಅನ್ನು ಇಂಧನವಾಗಿ ಬಳಕೆ ಮಾಡಿದಾಗ ಪರಿಸರಕ್ಕೆ ಹಾನಿಯಾಗುವ ವಸ್ತುಗಳು ವಾತಾವರಣಕ್ಕೆ ಸೇರುತ್ತವೆ. ಈ ಕಾರಣಕ್ಕೆ ಜಗತ್ತು ಪೆಟ್ರೋಲ್​ನಿಂದ ವಿಮುಖವಾಗಿ ಪರ್ಯಾಯ ಇಂಧನದತ್ತ ವಾಲುತ್ತಿದೆ.

ಇನ್ನೂ ಹೆಚ್ಚು ಓದಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

ಯುದ್ಧದಿಂದ ಮತ್ತೆ ಇಂಧನ ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಮಾತನಾಡಿದ್ದು, ಇಂಧನ ದರ ಏರಿಕೆಯಾಗಲಿದೆ ಎಂದಿದ್ದಾರೆ.

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು

ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ನಿನ್ನೆ(ಮೇ 10) ಕಾರ್ಯಕ್ರಮವೊಂದರಲ್ಲಿ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು. ಅವರ ಈ ಮನವಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಮನವಿ ಹಿಂದಿನ ಕಾರಣವೇನು? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಪತ್ರಿಕ್ರಿಯಿಸಿದ್ದು, ಮೋದಿ ಮುಂದಾಲೋಚನೆ ಮಾಡಿ ಹೇಳಿದ್ದಾರೆ. ಅದರಲ್ಲೂ ತಪ್ಪು ಕಂಡು ಹಿಡಿಬೇಡಿ. ಎಲ್ಲರೂ ಎಚ್ಚತ್ತುಕೊಳ್ಳಬೇಕು, ಕೈ ಜೋಡಿಸಬೇಕು. ವಿರೋಧ ಪಕ್ಷ ಅಥವಾ ಜನ ಸಾಮಾನ್ಯರು ಇದಕ್ಕೆ ಟೀಕೆ ವ್ಯಕ್ತಪಡಿಸೋದನ್ನ ಬಿಟ್ಟು ಅವರ ಜೊತೆ ಕೈ ಜೋಡಿಸಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ

ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ನಯಾರಾ ಸೇರಿದಂತೆ ಇತರ ಖಾಸಗಿ ಕಂಪನಿಗಳ ಬಂಕ್‌ಗಳಲ್ಲಿ ಬೆಲೆ ಹೆಚ್ಚಾಗಿರುವುದರಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳ ಬಂಕ್‌ಗಳಲ್ಲಿ ಬೇಡಿಕೆ ಹೆಚ್ಚಾಗಿದ್ದು, ಡಿಪೋಗಳಿಂದ ಇಂಧನ ಸರಬರಾಜು ವಿಳಂಬವಾಗುತ್ತಿದೆ.

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ ಏರಿಕೆ ಆಗುವ ಸೂಚನೆಗಳು ಕಂಡುಬರುತ್ತಿವೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂಧನ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಇನ್ನಷ್ಟು ಆರ್ಥಿಕ ಹೊರೆ ಹೇರಲಿದೆ.

ಒಪೆಕ್ ಒಕ್ಕೂಟಕ್ಕೆ ಯುಎಇ ಗುಡ್‌ಬೈ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗುತ್ತಾ?

60 ವರ್ಷಗಳ ಒಪೆಕ್ ಸದಸ್ಯತ್ವಕ್ಕೆ ಯುಎಇ ಗುಡ್ ಬೈ ಹೇಳಿದೆ. ತೈಲ ಉತ್ಪಾದನೆಯಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಇ ಹೇಳಿದೆ. ಇದರಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಭಾರತಕ್ಕೂ ಪ್ರಯೋಜನವಾಗಲಿದ್ದು, ಪೆಟ್ರೋಲ್-ಡೀಸೆಲ್ ದರ ಇಳಿಕೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದು ಹೇಗೆ? ತಿಳಿಯಲು ಮುಂದೆ ಓದಿ.

ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆಯನ್ನು ತಳ್ಳಿ ಹಾಕಿದ ಸರ್ಕಾರ

Govt Rejects Reports Of Petrol, Diesel Price Hike: ಪೆಟ್ರೋಲ್ ಬೆಲೆ ಏರಿಕೆ ಆಗಬಹುದು ಎಂದು ಇಂದು ಬೆಳಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಸರ್ಕಾರ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಹೇಳಿದೆ. ಕೋಟಕ್ ಇನ್ಸ್​ಟಿಟ್ಯೂಶನಲ್ ಈಕ್ವಿಟೀಸ್ ಸಂಸ್ಥೆಯು ಚುನಾವಣೆ ಬಳಿಕ ಪೆಟ್ರೋಲ್, ಡೀಸಲ್ ಬೆಲೆ ಏರಿಸಬಹುದು ಎಂದು ತನ್ನ ವರದಿಯಲ್ಲಿ ಹೇಳಿತ್ತು.

ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ?

Losses for oil marketing companies on petrol and diesel: ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆಗಳು ಏರುತ್ತಿಲ್ಲ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ನಷ್ಟದ ಹೊರೆ ಹೆಚ್ಚಾಗುತ್ತಿದೆ. ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಿದರೆ ಈ ಕಂಪನಿಗಳಿಗೆ ಆಗುತ್ತಿರುವ ನಷ್ಟ 18 ರೂ. ಹಾಗೆಯೇ, ಒಂದು ಲೀಟರ್ ಡೀಸಲ್​ಗೆ 35 ರೂ ನಷ್ಟ ಮಾಡಿಕೊಳ್ಳುತ್ತಿವೆ ಈ ಸರ್ಕಾರಿ ಸ್ವಾಮ್ಯದ ಕಂಪನಿಗಳು.

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

Global crude oil prices again cross 100 USD per barrel: ಜಾಗತಿಕ ಕಚ್ಛಾ ತೈಲ ಬೆಲೆಗಳು ಬ್ಯಾರಲ್​ಗೆ ಮತ್ತೊಮ್ಮೆ 100 ಡಾಲರ್ ಗಡಿ ದಾಟಿದೆ. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್​ನಲ್ಲಿ ಬೆಲೆ 104.25 ಡಾಲರ್ ಇದೆ. ಬ್ರೆಟ್ ಕ್ರೂಡ್​ನಲ್ಲಿ ಬೆಲೆ 101 ಡಾಲರ್ ಇದೆ. ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾಗಿರುವುದು, ಹಾಗೂ ಹಾರ್ಮುಜ್ ಜಲಸಂಧಿಯನ್ನು ತಡೆಯುವುದಾಗಿ ಅಮೆರಿಕ ಹೇಳಿದ್ದು ತೈಲ ಬೆಲೆ ಏರಿಕೆಗೆ ಕಾರಣವಾಗಿವೆ.

ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

Export duty on diese and ATF hike to Rs 55.5 and Rs 42 per liter: ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 21.5 ರೂ ಇದ್ದದ್ದು 55.5 ರೂಗೆ ಏರಿಸಲಾಗಿದೆ. ಏವಿಯೇಶನ್ ಟರ್ಬೈನ್ ಇಂಧನದ ಮೇಲಿನ ರಫ್ತು ಸುಂಕವನ್ನು 29.5 ರೂನಿಂದ 42 ರೂಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆ ಪ್ರೀಮಿಯಮ್ ಡೀಸಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪರಿಷ್ಕರಿಲಾಗಿತ್ತು.

ಭಾರತಕ್ಕೆ ಪೆಟ್ರೋಲ್, ಡೀಸಲ್ ಸಮಸ್ಯೆ ವಕ್ಕರಿಸಲಿಲ್ಲ ಯಾಕೆ? ಸರ್ಕಾರದ ಈ ಕೆಲ ಕ್ರಮಗಳೇ ಕಾರಣವಾ?

How India handling oil crisis: ಇರಾನ್ ಯುದ್ಧದಿಂದ ಇಡೀ ಜಗತ್ತೇ ತೈಲ ಬಿಕ್ಕಟ್ಟಿಗೆ ನಲುಗಿಹೋದರೂ ಭಾರತ ಇದ್ದುದರಲ್ಲೇ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಸಂದರ್ಭದಲ್ಲಿ ತೋರಿದ ಜಾಣ್ಮೆ ಮತ್ತು ಜಾಗ್ರತೆಯನ್ನು ಭಾರತ ಈಗಲೂ ತೋರಿದೆ. ತೈಲ ಪೂರೈಕೆ ಸುಗಮಗೊಳಿಸಲು ಮತ್ತು ಪೆಟ್ರೋಲಿಯಂ ಸಂಗ್ರಹ ಹೆಚ್ಚಿಸಲು ಮತ್ತು ಪರ್ಯಾಯ ಇಂಧನ ವ್ಯವಸ್ಥೆ ಮಾಡಲು ಸರ್ಕಾರ ತೆಗೆದುಕೊಂಡ ಕೆಲ ಕ್ರಮಗಳು ಭಾರತಕ್ಕೆ ನೆರವಾಗಿವೆ.

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

Crude oil prices crashes shortly after US Iran ceasefire announcement: ಇರಾನ್ ಮತ್ತು ಅಮೆರಿಕ ನಡುವೆ ಕದನವಿರಾಮ ಏರ್ಪಟ್ಟ ಬೆನ್ನಲ್ಲೇ ತೈಲ ಮಾರುಕಟ್ಟೆ ಮೇಲಿನ ಒತ್ತಡ ಕಡಿಮೆಗೊಂಡಿದೆ. ಬ್ಯಾರಲ್​ಗೆ 117 ಡಾಲರ್​ಗಿಂತ ಹೆಚ್ಚಿದ್ದ ಕಚ್ಛಾ ತೈಲ ಬೆಲೆ 90 ಡಾಲರ್ ಆಸುಪಾಸಿಗೆ ಬಂದಿದೆ. ಒಂದೇ ದಿನದಲ್ಲಿ 26 ಡಾಲರ್​ಗೂ ಹೆಚ್ಚು ಕುಸಿತ ಕಂಡಿದೆ. ಇದರಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ತಗ್ಗುತ್ತವಾ?

ಪೆಟ್ರೋಲ್​ಗೆ ಕೇಂದ್ರ, ರಾಜ್ಯ ತೆರಿಗೆಗಳು, ಕಮಿಷನ್​ಗಳೆಷ್ಟು? ಜಿಎಸ್​ಟಿಯಿಂದ ಬೆಲೆ ಕಡಿಮೆ ಆಗುತ್ತಾ?

How GST can reduce petrol, diesel prices in India: ಭಾರತದಲ್ಲಿ ಪೆಟ್ರೋಲ್, ಡೀಸಲ್ ಮೇಲೆ ವಿಪರೀತವಾದ ಟ್ಯಾಕ್ಸ್​ಗಳಿವೆ. ಕೆಲ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ ತೆರಿಗೆಗಳ ಪಾಲೇ ಶೇ. 50ಕ್ಕಿಂತಲೂ ಹೆಚ್ಚಿದೆ. ಕೇಂದ್ರ ವಿಧಿಸುವ ತೆರಿಗೆಗಳಿಗಿಂತ ರಾಜ್ಯಗಳ ತೆರಿಗೆಗಳು ಹೆಚ್ಚಿವೆ. ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಬೆಲೆಯಲ್ಲಿ ಏರಿಳಿತ ಇರುವುದು ಇದೇ ಕಾರಣಕ್ಕೆ.

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ