AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol

Petrol

ಪೆಟ್ರೋಲ್ ಈ ಭೂಮಿಯಲ್ಲಿ ಸೀಮಿತ ಪ್ರಮಾಣದಲ್ಲಿ ಲಭ್ಯ ಇರುವ ಸಂಪನ್ಮೂಲ. ಕಚ್ಚಾ ತೈಲ ಅಥವಾ ಪೆಟ್ರೋಲಿಯಂನಿಂದ ತಯಾರಿಸಲಾಗುವ ಉಪ ಉತ್ಪನ್ನಗಳಲ್ಲಿ ಪೆಟ್ರೋಲ್ ಒಂದು. ಮರಗಿಡ ಇತ್ಯಾದಿ ವಸ್ತುಗಳು ಲಕ್ಷಾಂತರ ವರ್ಷಗಳ ಕಾಲ ಭೂಗರ್ಭದಲ್ಲಿ ಹುದುಗಿ ಡೀಕಂಪೋಸ್ ಆದಾಗ ಪೆಟ್ರೋಲಿಯಂ ಆಗಿ ಪರಿವರ್ತಿತಗೊಳ್ಳುತ್ತದೆ. ಈ ಕಚ್ಚಾ ತೈಲವನ್ನು ಹೊರತೆಗೆದು, ಅದನ್ನು ಸಂಸ್ಕರಿಸಿ ಪೆಟ್ರೋಲ್, ಡೀಸೆಲ್, ಕೆರೋಸಿನ್, ಎಟಿಎಫ್, ಪ್ಯಾರಾಫಿನ್ ಇತ್ಯಾದಿ ಉಪ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಪೆಟ್ರೋಲ್ ಅನ್ನು ಅಮೆರಿಕ ಮೊದಲಾದ ಕೆಲ ದೇಶಗಳಲ್ಲಿ ಗ್ಯಾಸೋಲಿನ್ ಎಂದೂ ಕರೆಯುತ್ತಾರೆ. ವಾಹನಗಳಿಗೆ ಇಂಧನವಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಬಳಸಲಾಗುತ್ತದೆ. ಹೀಗಾಗಿ, ಇವೆರಡಕ್ಕೆ ಬಹಳ ದೊಡ್ಡ ಬೇಡಿಕೆ ಇದೆ. ಅದರಲ್ಲೂ ನೂರು ವರ್ಷಗಳಿಂದ ಪೆಟ್ರೋಲ್ ಅತ್ಯಂತ ಬೇಡಿಕೆ ಹೊಂದಿದ್ದ ಸಂಪನ್ಮೂಲ ಎನಿಸಿದೆ. ಆದರೆ, ಪೆಟ್ರೋಲ್ ಅನ್ನು ಇಂಧನವಾಗಿ ಬಳಕೆ ಮಾಡಿದಾಗ ಪರಿಸರಕ್ಕೆ ಹಾನಿಯಾಗುವ ವಸ್ತುಗಳು ವಾತಾವರಣಕ್ಕೆ ಸೇರುತ್ತವೆ. ಈ ಕಾರಣಕ್ಕೆ ಜಗತ್ತು ಪೆಟ್ರೋಲ್​ನಿಂದ ವಿಮುಖವಾಗಿ ಪರ್ಯಾಯ ಇಂಧನದತ್ತ ವಾಲುತ್ತಿದೆ.

ಇನ್ನೂ ಹೆಚ್ಚು ಓದಿ

ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ

Nitin Gadkari defends ethanol policy: ಇಥನಾಲ್ ಮಿಶ್ರಿತ ಇ20 ಪೆಟ್ರೋಲ್ ಬಳಕೆಯಿಂದ ವಾಹನಗಳ ಮೈಲೇಜ್ ಕಡಿಮೆ ಆಗುತ್ತಿದೆ ಎನ್ನುವ ಆರೋಪವನ್ನು ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಗಡ್ಕರಿ ಮಕ್ಕಳಿಗೆ ಅನುಕೂಲವಾಗಲೆಂದು ಇಥನಾಲ್ ಬಳಕೆ ಮಾಡಲಾಗುತ್ತಿದೆ ಎನ್ನುವ ಆರೋಪವನ್ನೂ ತಳ್ಳಿಹಾಕಿದ್ದಾರೆ. ಇಥನಾಲ್ ಬಳಕೆಯಿಂದಾಗಿ ಸಕ್ಕರೆ ಉದ್ಯಮ ಜೀವ ಉಳಿಸಿಕೊಂಡಿದೆ ಎಂದಿದ್ದಾರೆ.

Hormuz Strait: ಇರಾನ್​​ಗೆ ಹಾರ್ಮೂಜ್ ಜಲಮಾರ್ಗ ಬಂದ್ ಮಾಡಲು ಆಗುತ್ತಾ? ತಡೆದುಬಿಟ್ಟರೆ ಯಾರಿಗೆಷ್ಟು ಹಾನಿ?

Can Iran block Hormuz Strait? ತನ್ನ ಮೂರು ಪರಮಾಣು ಸ್ಥಳಗಳ ಮೇಲೆ ಅಮೆರಿಕ ದಾಳಿ ಮಾಡಿದಕ್ಕೆ ಪ್ರತೀಕಾರವಾಗಿ ಇರಾನ್ ಹಾರ್ಮೂಜ್ ಸ್ಟ್ರೇಟ್ ಅನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದೆ. ಪರ್ಷಿಯಲ್ ಕೊಲ್ಲಿ ಮತ್ತು ಓಮನ್ ಕೊಲ್ಲಿ ಮಧ್ಯೆ ಇರುವ ಹಾರ್ಮೂಜ್ ಸ್ಟ್ರೇಟ್ ಕಿರಿದಾದ ಜಲಮಾರ್ಗ ಹೊಂದಿದೆ. ಹಾರ್ಮೂಜ್ ಸ್ಟ್ರೇಟ್​​ನ ಉತ್ತರ ಭಾಗವು ಇರಾನ್ ನಿಯಂತ್ರಣದಲ್ಲಿದೆ. ದಕ್ಷಿಣವು ಓಮನ್ ನಿಯಂತ್ರಣದಲ್ಲಿದೆ. ಭಾರತಕ್ಕೆ ಆಮದಾಗಿ ಬರುವ ಹೆಚ್ಚಿನ ತೈಲವು ಈ ಮಾರ್ಗದಿಂದಲೇ ಬರುತ್ತದೆ ಎಂಬುದು ವಿಶೇಷ.

ಅಂಡಮಾನ್ ಬಳಿ ಎರಡು ಲಕ್ಷ ಕೋಟಿ ಲೀಟರ್ ಕಚ್ಛಾ ತೈಲ ನಿಕ್ಷೇಪ? ಭಾರತದ ಆರ್ಥಿಕ ಬೆಳವಣಿಗೆಗೆ ರಾಕೆಟ್ ವೇಗ ಕೊಡಬಲ್ಲುದು ಈ ಸಂಗ್ರಹ

Petroleum minister Hardeep Singh Puri speaks of possible crude oil reserves at Andaman sea: ಅಂಡಮಾನ್ ಸಮುದ್ರ ಗರ್ಭದೊಳಗೆ ಹತ್ತಿರ ಹತ್ತಿರ ಎರಡು ಲಕ್ಷ ಕೋಟಿ ಬ್ಯಾರಲ್ ಕಚ್ಛಾ ತೈಲ ಇರುವ ಸುಳಿವು ಸಿಕ್ಕಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಮಾಹಿತಿ ನೀಡಿದ್ದಾರೆ. ಗಯಾನದಲ್ಲಿ ಇತ್ತೀಚೆಗೆ ಸಿಕ್ಕಷ್ಟು ದೊಡ್ಡ ಪ್ರಮಾಣದ ತೈಲ ಸಂಗ್ರಹವು ಅಂಡಮಾನ್​​ನಲ್ಲಿ ಇರಬಹುದು ಎಂದಿದ್ದಾರೆ.

Crude Oil: ಕಚ್ಛಾ ತೈಲ ಬೆಲೆ ಶೇ. 13ರಷ್ಟು ಏರಿಕೆ; ದುಬಾರಿಯಾಗುತ್ತಾ ಪೆಟ್ರೋಲ್, ಡೀಸಲ್?

Crude oil rates shoot up: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಏರಿಕೆ ಆಗಿದೆ. ಡಬ್ಲ್ಯುಟಿಐ ಮತ್ತು ಬ್​ರೆಂಟ್ ಕ್ರೂಡ್​​ನಲ್ಲಿ ಒಂದು ಬ್ಯಾರಲ್ ತೈಲದ ಬೆಲೆ 76 ಡಾಲರ್ ಆಸುಪಾಸಿನಷ್ಟಿದೆ. ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ ಪರಿಣಾಮವಾಗಿ ಈ ಏರಿಕೆ ಆಗಿದೆ. ಪರಿಸ್ಥಿತಿ ಹೀಗೇ ಮುಂದುವರಿದಲ್ಲಿ ತೈಲ ಬೆಲೆ 120 ಡಾಲರ್​​ವರೆಗೂ ಹೋಗಬಹುದು.

Petrol Production: 1 ಬ್ಯಾರಲ್ ಕಚ್ಛಾ ತೈಲದಿಂದ ಪೆಟ್ರೋಲ್, ಡೀಸಲ್ ಸೇರಿ ಏನೆಲ್ಲಾ ತಯಾರಿಸಬಹುದು ಗೊತ್ತಾ?

How much petrol can be produced from 1 barrel of crude oil: ಒಂದು ಬ್ಯಾರಲ್ ಎಂದರೆ ಸುಮಾರು 157 ಲೀಟರ್ ಆಗುತ್ತದೆ. ಒಂದು ಬ್ಯಾರಲ್ ಕಚ್ಛಾ ತೈಲದಲ್ಲಿ ಸುಮಾರು 75 ಲೀಟರ್ ಪೆಟ್ರೋಲ್ ತಯಾರಿಕೆ ಸಾಧ್ಯ. ಉಳಿದ ತೈಲವು ವ್ಯರ್ಥವಾಗುವುದಿಲ್ಲ. ನಾನಾ ರೀತಿಯ ಉತ್ಪನ್ನಗಳ ತಯಾರಿಕೆಗೆ ಅದನ್ನು ಬಳಸಲಾಗುತ್ತದೆ. ಪೆಟ್ರೋಲ್, ಡೀಸಲ್, ಕೆರೋಸಿನ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳಲ್ಲದೇ, ಹಲವು ಪ್ಲಾಸ್ಟಿಕ್ ಹಾಗೂ ಇನ್ನೂ ಇತರ ಉತ್ಪನ್ನಗಳ ತಯಾರಿಕೆಯೂ ಸಾಧ್ಯ.

ತುರ್ತು ಸಂದರ್ಭದಲ್ಲಿ ದೇಶದ ಎಲ್ಲಾ ತೈಲ ಮತ್ತು ನೈಸರ್ಗಿಕ ಅನಿಲದ ಮೊದಲ ಅಧಿಕಾರ ಸರ್ಕಾರದ್ದು: ಹೊಸ ನಿಯಮ ನಿರೀಕ್ಷೆ

Draft rules that give govt pre-emptive right over oil and gas: ದೇಶದಲ್ಲಿ ತುರ್ತು ಸನ್ನಿವೇಶ ಎದುರಾದಾಗ, ಇಲ್ಲಿ ಉತ್ಪತ್ತಿಯಾಗುವ ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ ಹಾಗೂ ಅವುಗಳ ಸಂಸ್ಕರಿತ ಉತ್ಪನ್ನಗಳ ಮೇಲೆ ಸರ್ಕಾರಕ್ಕೆ ಮೊದಲ ಅಧಿಕಾರ ಇರುತ್ತದೆ. ಹಾಗೆಂದು, ಹೊಸ ತಿದ್ದುಪಡಿ ಮಸೂದೆಯಲ್ಲಿ ಒಳಗೊಂಡಿರುವ ಕರಡು ನಿಯಮ ಹೇಳುತ್ತದೆ. ತುರ್ತು ಸಂದರ್ಭದಲ್ಲಿ ಹಾಲಿ ಇರುವ ಮಾರುಕಟ್ಟೆ ದರದಲ್ಲಿ ಸರ್ಕಾರವು ಇವನ್ನು ಖರೀದಿಸಲಿದೆ.

ಪೆಟ್ರೋಲ್ ಪಡೆಯಲು ಮುಗಿಬಿದ್ದ ಜನರು; ಗಾಬರಿ ಬೇಡ… ಭಾರತದಲ್ಲಿ ಇಂಧನ ಸಾಕಷ್ಟಿದೆ: ಇಂಡಿಯನ್ ಆಯಿಲ್ ಸ್ಪಷ್ಟನೆ

IOCL says fuel available at all outlets: ಪೆಟ್ರೋಲ್, ಎಲ್​​ಪಿಜಿ ಹಾಗೂ ಇತರ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಜನರು ಮುಂದಾಗಿರುವುದು ವರದಿಯಾಗಿದೆ. ಅದರಲ್ಲೂ ಪಂಜಾಬ್​​ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಮುಂದೆ ಜನರು ಉದ್ದುದ್ದ ಕ್ಯೂ ಇರುವ ಚಿತ್ರಗಳು ವೈರಲ್ ಆಗುತ್ತಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ಎಕ್ಸ್​​​ನಲ್ಲಿ ಪೋಸ್ಟ್​ ಹಾಕಿದ್ದು, ಭಾರತದಲ್ಲಿ ಇಂಧನ ಕೊರತೆ ಇಲ್ಲ. ಎಲ್ಲಾ ಕಡೆ ದೊರಕುತ್ತದೆ ಎಂದು ಸ್ಪಷ್ಟಪಡಿಸಿದೆ.

Fuel Price: ಪೆಟ್ರೋಲ್, ಡೀಸಲ್ ಮೇಲಿನ ಅಬಕಾರಿ ಸುಂಕ 2 ರೂ ಹೆಚ್ಚಳ; ಆದರೆ ಬೆಲೆ ಏರಿಕೆ ಇರಲ್ಲ

Excise duty raised on Petrol and Diesel: ಬೆಲೆ ಏರಿಕೆಯ ಬಿಸಿಯಲ್ಲಿರುವ ಮಧ್ಯಮ ವರ್ಗದವರಿಗೆ ಗಾಯದ ಮೇಲೆ ಬರೆ ಬೀಳುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರೂಗಳಷ್ಟು ಹೆಚ್ಚಿಸಿದೆ. ಕರ್ನಾಟಕದ ಜನರಿಗೆ ಡಬಲ್ ಶಾಕ್ ಸಿಕ್ಕಂತಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸಲ್ ಮೇಲೆ ಎರಡು ರೂ ಹೆಚ್ಚುವರಿ ತೆರಿಗೆ ಹೇರಿತ್ತು. ಈಗ ಕೇಂದ್ರದಿಂದ ಎರಡು ರೂ ಅಬಕಾರಿ ಸುಂಕ ಹೆಚ್ಚಳ ಆಗಿದೆ.

ಗಮನಿಸಿ: ಏಪ್ರಿಲ್ 1 ರಿಂದ ಈ ವಾಹನಗಳಿಗೆ ಪೆಟ್ರೋಲ್- ಡೀಸೆಲ್ ಸಿಗುವುದಿಲ್ಲ

Delhi Vehicles rules: ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾದ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳು ವಾಹನಗಳ ವಯಸ್ಸನ್ನು ಸ್ಕ್ಯಾನ್ ಮಾಡುತ್ತವೆ. ಅದರ ವಯಸ್ಸು NGT ನಿಗದಿಪಡಿಸಿದ ವಯಸ್ಸನ್ನು ಮೀರಿದರೆ ಅವರಿಗೆ ತೈಲ ನೀಡಲಾಗುವುದಿಲ್ಲ. ಈ ಕ್ಯಾಮೆರಾಗಳು ರಿಯಲ್ ಟೈಮ್ ನಲ್ಲಿ ನಂಬರ್ ಪ್ಲೇಟ್‌ ಗಳನ್ನು ಓದುವ ಮೂಲಕ ವಾಹನಗಳನ್ನು ಗುರುತಿಸುತ್ತವೆ.

ಕರ್ನಾಟಕದಲ್ಲಿ ಒಂದು ಲೀಟರ್ ಪೆಟ್ರೋಲ್​​ಗೆ ಕೇಂದ್ರ ಮತ್ತು ರಾಜ್ಯದ ತೆರಿಗೆ ಎಷ್ಟು? ತೆರಿಗೆ ಬಿಟ್ಟರೆ ಮೂಲ ಪೆಟ್ರೋಲ್ ಬೆಲೆ ಎಷ್ಟು? ಇಲ್ಲಿದೆ ಡೀಟೇಲ್ಸ್

Taxes on petrol in Karnataka: ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಅಬಕಾರಿ ಶುಲ್ಕ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ರತೀ ರಾಜ್ಯಗಳಲ್ಲೂ ವ್ಯಾಟ್ ಅಥವಾ ಬೇರೆ ತೆರಿಗೆಗಳು ಜಾರಿಯಲ್ಲಿರುತ್ತವೆ. ದಕ್ಷಿಣ ರಾಜ್ಯಗಳು ಅತಿಹೆಚ್ಚು ತೆರಿಗೆ ವಿಧಿಸುತ್ತವೆ. ಕರ್ನಾಟಕವೂ ಕೂಡ ಹೆಚ್ಚು ತೆರಿಗೆ ವಿಧಿಸುವ ರಾಜ್ಯಗಳಲ್ಲಿ ಒಂದು. ತೆಲಂಗಾಣ ರಾಜ್ಯ ಅತಿಹೆಚ್ಚು ತೆರಿಗೆ ಹೇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ತೆರಿಗೆ ಇದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ