AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol

Petrol

ಪೆಟ್ರೋಲ್ ಈ ಭೂಮಿಯಲ್ಲಿ ಸೀಮಿತ ಪ್ರಮಾಣದಲ್ಲಿ ಲಭ್ಯ ಇರುವ ಸಂಪನ್ಮೂಲ. ಕಚ್ಚಾ ತೈಲ ಅಥವಾ ಪೆಟ್ರೋಲಿಯಂನಿಂದ ತಯಾರಿಸಲಾಗುವ ಉಪ ಉತ್ಪನ್ನಗಳಲ್ಲಿ ಪೆಟ್ರೋಲ್ ಒಂದು. ಮರಗಿಡ ಇತ್ಯಾದಿ ವಸ್ತುಗಳು ಲಕ್ಷಾಂತರ ವರ್ಷಗಳ ಕಾಲ ಭೂಗರ್ಭದಲ್ಲಿ ಹುದುಗಿ ಡೀಕಂಪೋಸ್ ಆದಾಗ ಪೆಟ್ರೋಲಿಯಂ ಆಗಿ ಪರಿವರ್ತಿತಗೊಳ್ಳುತ್ತದೆ. ಈ ಕಚ್ಚಾ ತೈಲವನ್ನು ಹೊರತೆಗೆದು, ಅದನ್ನು ಸಂಸ್ಕರಿಸಿ ಪೆಟ್ರೋಲ್, ಡೀಸೆಲ್, ಕೆರೋಸಿನ್, ಎಟಿಎಫ್, ಪ್ಯಾರಾಫಿನ್ ಇತ್ಯಾದಿ ಉಪ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಪೆಟ್ರೋಲ್ ಅನ್ನು ಅಮೆರಿಕ ಮೊದಲಾದ ಕೆಲ ದೇಶಗಳಲ್ಲಿ ಗ್ಯಾಸೋಲಿನ್ ಎಂದೂ ಕರೆಯುತ್ತಾರೆ. ವಾಹನಗಳಿಗೆ ಇಂಧನವಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಬಳಸಲಾಗುತ್ತದೆ. ಹೀಗಾಗಿ, ಇವೆರಡಕ್ಕೆ ಬಹಳ ದೊಡ್ಡ ಬೇಡಿಕೆ ಇದೆ. ಅದರಲ್ಲೂ ನೂರು ವರ್ಷಗಳಿಂದ ಪೆಟ್ರೋಲ್ ಅತ್ಯಂತ ಬೇಡಿಕೆ ಹೊಂದಿದ್ದ ಸಂಪನ್ಮೂಲ ಎನಿಸಿದೆ. ಆದರೆ, ಪೆಟ್ರೋಲ್ ಅನ್ನು ಇಂಧನವಾಗಿ ಬಳಕೆ ಮಾಡಿದಾಗ ಪರಿಸರಕ್ಕೆ ಹಾನಿಯಾಗುವ ವಸ್ತುಗಳು ವಾತಾವರಣಕ್ಕೆ ಸೇರುತ್ತವೆ. ಈ ಕಾರಣಕ್ಕೆ ಜಗತ್ತು ಪೆಟ್ರೋಲ್​ನಿಂದ ವಿಮುಖವಾಗಿ ಪರ್ಯಾಯ ಇಂಧನದತ್ತ ವಾಲುತ್ತಿದೆ.

ಇನ್ನೂ ಹೆಚ್ಚು ಓದಿ

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ?

Will Petrol and Diesel see decrease in price as crude oil rates down to below 80$: ಬ್ಯಾರಲ್​ಗೆ 145 ಡಾಲರ್​ವರೆಗೂ ಏರಿದ್ದ ಕಚ್ಚಾ ತೈಲ ಬೆಲೆ ಈಗ 80 ಡಾಲರ್​ಗಿಂತ ಕೆಳಗೆ ಕುಸಿದಿದೆ. ಇದರೊಂದಿಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಇಳಿಕೆಯಾಗಬಹುದು ಎನ್ನುವ ನಿರೀಕ್ಷೆಗಳು ಹುಟ್ಟಿವೆ. ಹಿಂದಿನ ಸಂದರ್ಭಗಳನ್ನು ಅವಲೋಕಿಸಿದಾಗ ಪೆಟ್ರೋಲ್ ಮತ್ತು ಡೀಸಲ್​ನ ರೀಟೇಲ್ ಮಾರಾಟದಲ್ಲಿ ಬೆಲೆ ಇಳಿಕೆಯಾಗುವ ಸಾಧ್ಯತೆ ಕಡಿಮೆ. ಅದಕ್ಕೇನು ಕಾರಣ ಎನ್ನುವ ವಿವರ ಇಲ್ಲಿದೆ.

E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು

E20 Fuel & Car Insurance: E20 ಇಂಧನ ಬಳಸುವ ವಾಹನಗಳಿಗೆ ವಿಮಾ ಕ್ಲೇಮ್ ತಿರಸ್ಕೃತವಾಗಬಹುದು ಎಂಬ ವೈರಲ್ ಸುದ್ದಿಗೆ ಸರ್ಕಾರ ಮತ್ತು ವಿಮಾ ಕಂಪನಿಗಳು ಸ್ಪಷ್ಟನೆ ನೀಡಿವೆ. E20 ಇಂಧನದಿಂದ ನಿಮ್ಮ ವಿಮಾ ಪಾಲಿಸಿಗಳು ರದ್ದಾಗುವುದಿಲ್ಲ, ಸಂಪೂರ್ಣವಾಗಿ ಚಾಲ್ತಿಯಲ್ಲಿರುತ್ತವೆ. ಅಪಘಾತ ಕ್ಲೇಮ್‌ಗಳಿಗೆ ಇಂಧನ ವಿಧ ಮುಖ್ಯವಲ್ಲ. ಆದರೆ, ಹಳೆಯ ವಾಹನಗಳಲ್ಲಿ E20 ಬಳಕೆ ಇಂಜಿನ್ ಭಾಗಗಳ ಸವೆತಕ್ಕೆ ಕಾರಣವಾದರೆ, ಅಂತಹ 'ಪರಿಣಾಮಕಾರಿ ಹಾನಿಗಳಿಗೆ' ಸಾಮಾನ್ಯ ವಿಮೆಯಲ್ಲಿ ಪರಿಹಾರ ಸಿಗುವುದಿಲ್ಲ ಎಂಬುದನ್ನು ಗ್ರಾಹಕರು ಗಮನಿಸಬೇಕು.

ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ?

India Hikes Diesel, ATF Export Duty: ಕೇಂದ್ರ ಸರ್ಕಾರ ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತು ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಸುಂಕ ಯಥಾಸ್ಥಿತಿಯಲ್ಲಿದೆ. ಈ ಬದಲಾವಣೆಯಿಂದ ದೇಶೀಯ ಇಂಧನ ಬೆಲೆಗಳ ಮೇಲೆ ಪರಿಣಾಮವಿಲ್ಲ. ಜಾಗತಿಕ ತೈಲ ಬೆಲೆ ಏರಿಳಿತದ ಮಧ್ಯೆ, ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಗೆ ಆದ್ಯತೆ ನೀಡಲು ಮತ್ತು ಅತಿಯಾದ ಲಾಭ ಗಳಿಸುವುದನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ. ದೇಶದಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳುವುದು ಮುಖ್ಯ ಉದ್ದೇಶ.

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು

E20 Fuel Warning: ಹಳೆಯ, E20 ಇಂಧನ ಹೊಂದಿಕೆಯಾಗದ ಕಾರುಗಳಲ್ಲಿ ಇದರ ಬಳಕೆ ವಿಮಾ ಕ್ಲೈಮ್ ತಿರಸ್ಕರಿಸಲು ಕಾರಣವಾಗಬಹುದು. ಎಥೆನಾಲ್‌ನ ನಾಶಕಾರಿ ಗುಣ ಎಂಜಿನ್ ಭಾಗಗಳನ್ನು ಹಾನಿಗೊಳಿಸುತ್ತದೆ, ಇದನ್ನು ಅಸಮರ್ಪಕ ಬಳಕೆ ಎಂದು ಪರಿಗಣಿಸಲಾಗುತ್ತದೆ. ಆರ್ಥಿಕ ನಷ್ಟ ತಪ್ಪಿಸಲು ಮತ್ತು ವಿಮಾ ಮಾನ್ಯತೆ ಕಾಪಾಡಿಕೊಳ್ಳಲು ನಿಮ್ಮ ವಾಹನದ ಹೊಂದಾಣಿಕೆ ಪರಿಶೀಲಿಸಿ.

ಇರಾನ್-ಅಮೆರಿಕ ಒಪ್ಪಂದದ ಎಫೆಕ್ಟ್; ತೈಲ ಬೆಲೆ ಇಳಿಕೆ; ರೂಪಾಯಿಗೆ ಜೀವ; ಚಿನ್ನ, ಷೇರುಗಳ ಜಿಗಿತ

Hormuz Peace Deal Effect: ಇರಾನ್-ಅಮೆರಿಕ ನಡುವಿನ ಹಾರ್ಮುಜ್ ಜಲಸಂಧಿ ಸಂಘರ್ಷ ಅಂತ್ಯಗೊಂಡಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ಭರವಸೆ ಮೂಡಿದೆ. ಕಚ್ಚಾ ತೈಲ ಬೆಲೆ ಕುಸಿದಿದ್ದು, ಭಾರತದ ಹಣದುಬ್ಬರ ಮತ್ತು ಆಮದು ವೆಚ್ಚ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತೀಯ ಷೇರು ಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ರೂಪಾಯಿ ಬಲಗೊಂಡಿದೆ. ಹೂಡಿಕೆದಾರರ ಆತಂಕ ದೂರವಾಗಿ, ಚಿನ್ನದ ಬೆಲೆಯೂ ಏರಿಕೆ ಕಂಡಿದೆ.

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿದಿದೆ. ಬ್ರೆಂಟ್ ಕ್ರೂಡ್ ಬೆಲೆ 80 ಡಾಲರ್​ಗೆ ಇಳಿದಿದ್ದು, ಒಂದೇ ದಿನದಲ್ಲಿ ಶೇ 4 ಕುಸಿತ ಕಂಡಿದೆ. ಹಾರ್ಮುಝ್ ಜಲಸಂಧಿ ಈಗ ಮುಕ್ತವಾಗಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ಬೆಲೆ ಇಳಿಕೆಯಾಗುವ ನಿರೀಕ್ಷೆ ಮೂಡಿದೆ. ಇದರಿಂದ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ.

ಪೆಟ್ರೋಲ್ ಬೆಲೆ ಇಳಿಯುತ್ತಾ? ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಸುಂಕ ರದ್ದುಗೊಳಿಸಿರುವುದು ಯಾರಿಗೆ ಲಾಭ?

Excise Duty Waived, But Petrol Price Won't Drop Yet: ಕೇಂದ್ರ ಸರ್ಕಾರವು ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ರದ್ದುಗೊಳಿಸಿದೆ. ಆದರೆ, ದೇಶದಲ್ಲಿ ಪ್ರಚಲಿತದಲ್ಲಿರುವ E20 ಪೆಟ್ರೋಲ್ ಗ್ರಾಹಕರಿಗೆ ತಕ್ಷಣಕ್ಕೆ ಬೆಲೆ ಇಳಿಕೆಯಾಗುವುದಿಲ್ಲ. ಈ ನಿರ್ಧಾರವು ಭಾರತದ E30 ಎಥೆನಾಲ್ ಗುರಿಯ ಭಾಗವಾಗಿದೆ. ಇದು ರೈತರ ಆದಾಯ ಹೆಚ್ಚಿಸಲು, ಕಚ್ಚಾ ತೈಲ ಆಮದು ವೆಚ್ಚ ಕಡಿಮೆ ಮಾಡಲು ಮತ್ತು ದೀರ್ಘಾವಧಿಯಲ್ಲಿ ಆರ್ಥಿಕತೆಗೆ ಪ್ರಯೋಜನ ನೀಡಲು ಸಹಾಯಕವಾಗಿದೆ.

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ

ಕೇಂದ್ರ ಸರ್ಕಾರವು ಶೇ.22 ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಇದು ಭಾರತದ ಇಂಧನ ಸ್ವಾವಲಂಬನೆ, ಪರಿಸರ ಸಂರಕ್ಷಣೆ ಮತ್ತು ಕೃಷಿ ವಲಯಕ್ಕೆ ಲಾಭ ತರಲಿದೆ. ಎಥೆನಾಲ್ ಮಿಶ್ರಣದಲ್ಲಿ ದೇಶದ ಅದ್ಭುತ ಪ್ರಗತಿಯನ್ನು ಇದು ಮತ್ತಷ್ಟು ಉತ್ತೇಜಿಸಲಿದೆ.

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ಇರಾನ್ ಸಂಘರ್ಷದಿಂದಾಗಿ 'ಸ್ಟ್ರೈಟ್ ಆಫ್ ಹಾರ್ಮುಜ್' ಮೂಲಕ ಇಂಧನ ಪೂರೈಕೆಗೆ ಅಡ್ಡಿಯಾಗಿದ್ದರೂ ಸಹ, ಜಾಗತಿಕವಾಗಿ ಗಗನಕ್ಕೇರುತ್ತಿದ್ದ ಇಂಧನ ಬೆಲೆಗಳ ಬಿಸಿಯಿಂದ ಭಾರತೀಯರನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರಿ ಏರುಪೇರುಗಳು ಮತ್ತು ಇಂಧನ ಪೂರೈಕೆಯಲ್ಲಿ ಸವಾಲುಗಳು ಎದುರಾಗಿದ್ದಾಗಲೂ ಭಾರತವು ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಸರ್ಕಾರದ ಇಂಧನ ನೀತಿಯಲ್ಲಿ ಗ್ರಾಹಕರ ಹಿತಾಸಕ್ತಿಯೇ ಪ್ರಮುಖ ಕೇಂದ್ರಬಿಂದುವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ವೆನಿಜುವೆಲಾ ಅಧ್ಯಕ್ಷೆ ಮಾತುಕತೆ; ಪ್ರಸ್ತಾಪಿತ ಇಂಧನ ಒಪ್ಪಂದದಿಂದ ಭಾರತಕ್ಕೇನು ಲಾಭ?

India-Venezuela Oil Deal: ವೆನೆಜುವೆಲಾ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಭಾರತ ಭೇಟಿ ನೀಡಿ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ, ಹೂಡಿಕೆ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಚರ್ಚಿಸಲಾಯಿತು. ವೆನೆಜುವೆಲಾದಿಂದ ಕಚ್ಚಾ ತೈಲ ಆಮದು ಭಾರತಕ್ಕೆ ಇಂಧನ ಭದ್ರತೆ ಒದಗಿಸುವುದಲ್ಲದೆ, ವಿದೇಶಿ ವಿನಿಮಯ ಉಳಿತಾಯ, ಇಂಧನ ಬೆಲೆ ನಿಯಂತ್ರಣ ಮತ್ತು ಹಣದುಬ್ಬರ ಇಳಿಕೆಗೆ ಸಹಕಾರಿಯಾಗಲಿದೆ. ಇದು ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲಿದೆ.

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು

ಸಾಮಾನ್ಯವಾಗಿ ವಿವಿಐಪಿ ಸಂಸ್ಕೃತಿಯಲ್ಲಿ ಪ್ರತಿಯೊಬ್ಬ ಸಚಿವರಿಗೂ ಪ್ರತ್ಯೇಕ ಬೆಂಗಾವಲು ಪಡೆ ಮತ್ತು ಕಾರುಗಳಿರುತ್ತವೆ. ಆದರೆ, ಈ ಸಾಂಪ್ರದಾಯಿಕ ಶೈಲಿಯನ್ನು ಬದಿಗೊತ್ತಿ ಸಚಿವರು ಒಟ್ಟಾಗಿ ಪ್ರಯಾಣಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸಾಮಾನ್ಯ ಜನರಿಗೂ ಇದು ಇಂಧನ ಉಳಿತಾಯದ ನಿಟ್ಟಿನಲ್ಲಿ ಪ್ರೇರಣೆಯಾಗಲಿದೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಕರೆಯನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಕೇಂದ್ರ ಸಚಿವರೇ ಖುದ್ದಾಗಿ ಅದನ್ನು ಕಾರ್ಯರೂಪಕ್ಕೆ ತಂದು ಇಂಧನ ಉಳಿತಾಯದ ಜಾಗೃತಿಗೆ ಕರೆ ನೀಡಿದ್ದಾರೆ.

ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ