AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas

Prabhas

ಪ್ರಭಾಸ್ ಅವರು ಟಾಲಿವುಡ್​ನ ಬೇಡಿಕೆಯ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಪ್ರಭಾಸ್ ನೀಡಿದ್ದಾರೆ. ಪ್ರಭಾಸ್ ಜನಿಸಿದ್ದು 1979ರ ಅಕ್ಟೋಬರ್ 23ರಂದು. ಪ್ರಭಾಸ್ ತಂದೆ ಉಪ್ಪಲಪತಿ ಸೂರ್ಯ ನಾರಾಯಣ ರಾಜ ನಿರ್ಮಾಪಕರಾಗಿದ್ದರು. ಹೀಗಾಗಿ, ಪ್ರಭಾಸ್​ಗೆ ಚಿತ್ರರಂಗಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. 2002ರಲ್ಲಿ ‘ಈಶ್ವರ್’ ಹೆಸರಿನ ಸಿನಿಮಾ ಮೂಲಕ ಪ್ರಭಾಸ್ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದರು. ಅನುಷ್ಕಾ ಶೆಟ್ಟಿ ಜೊತೆಗಿನ ರಿಲೇಶನ್​ಶಿಪ್ ವಿಚಾರಕ್ಕೆ ಪ್ರಭಾಸ್ ಸಾಕಷ್ಟು ಸುದ್ದಿ ಆಗಿದ್ದರು. ಟಾಲಿವುಡ್​ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಎನ್ನುವ ಪಟ್ಟ ಅವರಿಗೆ ಸಿಕ್ಕಿದೆ. ನಂದಿ ಅವಾರ್ಡ್​ ಸೇರಿ ಹಲವು ಪ್ರಶಸ್ತಿಗಳನ್ನು ಅವರು ಗೆದ್ದಿದ್ದಾರೆ. ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು.

ಇನ್ನೂ ಹೆಚ್ಚು ಓದಿ

‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ

'ಬಾಹುಬಲಿ 2' ಚಿತ್ರವು ತನ್ನ 8ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ, ಚಿತ್ರದ ಮರುಬಿಡುಗಡೆಯನ್ನು ಘೋಷಿಸಲಾಗಿದೆ. ನಿರ್ಮಾಪಕರು ಈ ಸುದ್ದಿಯನ್ನು ಅನೌನ್ಸ್ ಮಾಡಿದ್ದು, ಹಲವು ಆಶ್ಚರ್ಯಕರ ಅಂಶಗಳನ್ನು ಚಿತ್ರದಲ್ಲಿ ಸೇರಿಸಲಾಗುವುದು ಎಂಬ ಮಾಹಿತಿ. ಈ ಸುದ್ದಿಯು ಪ್ರಭಾಸ್, ಅನುಷ್ಕಾ ಶೆಟ್ಟಿ ಮತ್ತು ರಾಜಮೌಳಿ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ.

ಒಂದೇ ಸೋಲಿನಿಂದ ರಶ್ಮಿಕಾ ವೃತ್ತಿಜೀವನಕ್ಕೆ ಪೆಟ್ಟು; ‘ಸ್ಪಿರಿಟ್’ ಸಿನಿಮಾದಿಂದ ಔಟ್?

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಆಗಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಈಗ ನಟಿಗೆ ಹಿನ್ನಡೆ ಆದಂತಿದೆ. ‘ಸಿಕಂದರ್’ ಸಿನಿಮಾ ಸೋತಿದ್ದರಿಂದ ರಶ್ಮಿಕಾ ಅವರಿಗೆ ಬೇಡಿಕೆ ಕಡಿಮೆ ಆಗಲಿದೆ ಎಂದು ಸುದ್ದಿ ಹಬ್ಬಿದೆ. ಚಿತ್ರತಂಡದವರು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಮುಂದೂಡಿದ ಮಂಚು ಮನೋಜ್, ಯಾವುದರ ಭಯ?

Kannappa: ಮಂಚು ವಿಷ್ಣು ನಟನೆಯ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿತ್ತು. ಸಿನಿಮಾದ ಪ್ರಚಾರ ಕಾರ್ಯ ಈಗಾಗಲೇ ಚಾಲ್ತಿಯಲ್ಲಿತ್ತು. ಆದರೆ ಈಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಿನಿಮಾ ಬಿಡುಗಡೆ ಮುಂದೂಡಿಕೆಗೆ ಕಾರಣ ಏನೆಂದು ಮಂಚು ವಿಷ್ಣು ವಿವರಿಸಿದ್ದಾರೆ.

ಪ್ರಭಾಸ್​ಗೆ ಕೂಡಿಬಂತು ಕಂಕಣ ಭಾಗ್ಯ; ಆದ್ರೆ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ನಿರಾಸೆ

ಟಾಲಿವುಡ್ ಹೀರೋ ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ಜೊತೆಗೆ ಅವರು ವೈಯಕ್ತಿಕ ಜೀವನದ ಕಡೆಗೂ ಗಮನ ಹರಿಸಿದ್ದಾರೆ. ಸದ್ಯದಲ್ಲೇ ಅವರ ಮದುವೆ ನೆರವೇರಲಿದೆ ಎಂದು ಹೇಳಲಾಗುತ್ತಿದೆ. ಹೈದರಾಬಾದ್ ಮೂಲದ ಹುಡುಗಿ ಜೊತೆ ಪ್ರಭಾಸ್ ವಿವಾಹ ನಡೆಯಲಿದೆ ಎಂದು ವರದಿ ಆಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಹಿಟ್ ಚಿತ್ರ ರೀ-ರಿಲೀಸ್; ಅಡ್ವಾನ್ಸ್ ಬುಕಿಂಗ್​ನಲ್ಲಿ ಕೋಟಿ ದಾಟಿದ ಗಳಿಕೆ

ಪ್ರಶಾಂತ್ ನೀಲ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಒಂದು ಮರುಬಿಡುಗಡೆಯಾಗುತ್ತಿದೆ. ಅಡ್ವಾನ್ಸ್ ಬುಕಿಂಗ್‌ನಲ್ಲಿ ದಾಖಲೆಯನ್ನು ಬರೆದಿರುವ ಈ ಚಿತ್ರವು ಒಂದು ಕೋಟಿ ರೂಪಾಯಿಗೂ ಅಧಿಕ ಗಳಿಕೆಯನ್ನು ಈಗಾಗಲೇ ಮಾಡಿದೆ. ಹೊಸ ಸಿನಿಮಾಗಳು ಹೆಚ್ಚು ಬಿಡುಗಡೆ ಆಗದೆ ಇರುವುದರಿಂದ ಹಲವು ಚಿತ್ರಗಳು ಮರುಬಿಡುಗಡೆಯಾಗುತ್ತಿದೆ.

ಆ ಪಾತ್ರವನ್ನು ಎರಡು ಬಾರಿ ರಿಜೆಕ್ಟ್ ಮಾಡಿದ ಅಕ್ಷಯ್; ಪ್ರಭಾಸ್ ಮರುಮಾತಿಲ್ಲದೆ ಒಪ್ಪಿದ್ರು

ವಿಷ್ಣು ಮಂಚು ಅವರು ನಟಿಸಿದ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪಾತ್ರಕ್ಕಾಗಿ ಅಕ್ಷಯ್ ಕುಮಾರ್ ಅವರನ್ನು ಆಯ್ಕೆ ಮಾಡುವ ಪ್ರಯತ್ನದ ಕುರಿತು ವಿವರಿಸಿದ್ದಾರೆ. ಅಕ್ಷಯ್ ಕುಮಾರ್ ಆರಂಭದಲ್ಲಿ ಈ ಪಾತ್ರವನ್ನು ನಿರಾಕರಿಸಿದ್ದರೂ, ವಿಷ್ಣು ಮಂಚು ಅವರ ನಿರಂತರ ಪ್ರಯತ್ನದ ನಂತರ ಅವರು ಒಪ್ಪಿದ್ದಾರೆ. ಪ್ರಭಾಸ್ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡುವುದು ಸುಲಭವಾಗಿತ್ತು ಎಂದು ಹೇಳಿದ್ದಾರೆ.

ತಂದೆ ಮೃತಪಟ್ಟ ನೋವಲ್ಲೂ ಸಹಾಯ ಮಾಡೋದು ಮರೆತಿರಲಿಲ್ಲ ಪ್ರಭಾಸ್  

ಖ್ಯಾತ ಬರಹಗಾರ ತೋಟ ಪ್ರಸಾದ್ ಅವರು ಪ್ರಭಾಸ್ ಅವರ ಅಪಾರ ದಯಾಮಯಿತೆಯ ಬಗ್ಗೆ ಬಹಿರಂಗಪಡಿಸಿದ್ದಾರೆ. ತಮ್ಮ ಆಸ್ಪತ್ರೆ ವಾಸ್ತವ್ಯದ ಸಮಯದಲ್ಲಿ ಪ್ರಭಾಸ್ ಅವರಿಂದ ಪಡೆದ ಸಹಾಯವನ್ನು ಅವರು ನೆನಪಿಸಿಕೊಂಡಿದ್ದಾರೆ. ಪ್ರಭಾಸ್ ಅವರು ತಮ್ಮ ತಂದೆಯ ಅಗಲುವಿಕೆಯ ನಡುವೆಯೂ ಈ ಸಹಾಯ ಮಾಡಿದ್ದಾರೆಂದು ಅವರು ಹೇಳಿದ್ದಾರೆ.

ಪ್ರಭಾಸ್ ಮದುವೆ ಆಗದೆ ಇರಲು ಕಾರಣವೇನು? ತಾಯಿ ಶಿವ ಕುಮಾರಿ ಉತ್ತರ ಕೇಳಿ

ಪ್ರಭಾಸ್ ಅವರು 'ಕಲ್ಕಿ 2898 ಎಡಿ' ಚಿತ್ರದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ. ಆದರೆ ಅವರ ಅವಿವಾಹಿತ ಜೀವನ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಅವರ ತಾಯಿ ಶಿವಕುಮಾರಿ ಅವರು, ಪ್ರಭಾಸ್ ಅವರ ಆಪ್ತ ಗೆಳೆಯನ ಬ್ರೇಕಪ್‌ನಿಂದಾಗಿ ಅವರು ಸಂಬಂಧಗಳ ಬಗ್ಗೆ ಭಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಪ್ರಭಾಸ್ ಜೊತೆ ನಟಿಸೋ ಆಸೆ ಇದೆಯಾ? ಇಲ್ಲಿದೆ ‘ಸ್ಪಿರಿಟ್’ ತಂಡದ ಅವಕಾಶ

ಪ್ರಭಾಸ್ ಅಭಿನಯದ ಸಿನಿಮಾದಲ್ಲಿ ತಾವು ಕೂಡ ನಟಿಸಬೇಕು ಎಂಬ ಆಸೆ ಅನೇಕರಿಗೆ ಇದೆ. ಅಂಥ ಕಲಾವಿದರಿಗೆ ‘ಸ್ಪಿರಿಟ್’ ಚಿತ್ರತಂಡ ಈ ಅವಕಾಶ ನೀಡುತ್ತಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ‘ಭದ್ರಕಾಳಿ ಪಿಕ್ಚರ್ಸ್’ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನು ನೋಡಿ ಹಲವರ ಮನದಲ್ಲಿ ಆಸೆ ಚಿಗುರಿದೆ.​

‘ಕಣ್ಣಪ್ಪ’ ಸಿನಿಮಾದಿಂದ ಪ್ರಭಾಸ್​ ಲುಕ್ ಬಹಿರಂಗ; ರುದ್ರನಾದ ರೆಬೆಲ್ ಸ್ಟಾರ್

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಸಿನಿಮಾದಲ್ಲಿ ಪ್ರಭಾಸ್ ಅವರು ರುದ್ರ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಪಾತ್ರದ ಫಸ್ಟ್​ಲುಕ್ ಈಗ ಅನಾವರಣ ಆಗಿದೆ. ಪ್ರಭಾಸ್ ಅವರ ಗೆಟಪ್ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಅಕ್ಷಯ್​ ಕುಮಾರ್​, ಮೋಹನ್​ಲಾಲ್ ಮುಂತಾದ ಸ್ಟಾರ್​ ನಟರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’