AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas

Prabhas

ಪ್ರಭಾಸ್ ಅವರು ಟಾಲಿವುಡ್​ನ ಬೇಡಿಕೆಯ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಪ್ರಭಾಸ್ ನೀಡಿದ್ದಾರೆ. ಪ್ರಭಾಸ್ ಜನಿಸಿದ್ದು 1979ರ ಅಕ್ಟೋಬರ್ 23ರಂದು. ಪ್ರಭಾಸ್ ತಂದೆ ಉಪ್ಪಲಪತಿ ಸೂರ್ಯ ನಾರಾಯಣ ರಾಜ ನಿರ್ಮಾಪಕರಾಗಿದ್ದರು. ಹೀಗಾಗಿ, ಪ್ರಭಾಸ್​ಗೆ ಚಿತ್ರರಂಗಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. 2002ರಲ್ಲಿ ‘ಈಶ್ವರ್’ ಹೆಸರಿನ ಸಿನಿಮಾ ಮೂಲಕ ಪ್ರಭಾಸ್ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದರು. ಅನುಷ್ಕಾ ಶೆಟ್ಟಿ ಜೊತೆಗಿನ ರಿಲೇಶನ್​ಶಿಪ್ ವಿಚಾರಕ್ಕೆ ಪ್ರಭಾಸ್ ಸಾಕಷ್ಟು ಸುದ್ದಿ ಆಗಿದ್ದರು. ಟಾಲಿವುಡ್​ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಎನ್ನುವ ಪಟ್ಟ ಅವರಿಗೆ ಸಿಕ್ಕಿದೆ. ನಂದಿ ಅವಾರ್ಡ್​ ಸೇರಿ ಹಲವು ಪ್ರಶಸ್ತಿಗಳನ್ನು ಅವರು ಗೆದ್ದಿದ್ದಾರೆ. ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು.

ಇನ್ನೂ ಹೆಚ್ಚು ಓದಿ

‘ಸ್ಪಿರಿಟ್’ ಸಿನಿಮಾದಿಂದ ಹೊರ ಹೋದ ಮತ್ತೊಬ್ಬ ಸ್ಟಾರ್ ನಟ

Prabhas movie: ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ನೆಗೆಟಿವ್ ಕಾರಣಗಳಿಗಾಗಿ ಸುದ್ದಿ ಆಗುತ್ತಲೇ ಇದೆ. ವಿಶೇಷವಾಗಿ ಒಬ್ಬರ ಹಿಂದೊಬ್ಬರು ಹೆಸರಾಂತ ನಟರುಗಳು ಈ ಸಿನಿಮಾದಿಂದ ಹೊರನಡೆಯುತ್ತಿದ್ದಾರೆ. ಮೊದಲಿಗೆ ನಾಯಕಿಯಾಗಿ ಆಯ್ಕೆ ಆಗಿದ್ದ ದೀಪಿಕಾ ಪಡುಕೋಣೆ ಸಿನಿಮಾದಿಂದ ಹೊರನಡೆದರು, ಬಳಿಕ ಪ್ರಕಾಶ್ ರೈ ಸಹ ಸಿನಿಮಾದಿಂದ ಹೊರನಡೆದರು. ಈಗ ಸ್ಟಾರ್ ನಟರೊಬ್ಬರು ಸಹ ಸಿನಿಮಾದ ಭಾಗವಲ್ಲ ಎನ್ನಲಾಗಿದೆ.

ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ; ವೈದ್ಯರ ಜೊತೆಗಿನ ಫೋಟೋ ವೈರಲ್

ಸಿನಿಮಾಗಳ ಶೂಟಿಂಗ್ ಸಂದರ್ಭದಲ್ಲಿ ಆದ ಪೆಟ್ಟುಗಳಿಂದಾಗಿ ಪ್ರಭಾಸ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ವೈದ್ಯರ ಜೊತೆಗಿನ ಅವರ ಫೋಟೋ ನೋಡಿ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ‘ಸ್ಪಿರಿಟ್’, ‘ಫೌಜಿ’, ‘ಕಲ್ಕಿ 2898 ಎಡಿ’ ಮುಂತಾದ ಸಿನಿಮಾಗಳಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಅದರ ನಡುವೆ ಆರೋಗ್ಯದ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ.

‘ಫೌಜಿ’ ಹೊಸ ಪೋಸ್ಟರ್ ವೈರಲ್: ಮುಖ ತೋರಿಸದೇ ಕೌತುಕ ಮೂಡಿಸಿದ ಪ್ರಭಾಸ್

ಪ್ರಭಾಸ್ ಅಭಿನಯದ ‘ಫೌಜಿ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಸಿನಿಮಾದ ಹೊಸ ಪೋಸ್ಟರ್ ಅನಾವರಣ ಮಾಡಲಾಗಿದ್ದು, ಕಥೆಯ ಬಗ್ಗೆ ಕೌತುಕ ಹೆಚ್ಚಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ಕಾಣಿಸಿಲ್ಲ. ಆದರೂ ಕೂಡ ಅಭಿಮಾನಿಗಳಿಗೆ ಈ ಪೋಸ್ಟರ್ ಇಷ್ಟ ಆಗಿದೆ.

ಊಹಾಪೋಹಗಳಿಗೆ ತೆರೆ, ಶುರುವಾಯ್ತು ‘ಸಲಾರ್ 2’, ಟ್ಯಾಗ್ ಲೈನ್ ನೆನಪಿದೆಯೇ?

Salaar 2 movie: ‘ಉಗ್ರಂ’ ಸಿನಿಮಾದ ಕತೆಯನ್ನೇ ತುಸು ತಿರುಚಿ ಭಾರಿ ಅದ್ಧೂರಿಯಾಗಿ ‘ಸಲಾರ್’ ಸಿನಿಮಾ ಮಾಡಿದ್ದರು ಪ್ರಶಾಂತ್ ನೀಲ್, ಜೊತೆಗೆ ಕತೆಗೆ ಸಣ್ಣ ಟ್ವಿಸ್ಟ್ ಸಹ ನೀಡಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ, ‘ಸಲಾರ್ 2’ ಸಿನಿಮಾ ನಿಂತು ಹೋಯ್ತು, ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳೆಲ್ಲ ಹರಿದಾಡಿದ್ದವು. ‘ಸಲಾರ್ 2’ ಸಿನಿಮಾ ಪ್ರಾರಂಭವೇ ಆಗುವುದಿಲ್ಲ ಎಂದೆಲ್ಲ ಎನ್ನಲಾಗಿತ್ತು. ಆದರೆ ಈಗ ಕೊನೆಗೂ ಸಿನಿಮಾ ಶುರುವಾಗುತ್ತಿದೆ.

ಪ್ರಭಾಸ್ ಸಿನಿಮಾ ಶೂಟ್ ವೇಳೆ ರಾಜೇಶ್ ಶರ್ಮಗೆ ಕಚ್ಚಿದ ಹುಳು; ಆರೋಗ್ಯ ಸ್ಥಿತಿ ಗಂಭೀರ

ಪ್ರಭಾಸ್ ನಟನೆಯ 'ಫೌಜಿ' ಚಿತ್ರದ ಶೂಟಿಂಗ್ ವೇಳೆ ಹಿರಿಯ ನಟ ರಾಜೇಶ್ ಶರ್ಮಾ ಅವರಿಗೆ ಕೀಟ ಕಚ್ಚಿದ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಘಟನೆ ಬಳಿಕ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಅವರು ಕೋಲ್ಕತ್ತಾದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಬಲಗಾಲಿನಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

ಬಿಗ್ ಅಪ್ಡೇಟ್: ‘ಬಾಹುಬಲಿ 3’ ಬರೋದು ಪಕ್ಕಾ; ರಿವೀಲ್ ಮಾಡಿದ ಪ್ರಭಾಸ್-ರಾನಾ ಜೋಡಿ

'ಬಾಹುಬಲಿ' ಚಿತ್ರಗಳ ಮೂರನೇ ಭಾಗದ ಕುರಿತಾದ ಅಭಿಮಾನಿಗಳ ಪ್ರಶ್ನೆಗೆ ಈಗ ಅಧಿಕೃತ ಉತ್ತರ ಸಿಕ್ಕಿದೆ. ಪ್ರಭಾಸ್, ರಾಣಾ, ಅನುಷ್ಕಾ ಶೆಟ್ಟಿ ಅವರು ಸ್ವತಃ 'ಬಾಹುಬಲಿ 3' ಖಚಿತಪಡಿಸಿದ್ದಾರೆ. ಇವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ‘ಪರಂಪರೆ ಮುಂದುವರಿಯುತ್ತದೆ’ ಎಂಬ ಸಂದೇಶ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರ ಯಾವಾಗ ಸೆಟ್ಟೇರಲಿದೆ ಎಂಬ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಜೈಲಿಗೆ ಹೋಗಲಿರುವ ಪ್ರಭಾಸ್; ಆದರೆ ಅಭಿಮಾನಿಗಳಿಗೆ ಆತಂಕ ಬೇಡ

‘ಅರ್ಜುನ್ ರೆಡ್ಡಿ’, ‘ಅನಿಮಲ್’ ರೀತಿಯ ರಗಡ್ ಸಿನಿಮಾಗಳನ್ನು ಮಾಡಿದ ಸಂದೀಪ್ ರೆಡ್ಡಿ ವಂಗಾ ಜೊತೆ ನಟ ಪ್ರಭಾಸ್ ಅವರು ‘ಸ್ಪಿರಿಟ್’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕಾಗಿ ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಅವರು ಜೈಲಿಗೆ ಹೋಗಬೇಕಾಗಿದೆ. ಜೈಲು ಎಂದರೆ ಆತಂಕ ಬೇಡ. ಅವರು ಅಲ್ಲಿಗೆ ಹೋಗುತ್ತಿರುವುದು ಶೂಟಿಂಗ್ ಸಲುವಾಗಿ ಮಾತ್ರ!

‘ಕಲ್ಕಿ 2’ ಚಿತ್ರದಲ್ಲಿ ಆಲಿಯಾ ಭಟ್, ಸಾಯಿ ಪಲ್ಲವಿ ನಟಿಸ್ತಾರಾ? ಉತ್ತರಿಸಿದ ನಿರ್ದೇಶಕ ನಾಗ್ ಅಶ್ವಿನ್

ಬಹುನಿರೀಕ್ಷಿತ ‘ಕಲ್ಕಿ 2’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರನಡೆದ ಬೆನ್ನಲ್ಲೇ ಹಲವು ಗಾಸಿಪ್ ಹಬ್ಬಿದ್ದವು. ಸಾಯಿ ಪಲ್ಲವಿ ಮತ್ತು ಆಲಿಯಾ ಭಟ್ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಈ ಬಗ್ಗೆ ಸಿನಿಮಾದ ನಿರ್ದೇಶಕ ನಾಗ್ ಅಶ್ವಿನ್ ಅವರೇ ನೇರವಾಗಿ ಸ್ಪಷ್ಟನೆ ನೀಡಿದ್ದಾರೆ.

ಒಂದೇ ವರ್ಷದಲ್ಲಿ ಮೂರು ಸಿನಿಮಾಗಳ ಬಿಡುಗಡೆಗೆ ರೆಡಿಯಾದ ನಟ ಪ್ರಭಾಸ್?

‘ರೆಬೆಲ್ ಸ್ಟಾರ್’ ಪ್ರಭಾಸ್ ಅವರ ಮುಂಬರುವ ಸಿನಿಮಾಗಳ ಬಿಡುಗಡೆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದೇ ವರ್ಷದ ಅಂತರದಲ್ಲಿ ಪ್ರಭಾಸ್ ಅವರ ಮೂರು ಬಿಗ್ ಬಜೆಟ್ ಸಿನಿಮಾಗಳು ತೆರೆಗೆ ಬರಲಿವೆ. ‘ಫೌಜಿ’, ‘ಸ್ಪಿರಿಟ್’, ‘ಕಲ್ಕಿ 2’ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗಲಿವೆ.

‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ

‘ಕೆಜಿಎಫ್ 3’ ಸಿನಿಮಾ ಯಾವಾಗ ಸೆಟ್ಟೇರಬಹುದು ಎಂದು ಕೇಳುವ ಅಭಿಮಾನಿಗಳಿಗೆ ಕೊಂಚ ನಿರಾಸೆ ಆಗಿದೆ. ಈ ಸಿನಿಮಾ ಬಗ್ಗೆ ಪ್ರಶಾಂತ್ ನೀಲ್ ಅವರು ಸದ್ಯಕ್ಕೆ ಯಾವುದೇ ನಿರ್ಧಾರ ಮಾಡಿಲ್ಲ. ‘ಡ್ರ್ಯಾಗನ್’ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ‘ಸಲಾರ್ 2’ ಚಿತ್ರದ ಕೆಲಸ ಆರಂಭಿಸಲಿದ್ದಾರೆ.

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ

ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ಬಹುನಿರೀಕ್ಷಿತ 'ಸ್ಪಿರಿಟ್' ಸಿನಿಮಾ 2027ರ ಮಾರ್ಚ್ 5ರಂದು ನಿಗದಿತ ದಿನಾಂಕದಂದೇ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಸಿನಿಮಾದಿಂದ ಮುಂದೂಡಿಕೆ ವದಂತಿಗಳನ್ನು ತಂಡ ಸ್ಪಷ್ಟವಾಗಿ ನಿರಾಕರಿಸಿದೆ. ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿರುವ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರತಂಡ ತನ್ನ ನಿರ್ಧಾರಕ್ಕೆ ಅಚಲವಾಗಿದೆ.

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ

‘ಫೌಜಿ’ ಸಿನಿಮಾದ ಚಿತ್ರೀಕರಣಕ್ಕೆ ತೆರೆಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಫಘಾತ ಸಂಭವಿಸಿದೆ. ಈ ಘಟನೆಯಲ್ಲಿ ಚಿತ್ರತಂಡದ ಸದಸ್ಯರೊಬ್ಬರು ನಿಧನರಾಗಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಐವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಕೆ ಮಾಡುತ್ತಿದ್ದಾರೆ.

ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!