AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas

Prabhas

ಪ್ರಭಾಸ್ ಅವರು ಟಾಲಿವುಡ್​ನ ಬೇಡಿಕೆಯ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಪ್ರಭಾಸ್ ನೀಡಿದ್ದಾರೆ. ಪ್ರಭಾಸ್ ಜನಿಸಿದ್ದು 1979ರ ಅಕ್ಟೋಬರ್ 23ರಂದು. ಪ್ರಭಾಸ್ ತಂದೆ ಉಪ್ಪಲಪತಿ ಸೂರ್ಯ ನಾರಾಯಣ ರಾಜ ನಿರ್ಮಾಪಕರಾಗಿದ್ದರು. ಹೀಗಾಗಿ, ಪ್ರಭಾಸ್​ಗೆ ಚಿತ್ರರಂಗಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. 2002ರಲ್ಲಿ ‘ಈಶ್ವರ್’ ಹೆಸರಿನ ಸಿನಿಮಾ ಮೂಲಕ ಪ್ರಭಾಸ್ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದರು. ಅನುಷ್ಕಾ ಶೆಟ್ಟಿ ಜೊತೆಗಿನ ರಿಲೇಶನ್​ಶಿಪ್ ವಿಚಾರಕ್ಕೆ ಪ್ರಭಾಸ್ ಸಾಕಷ್ಟು ಸುದ್ದಿ ಆಗಿದ್ದರು. ಟಾಲಿವುಡ್​ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಎನ್ನುವ ಪಟ್ಟ ಅವರಿಗೆ ಸಿಕ್ಕಿದೆ. ನಂದಿ ಅವಾರ್ಡ್​ ಸೇರಿ ಹಲವು ಪ್ರಶಸ್ತಿಗಳನ್ನು ಅವರು ಗೆದ್ದಿದ್ದಾರೆ. ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು.

ಇನ್ನೂ ಹೆಚ್ಚು ಓದಿ

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ

ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ಬಹುನಿರೀಕ್ಷಿತ 'ಸ್ಪಿರಿಟ್' ಸಿನಿಮಾ 2027ರ ಮಾರ್ಚ್ 5ರಂದು ನಿಗದಿತ ದಿನಾಂಕದಂದೇ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಸಿನಿಮಾದಿಂದ ಮುಂದೂಡಿಕೆ ವದಂತಿಗಳನ್ನು ತಂಡ ಸ್ಪಷ್ಟವಾಗಿ ನಿರಾಕರಿಸಿದೆ. ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿರುವ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರತಂಡ ತನ್ನ ನಿರ್ಧಾರಕ್ಕೆ ಅಚಲವಾಗಿದೆ.

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ

‘ಫೌಜಿ’ ಸಿನಿಮಾದ ಚಿತ್ರೀಕರಣಕ್ಕೆ ತೆರೆಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಫಘಾತ ಸಂಭವಿಸಿದೆ. ಈ ಘಟನೆಯಲ್ಲಿ ಚಿತ್ರತಂಡದ ಸದಸ್ಯರೊಬ್ಬರು ನಿಧನರಾಗಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಐವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಕೆ ಮಾಡುತ್ತಿದ್ದಾರೆ.

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ

ಪ್ರಭಾಸ್ ಅವರ 'ಸ್ಪಿರಿಟ್' ಹಾಗೂ ಸಲ್ಮಾನ್ ಖಾನ್ ಅವರ ಹೊಸ ಸಿನಿಮಾ (SVC 63) 2027ರ ಈದ್ ಹಬ್ಬದಂದು ಬಿಡುಗಡೆಯಾಗಲು ಸಜ್ಜಾಗಿವೆ. ಟಾಲಿವುಡ್ ಮಂದಿ ಸಲ್ಮಾನ್ ಖಾನ್ ಚಿತ್ರದ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಭಾಗಿಯಾಗಿರುವುದು ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪ್ರಭಾಸ್ ವಿರುದ್ಧ ಸಲ್ಮಾನ್ ಅವರನ್ನು ಎತ್ತಿಕಟ್ಟುವ ಪ್ರಯತ್ನ ನಡೆದಿದೆಯೇ ಎಂಬ ಚರ್ಚೆ ಶುರುವಾಗಿದೆ.

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈಗ ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ಸರದಿ. ಹೈದರಾಬಾದ್​ನಲ್ಲಿ ಅವರಿಬ್ಬರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಸ್ಪಿರಿಟ್’ ಸಿನಿಮಾದ ಕೆಲಸಗಳ ನಡುವೆ ಅವರು ‘ಧುರಂಧರ್ 2’ ಸಿನಿಮಾ ವೀಕ್ಷಿಸಿದ್ದಾರೆ.

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡದ ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ತೆಲುಗಿನ ಪ್ರಭಾಸ್ ನಡುವೆ ಊಟದ ವಿಷಯದಲ್ಲಿ ವಿಶೇಷ ಸಾಮ್ಯತೆ ಇದೆ. ಇಬ್ಬರೂ ಎಲ್ಲರಿಗೂ ಊಟ ಹಾಕಿಸುವುದನ್ನು ಅಪಾರವಾಗಿ ಇಷ್ಟಪಡುತ್ತಿದ್ದರು. ಪ್ರಭಾಸ್ ಅಂಬರೀಷ್ ಅವರಂತೆಯೇ ಸೆಟ್‌ನಲ್ಲಿರುವವರಿಗೂ ಔದಾರ್ಯದಿಂದ ಊಟ ನೀಡುತ್ತಾರೆ, ತಮ್ಮ ಕುಟುಂಬದ ಊಟದ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ.

‘ಫೌಜಿ’ ಸೆಟ್​ನಿಂದ ಪ್ರಭಾಸ್ ಫೋಟೋ ಲೀಕ್: ಅಭಿಮಾನಿಗಳಿಗೆ ಚಿತ್ರತಂಡದ ವಾರ್ನಿಂಗ್

ಖ್ಯಾತ ನಟ ಪ್ರಭಾಸ್ ಅವರು ‘ಫೌಜಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದ ಕೆಲವು ಫೋಟೋಗಳು ಲೀಕ್ ಆಗಿರುವುದು ಚಿತ್ರತಂಡಕ್ಕೆ ಬೇಸರ ತಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆದ ಬಳಿಕ ‘ಫೌಜಿ’ ಚಿತ್ರತಂಡ ಖಡಕ್ ಎಚ್ಚರಿಕೆ ನೀಡಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ನಿವೃತ್ತಿ ದಿನ ಹತ್ತಿರ ಬಂತು’; ಪ್ರಭಾಸ್ ಹೊಸ ಲುಕ್ ನೋಡಿ ಬಂತು ಟೀಕೆ

ನಟ ಪ್ರಭಾಸ್ ಅವರ ಇತ್ತೀಚಿನ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 'ಬೈಕರ್' ಪ್ರಚಾರದಲ್ಲಿ ಕಾಣಿಸಿಕೊಂಡ ಪ್ರಭಾಸ್ ವಯಸ್ಸಾದವರಂತೆ ಕಾಣುತ್ತಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ತಂದಿದ್ದು, ಲುಕ್ ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ಇತ್ತೀಚಿನ 'ರಾಜಾ ಸಾಬ್' ಸೋಲಿನ ನಂತರ 'ಸ್ಪಿರಿಟ್' ಚಿತ್ರದಿಂದ ದೊಡ್ಡ ಗೆಲುವು ನಿರೀಕ್ಷಿಸಿರುವ ಪ್ರಭಾಸ್, ತಮ್ಮ ನೋಟದ ಬಗ್ಗೆ ಗಮನ ಹರಿಸಬೇಕಿದೆ.

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

‘ದಿ ರಾಜಾ ಸಾಬ್’ ಬಿಡುಗಡೆ ನಂತರ 3 ತಿಂಗಳು ಮೌನವಾಗಿದ್ದ ಮಾರುತಿ ಈಗ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ರಾಮ ನವಮಿ ದಿನವೇ ಹೊಸ ಚಿತ್ರದ ಸ್ಕ್ರಿಪ್ಟ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಪ್ರಭಾಸ್ ಜತೆ ಸಿನಿಮಾ ಮಾಡಿ ಸೋತ ಅವರು ಈಗ ಯಾವ ಹೀರೋಗೆ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಮೂಡಿದೆ.

ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಿಜ ಜೀವನದಲ್ಲಿ ಜೋಡಿ ಆಗಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಅವರ ಕುಟುಂಬದವರ ಪ್ಲ್ಯಾನ್ ಬೇರೆಯೇ ಇದೆ ಎಂದು ಹೊಸ ಗಾಸಿಪ್ ಹಬ್ಬಿದೆ. ಬೆಂಗಳೂರಿನ ಉದ್ಯಮಿ ಜೊತೆ ಅನುಷ್ಕಾ ಶೆಟ್ಟಿ ಮದುವೆಗೆ ಮಾತುಕಥೆ ನಡೆದಿದೆ ಎನ್ನಲಾಗುತ್ತಿದೆ.

ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್

ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾದ ಸೀಕ್ವೆಲ್ ಅಧಿಕೃತವಾಗಿ ಆರಂಭವಾಗಿದೆ. ದೀಪಿಕಾ ಪಡುಕೋಣೆ ನಿರ್ಗಮನದಂತಹ ಅಡೆತಡೆಗಳ ನಂತರ, ಅಮಿತಾಭ್ ಬಚ್ಚನ್ ಅವರು ಕಮಲ್ ಹಾಸನ್ ಜೊತೆಗಿನ ಫೋಟೋ ಹಂಚಿಕೊಳ್ಳುವ ಮೂಲಕ ಚಿತ್ರೀಕರಣ ಶುರುವಾಗಿದೆ ಎಂದು ಖಚಿತಪಡಿಸಿದ್ದಾರೆ. ದೀಪಿಕಾ ಜಾಗಕ್ಕೆ ಸಾಯಿ ಪಲ್ಲವಿ ಬರುವ ಸಾಧ್ಯತೆಯಿದೆ.

ಶೂಟಿಂಗ್ ವೇಳೆ ಪ್ರಭಾಸ್​​ಗೆ ಗಾಯ; ಇದರಿಂದಲೂ ಲಾಭ ಪಡೆದ ಫ್ಯಾನ್ಸ್

ಸಿನಿಮಾ ಶೂಟಿಂಗ್ ವೇಳೆ ಪ್ರಭಾಸ್ ಗಾಯಗೊಂಡಿದ್ದು, ಇದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಆದರೆ, ಕೆಲವು ಅಭಿಮಾನಿಗಳು ಇದನ್ನೇ ಸಕಾರಾತ್ಮಕವಾಗಿ ಬಳಸಿಕೊಂಡು, ಪ್ರಭಾಸ್ ಶ್ರಮ ಹಾಕ್ತಾ ಇಲ್ಲ ಎಂದು ಟ್ರೋಲ್ ಮಾಡುತ್ತಿದ್ದವರಿಗೆ ತಕ್ಕ ಉತ್ತರ ನೀಡಿದ್ದಾರೆ. ಈ ಘಟನೆಯನ್ನು ಪ್ರಭಾಸ್ ಅವರ ಸಮರ್ಪಣೆಗೆ ಸಾಕ್ಷಿಯನ್ನಾಗಿ ಪರಿವರ್ತಿಸಿ, ಟ್ರೋಲಿಗರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್

2026ರ ಆರಂಭದಲ್ಲೇ ರಿಲೀಸ್ ಆಗಿದ್ದ ‘ದಿ ರಾಜಾ ಸಾಬ್’ ಸಿನಿಮಾ ಹೀನಾಯವಾಗಿ ಸೋತಿತು. ಆದರೆ ಒಟಿಟಿ ಟ್ರೆಂಡಿಂಗ್​​ನಲ್ಲಿ ಈ ಸಿನಿಮಾ ಈಗ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಪ್ರಸಾರ ಕಾಣುತ್ತಿದೆ.

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ