AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas

Prabhas

ಪ್ರಭಾಸ್ ಅವರು ಟಾಲಿವುಡ್​ನ ಬೇಡಿಕೆಯ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಪ್ರಭಾಸ್ ನೀಡಿದ್ದಾರೆ. ಪ್ರಭಾಸ್ ಜನಿಸಿದ್ದು 1979ರ ಅಕ್ಟೋಬರ್ 23ರಂದು. ಪ್ರಭಾಸ್ ತಂದೆ ಉಪ್ಪಲಪತಿ ಸೂರ್ಯ ನಾರಾಯಣ ರಾಜ ನಿರ್ಮಾಪಕರಾಗಿದ್ದರು. ಹೀಗಾಗಿ, ಪ್ರಭಾಸ್​ಗೆ ಚಿತ್ರರಂಗಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. 2002ರಲ್ಲಿ ‘ಈಶ್ವರ್’ ಹೆಸರಿನ ಸಿನಿಮಾ ಮೂಲಕ ಪ್ರಭಾಸ್ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದರು. ಅನುಷ್ಕಾ ಶೆಟ್ಟಿ ಜೊತೆಗಿನ ರಿಲೇಶನ್​ಶಿಪ್ ವಿಚಾರಕ್ಕೆ ಪ್ರಭಾಸ್ ಸಾಕಷ್ಟು ಸುದ್ದಿ ಆಗಿದ್ದರು. ಟಾಲಿವುಡ್​ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಎನ್ನುವ ಪಟ್ಟ ಅವರಿಗೆ ಸಿಕ್ಕಿದೆ. ನಂದಿ ಅವಾರ್ಡ್​ ಸೇರಿ ಹಲವು ಪ್ರಶಸ್ತಿಗಳನ್ನು ಅವರು ಗೆದ್ದಿದ್ದಾರೆ. ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಮೂಲಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು.

ಇನ್ನೂ ಹೆಚ್ಚು ಓದಿ

ಪ್ರಭಾಸ್ ಬಳಿ ಇದೆ ಹಲವು ಸೀಕ್ವೆಲ್; ಯಾವುದಕ್ಕೂ ನಟನ ಬಳಿ ಟೈಮ್ ಇಲ್ಲ

ಪ್ರಭಾಸ್ ಅವರು ಹಲವು ಹೊಸ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರಿಂದಾಗಿ ‘ಸಲಾರ್ 2’ ಮತ್ತು ‘ಕಲ್ಕಿ 2898 ಎಡಿ’ ನಂತಹ ಸೀಕ್ವೆಲ್‌ಗಳಿಗೆ ಸಮಯ ಕೊರತೆಯಾಗಿದೆ. ‘ಸಲಾರ್’ ಚಿತ್ರದ ನಿರೀಕ್ಷಿತ ಯಶಸ್ಸು ಸಾಧಿಸದಿದ್ದರೂ ಸಹ, ಸೀಕ್ವೆಲ್‌ ಮಾಡಲಾಗುತ್ತಿದೆ. ‘ಕಲ್ಕಿ 2898 ಎಡಿ’ ಸೀಕ್ವೆಲ್ ಸಹ ವಿವಿಧ ಕಾರಣಗಳಿಂದ ವಿಳಂಬವಾಗಿದೆ.

ಕನ್ನಡದಲ್ಲೂ ಬಿಡುಗಡೆ ಆಯ್ತು ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಟೀಸರ್

ಪ್ರಭಾಸ್ ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರು ‘ದಿ ರಾಜಾ ಸಾಬ್’ ಚಿತ್ರದ ಮೇಲೆ ನಿರೀಕ್ಷೆ ಹೊಂದಿದ್ದಾರೆ. ಇಂದು (ಜೂನ್ 16) ಈ ಸಿನಿಮಾದ ಮೊದಲ ಟೀಸರ್ ಬಿಡುಗಡೆ ಆಗಿದೆ. ‘ಪೀಪಲ್‌ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.

‘ದಿ ರಾಜಾ ಸಾಬ್’ ಸಿನಿಮಾದ ಟೀಸರ್ ಲೀಕ್; ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ

‘ದಿ ರಾಜಾ ಸಾಬ್’ ಚಿತ್ರದ ಟೀಸರ್ ನೋಡಲು ಕಾದಿದ್ದ ಪ್ರಭಾಸ್ ಅಭಿಮಾನಿಗಳಿಗೆ ಸಖತ್ ನಿರಾಸೆ ಆಗಿದೆ. ಯಾಕೆಂದರೆ, ಸೋಶಿಯಲ್ ಮೀಡಿಯಾದಲ್ಲಿ ಈ ಟೀಸರ್ ಲೀಕ್ ಆಗಿದೆ. ತುಣುಕುಗಳು ವೈರಲ್ ಆಗಿವೆ. ಲೀಕ್ ಮಾಡಿದವರ ವಿರುದ್ಧ ಹಾಗೂ ಶೇರ್ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಚಿತ್ರತಂಡದವರು ನಿರ್ಧರಿಸಿದ್ದಾರೆ.

ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?

ದೀಪಿಕಾ ಪಡುಕೋಣೆ ಅವರಿಗೆ ಹೊಸ ಅವಕಾಶಗಳು ಸಿಗುವುದನ್ನು ತಪ್ಪಿಸಲು ಕೆಲವರು ಹುನ್ನಾರ ನಡೆಸಿದ್ದಾರೆ. ಆ ಕಾರಣದಿಂದಲೇ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಅಭಿಮಾನಿಗಳಿಗೆ ಸತ್ಯ ಏನೆಂಬುದು ತಿಳಿದಿದೆ. ‘ಸ್ಪಿರಿಟ್’ ಸಿನಿಮಾ ತಂಡದ ಜೊತೆ ವೈಮನಸ್ಸು ಉಂಟಾದ ಬಳಿಕ ಈ ರೀತಿಯ ಗಾಸಿಪ್​ಗಳು ಹೆಚ್ಚಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಬಾಹುಬಲಿ’ ರೀ-ರಿಲೀಸ್; ಒಂದೇ ಪಾರ್ಟ್​ನಲ್ಲಿ ಎರಡು ಭಾಗ

ಬಾಹುಬಲಿ ಚಿತ್ರದ 10ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಎರಡೂ ಭಾಗಗಳನ್ನು ಒಂದುಗೂಡಿಸಿ ಸಿನಿಮಾನ ಅಕ್ಟೋಬರ್‌ನಲ್ಲಿ ಮರುಬಿಡುಗಡೆ ಮಾಡಲಾಗುತ್ತಿದೆ. ಪ್ರಭಾಸ್ ಅವರ ಜನ್ಮದಿನದಂದು ರಿಲೀಸ್ ಆಗುವ ಈ ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಕಡಿಮೆ ಮಾಡಿ, ಹೊಸ ಮೆರಗು ನೀಡಲಾಗುತ್ತಿದೆ. ಒಂದೇ ಭಾಗದಲ್ಲಿ ಎರಡೂ ಚಿತ್ರಗಳನ್ನು ಪ್ರದರ್ಶಿಸುವುದು ಅಭಿಮಾನಿಗಳಿಗೆ ಹೊಸ ಅನುಭವ ನೀಡುವ ನಿರೀಕ್ಷೆಯಿದೆ.

50 ಕೋಟಿ ರೂಪಾಯಿ ಸಂಭಾವನೆ ಕಡಿಮೆ ಮಾಡಿಕೊಂಡ ಪ್ರಭಾಸ್; ಕಾರಣ ಏನು?

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ‘ದಿ ರಾಜಾ ಸಾಬ್’ ಚಿತ್ರಕ್ಕಾಗಿ ಅವರು ತಮ್ಮ ಸಂಭಾವನೆಯಲ್ಲಿ 50 ಕೋಟಿ ರೂಪಾಯಿ ಕಡಿಮೆ ಮಾಡಿಕೊಂಡಿದ್ದಾರೆ. ಈ ಸಿನಿಮಾಗೆ ಪ್ರಭಾಸ್ ಅವರು ಪಡೆದ ಸಂಭಾವನೆ ಎಷ್ಟು? ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..

‘ಕಣ್ಣಪ್ಪ’ ಚಿತ್ರದ ಅವಧಿ ಇಷ್ಟೊಂದು ದೀರ್ಘವೇ? ಯಾರ ಪಾತ್ರ ಎಷ್ಟೊತ್ತಿದೆ?

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾ ಜೂನ್ 27 ರಂದು ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್, ಮೋಹನ್ ಬಾಬು, ಮೋಹನ್ ಲಾಲ್, ಮತ್ತು ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಬಹುಭಾಷಾ ಚಿತ್ರವಾದ ಇದು ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೊಸ ಹಾಡು ಕಾಳ ಹಸ್ತಿಯಲ್ಲಿ ಮೇ 28 ರಂದು ಬಿಡುಗಡೆಯಾಗಲಿದೆ.

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾದ ‘ಅನಿಮಲ್’ ನಟಿ ತೃಪ್ತಿ ದಿಮ್ರಿ

‘ಅನಿಮಲ್’ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ನಟಿಸಿದ್ದ ತೃಪ್ತಿ ದಿಮ್ರಿ ಅವರಿಗೆ ಈಗ ಬಂಪರ್ ಚಾನ್ಸ್ ಸಿಕ್ಕಿದೆ. ಈಗ ಅವರು ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾಗೆ ನಾಯಕಿ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ಅನಿಮಲ್’ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ‘ಸ್ಪಿರಿಟ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.

‘ಸ್ಪಿರಿಟ್’ ಚಿತ್ರಕ್ಕೆ ಪ್ರಭಾಸ್​ಗೆ ಜೊತೆಯಾಗಲಿದ್ದಾರೆ ದೀಪಿಕಾ ಪಡುಕೋಣೆ?

ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗ್ ನಿರ್ದೇಶನದ 'ಸ್ಪಿರಿಟ್' ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 'ಕಲ್ಕಿ 2898 ಎಡಿ' ಚಿತ್ರದ ನಂತರ ಇವರಿಬ್ಬರು ಮತ್ತೆ ಒಂದಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ದೀಪಿಕಾ ಅವರು ಈಗಾಗಲೇ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದರೂ, 'ಸ್ಪಿರಿಟ್' ಚಿತ್ರಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ

'ಬಾಹುಬಲಿ 2' ಚಿತ್ರವು ತನ್ನ 8ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ, ಚಿತ್ರದ ಮರುಬಿಡುಗಡೆಯನ್ನು ಘೋಷಿಸಲಾಗಿದೆ. ನಿರ್ಮಾಪಕರು ಈ ಸುದ್ದಿಯನ್ನು ಅನೌನ್ಸ್ ಮಾಡಿದ್ದು, ಹಲವು ಆಶ್ಚರ್ಯಕರ ಅಂಶಗಳನ್ನು ಚಿತ್ರದಲ್ಲಿ ಸೇರಿಸಲಾಗುವುದು ಎಂಬ ಮಾಹಿತಿ. ಈ ಸುದ್ದಿಯು ಪ್ರಭಾಸ್, ಅನುಷ್ಕಾ ಶೆಟ್ಟಿ ಮತ್ತು ರಾಜಮೌಳಿ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ.

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ