Prajwal Revanna
ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಕೇವಲ 29 ವರ್ಷ ವಯಸ್ಸಿನಲ್ಲಿ ಸಂಸದರಾದವರು. ದೇಶದ ಮೂರನೇ ಅತ್ಯಂತ ಕಿರಿಯ ಸಂಸದ ಎಂಬ ದಾಖಲೆ ಬರೆದವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಕ್ಕಳಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರು. ದೇವೇಗೌಡರ ಹಿರಿಯ ಮಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪ್ರಜ್ವಲ್ ತಂದೆ. ಹಾಸನ ಜಿಲ್ಲೆಯವರಾದ ಪ್ರಜ್ವಲ್ ರೇವಣ್ಣ ಹುಟ್ಟಿದ್ದು 1990 ಆಗಸ್ಟ್ 5ರಂದು. ರಾಜಕೀಯ ಹಿನ್ನೆಲೆಯ ಕುಟುಂಬದ ಸದಸ್ಯರಾದ ಅವರು ನಿರೀಕ್ಷೆಯಂತೆ ರಾಜಕೀಯವಾಗಿ ಬೇಗ ಮುನ್ನೆಲೆಗೆ ಬಂದಿದ್ದಾರೆ. ಬೆಂಗಳೂರಿನ ಬಿಐಟಿಯಲ್ಲಿ 2014ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿದ ಅವರು ಆಸ್ಟ್ರೇಲಿಯಾಗೆ ಉನ್ನತ ವ್ಯಾಸಂಗಕ್ಕೆ ಹೋಗಿದ್ದರು. 2015ರಲ್ಲಿ ರಾಜಕೀಯ ವೃತ್ತಿಜೀವನ ಬಯಸಿ ಅವರು ಆಸ್ಟ್ರೇಲಿಯಾದಲ್ಲಿ ಓದನ್ನು ಅರ್ಧಕ್ಕೆ ಬಿಟ್ಟು ಹಾಸನಕ್ಕೆ ಬಂದಿದ್ದರು. 2018ರಲ್ಲಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಯಿತು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದರು.
ಇನ್ನೂ ಹೆಚ್ಚು ಓದಿಪ್ರಜ್ವಲ್ ರೇವಣ್ಣ ಕೇಸ್: ಪೆನ್ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ 8 ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಈ ಸಂಬಂಧ 42 ನೇ ಎಸಿಜೆಎಂ ಕೋರ್ಟ್ ಮಹತ್ವ ಆದೇಶ ಹೊರಡಿಸಿದ್ದು, ಪೆನ್ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ ಎದುರಾಗಿದೆ.
- Ramesha M
- Updated on: Jul 25, 2026
- 8:02 pm
ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ (Parole) ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ಟಿವಿಯಲ್ಲೇ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಇದೀಗ ಪ್ರಜ್ವಲ್ಗೆ ಕೋರ್ಟ್ನಿಂದ ಕೊಂಚ ರಿಲೀಫ್ ಸಿಕ್ಕಿದೆ.
- Ramesha M
- Updated on: Jul 20, 2026
- 9:57 pm
ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಜ್ಜಿಯ ಅಗಲಿಕೆಯ ಸುದ್ದಿ ಕೇಳಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಆರಂಭವಾಗಿದೆ.
- Ramu Ram
- Updated on: Jul 19, 2026
- 8:55 am
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.
- Dileep CP
- Updated on: Mar 29, 2026
- 2:29 pm
ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಚಾರ್ಜ್ಶೀಟ್ ವಿರುದ್ಧ ಜೆಡಿಎಸ್ ಶಾಸಕನ ಆಕ್ರೋಶ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲು ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಚಾರ್ಜ್ಶೀಟ್ನಲ್ಲಿ ಸೇರಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳ ಹೆಸರುಗಳನ್ನು ಕೈಬಿಟ್ಟಿರುವುದನ್ನು ಅವರು ಪ್ರಶ್ನಿಸಿದ್ದಾರೆ. ನ್ಯಾಯಸಮ್ಮತ ತನಿಖೆ ಹಾಗೂ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
- Manjunath KB
- Updated on: Mar 20, 2026
- 2:10 pm
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
- Ramesh B Jawalagera
- Updated on: Mar 19, 2026
- 6:15 pm
ಪ್ರಜ್ವಲ್ ವಿಡಿಯೋ ವೈರಲ್ ಹಿಂದೆ ಜೆಡಿಎಸ್ನವರದ್ದೂ ಕೈವಾಡ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ರಿವೀಲ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ SIT ಸಲ್ಲಿಸಿರುವ ದೋಷಾರೋಪ ಪಟ್ಟಿಯು ಜೆಡಿಎಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜೆಡಿಎಸ್ ಸದಸ್ಯರೂ ಆರೋಪಿಗಳಾಗಿರುವುದು ಪಕ್ಷದ ನಾಯಕರನ್ನು ಅಚ್ಚರಿಗೊಳಿಸಿದೆ. ದೂರುದಾರರು, ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚಲು ಮತ್ತಷ್ಟು ತನಿಖೆಗೆ ಒತ್ತಾಯಿಸಿದ್ದಾರೆ. ಐಟಿ ಕಾಯ್ದೆ 67ಎ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಜೆಡಿಎಸ್ ಕಾರ್ಯಕರ್ತರ ಸೇರ್ಪಡೆ ಕುರಿತು ಷಡ್ಯಂತ್ರದ ಅನುಮಾನ ವ್ಯಕ್ತವಾಗಿದೆ.
- Manjunath KB
- Updated on: Mar 19, 2026
- 2:54 pm
ಮಾಜಿ ಆಪ್ತರಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ರಿವೀಲ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಾಜಿ ಆಪ್ತರಾದ ನವೀನ್ ಗೌಡ, ಕಾರ್ತಿಕ್, ಚೇತನ್ ಮತ್ತು ಹರೀಶ್ ಅವರೇ ವಿಡಿಯೋ ವೈರಲ್ ಹಿಂದಿನ ಪ್ರಮುಖ ರೂವಾರಿಗಳು. ಪ್ರಜ್ವಲ್ ಮೊಬೈಲ್ನಿಂದ ವಿಡಿಯೋ ಕದ್ದಿದ್ದ ಕಾರ್ತಿಕ್, ಇತರರೊಂದಿಗೆ ಸೇರಿ ಪೆನ್ಡ್ರೈವ್ಗಳನ್ನು ವಿತರಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರ ಮಾಜಿ ಆಪ್ತರೇ ಖೆಡ್ಡಾ ತೋಡಿದ್ದು ಸ್ಪಷ್ಟವಾಗಿದೆ.
- Manjunath KB
- Updated on: Mar 18, 2026
- 3:34 pm
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ, ಸ್ಫೋಟಕ ಅಂಶ ಬಯಲು
ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ! ಚಾರ್ಜ್ಶೀಟ್ನಲ್ಲಿ ಹಲವು ಅಚ್ಚರಿಯ ಸಂಗತಿಗಳು ಬಯಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.
- Manjunath KB
- Updated on: Mar 18, 2026
- 9:44 am
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕರ್ನಾಟಕ ಮಾತ್ರವಲ್ಲ ದೇಶದಲ್ಲೂ ಭಾರೀ ಸದ್ದು ಮಾಡಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನು ವಿಷಯ ಏನಂದ್ರೆ ಈ ಪ್ರಕರಣಗಳನ್ನು ಸಮರ್ಥವಾಗಿ ತನಿಖೆ ನಡೆಸಿ ಅಪರಾಧವನ್ನು ಸಾಬೀತು ಮಾಡಿ ಶಿಕ್ಷೆಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ ಘೋಷಿಸಲಾಗಿದೆ.
- Ramesh B Jawalagera
- Updated on: Jan 23, 2026
- 5:58 pm
ರೇವಣ್ಣ, ರೇವಣ್ಣನ ಮಕ್ಕಳೇ ಆಡಳಿತ ಮಾಡಬೇಕು ಅಂತೇನಿಲ್ಲ: ಬಿಜೆಪಿ ಮುಖಂಡ ಕಿಡಿ
ಪ್ರಜ್ವಲ್ ಇಲ್ಲ ಅಂದರೆ ಮತ್ತೊಬ್ಬ ನಾಯಕ ಬರುತ್ತಾರೆ. ರೇವಣ್ಣ, ರೇವಣ್ಣನ ಕುಟುಂಬ ಇಲ್ಲದೆ ಹೋದರೂ ಹಾಸನ ಜಿಲ್ಲೆ ಅಭಿವೃದ್ಧಿ ಆಗುತ್ತೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ. ಹೈಕೋರ್ಟ್ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.
- Manjunath KB
- Updated on: Dec 3, 2025
- 10:34 pm
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ತಿಳಿಸಿದದೆ.
- Ramesha M
- Updated on: Dec 3, 2025
- 1:59 pm