AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajwal Revanna

Prajwal Revanna

ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಕೇವಲ 29 ವರ್ಷ ವಯಸ್ಸಿನಲ್ಲಿ ಸಂಸದರಾದವರು. ದೇಶದ ಮೂರನೇ ಅತ್ಯಂತ ಕಿರಿಯ ಸಂಸದ ಎಂಬ ದಾಖಲೆ ಬರೆದವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಕ್ಕಳಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರು. ದೇವೇಗೌಡರ ಹಿರಿಯ ಮಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪ್ರಜ್ವಲ್ ತಂದೆ. ಹಾಸನ ಜಿಲ್ಲೆಯವರಾದ ಪ್ರಜ್ವಲ್ ರೇವಣ್ಣ ಹುಟ್ಟಿದ್ದು 1990 ಆಗಸ್ಟ್ 5ರಂದು. ರಾಜಕೀಯ ಹಿನ್ನೆಲೆಯ ಕುಟುಂಬದ ಸದಸ್ಯರಾದ ಅವರು ನಿರೀಕ್ಷೆಯಂತೆ ರಾಜಕೀಯವಾಗಿ ಬೇಗ ಮುನ್ನೆಲೆಗೆ ಬಂದಿದ್ದಾರೆ. ಬೆಂಗಳೂರಿನ ಬಿಐಟಿಯಲ್ಲಿ 2014ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿದ ಅವರು ಆಸ್ಟ್ರೇಲಿಯಾಗೆ ಉನ್ನತ ವ್ಯಾಸಂಗಕ್ಕೆ ಹೋಗಿದ್ದರು. 2015ರಲ್ಲಿ ರಾಜಕೀಯ ವೃತ್ತಿಜೀವನ ಬಯಸಿ ಅವರು ಆಸ್ಟ್ರೇಲಿಯಾದಲ್ಲಿ ಓದನ್ನು ಅರ್ಧಕ್ಕೆ ಬಿಟ್ಟು ಹಾಸನಕ್ಕೆ ಬಂದಿದ್ದರು. 2018ರಲ್ಲಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಯಿತು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದರು.

ಇನ್ನೂ ಹೆಚ್ಚು ಓದಿ

ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ್ದು ಬಹಿರಂಗವಾಗಿದೆ. ಪೋಷಕರು ಸೇರಿ ಹಲವರೊಂದಿಗೆ ಸಂಪರ್ಕದಲ್ಲಿದ್ದ ಪ್ರಜ್ವಲ್ ಎರಡು ಮೊಬೈಲ್‌ಗಳನ್ನು ಬಳಸಿದ್ದರು. ಪ್ರತಾಪ್ ರಾಯ್ ಮೂಲಕ ನವೀನ್ ಎಂಬಾತ ಮೊಬೈಲ್ ಪೂರೈಸಿದ್ದು, ಆತನ ಬಂಧನವಾಗಿದೆ. ಡಿಐಜಿ ಜಿನೇಂದ್ರ ಗಣಗಾವಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು, ಜೈಲು ಸಿಬ್ಬಂದಿಗೂ ಸಂಕಷ್ಟ ಎದುರಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ; ತನಿಖೆಗೆ ಕೋರ್ಟ್​​ ಸೂಚನೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಐಡಿ ಎಡಿಜಿಪಿಗೆ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ನನಗೆ ಅಥವಾ ನನ್ನ ಮಗನಿಗೆ ಏನಾದರೂ ಆದರೆ ಅದಕ್ಕೆ ಆರೋಪಿಗಳೇ ಹೊಣೆ ಎಂದು ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಯಾರು ಬಂದ್ರೂ ಬದಲಾಗದ ಪರಪ್ಪನ ಅಗ್ರಹಾರ ಜೈಲು: ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆ

ಮೊನ್ನೇ ಅಷ್ಟೇ ಸಿಸಿಬಿ ದಾಳಿ ಮಾಡಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕಿತ್ತು. ಇನ್ನು ಅದೇ ದಿನ ಜೈಲು ಅಧಿಕಾರಿಗಳು ದಾಳಿ ಮಾಡಿದ್ದಾಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ FIR​ ದಾಖಲಾಗಿದ್ದು, ಯಾರು ಈ ಮೊಬೈಲ್ ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

ಅಲೋಕ್​ ಕುಮಾರ್ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಲ್ಲೋಲ ಕಲ್ಲೋಲ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಜೈಲಿನಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಜೈಲಾಧಿಕಾರಿಗಳು ಹೈಪ್ರೊಫೈಲ್ ಕೈದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇನ್ನು ಪ್ರಜ್ವಲ್ ಮೊಬೈಲ್ ಬಿಸಿ ದರ್ಶನ್ ಹಾಗೂ ಪವಿತ್ರಾಗೌಡಗೂ ತಟ್ಟಿದೆ. ಹಾಗಾದ್ರೆ, ಜೈಲಿನಲ್ಲಿ ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

  • Kiran HV
  • Updated on: Aug 15, 2026
  • 6:39 pm

ಪರಪ್ಪನ ಅಗ್ರಹಾರ ಜೈಲು ಪರಿಶೀಲಿಸಿದ ಡಿಜೆಪಿ: ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್

ಸಿಸಿಬಿ ದಾಳಿ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್, ಪೆನ್​​​ಡ್ರೈವ್ ಸಿಕ್ಕಿದ್ದು, ಇದು ಭಾರೀ ಸಂಚಲನ ಮೂಡಿಸಿದೆ. ಪ್ರಜ್ವಲ್​​ಗೆ ಮೊಬೈಲ್ ಕೊಟ್ಟಿದ್ಯಾರು? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿದ್ದು, ಸಂಬಂಧ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇಂದು (ಆಗಸ್ಟ್ 14) ಕಾರಾಗೃಹ ಮತ್ತು ಸುಧಾರಣೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೈಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರಜ್ವಲ್ ಬ್ಯಾರಕ್​ನಲ್ಲಿ ನಿಷೇಧಿತ ವಸ್ತು ಹೇಗೆ ಪತ್ತೆ ಆಯ್ತು? ಮೊಬೈಲ್, ಸಿಮ್, ಚಾರ್ಜರ್, ಪೆನ್​ಡ್ರೈವ್ ಹೇಗೆ ಹೋಯ್ತು ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಅಕ್ರಮಗಳ ಕಡಿವಾಣಕ್ಕೆ ಬ್ರೇಕ್ ಹಾಕುವಂತೆ ಖಡಕ್ ಸೂಚನೆ ನೀಡಿದ್ದಾರೆ.

  • Ramu Ram
  • Updated on: Aug 14, 2026
  • 5:37 pm

ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಆಂಧ್ರ ಮೂಲದ ಸಿಮ್, ಒಂದೇ ಕಂಪನಿಯ ಫೋನ್‌ಗಳ ಪೂರೈಕೆಯ ಜಾಲ!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ದಾಳಿ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಪತ್ತೆಯಾದ ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳ ಹಿಂದೆ ಆಂಧ್ರಪ್ರದೇಶ ಮೂಲದ ಬೃಹತ್ ಜಾಲವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೈಲಿನಲ್ಲಿ ಸಿಕ್ಕ ಮೂರೂ ಫೋನ್‌ಗಳು ಒಂದೇ ಕಂಪನಿಯದ್ದಾಗಿದ್ದು, ಅಕ್ರಮವಾಗಿ ಮೊಬೈಲ್ ಪೂರೈಸುತ್ತಿದ್ದ ಜಾಲದ ಪತ್ತೆಗೆ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ​ ಕೇಸಿಗೆ ಬಿಗ್ ಟ್ವಿಸ್ಟ್​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿಪಿ

ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಹಾಗೂ ಪೆನ್​​​ಡ್ರೈವ್ ಪತ್ತೆಯಾಗಿದೆ. ಇದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಇನ್ನು ಪೆನ್​​​ಡ್ರೈವ್ ಹಾಗೂ ಮೊಬೈಲ್​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿತ್ತು. ಈ ಸಂಬಂಧ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿ ಡಿಸಿಪಿ ಎಂ.ನಾರಾಯಣ ಸ್ಪಷ್ಟನೆ ನೀಡಿದ್ದಾರೆ.

  • Ramu Ram
  • Updated on: Aug 13, 2026
  • 7:05 pm

ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ (CCB) ನಡೆಸಿದ ದಾಳಿಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ನೇತೃತ್ವದಲ್ಲು ತಂಡ ರಚಿಸಲಾಗಿದೆ. ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿದೆ.

ಪ್ರಜ್ವಲ್​​ಗೆ ಜೈಲಲ್ಲಿ ಮೊಬೈಲ್​​ ಕೊಟ್ಟಿದ್ದು ಅಧಿಕಾರಿಗಳು?: ಹೆತ್ತವರ ಹೆಸರನ್ನು ಶಿವಪ್ಪ, ಪಾರ್ವತಿ ಎಂದು ನೋಟ್​​ಬುಕ್​ನಲ್ಲಿ ಬರೆದಿಟ್ಟಿದ್ದ ಮಾಜಿ ಸಂಸದ!

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯ ವೇಳೆ, ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್, ಪೆನ್‌ಡ್ರೈವ್ ಹಾಗೂ ಡೈರಿ/ನೋಟ್‌ಬುಕ್ ಪತ್ತೆಯಾಗಿರುವ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಹಣ ಪಡೆದು ಮೊಬೈಲ್ ಬಳಕೆಗೆ ಅಧಿಕಾರಿಗಳೇ ಅವಕಾಶ ಮಾಡಿಕೊಟ್ರಾ? ಎಂಬ ಅನುಮಾನ ಉದ್ಭವಿಸಿದೆ.

ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್, ಆಡಿಯೋನಲ್ಲೇನಿದೆ ಗೊತ್ತಾ?

ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್​​​ ಡ್ರೈವ್​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್​​​​​​​​ಗ ಸಹ ಕಂಡುಬಂದಿದೆ. ಹೌದು...ಜೈಲಿನಲ್ಲಿ ಸಿಕ್ಕ ಮೊಬೈಲ್​​​​ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ.

ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ದಿನಾಲೂ ಸುದ್ದಿಯಲ್ಲಿರುತ್ತೆ.ಕಾರಣ ವಿಐಪಿ ಖೈದಿಗಳ ಸಂಖ್ಯೆ ಜಾಸ್ತಿ ಆಗಿರೋದು.ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಮತ್ತೆ ಸದ್ದು ಮಾಡಿದ್ದು, ಫೋನ್,ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೈಪ್ರೊಫೈಲ್ ಕೈದಿ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರಜ್ವಲ್ ಬಳಿ ಇದ್ದ ಮೊಬೈಲ್​​ ಹಾಗೂ ಪೆನ್​ ಡ್ರೈವ್​​​​ನ್ಲಲಿ ಅಶ್ಲೀಲ ವಿಡಿಯೋಗಳು ಇರುವುದು ಕಂಡುಬಂದಿದೆ.

ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ​ ಬ್ಯಾರಕ್​ನಲ್ಲಿದ್ದ ಫೋನ್​​​​ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್​​ ಕುಮಾರ್

Parappana Agrahara Jail: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿದೆ. ಸದ್ಯ ಇದು ಚಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಡಿಜಿಪಿ ಅಲೋಕ್ ಕುಮಾರ್, ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಚಾರ್ಜರ್ ಪತ್ತೆಯಾಗಿದೆ. ಆತನ ಮೊಬೈಲ್​ನಲ್ಲಿ ಒಟಿಟಿ ಆ್ಯಪ್​ಗಳು ಪತ್ತೆಯಾಗಿವೆ ಎಂದಿದ್ದಾರೆ.

  • Vikas bm
  • Updated on: Aug 12, 2026
  • 3:10 pm