Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajwal Revanna

Prajwal Revanna

ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಕೇವಲ 29 ವರ್ಷ ವಯಸ್ಸಿನಲ್ಲಿ ಸಂಸದರಾದವರು. ದೇಶದ ಮೂರನೇ ಅತ್ಯಂತ ಕಿರಿಯ ಸಂಸದ ಎಂಬ ದಾಖಲೆ ಬರೆದವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಕ್ಕಳಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರು. ದೇವೇಗೌಡರ ಹಿರಿಯ ಮಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪ್ರಜ್ವಲ್ ತಂದೆ. ಹಾಸನ ಜಿಲ್ಲೆಯವರಾದ ಪ್ರಜ್ವಲ್ ರೇವಣ್ಣ ಹುಟ್ಟಿದ್ದು 1990 ಆಗಸ್ಟ್ 5ರಂದು. ರಾಜಕೀಯ ಹಿನ್ನೆಲೆಯ ಕುಟುಂಬದ ಸದಸ್ಯರಾದ ಅವರು ನಿರೀಕ್ಷೆಯಂತೆ ರಾಜಕೀಯವಾಗಿ ಬೇಗ ಮುನ್ನೆಲೆಗೆ ಬಂದಿದ್ದಾರೆ. ಬೆಂಗಳೂರಿನ ಬಿಐಟಿಯಲ್ಲಿ 2014ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿದ ಅವರು ಆಸ್ಟ್ರೇಲಿಯಾಗೆ ಉನ್ನತ ವ್ಯಾಸಂಗಕ್ಕೆ ಹೋಗಿದ್ದರು. 2015ರಲ್ಲಿ ರಾಜಕೀಯ ವೃತ್ತಿಜೀವನ ಬಯಸಿ ಅವರು ಆಸ್ಟ್ರೇಲಿಯಾದಲ್ಲಿ ಓದನ್ನು ಅರ್ಧಕ್ಕೆ ಬಿಟ್ಟು ಹಾಸನಕ್ಕೆ ಬಂದಿದ್ದರು. 2018ರಲ್ಲಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಯಿತು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದರು.

ಇನ್ನೂ ಹೆಚ್ಚು ಓದಿ

ಮಹಿಳೆ ಅಪಹರಣ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ವಿಡಿಯೋದಲ್ಲಿರುವ ಸಂತ್ರಸ್ತ ಮಹಿಳೆಯನ್ನು ಭವಾನಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇದೀಗ, ಈ ಷರತ್ತನ್ನು ಹೈಕೋರ್ಟ್​ ಸಡಿಲಿಸಿ, ಹೊಸ ಷರತ್ತನ್ನು ವಿಧಿಸಿದೆ. ಹಾಕಿದ್ದರೆ ಏನದು ಷರತ್ತು? ಹೊಸ ಷರತ್ತು ಏನು? ಇಲ್ಲಿದೆ ವಿವರ.

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

Prajwal Revanna assault Case:: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕರಿಸಿದೆ.

ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ ಜೈಲಿನಿಂದ ಹೊರಬರ್ತಾರೆ: ಸೂರಜ್ ರೇವಣ್ಣ

ಎಂಎಲ್ಸಿ ಡಾ. ಸೂರಜ್ ರೇವಣ್ಣ ಅವರು ತಮ್ಮ ಸಹೋದರ ಪ್ರಜ್ವಲ್ ರೇವಣ್ಣ ಅವರು ಇನ್ನೊಂದು ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗುವುದಾಗಿ ಹೇಳಿದ್ದಾರೆ. ಅತ್ಯಾಚಾರ ಆರೋಪದಲ್ಲಿ ಜೈಲುಪಾಲಾಗಿರುವ ಪ್ರಜ್ವಲ್ ಅವರ ಬಿಡುಗಡೆಯ ಬಗ್ಗೆ ಸೂರಜ್ ರೇವಣ್ಣ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ್ದಾರೆ. ಇದರಿಂದಾಗಿ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

ವೇದಿಕೆಯ ಮೇಲೆ ಹಾರ ಹಾಕಿಸಿಕೊಳ್ಳುವಾಗ ಸೂರಜ್ ರೇವಣ್ಣನನ್ನು ಹತ್ತಿರಕ್ಕೆ ಕರೆದ ನಿಖಿಲ್ ಕುಮಾರಸ್ವಾಮಿ!

ಮಾಧ್ಯಮಗಳಲ್ಲಿ ಪದೇಪದೆ ವರದಿಯಾಗಿರುವಂತೆ ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್​ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಿಸಲು ಸಕಲ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅವರ ಪ್ರಸ್ತಾಪಿತ ನಡೆಗೆ ಜೆಡಿಎಸ್ ನಾಯಕರಿಂದ ವಿರೋಧವೇನೂ ಎದುರಾಗಿಲ್ಲ. ಕುಟುಂಬದ ರಾಜಕೀಯ ಲೆಗಸಿಯನ್ನು ಮಗ ಮುಂದುವರಿಸಿಕೊಂಡು ಹೋಗಲಿ ಅನ್ನೋದು ಕುಮಾರಸ್ವಾಮಿಯವರ ಇರಾದೆಯಾಗಿರಬಹುದು. ಸೂರಜ್​ನನ್ನು ಅಧ್ಯಕ್ಷ ಮಾಡುವಂತೆ ರೇವಣ್ಣ ಒತ್ತಾಯಿಲಾರರು.

ದೇಶದಲ್ಲಿ ಪ್ರಾಮಾಣಿಕ ರಾಜಕಾರಣಿಗಳ ಕುಟುಂಬ ಇದ್ದರೆ ಅದು ದೇವೇಗೌಡರದ್ದು ಮಾತ್ರ: ಎನ್ ಚಲುವರಾಯಸ್ವಾಮಿ

ದೇವೇಗೌಡರ ಜೊತೆ ತಾನಿದ್ದಾಗ ಅವರು ತಮ್ಮ ಮಕ್ಕಳ ಬಗ್ಗೆ ಏನು ಹೇಳುತ್ತಿದ್ದರು, ನೀಡುತ್ತಿದ್ದ ಬುದ್ಧಿವಾದ ಹೇಗಿರುತಿತ್ತ್ತು ಅನ್ನೋದೆಲ್ಲ ಗೊತ್ತಿದೆ, ಅವರು ಕಾಂಗ್ರೆಸ್ ನಾಯಕರನ್ನು ಟೀಕಿಸುವ ಬದಲು ಅವರ ಮನೆಯಲ್ಲಿ ಸಂಸದರು, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು-ಎಲ್ಲ ಇದ್ದಾರೆ, ಅವರ ಬಗ್ಗೆ ಒಂದಿಷ್ಟು ಮಾತಾಡಲಿ, ಮೊದಲು ಬಿಜೆಪಿಯನ್ನು ಟೀಕಿಸುತ್ತಿದ್ದರು, ಈಗ ಕಾಂಗ್ರೆಸ್ ಎಂದು ಸಚಿವ ಹೇಳಿದರು.

ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ: ಪ್ರಜ್ವಲ್​ಗೆ ಹೈಕೋರ್ಟ್‌ ಚಾಟಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್​​ನಲ್ಲಿ ಹಿನ್ನಡೆಯಾಗಿದೆ. ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೇ ಅಶ್ಲೀಲಕ್ಕೂ ಒಂದು ಮಿತಿ ಇರಬೇಕು ಎಂದು ಕೋರ್ಟ್​ ಚಾಟಿ ಬೀಸಿದೆ.

ಪೆನ್​ಡ್ರೈವ್​ಗಳ ಬಗ್ಗೆ ಮಾತಾಡುವ ಸೂರಜ್ ರೇವಣ್ಣಗೆ ಆ ಕುಕೃತ್ಯ ರೆಕಾರ್ಡ್ ಮಾಡಿದ್ಯಾರು ಅಂತ ಗೊತ್ತಿಲ್ವೇ? ಶೇಯಸ್ ಪಟೇಲ್

ಆರು ಲಕ್ಷ ಮತ ಪಡೆದಿರುವ ತನಗೆ ಪೆನ್​ಡ್ರೈವ್ ಗಳನ್ನು ಬಳಸಿಕೊಂಡು ಸಂಸದನಾಗುವ ದರ್ದು ಇರಲಿಲ್ಲ, ಅಸಲಿಗೆ, ನೂರಾರು ಹೆಣ್ಣುಮಕ್ಕಳ ಬಾಳು ಹಾಳು ಮಾಡಿರುವ ಪೆನ್​ಡ್ರೈವ್ ಗಳ ಬಗ್ಗೆ ಮಾತಾಡುವುದು ತನಗೆ ಬೇಕಿಲ್ಲ, ಇಷ್ಟಕ್ಕೂ ಆ ಕುಕೃತ್ಯಗಳನ್ನು ರೆಕಾರ್ಡ್ ಮಾಡಿದ್ದು ಯಾರು? ಆ ಹೆಣ್ಣಮಕ್ಕಳ ನರಕಸದೃಶ ಬದುಕಿಗೆ ಕಾರಣರಾದವರು ಯಾರು? ಎಂದು ಶ್ರೇಯಸ್ ಕೇಳಿದರು.

ಪ್ರಜ್ವಲ್ ರೇವಣ್ಣನ 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಹೈಕೋರ್ಟ್​ನಲ್ಲಿ ನಿರಾಸೆಯಾಗಿದೆ. ಅವರು ಸಲ್ಲಿಸಿದ್ದ ಎಲ್ಲಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ

ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಪ್ರಜ್ವಲ್​ ರೇವಣ್ಣ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ‌ಕ್ಕೆ ಕೋರಿದ್ದ ಪಿಐಎಲ್ ವಜಾ: ಅರ್ಜಿದಾರರಿಗೆ 25 ಸಾವಿರ ದಂಡ

ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿ ದಂಡ ವಿಧಿಸಿದೆ.