AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajwal Revanna

Prajwal Revanna

ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಕೇವಲ 29 ವರ್ಷ ವಯಸ್ಸಿನಲ್ಲಿ ಸಂಸದರಾದವರು. ದೇಶದ ಮೂರನೇ ಅತ್ಯಂತ ಕಿರಿಯ ಸಂಸದ ಎಂಬ ದಾಖಲೆ ಬರೆದವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಕ್ಕಳಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರು. ದೇವೇಗೌಡರ ಹಿರಿಯ ಮಗ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಪ್ರಜ್ವಲ್ ತಂದೆ. ಹಾಸನ ಜಿಲ್ಲೆಯವರಾದ ಪ್ರಜ್ವಲ್ ರೇವಣ್ಣ ಹುಟ್ಟಿದ್ದು 1990 ಆಗಸ್ಟ್ 5ರಂದು. ರಾಜಕೀಯ ಹಿನ್ನೆಲೆಯ ಕುಟುಂಬದ ಸದಸ್ಯರಾದ ಅವರು ನಿರೀಕ್ಷೆಯಂತೆ ರಾಜಕೀಯವಾಗಿ ಬೇಗ ಮುನ್ನೆಲೆಗೆ ಬಂದಿದ್ದಾರೆ. ಬೆಂಗಳೂರಿನ ಬಿಐಟಿಯಲ್ಲಿ 2014ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿದ ಅವರು ಆಸ್ಟ್ರೇಲಿಯಾಗೆ ಉನ್ನತ ವ್ಯಾಸಂಗಕ್ಕೆ ಹೋಗಿದ್ದರು. 2015ರಲ್ಲಿ ರಾಜಕೀಯ ವೃತ್ತಿಜೀವನ ಬಯಸಿ ಅವರು ಆಸ್ಟ್ರೇಲಿಯಾದಲ್ಲಿ ಓದನ್ನು ಅರ್ಧಕ್ಕೆ ಬಿಟ್ಟು ಹಾಸನಕ್ಕೆ ಬಂದಿದ್ದರು. 2018ರಲ್ಲಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಯಿತು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದರು.

ಇನ್ನೂ ಹೆಚ್ಚು ಓದಿ

ರೇವಣ್ಣ, ರೇವಣ್ಣನ ಮಕ್ಕಳೇ ಆಡಳಿತ ಮಾಡಬೇಕು ಅಂತೇನಿಲ್ಲ: ಬಿಜೆಪಿ ಮುಖಂಡ ಕಿಡಿ

ಪ್ರಜ್ವಲ್​​ ಇಲ್ಲ ಅಂದರೆ ಮತ್ತೊಬ್ಬ ನಾಯಕ ಬರುತ್ತಾರೆ. ರೇವಣ್ಣ, ರೇವಣ್ಣನ ಕುಟುಂಬ ಇಲ್ಲದೆ ಹೋದರೂ ಹಾಸನ ಜಿಲ್ಲೆ ಅಭಿವೃದ್ಧಿ ಆಗುತ್ತೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ. ಹೈಕೋರ್ಟ್​ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ತಿಳಿಸಿದದೆ.

ಪ್ರಜ್ವಲ್ ಅತ್ಯಾಚಾರ ಕೇಸಿಗೆ ಹೊಸ ತಿರುವು ಕೊಟ್ಟ ವಕೀಲ: ಕೋರ್ಟಿನಲ್ಲಿ ವಾದ ಪ್ರತಿವಾದ ಹೇಗಿತ್ತು?

ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಕರ್ನಾಟಕ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದು, ಪ್ರಜ್ವಲ್​ ಪರ ವಕೀಲರು ತಮ್ಮ ಪ್ರಬಲ ವಾದದ ಮೂಲಕ ಕೋರ್ಟ್​​ನ ಗಮನಸೆಳೆದಿದ್ದಾರೆ. ಹಾಗಾದ್ರೆ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಹೇಗಿತ್ತು? ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣಗೆ ಇಂದೂ ಸಿಗಲಿಲ್ಲ ಜಾಮೀನು; ನ. 24ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಹೈಕೋರ್ಟ್​ನಲ್ಲಿ ವಿಚಾರಣೆ ನಡೆದಿದೆ. ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರ ಸೆರೆವಾಸದ ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು ಪ್ರಜ್ವಲ್ ಅವರಿಗೆ ಜಾಮೀನು ಸಿಗುವ ನಿರೀಕ್ಷೆಯಿತ್ತು. ಆದರೆ, ಇಂದು ಕೂಡ ಅವರಿಗೆ ನಿರಾಸೆಯಾಗಿದ್ದು, ನವೆಂಬರ್ 24ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಜೀವಿತಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್, ಸರ್ಕಾರಕ್ಕೆ ಕೋರ್ಟ್ ಮಹತ್ವದ ಸೂಚನೆ

ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೀವಿತಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿದೆ. ಇದೀಗ ಈ ಜನಪ್ರತಿನಿಧಿಗಳ ವಿಶೇಷ ಕೋರ್ಟಿನ ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟ್​ ಮೆಟ್ಟಿಲೇರಿದ್ದು, ಮೊದಲ ಹಂತದಲ್ಲಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಹಾಗಾದ್ರೆ, ಮೇಲ್ಮನವಿಯಲ್ಲೇನಿದೆ ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ: ಕೋಚ್ ಫೋನ್​ ನಲ್ಲಿ ಮಹಿಳೆಯರ 2500 ರಾಸಲೀಲೆ ವಿಡಿಯೋ

ಅತ್ಯಾಚಾರದ ಅಪರಾಧಿ ಪ್ರಜ್ವಲ್‌ ರೇವಣ್ಣ ಸಂತ್ರಸ್ತೆಯ ಜತೆ ತಾನು ನಡೆಸಿದ ಲೈಂಗಿಕ ಕ್ರಿಯೆಯ ವಿಡಿಯೊ ಪ್ರಕಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮಹಿಳೆಯರ ಜೊತೆ ದೈಹಿಕ ಸಂಪರ್ಕದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಲ್ಲದೇ, ಅಸ್ತ್ರವಾಗಿ ಬಳಸಿ ದುಷ್ಕೃತ್ಯ ಮೆರೆದಿದ್ದಾನೆ. ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿರುವ ಸಾಕಷ್ಟು ವಿಡಿಯೋಗಳು ಇವೆ ಎಂದು ಹೇಳಲಾಗಿದ್ದು, ಕೆಲವು ಮಾತ್ರ ವೈರಲ್ ಆಗಿವೆ. ಇದೇ ಮಾದರಿಯ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಪ್ರಜ್ವಲ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ, ಅಷ್ಟನ್ನು ಮಾತ್ರ ಹೇಳಬಲ್ಲೆ: ಸೂರಜ್ ರೇವಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದ ಶಾಸಕರಿಗೆ ₹25 ಕೋಟಿ ಮತ್ತು ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡೋದಾಗಿ ಹೇಳಿದ್ದಾರೆ, ಇನ್ನೂ ಬಿಡುಗಡೆ ಮಾಡಿಲ್ಲ, ಸೋಮವಾರದಿಂದ ವಿಧಾನಸಭಾ ಅಧಿವೇಶನ ಶುರುವಾಗಲಿದೆ, ಅದಕ್ಕಿಂತ ಮೊದಲೇ ಮಾಡುತ್ತಾರೋ ಅಥವಾ ನಂತರ ಮಾಡುತ್ತಾರೋ ಗೊತ್ತಿಲ್ಲ, ಬಿಡುಗಡೆ ಮಾಡುವದನ್ನು ಅವರೇ ಹೇಳಿರುವುದರಿಂದ ಕಾಯಬೇಕು ಎಂದು ಸೂರಜ್ ರೇವಣ್ಣ ಹೇಳಿದರು.

ಶ್ರೀಮಂತರಿಗೂ ಶಿಕ್ಷೆ ಆಗುತ್ತೆ: ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ರಾಜವರ್ಧನ್ ಪ್ರತಿಕ್ರಿಯೆ

ಸಚಿನ್ ಚೆಲುವರಾಯಸ್ವಾಮಿ ನಟನೆಯ ‘ಕಮಲ್ ಶ್ರೀದೇವಿ’ ಸಿನಿಮಾಗೆ ರಾಜವರ್ಧನ್ ಅವರು ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಪ್ರಸ್ತುತ ಸಮಾಜದಲ್ಲಿನ ಕೆಲವು ಘಟನೆಗಳ ಬಗ್ಗೆ ರಾಜವರ್ಧನ್ ಮಾತನಾಡಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಆಗಿದೆ. ಈ ಬಗ್ಗೆ ರಾಜವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ರೀತಿಯ ಹೈ ಪ್ರೊಫೈಲ್ ಅಪರಾಧಿಗಳಿಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ಸಿಗುತ್ತಾ? ಕೈದಿಗಳ ನಂಬರ್ ನಿರ್ಧರಿಸೋದು ಹೇಗೆ?

ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಅಪರಾಧಿ ಎಂದು ಘೋಷಿಸಲ್ಪಟ್ಟಿರುವ ಜೆಡಿಎಸ್ ನಾಯಕ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹಾಗಾದರೆ, ಪ್ರಜ್ವಲ್ ರೀತಿಯ ಹೈ ಪ್ರೊಫೈಲ್ ಇರುವ ಕೈದಿಗಳಿಗೆ ಜೈಲಿನೊಳಗೆ ವಿಐಪಿ ಸೌಲಭ್ಯಗಳು ಸಿಗುತ್ತವೆಯೇ? ದೇಶದಲ್ಲಿ ಎಷ್ಟು ರೀತಿಯ ಜೈಲುಗಳಿವೆ? ಕೈದಿಗಳ ಸಂಖ್ಯೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಎಂಬಿತ್ಯಾದಿ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿದ ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದ ಗೃಹ ಸಚಿವ

ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಈ ಮಹತ್ವದ ತೀರ್ಪು ನೀಡಿದೆ. ಇನ್ನು ಜಡ್ಜ್​ ಗಜಾನನ ಭಟ್ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದು ಹೊಸ ದಾಖಲೆಯಾಗಿದೆ. ಇನ್ನು ಎಸ್​ಐಟಿ ಅವರ ತನಿಖೆಗೆ ಗೃಹ ಸಚಿವ ಪರೇಶ್ವರ್ ಅಭಿನಂದನೆ ತಿಳಿಸಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ