AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi

Pralhad Joshi

ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.

ಇನ್ನೂ ಹೆಚ್ಚು ಓದಿ

ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ

ಮಧ್ಯಪ್ರಾಚ್ಯ ಯುದ್ಧ ಪರಿಣಾಮ ಗ್ಯಾಸ್ ಸಿಲಿಂಡ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದ್ದರೆ, ಇತ್ತ ಭಾರತದಲ್ಲೂ ಸಹ ಗ್ಯಾಸ್ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ಎದುರಾಗಿದ್ದು, ಜನ ಪರಾಡುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ, ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆ ಹೆಜ್ಜೆ ಇರಿಸುತ್ತಿದೆ

ಸಮರ್ಥ್​​​ ನನ್ನು ಗೆಲ್ಲಿಸಿದ್ರೆ ಮುಂದೆ ಸಮಸ್ಯೆ ಆಗಲಿದೆ: ಕಾಂಗ್ರೆಸ್ ಕಾರ್ಯಕರ್ತರಿಗೆ ಜೋಶಿ ಮಹತ್ವದ ಕರೆ

ಮನೆಯಲ್ಲಿ ಇವರ ತಾತ ಇದ್ದಾಗ ಎಂಎಲ್ ಎ , ಮಂತ್ರಿ. ಈಗ ಮತ್ತೆ ಮಗ ಶಾಸಕ ಆದರೆ ದಾವಣಗೆರೆ ಅಕ್ಕ ಪಕ್ಕದ ಕ್ಷೇತ್ರದಲ್ಲಿ ಅವರದೇ ಟಿಕೆಟ್ ಕೊಟ್ಟು ಇಡೀ ದಾವಣಗೆರೆ (Davanagere) ಕಬ್ಜಾ ಮಾಡಿಕೊಳ್ಳುತ್ತಾರೆ. ಈ ಹುಡುಗ ಗೆದ್ದರೆ ಹಿ ಈಸ್ ಅ ಸ್ಮಾಲ್ ಬಾಯ್. ಕಾಂಗ್ರೆಸ್ ಪಕ್ಷದವರು ಬಾಗಲಕೋಟೆಯಲ್ಲಿ ಅಹಿಂದ , ಇಲ್ಲಿ ಗೋವಿಂದ. ಟೇಕನ್ ಫಾರ್ ಗ್ರಾಂಟೆಡ್ ಇವರದ್ದು. ಇಲ್ಲಿ ಯಾರೂ ಸಮರ್ಥರಿರಲಿಲ್ಲವಾ? ನಿಮ್ಮ ಮನೆ ತನಕ್ಕೆ ಆಗಬೇಕಿತ್ತಾ? ಅಲ್ಲಿ ಪ್ರಿಯಾಂಕಾ ಗಾಂಧಿ ಮಗನಿಗೂ ಕ್ಷೇತ್ರ ಹುಡುಕುತ್ತಿದ್ದಾರೆ. ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (pralhad joshi) ಕಾಂಗ್ರೆಸ್​ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ​​: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ಕರ್ನಾಟಕ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಇದು ಇವಿ ಉತ್ತೇಜನದ ಜಾಗತಿಕ ಪ್ರಯತ್ನಕ್ಕೆ ಹಿನ್ನಡೆ ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮದಿಂದ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪ್ರೋತ್ಸಾಹ ಸಿಕ್ಕು, ದೇಶದ ಆರ್ಥಿಕತೆಗೆ ಮತ್ತು ಪರಿಸರಕ್ಕೆ ಹಾನಿಯಾಗಲಿದೆ. ಸರ್ಕಾರ ತಕ್ಷಣ ನಿರ್ಧಾರ ಹಿಂಪಡೆಯುವಂತೆ ಅವರು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ‘EV’ ಅಂದ್ರ ಅಲರ್ಜಿ: ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆಗೆ ಜೋಶಿ ಕಿಡಿ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕಳೆದ ಹತ್ತು ವರ್ಷಗಳಿಂದ ನೀಡಲಾಗುತ್ತಿದ್ದ ರಸ್ತೆ ತೆರಿಗೆ (Road Tax) ವಿನಾಯಿತಿಯನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನ ತೆರಿಗೆ (ತಿದ್ದುಪಡಿ) ವಿಧೇಯಕ 2026’ಕ್ಕೆ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಶ್ರೀಗಳ 119ನೇ ಜಯಂತ್ಯುತ್ಸವನ್ನು ಇಂದು (ಏ 01) ಸಿದ್ಧಗಂಗಾ ಮಠದಲ್ಲಿ ಅದ್ಧೂರಿಯಾಗಿ ಆಚರಿಸಲಾಯ್ತು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮೀಜಿಗಳನ್ನು ಸ್ಮರಿಸಿದರು. ಇನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ಸಿದ್ಧಗಂಗಾ ಮಠ ಹಾಗೂ ಶಿವಕುಮಾರ ಶ್ರೀಗಳ ಕಾರ್ಯ ವೈಖರಿಯನ್ನು ಬಣ್ಣಿಸಿದ್ದಾರೆ.

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಸಿಲಿಂಡರ್ ಕೊರತೆ, ಸಿಲಿಂಡರ್ ದರ ಏರಿಕೆ ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಕಳೆದೊಂದು ವಾರದಲ್ಲಿ ಹಲವು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದೆ. ಕಾಂಗ್ರೆಸ್‌ನ ಈ ಆರೋಪಗಳಿಗೆ ಬಿಜೆಪಿ ನಾಯಕರು ಸಹ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ಕೇಂದ್ರ ಸಚಿವ ಮಾಹಿತಿ ಪ್ರಲ್ಹಾದ ಜೋಶಿ ಪ್ರಕಾರ, ಭಾರತದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳು ಪಳೆಯುಳಿಕೆ ಇಂಧನವನ್ನು ಮೀರಿಸಿವೆ. ದೇಶದ ಶೇ.50.6ರಷ್ಟು ವಿದ್ಯುತ್ ಸಾಮರ್ಥ್ಯ ನವೀಕರಿಸಬಹುದಾದ ಮೂಲಗಳಿಂದ ಬಂದಿದ್ದು, ನಿರ್ದಿಷ್ಟವಾಗಿ ಸೌರಶಕ್ತಿ ಗಣನೀಯವಾಗಿ ಹೆಚ್ಚಳ ಕಂಡಿದೆ. 2026ರ ವೇಳೆಗೆ ನವೀಕರಿಸಬಹುದಾದ ಇಂಧನದ ಪಾಲು ಇನ್ನಷ್ಟು ವಿಸ್ತರಿಸುವ ಗುರಿ ಹೊಂದಿದೆ.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇದ್ದಾಗ ಮತ್ತೊಂದು ನಿರ್ಣಯ ಹೇಗೆ ತರುತ್ತೀರಿ? ವಿಪಕ್ಷಗಳ ವರ್ತನೆಗೆ ಪ್ರಲ್ಹಾದ್ ಜೋಷಿ ಕಿಡಿ

Union minister Pralhad Joshi on no-confidence motion against Lok Sabha Speaker Om Birla: ಲೋಕಸಭಾ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಕಿಡಿಕಾರಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯಕ್ಕೆ ಯೋಜಿಸಿದ್ದರು. ಕಲಾಪದ ಅಜೆಂಡಾಗಳ ಪಟ್ಟಿಯಲ್ಲೂ ಅದು ಇತ್ತು ಆದರೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರ ಚರ್ಚೆಗೆ ಬರಬೇಕೆಂದು ವಿಪಕ್ಷಗಳು ಮತ್ತೊಂದು ನಿರ್ಣಯಕ್ಕೆ ಪಟ್ಟು ಹಿಡಿದರು. ಇದರಿಂದ ಕಲಾಪ ಸ್ಥಗಿತಗೊಂಡಿತು.

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್​​ಗೆ ಪ್ರಹ್ಲಾದ ಜೋಶಿ ವ್ಯಂಗ್ಯ

ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸಾಲದ ಬಜೆಟ್ ಎಂದು ಕಿಡಿಕಾರಿದ್ದಾರೆ. ಇನ್ನು ಕರ್ನಾಟಕ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ ಪಕ್ಷದವರದು ಮಾಡ್ತಿದ್ದಾರಾ? ಅಥವಾ ಡಿ ಕೆ‌ ಶಿವಕುಮಾರ್ ಅವರದು ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ನ್ಯಾಯಾಂಗ ತನಿಖೆಯಾಗಲಿ ಎಂದಿದ್ದಾರೆ. ಅಲ್ಲದೇ ನಿಮ್ಮದು ಹಾಲು ಜೇನು ಅಲ್ಲಆಲ್ಕೋಹಾಲ್ ಜೇನು ಇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ

ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿದ ಕನ್ನಡಿಗರ ಹಾಗೂ ಎಲ್ಲ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಯಾರೂ ಆತಂಕ ಪಡಬೇಕಿಲ್ಲ. ಕೇಂದ್ರ ಸರ್ಕಾರ ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದ್ದಾರೆ.

ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್