Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
ಮೋದಿ, ಬಿಜೆಪಿ, ಆರ್ಎಸ್ಎಸ್ ದೇಶದ್ರೋಹಿಗಳು ಎಂದ ರಾಹುಲ್ಗೆ ಜೋಶಿ ತಿರುಗೇಟು
ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ, ಆರ್ಎಸ್ಎಸ್ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಆರ್ಎಸ್ಎಸ್ ಸಂವಿಧಾನದ ಮೇಲೆ ದಾಳಿ ಮಾಡಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಕ್ರಿಯಿಸಿದ್ದು, ಈ ಹಿಂದೆ ಕಾಂಗ್ರೆಸ್ ಮಾಡಿದ ಎಡವಟ್ಟುಗಳನ್ನ ನೆನಪಿಸಿ ತಿರುಗೇಟು ನೀಡಿದ್ದಾರೆ.
- Ramesh B Jawalagera
- Updated on: May 20, 2026
- 8:41 pm
ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ
ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ (+3.2%) ವಿಶ್ವದಲ್ಲೇ ಅತ್ಯಂತ ಕನಿಷ್ಠವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕ, ಯುಕೆಗಿಂತ ಭಾರತದಲ್ಲಿ ಕಡಿಮೆ ದರ ಹೆಚ್ಚಳವಾಗಿದ್ದು, ಯಾವುದೇ ಜಾಗತಿಕ ಒತ್ತಡವಿಲ್ಲದಿದ್ದ ಸಂದರ್ಭದಲ್ಲೂ ಈ ಹಿಂದೆ ಕರ್ನಾಟಕದಲ್ಲಿ ಇಂಧನ ತೆರಿಗೆ ಹೆಚ್ಚಿಸಿದ್ದರ ಬಗ್ಗೆ ಗಮನ ಸೆಳೆದಿದ್ದಾರೆ.
- Ganapathi Sharma
- Updated on: May 16, 2026
- 9:15 am
ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ಪ್ರಕರಣ ಬಾಕಿ ಇರುವಾಗಲೇ ನಿಷೇಧ ವಾಪಸ್ ಪಡೆದಿರುವುದು ನ್ಯಾಯಾಂಗಕ್ಕೆ ಅವಮಾನ. ಸಮವಸ್ತ್ರ ಸಂಹಿತೆಯ ಉದ್ದೇಶ ಸಮಾನತೆ ಕಾಪಾಡುವುದು, ಆದರೆ ಸರ್ಕಾರ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿದೆ. ಈ ವಿಭಜಕ ನೀತಿಯಿಂದ ಶೈಕ್ಷಣಿಕ ವಾತಾವರಣ ಹಾಳಾಗುತ್ತಿದ್ದು, ಶಾಲಾ ಶಿಸ್ತಿಗೆ ಧಕ್ಕೆ ತರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
- Gangadhar Saboji
- Updated on: May 14, 2026
- 6:03 pm
ಆಡಳಿತ ವೈಫಲ್ಯ: ಪ್ರಧಾನಿ ಮೋದಿಯ ಟೀಕಿಸಿದ ಸಿಎಂ ಸಿದ್ದರಾಮಯ್ಯಗೆ ಅಂಕಿಅಂಶ ಸಮೇತ ತಿರುಗೇಟು ಕೊಟ್ಟ ಪ್ರಲ್ಹಾದ್ ಜೋಶಿ
ಪ್ರಧಾನಿ ಮೋದಿ ಅವರ ಬೆಂಗಳೂರು ಭಾಷಣವನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆಯ ಮೂಲಕ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ.
- Ganapathi Sharma
- Updated on: May 12, 2026
- 1:09 pm
ಬಿಎಸ್ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್ ಜೋಶಿ
ಚಿತ್ರದುರ್ಗದಲ್ಲಿ ಇಂದು ನಡೆದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, 21 ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮೊದಲು ಕರ್ನಾಟಕದಲ್ಲೂ ಬಿಜೆಪಿ ಆಡಳಿತ ಇತ್ತು. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ್ದಾರೆ.
- Basavaraj Mudnur
- Updated on: May 9, 2026
- 9:18 pm
ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯೊಬ್ಬ ಭಯೋತ್ಪಾದಕ. ಅವರೊಂದಿಗೆ ಎಐಎಡಿಎಂಕೆ ಯಾಕೆ ಕೈ ಜೋಡಿಸಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ಈ ಹೇಳಿಕೆಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಿಡಿಕಾರಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ವಿಪಕ್ಷದ ಅಧ್ಯಕ್ಷ ಸ್ಥಾನದ ಘನತೆ ಮರೆತು ಕೀಳು ಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
- Sushma Chakre
- Updated on: Apr 21, 2026
- 7:22 pm
ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ
ಮಧ್ಯಪ್ರಾಚ್ಯ ಯುದ್ಧ ಪರಿಣಾಮ ಗ್ಯಾಸ್ ಸಿಲಿಂಡ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದ್ದರೆ, ಇತ್ತ ಭಾರತದಲ್ಲೂ ಸಹ ಗ್ಯಾಸ್ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ಎದುರಾಗಿದ್ದು, ಜನ ಪರಾಡುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ, ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆ ಹೆಜ್ಜೆ ಇರಿಸುತ್ತಿದೆ
- Ramesh B Jawalagera
- Updated on: Apr 10, 2026
- 6:45 pm
ಸಮರ್ಥ್ ನನ್ನು ಗೆಲ್ಲಿಸಿದ್ರೆ ಮುಂದೆ ಸಮಸ್ಯೆ ಆಗಲಿದೆ: ಕಾಂಗ್ರೆಸ್ ಕಾರ್ಯಕರ್ತರಿಗೆ ಜೋಶಿ ಮಹತ್ವದ ಕರೆ
ಮನೆಯಲ್ಲಿ ಇವರ ತಾತ ಇದ್ದಾಗ ಎಂಎಲ್ ಎ , ಮಂತ್ರಿ. ಈಗ ಮತ್ತೆ ಮಗ ಶಾಸಕ ಆದರೆ ದಾವಣಗೆರೆ ಅಕ್ಕ ಪಕ್ಕದ ಕ್ಷೇತ್ರದಲ್ಲಿ ಅವರದೇ ಟಿಕೆಟ್ ಕೊಟ್ಟು ಇಡೀ ದಾವಣಗೆರೆ (Davanagere) ಕಬ್ಜಾ ಮಾಡಿಕೊಳ್ಳುತ್ತಾರೆ. ಈ ಹುಡುಗ ಗೆದ್ದರೆ ಹಿ ಈಸ್ ಅ ಸ್ಮಾಲ್ ಬಾಯ್. ಕಾಂಗ್ರೆಸ್ ಪಕ್ಷದವರು ಬಾಗಲಕೋಟೆಯಲ್ಲಿ ಅಹಿಂದ , ಇಲ್ಲಿ ಗೋವಿಂದ. ಟೇಕನ್ ಫಾರ್ ಗ್ರಾಂಟೆಡ್ ಇವರದ್ದು. ಇಲ್ಲಿ ಯಾರೂ ಸಮರ್ಥರಿರಲಿಲ್ಲವಾ? ನಿಮ್ಮ ಮನೆ ತನಕ್ಕೆ ಆಗಬೇಕಿತ್ತಾ? ಅಲ್ಲಿ ಪ್ರಿಯಾಂಕಾ ಗಾಂಧಿ ಮಗನಿಗೂ ಕ್ಷೇತ್ರ ಹುಡುಕುತ್ತಿದ್ದಾರೆ. ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (pralhad joshi) ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Basavaraj Doddamani
- Updated on: Apr 6, 2026
- 4:58 pm
ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಕರ್ನಾಟಕ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಇದು ಇವಿ ಉತ್ತೇಜನದ ಜಾಗತಿಕ ಪ್ರಯತ್ನಕ್ಕೆ ಹಿನ್ನಡೆ ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮದಿಂದ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪ್ರೋತ್ಸಾಹ ಸಿಕ್ಕು, ದೇಶದ ಆರ್ಥಿಕತೆಗೆ ಮತ್ತು ಪರಿಸರಕ್ಕೆ ಹಾನಿಯಾಗಲಿದೆ. ಸರ್ಕಾರ ತಕ್ಷಣ ನಿರ್ಧಾರ ಹಿಂಪಡೆಯುವಂತೆ ಅವರು ಆಗ್ರಹಿಸಿದ್ದಾರೆ.
- Kiran Haniyadka
- Updated on: Apr 3, 2026
- 1:02 pm
ಕರ್ನಾಟಕ ಸರ್ಕಾರಕ್ಕೆ ‘EV’ ಅಂದ್ರ ಅಲರ್ಜಿ: ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆಗೆ ಜೋಶಿ ಕಿಡಿ
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕಳೆದ ಹತ್ತು ವರ್ಷಗಳಿಂದ ನೀಡಲಾಗುತ್ತಿದ್ದ ರಸ್ತೆ ತೆರಿಗೆ (Road Tax) ವಿನಾಯಿತಿಯನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನ ತೆರಿಗೆ (ತಿದ್ದುಪಡಿ) ವಿಧೇಯಕ 2026’ಕ್ಕೆ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
- Ramesh B Jawalagera
- Updated on: Apr 2, 2026
- 10:48 pm
ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಶ್ರೀಗಳ 119ನೇ ಜಯಂತ್ಯುತ್ಸವನ್ನು ಇಂದು (ಏ 01) ಸಿದ್ಧಗಂಗಾ ಮಠದಲ್ಲಿ ಅದ್ಧೂರಿಯಾಗಿ ಆಚರಿಸಲಾಯ್ತು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮೀಜಿಗಳನ್ನು ಸ್ಮರಿಸಿದರು. ಇನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ಸಿದ್ಧಗಂಗಾ ಮಠ ಹಾಗೂ ಶಿವಕುಮಾರ ಶ್ರೀಗಳ ಕಾರ್ಯ ವೈಖರಿಯನ್ನು ಬಣ್ಣಿಸಿದ್ದಾರೆ.
- Ramesh B Jawalagera
- Updated on: Apr 1, 2026
- 10:21 pm
ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ
ಸಿಲಿಂಡರ್ ಕೊರತೆ, ಸಿಲಿಂಡರ್ ದರ ಏರಿಕೆ ಕಾಂಗ್ರೆಸ್ಗೆ ಅಸ್ತ್ರವಾಗಿದೆ. ಕಳೆದೊಂದು ವಾರದಲ್ಲಿ ಹಲವು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದೆ. ಕಾಂಗ್ರೆಸ್ನ ಈ ಆರೋಪಗಳಿಗೆ ಬಿಜೆಪಿ ನಾಯಕರು ಸಹ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Mar 13, 2026
- 10:55 pm