Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
ಇನ್ನೂ ಹೆಚ್ಚು ಓದಿOne Nation, One Time: ಇನ್ನು 180 ದಿನದಲ್ಲಿ ದೇಶಾದ್ಯಂತ ‘ಭಾರತೀಯ ಪ್ರಮಾಣಿತ ಸಮಯ’ ಜಾರಿ, ISTಗೆ ಸಿದ್ಧತೆ
Indian Standard Time: ದೇಶಾದ್ಯಂತ ಏಕರೂಪ ಹಾಗೂ ನಿಖರ ಸಮಯ ಅನುಸರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯ ಪ್ರಮಾಣಿತ ಸಮಯಕ್ಕೆ ಸಂಬಂಧಿಸಿದ ಹೊಸ ನಿಯಮಗಳು 180 ದಿನಗಳಲ್ಲಿ ಜಾರಿಗೆ ಬರಲಿದ್ದು, NavIC ಆಧಾರಿತ ಸ್ವದೇಶಿ ಸಮಯ ಮೂಲ ಬಳಕೆಗೆ ಒತ್ತು ನೀಡಲಾಗಿದೆ.
- Ganapathi Sharma
- Updated on: Aug 31, 2026
- 9:51 am
ಎಫ್ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ಹಲ್ದ್ವಾನಿಯಲ್ಲಿ ನಡೆದ ಸ್ಥಳಶುದ್ಧೀಕರಣ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಅಮಿತ್ ಕುಮಾರ್ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಅಥವಾ ಆರ್ಎಸ್ಎಸ್ಗೆ ಈ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Ganapathi Sharma
- Updated on: Aug 31, 2026
- 7:33 am
‘ಆಡಳಿತದಲ್ಲಿ ನೈತಿಕತೆಗೆ ಉದಾಹರಣೆಯೇ ರಾಮಕೃಷ್ಣ ಹೆಗಡೆ’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಾಬ್ದಿ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಹೆಗಡೆಯವರು ಜಾರಿಗೆ ತಂದ ಜನಪರ ಯೋಜನೆಗಳು, ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಪ್ರೋತ್ಸಾಹವನ್ನು ಸಮಾರಂಭದಲ್ಲಿ ಉಪಸ್ಥಿತರಿದ್ದ ಗಣ್ಯರು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ತಮ್ಮ ಮೇಲೆ ಬೀರಿದ ಪರಿಣಾಮವನ್ನು ಮೆಲುಕು ಹಾಕಿದರು.
- Sushma Chakre
- Updated on: Aug 29, 2026
- 10:48 pm
RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಸಸ್ಪೆಂಡ್: ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ಯಾದಗಿರಿಯಲ್ಲಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಇಬ್ಬರು ಶಿಕ್ಷಕರನ್ನು ಒಂಬತ್ತು ತಿಂಗಳ ಬಳಿಕ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಕ್ರಮ ದ್ವೇಷಪೂರಿತ ಎಂದು ಆರೋಪಿಸಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಇಂತಹ ಆದೇಶಗಳು ನ್ಯಾಯಾಲಯದಲ್ಲಿ ರದ್ದಾಗುತ್ತವೆ ಎಂದು ಎಚ್ಚರಿಸಿದ್ದಾರೆ. ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
- Sanjayya Chikkamath
- Updated on: Aug 28, 2026
- 2:49 pm
ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ
ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.
- Gangadhar Saboji
- Updated on: Aug 26, 2026
- 10:48 pm
ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ, 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ರವಾನೆ
ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ. ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮುಂದಾಗಿದೆ.
- Ramesh B Jawalagera
- Updated on: Aug 25, 2026
- 6:57 pm
ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ
ಕೇಂದ್ರ ಶಿಕ್ಷಣ ಸಚಿವರಾದ ಪ್ರಲ್ಹಾದ್ ಜೋಶಿ ಇಂದು (ಸೋಮವಾರ) ಸಿಬಿಎಸ್ಇಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಸಿಬಿಎಸ್ಇಯ ಶೈಕ್ಷಣಿಕ, ಪರೀಕ್ಷಾ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸುವ ಪ್ರಮುಖ ಆದ್ಯತೆಗಳನ್ನು ಪರಿಶೀಲಿಸಲಾಯಿತು. ಹೆಚ್ಚಿನ ದಕ್ಷತೆ, ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುಧಾರಿತ ಬೆಂಬಲ ನೀಡುವುದರ ಮೇಲೆ ಈ ಸಭೆಯಲ್ಲಿ ಗಮನ ಹರಿಸಲಾಯಿತು.
- Sushma Chakre
- Updated on: Aug 24, 2026
- 5:22 pm
ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತಿನಿತ್ಯ ವಿಮಾನ ಸೇವೆ, ಇಲ್ಲಿದೆ ವೇಳಾಪಟ್ಟಿ
ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಯಾಣಿಕರ ಅನುಕೂಲ ಹಾಗೂ ಜನರ ಬೇಡಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈಡೇರಿಸಿದ್ದಾರೆ. ದೆಹಲಿ- ಹುಬ್ಬಳ್ಳಿ ಹಾಗೂ ದೆಹಲಿ-ಬೆಳಗಾವಿ ನಡುವೆ ದೈನಂದಿನ ವಿಮಾನ (ಪ್ರತಿ ದಿನ) ಸೇವೆ ಆರಂಭವಾಗಲಿದೆ. ಹಾಗಾದ್ರೆ, ಯಾವಾಗಿನಿಂದ ವಿಮಾನ ಸಂಚಾರ ಆರಂಭ ಎನ್ನುವ ವೇಳಾಪಟ್ಟಿ ಈ ಕೆಳಗಿನಂತಿದೆ.
- Sanjayya Chikkamath
- Updated on: Aug 19, 2026
- 10:53 pm
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಚಿತ ಆನ್ಲೈನ್ ತರಬೇತಿ ಜಾರಿ ಪರಿಶೀಲಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಯುವಜನತೆಗೆ ಉಚಿತ ಆನ್ಲೈನ್ ತರಬೇತಿ ನೀಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಯಾನದ ಅನುಷ್ಠಾನದ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಇಂದು (ಬುಧವಾರ) ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.
- Sushma Chakre
- Updated on: Aug 19, 2026
- 9:26 pm
NTAಗೆ ಮೇಜರ್ ಸರ್ಜರಿ: 600 ತಜ್ಞರ ವಜಾ, ನಾಲ್ಕು ಹಂತದಲ್ಲಿ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆಗೆ ಜೋಶಿ ಆದೇಶ
NTA reforms: ಎನ್ಟಿಎ ಪರೀಕ್ಷೆಯಲ್ಲಿ ಆಮೂಲಾಗ್ರವಾಗಿ ಬದಲಾವಣೆಗೆ ಮುಂದಾಗಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಸಂಸ್ಥೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ. ಪರೀಕ್ಷಾ ತಂಡದ ಪುನರ್ ರಚನೆ, 600 ತಜ್ಞರನ್ನು ವಜಾ, ಹೊಸ ಅಧಿಕಾರಿಗಳ ನೇಮಕ ಮತ್ತು ನಾಲ್ಕು ಹಂತದ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆ ಸೂಚನೆ ನೀಡಿದ್ದಾರೆ.
- Kiran Haniyadka
- Updated on: Aug 18, 2026
- 10:32 pm
ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿಯಿಂದ ಪರೀಕ್ಷಾ ಸಂಸ್ಥೆಗೆ ಶಸ್ತ್ರಚಿಕಿತ್ಸೆ; ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಆದೇಶ
Education Minister Pralhad Joshi orders for overhaul of examination system: ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಕಾರಣವಾದ ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಗಂಭೀರ ಪ್ರಯತ್ನಗಳನ್ನು ನಡೆಸುತ್ತಿದೆ. ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಎನ್ಟಿಎ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಹೊರಟಿದ್ದಾರೆ.
- Vijaya Sarathy SN
- Updated on: Aug 17, 2026
- 5:17 pm
‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ
ಕೇಂದ್ರದಿಂದ ‘ಉಚಿತ ಎಲೆಕ್ಟ್ರಿಕ್ ಸ್ಟೌ’ ವಿತರಣೆ ಎಂಬುದು ನಕಲಿ ಸಂದೇಶ ಎಂದು ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದು, MNRE ಹೆಸರಿನಲ್ಲಿ ಹರಡುತ್ತಿರುವ ಈ ಸುಳ್ಳು ಸುದ್ದಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಇಂತಹ ವಂಚನೆಗೆ ಒಳಗಾಗಬಾರದು. ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ, ಅಧಿಕೃತ ಮಾಹಿತಿಗಳಿಗೆ ಮಾತ್ರ ಒತ್ತು ನೀಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ.
- Ganapathi Sharma
- Updated on: Aug 17, 2026
- 12:03 pm