Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ?
ಕೆಪಿಸಿಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಪುತ್ರಿಯರಿಗೆ ಸರ್ಕಾರ ಹುದ್ದೆ ಕೊಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳೀಬಂದಿದ್ದು, ಒಬ್ಬ ಮಗಳಿಗೆ ಈಗಾಗಲೇ ಸರ್ಕಾರಿ ಉದ್ಯೋಗ ಕೊಡಿಸಿದ್ದಾರೆ, ಮತ್ತೊಬ್ಬ ಮಗಳಿಗೆ ಹುದ್ದೆ ಕೊಡಿಸಲು ಯತ್ನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ಸುಳ್ಳು ಆದಾಯದ ಪ್ರಮಾಣ ಪತ್ರ ಸಲ್ಲಿಕೆಗೂ ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಸ್ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ ಸಂಬಂಧ ಉನ್ನತ ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದು, ಈ ಸಂಬಂಧ ಸಿಎಂ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
- Ramesh B Jawalagera
- Updated on: Jul 1, 2026
- 9:42 pm
ವಿವರಗಳೇ ಇಲ್ಲದ 23,262 ಖಾತೆಗಳಿಗೆ 46.52 ಕೋಟಿ ರೂ. ಪಾವತಿ: ಸಿಎಜಿ ವರದಿ ತೆರೆದಿಟ್ಟ ಪ್ರಲ್ಹಾದ ಜೋಶಿ
Pralhad Joshi: ಕರ್ನಾಟಕದ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಭಾರೀ ತಾಂತ್ರಿಕ ಮತ್ತು ಆಡಳಿತಾತ್ಮಕ ಲೋಪಗಳಿರುವುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಜನರಿಗೆ ಹಣ ಸಂದಾಯ, ಖಾತೆಯೇ ಇಲ್ಲದವರಿಗೆ ಕೋಟಿಗಟ್ಟಲೆ ಜಮೆ, ಮತ್ತು ಪುನರಾವರ್ತಿತ ಪಾವತಿಗಳಂತಹ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ಈ ಸಿಎಜಿ ವರದಿ ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪಗಳನ್ನ ಮಾಡಿದ್ದಾರೆ.
- Ramesh B Jawalagera
- Updated on: Jun 23, 2026
- 10:32 pm
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಸಿದ್ದರಾಮಯ್ಯಗೆ ಜೋಶಿ ತಿರುಗೇಟು
ಸಿದ್ದರಾಮಯ್ಯನವರ ಹಿಂದೂ ರಾಷ್ಟ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಆರ್ಎಸ್ಎಸ್ ಮತ್ತು ಬಿಜೆಪಿ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಹೊರಟಿಲ್ಲ. ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಇರುವ ಈ ದೇಶದಲ್ಲಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಹಿಂದೂ ಬಹುಸಂಖ್ಯಾತತನ ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
- Sanjayya Chikkamath
- Updated on: Jun 21, 2026
- 9:53 pm
ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ
ಬೆಳಗಾವಿಯ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಶಶಾಂಕಾಸನ, ನಾಡಿಶೋಧನ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಭ್ಯಾಸಗಳನ್ನು ಪ್ರದರ್ಶಿಸಲಾಯಿತು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಗೆ, ಒತ್ತಡ ನಿವಾರಣೆಗೆ ಹಾಗೂ ರಕ್ತಪರಿಚಲನೆ ಹೆಚ್ಚಿಸಲು ಸಹಕಾರಿ ಎಂದು ತಿಳಿಸಲಾಯಿತು.
- Sahadev Mane
- Updated on: Jun 21, 2026
- 9:37 am
ಸೀಕ್ರೆಟ್ ಆಗಿ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ
ವಿಧಾನ ಪರಿಷತ್ನ ಅಡ್ಡ ಮತದಾನ ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಆಣೆ ಪ್ರಮಾಣದ ಪಾಲಿಟಿಕ್ಸ್ ಕೂಡ ಜೋರಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ ಎಂದು ಹೇಳಿದ್ದಾರೆ.
- Sanjayya Chikkamath
- Updated on: Jun 20, 2026
- 5:28 pm
ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್ಗೆ ಜೋಶಿ ಪತ್ರ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ತೋತಾಪುರಿ ಮಾವು ಬೆಳೆಗಾರರಿಗೆ ಪರಿಹಾರ ಕೋರಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ಹಲವು ಭಾಗಗಳಲ್ಲಿ ಮಾವಿನ ಬೆಲೆ ಕುಸಿತ ಮತ್ತು ಪ್ರತಿಕೂಲ ಹವಾಮಾನದಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
- Pramod Shastri G
- Updated on: Jun 18, 2026
- 6:29 pm
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು?
ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು ಕೇಳಿರುತ್ತಿವೆ. ಇನ್ನು ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ಸ್ವತಃ ಪ್ರಲ್ಹಾದ್ ಜೋಶಿ ಅವರೇ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
- Ramesh B Jawalagera
- Updated on: Jun 15, 2026
- 10:09 pm
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಅಣುಶಕ್ತಿ ಸುರಕ್ಷತೆ, ಸ್ವಚ್ಛ ಇಂಧನದ ಮಹತ್ವ ಮತ್ತು ದೇಶದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗದ ಶಾಂತಿಯುತ ಚುನಾವಣೆ ಮತ್ತು ಟಿಎಂಸಿ ಸರ್ಕಾರದ ಕಟ್-ಮನಿ, ಭ್ರಷ್ಟಾಚಾರವೇ ಕಾರಣ ಎಂದು ವಿಶ್ಲೇಷಿಸಿದ್ದಾರೆ. ಆ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.
- Sushma Chakre
- Updated on: Jun 15, 2026
- 9:38 pm
ಪ್ರಧಾನಿ ಮೋದಿ ನನಗೆ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘಾವಧಿ ಆಡಳಿತ ಮತ್ತು ವಿಶಿಷ್ಟ ನಾಯಕತ್ವದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ವಿಶ್ಲೇಷಿಸಿದ್ದಾರೆ. ಚುನಾಯಿತ ಪ್ರಧಾನಿಯಾಗಿ ನೆಹರೂ ಅವರ ದಾಖಲೆಯನ್ನು ಮೋದಿ ಮುರಿದಿದ್ದಾರೆ. ದೇಶದಲ್ಲಿ ಸ್ಥಿರ ಸರಕಾರ ನೀಡಿ, ನಮ್ಮಿಂದಲೂ ಸಾಧ್ಯ ಎಂಬ ವಿಶ್ವಾಸವನ್ನು ಜನರಲ್ಲಿ ಮೂಡಿಸಿದ್ದಾರೆ. ಅಧಿಕಾರಕ್ಕಾಗಿ ಮೋದಿ ಅವರು ನಿರ್ಲಿಪ್ತರು, ರಾಷ್ಟ್ರ ಮೊದಲು ಎಂಬ ತತ್ವವನ್ನು ಅಕ್ಷರಶಃ ಪಾಲಿಸಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
- Sushma Chakre
- Updated on: Jun 15, 2026
- 8:32 pm
ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮುಂಗಾರು ಹಂಗಾಮಿಗೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಸಿದೆ. ಆದರೆ ರಾಜ್ಯ ಸರ್ಕಾರದ ವಿತರಣಾ ವೈಫಲ್ಯದಿಂದ ರೈತರು ಪರದಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ರಾಜ್ಯದ ಹಲವೆಡೆ ರಸಗೊಬ್ಬರಕ್ಕಾಗಿ ರೈತರ ಪರದಾಟ ವಿಚಾರ ಸಂಬಂಧ ಸ್ಪಷ್ಟನೆ ನೀಡಿರುವ ಅವರು, 2026ರ ಜನವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲೇ, ರಾಜ್ಯವು ಅಂದಾಜು ಅಗತ್ಯತೆಗಿಂತ ಹೆಚ್ಚುವರಿಯಾಗಿ ಪೂರೈಕೆಯಾಗಿದೆ ಎಂದಿದ್ದಾರೆ.
- Kiran Haniyadka
- Updated on: Jun 14, 2026
- 6:55 am
ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ
2930 ದಿನ. ಎರಡು ಅವಧಿ. 8 ವರ್ಷ 8 ದಿನ ಆಡಳಿತ ನಡೆಸಿದ ಸಿದ್ದರಾಮಯ್ಯ ಇಂದು (ಮೇ 28) ನಾಡಿನ ದೊರೆಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೇವಲ ಅಭಿಮಾನಿಗಳಿಗಷ್ಟೇ ಅಲ್ಲ, ಸಂಪುಟ ಸಹದ್ಯೋಗಿಗಳಿಗೂ ಆಘಾತ ತಂದಿದೆ. ಅಲ್ಲದೇ ವಿರೋಧ ಪಕ್ಷದ ನಾಯಕರು ಸಹ ಸಿದ್ದರಾಮಯ್ಯನವರನ್ನ ಕೆಳಗಿಳಿಸಿದ್ದಕ್ಕೆ ಬೇಸರ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: May 28, 2026
- 8:22 pm
ಮೋದಿ, ಬಿಜೆಪಿ, ಆರ್ಎಸ್ಎಸ್ ದೇಶದ್ರೋಹಿಗಳು ಎಂದ ರಾಹುಲ್ಗೆ ಜೋಶಿ ತಿರುಗೇಟು
ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ, ಆರ್ಎಸ್ಎಸ್ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಆರ್ಎಸ್ಎಸ್ ಸಂವಿಧಾನದ ಮೇಲೆ ದಾಳಿ ಮಾಡಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಕ್ರಿಯಿಸಿದ್ದು, ಈ ಹಿಂದೆ ಕಾಂಗ್ರೆಸ್ ಮಾಡಿದ ಎಡವಟ್ಟುಗಳನ್ನ ನೆನಪಿಸಿ ತಿರುಗೇಟು ನೀಡಿದ್ದಾರೆ.
- Ramesh B Jawalagera
- Updated on: May 20, 2026
- 8:41 pm