Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
ಇನ್ನೂ ಹೆಚ್ಚು ಓದಿNTA ಉನ್ನತ ಅಧಿಕಾರಿಗಳ ಜತೆ ಜೋಶಿ ಸಭೆ: ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಸೂಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ
- Ramesh B Jawalagera
- Updated on: Aug 9, 2026
- 7:24 pm
National Handloom Day: ಕೈಮಗ್ಗದ ಬಟ್ಟೆ ಖರೀದಿಸಿ ಒಡಿಶಾದ ಹ್ಯಾಂಡ್ಲೂಮ್ ಪರಂಪರೆ ಬೆಂಬಲಿಸಿದ ಸಚಿವ ಪ್ರಲ್ಹಾದ್ ಜೋಶಿ
'ಭಾರತದ ಕೈಮಗ್ಗವು ಪರಂಪರೆ, ಕೌಶಲ ಮತ್ತು ಕೋಟ್ಯಂತರ ಕರಕುಶಲಕರ್ಮಿಗಳ ಪರಿಶ್ರಮದ ಸಂಕೇತವಾಗಿದೆ. ರಾಷ್ಟ್ರೀಯ ಕೈಮಗ್ಗ ದಿನದಂದು ಭುವನೇಶ್ವರದಲ್ಲಿರುವ ಒಡಿಶಾ ರಾಜ್ಯದ ಉತ್ಕಳಿಕಾ ಕೋಆಪರೇಟಿವ್ನಿಂದ ಕೈಮಗ್ಗ ಉತ್ಪನ್ನಗಳನ್ನು ಖರೀದಿಸುವ ಮೂಲಕ ನಾನು ಈ ಪರಂಪರೆಗೆ ಬೆಂಬಲ ಸೂಚಿಸಿದೆ. ಜೊತೆಗೆ ನಮ್ಮ ದೈನಂದಿನ ಜೀವನದ ಅನಿವಾರ್ಯ ಅಂಗವಾಗಿರುವ ಯುಪಿಐ ಮೂಲಕವೇ ಹಣ ಪಾವತಿಸಿದೆ. ನಾವೆಲ್ಲರೂ ವೋಕಲ್ ಫಾರ್ ಲೋಕಲ್ (Vocal For Local) ತತ್ವವನ್ನು ಅಳವಡಿಸಿಕೊಳ್ಳೋಣ ಹಾಗೂ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸೋಣ' ಎಂದು ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.
- Sushma Chakre
- Updated on: Aug 7, 2026
- 10:46 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಯೇ ತಿದ್ದುಪಡಿ ಮಸೂದೆಯ ಗುರಿ; ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ
ಪರೀಕ್ಷಾ ಅಕ್ರಮ ತಡೆ ವಿಧೇಯಕವು ಪರೀಕ್ಷಾ ಅಕ್ರಮದ ಸಮಗ್ರ ಜಾಲವನ್ನು ನಿರ್ಮೂಲನೆ ಮಾಡಲಿದೆ ಮತ್ತು ಪರೀಕ್ಷೆಗಳಲ್ಲಿ ಪಾರದರ್ಶಕತೆ, ವಿಶ್ವಾಸನೀಯತೆ ಹಾಗೂ ನ್ಯಾಯಸಮ್ಮತತೆಯನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಸರಣಿ ಪ್ರತಿಭಟನೆಗಳ ನಂತರ ಸಿದ್ಧಪಡಿಸಲಾದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
- Sushma Chakre
- Updated on: Jul 29, 2026
- 8:24 pm
ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್
ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಿಎಂ ಡಿಕೆ ಶಿವಕುಮಾರ್ ಅವರು ಎಲ್ಲಾ ಪಕ್ಷದ ಸಂಸದರ ಸಭೆ ನಡೆಸಿದರು. ದೆಹಲಿಯ ಕರ್ನಾಟಕದಲ್ಲಿ ಸಭೆ ಮಾಡಿದ್ದು, ಕರ್ನಾಟಕದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಮಂಡನೆಯಾದ ಅಂಶಗಳಾವುವು? ಯಾರು ಏನೇನು ಹೇಳಿದ್ರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Ramesh B Jawalagera
- Updated on: Jul 27, 2026
- 9:46 pm
ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ ಪ್ರಲ್ಹಾದ ಜೋಶಿ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ದೇಶದೆಲ್ಲೆಡೆ ಪ್ರತಿಭಟನೆಗಳು ಜೋರಾಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿನ್ನೆ (ಜುಲೈ 25) ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿಗೆ ಅವರಿಗೆ ನೀಡಲಾಗಿದೆ. ಇದರ ಬೆನ್ನಲ್ಲೇ ಜೋಶಿಯವರು ಇಂದು (ಜುಲೈ 26) ಅಧಿಕಾರ ಸ್ವೀಕಾರ ಮಾಡಿದ್ದು, ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ್ದಾರೆ.
- Ramesh B Jawalagera
- Updated on: Jul 26, 2026
- 2:32 pm
ಆಗಸ್ಟ್ 30ರಂದು ಪಿಜಿ ನೀಟ್ ಪರೀಕ್ಷೆ: ನೂತನ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಹೊಸ ಸವಾಲುಗಳು
ಪ್ರಲ್ಹಾದ್ ಜೋಶಿ ಆಗಸ್ಟ್ 30ರಂದು ನಡೆಯಲಿರುವ ಪಿಜಿ ನೀಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ಸವಾಲನ್ನು ಎದುರಿಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ, ಮೋದಿ ಸಂಪುಟದಿಂದ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಕಡಿಮೆ ವಿದ್ಯಾರ್ಥಿಗಳಿರುವ ಪಿಜಿ ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ತಂದು, ದೇಶಕ್ಕೆ ಮಾದರಿ ಪರೀಕ್ಷಾ ಸುಧಾರಣೆಗಳನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ. ಇದು ಅವರ ನಾಯಕತ್ವಕ್ಕೆ ಹೊಸ ಪರೀಕ್ಷೆಯಾಗಿದೆ.
- Nayana Rajeev
- Updated on: Jul 26, 2026
- 9:01 am
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ, ಶೈಕ್ಷಣಿಕ ಅರ್ಹತೆ ಏನು?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಅವರಿಗೆ ಈ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಜೋಶಿ, ಬಿ.ಎ. ಪದವೀಧರರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿ, ಭಾರತೀಯ ಜನತಾ ಪಕ್ಷದ ಮೂಲಕ ರಾಜಕೀಯದಲ್ಲಿ ಬೆಳೆದಿದ್ದಾರೆ. ಇವರ ಶೈಕ್ಷಣಿಕ ಅರ್ಹತೆ, ರಾಜಕೀಯ ಹಿನ್ನೆಲೆ ಮತ್ತು ಹಿಂದಿನ ಹುದ್ದೆಗಳ ಕುರಿತು ಇಲ್ಲಿದೆ ಮಾಹಿತಿ.
- Nayana Rajeev
- Updated on: Jul 26, 2026
- 7:33 am
ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫಸ್ಟ್ ರಿಯಾಕ್ಷನ್
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಪ್ರಲ್ಹಾದ್ ಜೋಶಿ, ಈ ಮಹತ್ವದ ಹೊಣೆಯನ್ನು ವಿನಯ ಮತ್ತು ಕರ್ತವ್ಯದ ಭಾವನೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಅವರ ಮಾರ್ಗದರ್ಶನದಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸಾಧನೆಗಳನ್ನು ಸ್ಮರಿಸಿದ ಅವರು, ಹೊಸ ಶಿಕ್ಷಣ ನೀತಿಯ ಪ್ರಗತಿಯನ್ನು ಶ್ಲಾಘಿಸಿದ್ದಾರೆ.
- Prasanna Hegde
- Updated on: Jul 26, 2026
- 7:03 am
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಲ್ಹಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನಿರಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಖಾತೆ ಹೊಣೆಯನ್ನು ಕನ್ನಡಿಗರೊಬ್ಬರಿಗೆ ನೀಡಲಾಗಿದೆ.
- Ramesh B Jawalagera
- Updated on: Jul 25, 2026
- 10:49 pm
ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ಪರೀಕ್ಷಾ ಅಕ್ರಮ ತಡೆಗೆ ಸರ್ಕಾರವು "ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024" ಜಾರಿಗೆ ತಂದಿದೆ. ಇದರಡಿ ಶಿಕ್ಷೆಯನ್ನು ಐದರಿಂದ ಹತ್ತು ವರ್ಷಕ್ಕೆ ಮತ್ತು ದಂಡವನ್ನು 10 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ, ಜಾಮೀನುರಹಿತ ಅಪರಾಧವನ್ನಾಗಿ ಮಾಡಲಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. 22 ಲಕ್ಷ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಗಂಭೀರತೆಯನ್ನು ಪ್ರದರ್ಶಿಸಿದೆ.
- Narasimha Murti Pyati
- Updated on: Jul 25, 2026
- 5:50 pm
ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೀಟ್ ಪರೀಕ್ಷಾ ಅಕ್ರಮದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, 2024ರ ಪರೀಕ್ಷಾ ಕಾಯಿದೆ ಮತ್ತು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು. ಹಿಂದಿನ ಲೀಕ್ಗಳ ಕುರಿತು ಉಲ್ಲೇಖಿಸಿ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
- Ganapathi Sharma
- Updated on: Jul 24, 2026
- 1:04 pm
ಕೆಪಿಎಸ್ಸಿ ಕರ್ಮಕಾಂಡ ಬಗ್ಗೆ ರಾಹುಲ್ ಗಾಂಧಿ ಮೌನ ಯಾಕೆ?: ಕಾಂಗ್ರೆಸಿಗರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ
KPSC scam: ನೀಟ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ರಾಹುಲ್ ಗಾಂಧಿ, ಕರ್ನಾಟಕದ ಕೆಪಿಎಸ್ಸಿ ಹಗರಣದ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ನಾಯಕರ ದ್ವಿಮುಖ ನೀತಿಯನ್ನು ಪ್ರಶ್ನಿಸಿದ್ದಾರೆ. ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವತ್ತೂ ನೆಪ ಹೇಳಿ ಜಾರಿಕೊಂಡಿಲ್ಲ. ವ್ಯವಸ್ಥೆ ಸುಧಾರಿಸಲು ಪ್ರಥಮಾದ್ಯತೆ ನೀಡಿದೆ. ನೀಟ್ ಪ್ರಕರಣದಲ್ಲಿ ಈಗಾಗಲೇ 14 ಜನರನ್ನು ಬಂಧಿಸಲಾಗಿದೆ ಎಂದೂ ಅವರು ಈ ವೇಳೆ ಸ್ಪಷ್ಟಪಡಿಸಿದ್ದಾರೆ.
- Prasanna Hegde
- Updated on: Jul 23, 2026
- 6:16 pm