Pralhad Joshi
ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.
ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್, ಬಾರ್-ರೆಸ್ಟೋರೆಂಟ್ ಬಿಸಿ ಮುಟ್ಟಿಸಿದ CCPA
ಹೋಟೆಲ್, ಬಾರ್-ರೆಸ್ಟೋರೆಂಟ್, ಕ್ಯಾಂಟೀನ್ಗಳಲ್ಲಿ ʼಸೇವಾ ಶುಲ್ಕʼ ಗ್ರಾಹಕರ ಐಚ್ಛಿಕವಾಗಿದೆ. ಹಾಗಿದ್ದರೂ ನಿಯಮ ಉಲ್ಲಂಘಿಸಿ ʼಸ್ವಯಂ ಸೇವಾ ಶುಲ್ಕʼ ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಸಮರ ಸಾರಿದ್ದು, ಗ್ರಾಹಕರಿಗೆ ಕಡ್ಡಾಯ ಸೇವಾಶುಲ್ಕ ಹಾಕಿದ ರೆಸ್ಟೋರೆಂಟ್ಗಳಿಗೆ ದಂಡ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
- Ramesh B Jawalagera
- Updated on: Jul 19, 2026
- 8:52 pm
ಡಾರ್ಕ್ ಪ್ಯಾಟರ್ನ್ ಪ್ರದರ್ಶಿಸಿದ್ದಕ್ಕೆ ಸ್ಪೈಸ್ಜೆಟ್ಗೆ 1 ಲಕ್ಷ ರೂ ದಂಡ: ಪ್ರಲ್ಹಾದ ಜೋಶಿ ಸೂಚನೆ ಬೆನ್ನಲ್ಲೇ ಕಠಿಣ ಕ್ರಮ
CCPA SpiceJet fine: ಸ್ಪೈಸ್ಜೆಟ್ ವಿಮಾನ ಸಂಸ್ಥೆ ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ದಾರಿ ತಪ್ಪಿಸುವ ಡಾರ್ಕ್ ಪ್ಯಾಟರ್ನ್ ಬಳಸಿದ್ದಕ್ಕಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಲಕ್ಷಾಂತರ ರೂ ದಂಡ ವಿಧಿಸಿದೆ. ಸಚಿವ ಪ್ರಲ್ಹಾದ ಜೋಶಿ ಸೂಚನೆ ಮೇರೆಗೆ ಈ ಕ್ರಮ ಕೈಗೊಂಡಿದ್ದು, ಡೀಫಾಲ್ಟ್-ಸಮ್ಮತಿ ಅಭ್ಯಾಸಗಳನ್ನು ನಿಲ್ಲಿಸುವಂತೆ ಆದೇಶಿಸಿದೆ.
- Gangadhar Saboji
- Updated on: Jul 17, 2026
- 8:56 pm
ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ
India's renewable energy capacity increase by 25pc: 2026ರ ಮೊದಲಾರ್ಧದಲ್ಲಿ 30,581 ಮೆಗಾವ್ಯಾಟ್ಗೂ ಅಧಿಕ ಹಸಿರು ಇಂಧನ ಉತ್ಪಾದನಾ ಸಾಮರ್ಥ್ಯ ಸೇರ್ಪಡೆಯಾಗಿದೆ. ಸೌರಶಕ್ತಿ ವಲಯದಲ್ಲಿ ಶೇ.43ರಷ್ಟು ಭರ್ಜರಿ ಬೆಳವಣಿಗೆಯಾಗಿದೆ. ಸೌರಶಕ್ತಿಯಿಂದಲೇ 26,342.07 ಮೆವ್ಯಾ ಇಂಧನ ಉತ್ಪಾದನೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸೋಲಾರ್ ಎನರ್ಜಿ ಸಾಮರ್ಥ್ಯ ಶೇ. 43ರಷ್ಟು ಹೆಚ್ಚಾಗಿದೆ.
- Vijaya Sarathy SN
- Updated on: Jul 17, 2026
- 8:24 pm
ಕೇಂದ್ರದಿಂದ ಗ್ರಾ.ಪಂಗಳ 2,186 ಕೋಟಿ ಬಾಕಿ ಹಣ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಕಸರತ್ತು
15ನೇ ಹಣಕಾಸು ಆಯೋಗದಡಿ ಕರ್ನಾಟಕದ ಗ್ರಾಮ ಪಂಚಾಯತ್ಗಳಿಗೆ ಹಂಚಿಕೆಯಾಗಿದ್ದ 2186.20 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ತಂತ್ರಾಂಶ ದೋಷದ ನೆಪವೊಡ್ಡಿ ತಡೆಹಿಡಿದಿದೆ. ಇದರಿಂದ ರಾಜ್ಯದ ಗ್ರಾಮೀಣಾಭಿವೃದ್ಧಿಗೆ ಭಾರಿ ಹಿನ್ನಡೆಯಾಗಿದೆ. ಹೀಗಾಗಿ ಈ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ರಾಜ್ಯದ ಎಲ್ಲ ಸಂಸದರಿಗೆ ಪತ್ರ ಬರೆದಿದ್ದಾರೆ.
- Prasanna Gaonkar
- Updated on: Jul 16, 2026
- 7:39 pm
ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ. ಹಾಗಾದ್ರೆ, ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ. ಯಾವೆಲ್ಲಾ ಜಿಲ್ಲೆಯ ರೈತರಿಗೆ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.
- Sanjayya Chikkamath
- Updated on: Jul 16, 2026
- 7:16 pm
ಸಿಎಂ ಡಿಕೆಶಿ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್: ಅನುಕಂಪದ ಯತ್ನ ಎಂದು ಕಿಡಿ
Karnataka Politics: ಬಿಡದಿ ಟೌನ್ಶಿಪ್ ವಿವಾದ ಹಾಗೂ ಜೈಲು ಹೇಳಿಕೆ ಕುರಿತು ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ಇದು ಅನುಕಂಪ ಗಿಟ್ಟಿಸಿಕೊಳ್ಳುವ ಯತ್ನ ಎಂದು ಕೌಂಟರ್ ನೀಡಿದ್ದಾರೆ. ಇದೇ ವೇಳೆ ದೇಶದ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಳೆದ 25 ದಿನಗಳಿಂದ ಎಲ್ಲಿದ್ದಾರೆ ಎಂದೂ ಪ್ರಶ್ನಿಸಿರುವ ಅವರು, ಬರದ ವಿಚಾರದಲ್ಲಿಯೂ ರಾಜಕೀಯ ಮಾಡುವುದನ್ನು ಇವರು ಮೊದಲು ಬಿಡಬೇಕು ಎಂದು ಕಿಡಿ ಕಾರಿದ್ದಾರೆ.
- Kiran Haniyadka
- Updated on: Jul 16, 2026
- 2:21 pm
ಬಿಡದಿ ಟೌನ್ಶಿಪ್ ಯೋಜನೆ ವಿವಾದ: ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ ಪ್ರಹ್ಲಾದ್ ಜೋಶಿ
ಬಿಡದಿ ಟೌನ್ಶಿಪ್ ಯೋಜನೆಗಾಗಿ ಭೂಸ್ವಾಧೀನ ವಿರೋಧಿಸಿ ರೈತ ಮಹಿಳೆಯರು ನಡೆಸಿದ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಆರ್. ಅಶೋಕ್ ಬೆಂಬಲ ಸೂಚಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಮುನ್ನುಗ್ಗುತ್ತಿರುವುದು ದುರಾಡಳಿತದ ಪರಮಾವಧಿ. ರೈತರ ಒಪ್ಪಿಗೆಯಿಲ್ಲದೆ ಅವರ ಜೀವನಾಧಾರವಾಗಿರುವ ಭೂಮಿಯನ್ನೇ ಕಿತ್ತುಕೊಂಡು ಮಾಡುವ ಟೌನ್ಶಿಪ್ ಅಭಿವೃದ್ಧಿ ಯಾರ ಉದ್ಧಾರಕ್ಕಾಗಿ? ಎಂದು ಬಿಜೆಪಿಗರು ಪ್ರಶ್ನಿಸಿದ್ದಾರೆ.
- Prasanna Hegde
- Updated on: Jul 13, 2026
- 10:31 pm
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್ ಜೋಶಿ ತಿರುಗೇಟು
ಆರ್ಎಸ್ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.
- Ravi H Mooki
- Updated on: Jul 12, 2026
- 8:11 pm
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿತದ ಕುರಿತು UDISE+ ವರದಿ ಹಿನ್ನೆಲೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಸಮಾಜದ, ವಿದ್ಯಾರ್ಥಿಗಳ ಹಿತ ಕಾಪಾಡಬೇಕಿದ್ದ ಸರ್ಕಾರ ಅದನ್ನೆಲ್ಲ ಮರೆತು ಒಳಜಗಳ, ಕುರ್ಚಿ ಕಿತ್ತಾಟ ಮತ್ತು ಅಧಿಕಾರದ ಅಮಲಿನಲ್ಲಿ ಮುಳುಗಿದೆ ಎಂದು ಅವರು ದೂರಿದ್ದಾರೆ.
- Prasanna Hegde
- Updated on: Jul 10, 2026
- 4:04 pm
ಪ್ರಹ್ಲಾದ್ ಜೋಶಿ ಭೇಟಿಯಾದ ಕೆ.ಹೆಚ್. ಮುನಿಯಪ್ಪ: ಎಂಎಸ್ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ
ಕರ್ನಾಟಕದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ, ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯ ಬಾಕಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ 1902 ಕೋಟಿ ಬಾಕಿ ಹಣ ಕೇಳ್ತಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಅವರ ಭೇಟಿ ನಂತರ ಮುನಿಯಪ್ಪ ತಿಳಿಸಿದ್ದಾರೆ.
- Prasanna Gaonkar
- Updated on: Jul 8, 2026
- 6:46 pm
ಸಂಸದ ಸುಧಾಕರ್, ಶಾಸಕ ವಿಶ್ವನಾಥ್ ಸಂಧಾನ: ಇಬ್ಬರಿಗೆ ಕೊಟ್ಟ ಖಡಕ್ ಸೂಚನೆಗಳೇನು?
ಕರ್ನಾಟಕ ಬಿಜೆಪಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮಧ್ಯ ಪ್ರವೇಶಿಸಿದ್ದು, ನಾಯಕರ ನಡುವಿನ ಒಳಜಗಳಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕರ ನಡವಳಿಕೆ ಬದಲಿಸಿಕೊಳ್ಳಲು ಖಡಕ್ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಹಿರಿಯ ನಾಯಕರು ಸೇರಿಕೊಂಡು ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಹಾಗು ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ ನಡುವೆ ಸಂಧಾನ ಮಾಡಿದ್ದಾರೆ. ಈ ವೇಳೆ ಇಬ್ಬರಿಗೂ ಕೆಲ ಖಡಕ್ ಸೂಚನೆಗಳನ್ನು ಸಹ ನೀಡಿದ್ದಾರೆ.
- Kiran Haniyadka
- Updated on: Jul 6, 2026
- 5:31 pm
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್ಐಆರ್: ಪ್ರಲ್ಹಾದ್ ಜೋಶಿ ಆರೋಪ
ಕರ್ನಾಟಕದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮಗಳು ನಡೆಯುತ್ತಿದ್ದು, ಲೋಪದೋಷಗಳನ್ನು ಸರಿಪಡಿಸಿ SIR ಪ್ರಕ್ರಿಯೆ ಪುನರಾರಂಭಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
- Ganapathi Sharma
- Updated on: Jul 6, 2026
- 12:55 pm